Homeಕರ್ನಾಟಕಹಿಜಾಬ್ ವಿವಾದ: ತಮಿಳುನಾಡು, ಕೇರಳ, ಆಂಧ್ರದ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರಕ್ಕೆ ಛೀಮಾರಿ

ಹಿಜಾಬ್ ವಿವಾದ: ತಮಿಳುನಾಡು, ಕೇರಳ, ಆಂಧ್ರದ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರಕ್ಕೆ ಛೀಮಾರಿ

- Advertisement -
- Advertisement -

ರಾಜ್ಯದಲ್ಲಿ ಆರಂಭವಾದ ಹಿಜಾಬ್ ವಿವಾದ ಕರಾವಳಿಯನ್ನೂ ದಾಟಿ ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲೂ ಸದ್ದು ಮಾಡುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಮತ್ತು ಯುಎಇ ರಾಜಕುಮಾರಿ ಮೊದಲಾದವರು ಈ ಘಟನೆಯನ್ನು ಖಂಡಿಸಿ ಹೇಳಿಕೆ ನೀಡಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ನೆರೆಯ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶದ ಹಲವಾರು ಸುದ್ದಿ ಮಾಧ್ಯಮಗಳು ರಾಜ್ಯದ ಪ್ರಕರಣವನ್ನು ಮತ್ತು ಇದರ ಬೆನ್ನಿಗೆ ಶಾಲಾ ಕಾಲೇಜಿನಲ್ಲಿ ಸಮವಸ್ತ್ರವನ್ನು ಕಡ್ಡಾಯಗೊಳಿಸಿ ಹಿಜಾಬ್ ನಿಷೇಧಿಸಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿವೆ.

ತಮಿಳುನಾಡಿನ ಅರನ್ ಸೈ, ಸವುಕ್ಕು ಶಂಕರ್, ರೆಡ್ಪಿಕ್ಸ್, ತಮಿಳ್ ಪೊಕ್ಕಿಶಮ್, ಕೇರಳದ ನ್ಯೂಸ್ ಇಂಡಿಯಾ ಮಲಯಾಳಂ, ಮೀಡಿಯಾ ಒನ್ ಟಿವಿ, ಆಂಧ್ರಪ್ರದೇಶದ 10ಟಿವಿ ನ್ಯೂಸ್ ತೆಲುಗು, ಎಚ್‌ಎಂಟಿವಿ ತೆಲುಗು ನ್ಯೂಸ್ ಚಾನೆಲ್‌ಗಳು (ಡಿಜಿಟಲ್-ಯೂಟ್ಯೂಬ್ ಮೀಡಿಯಾಗಳೂ ಸೇರಿ) ಸೇರಿದಂತೆ ದಕ್ಷಿಣ ರಾಜ್ಯಗಳ ಹಲವು ಮಾಧ್ಯಮಗಳು ಕರ್ನಾಟಕದ ಈ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ವಿಷಾದ ಪಡಿಸಿವೆ.

ಕರ್ನಾಟಕದಲ್ಲಿ ಹಿಜಾಬ್ ನಿಷೇಧ ಸರಿಯೇ..? ಎಂಬ ಕಾರ್ಯಕ್ರಮ ಮೂಲಕ ತಮ್ಮ ಅಭಿಪ್ರಾಯವನ್ನು ಮುಂದಿಟ್ಟಿರುವ ’ಅರನ್‌ ಸೈ’ ಎಂಬ ತಮಿಳು ಸುದ್ದಿ ಮಾಧ್ಯಮ, “ಸಂವಿಧಾನ ಕಲಂ 14 ಮತ್ತು 25ರ ಅಡಿಯಲ್ಲಿ ಪ್ರತಿಯೊಬ್ಬ ಭಾರತೀಯನಿಗೂ ತನ್ನ ಧರ್ಮವನ್ನು ಅನುಸರಿಸುವ ಮತ್ತು ಆಚರಿಸುವ ಹಕ್ಕು ನೀಡಲಾಗಿದೆ. ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬ್ ಧರಿಸುವುದು ಅಥವಾ ಧರಿಸದೆ ಇರುವುದು ಸೇರಿದಂತೆ ಎಲ್ಲಾ ಧರ್ಮಗಳ ಖಾಸಗಿ ಆಚರಣೆಗಳು ಈ ಹಕ್ಕಿನ ಅಡಿಯಲ್ಲೇ ಬರುತ್ತದೆ ಮತ್ತು ಅದು ಅವರಿಗೆ ಬಿಟ್ಟ ವಿಚಾರ” ಎಂದು ಹೇಳಿದೆ.

ಇದನ್ನೂ ಓದಿ: ‘ರಾಜ್ಯವು ನಿಯಂತ್ರಣದಲ್ಲಿದೆ’: ‘ಹಿಜಾಬ್‌‌’ ವಿಚಾರಣೆಯ ಸಮಯ ನ್ಯಾಯಾಲಯಕ್ಕೆ ತಿಳಿಸಿದ ರಾಜ್ಯ ಸರ್ಕಾರ!

“ಈ ವಿಚಾರದಲ್ಲಿ ಅನ್ಯ ಕೋಮಿನವರ ಹಸ್ತಕ್ಷೇಪಕ್ಕೆ ಅವಕಾಶ ಇಲ್ಲ. ಆದರೆ, ಕರ್ನಾಟಕದಲ್ಲಿ ನಡೆಯುತ್ತಿರುವುದು ಏನು? ಹಿಜಾಬ್‌ಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಶುದ್ಧ ಕೋಮುವಾದವಲ್ಲವೇ? ದ್ವೇಷ ರಾಜಕಾರಣವಲ್ಲವೇ? ವಿದ್ಯಾರ್ಥಿಗಳ ಎದೆಗೆ ನಂಜು ಬಿತ್ತುವ ಕೆಲಸವಲ್ಲವೇ? ಇದೇ ಶಾಲೆಗಳಲ್ಲಿ ಸರಸ್ವತಿ ಪೋಟೋ ಪ್ರತಿಮೆ ಇಡುವುದನ್ನು ಸರಸ್ವತಿ-ಗಣಪತಿ ಪೂಜೆಯನ್ನು ಇಷ್ಟು ವರ್ಷಗಳ ಕಾಲ ಮುಸ್ಲಿಂ ವಿದ್ಯಾರ್ಥಿಗಳು ಪ್ರಶ್ನೆ ಮಾಡಿರಲಿಲ್ಲ. ಅಣ್ಣ ತಮ್ಮಂದಿರಂತೆ ಸ್ನೇಹಿತರಂತೆ ಇದ್ದವರ ನಡುವೆ ಧರ್ಮದ ಕಾರಣಕ್ಕೆ ಬಿರುಕು ಮೂಡುವಂತೆ ಮಾಡಿರುವುದು ಸರಿಯೇ?” ಎಂದು ’ಅರನ್‌ ಸೈ’ ಪ್ರಶ್ನಿಸಿದೆ.

ಮತ್ತೊಂದು ಚಾನೆಲ್ ಆದ ‘ತಮಿಳ್ ಪೊಕ್ಕಿಶಂ’, “ಕರ್ನಾಟಕದಲ್ಲಿ ಮತಾಂಧ ರಾಜಕಾರಣ ಹೊಸದೇನಲ್ಲ. ಮತೀಯತೆ ಮುಂದಿಟ್ಟು ರಾಜಕಾರಣ ಮಾಡುವ ದೊಡ್ಡ ಪರಂಪರೆಯೇ ಕರ್ನಾಟಕಕ್ಕೆ ಇದೆ. ಇನ್ನೂ ಈ ಹಿಂದೆ 2009 ರಲ್ಲಿ ಬಂಟ್ವಾಳದ ಎಸ್ವಿಎಸ್ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ವಿರುದ್ಧ ಅಲ್ಲಿನ ಬಲಪಂಥೀಯ ಸಂಘಟನೆಗಳು ಹೋರಾಟ ನಡೆಸಿದ್ದವು, 2016 ರಲ್ಲಿ ಬಳ್ಳಾರಿಯ ಶಿವರಾಮ ಕಾರಂತ ಮತ್ತು ಶ್ರೀನಿವಾಸ ಎಂಬ ಸರ್ಕಾರಿ ಕಾಲೇಜುಗಳಲ್ಲೂ ಹಿಜಾಬ್ ವಿರುದ್ಧ ಹೋರಾಟ ನಡೆಸಲಾಗಿತ್ತು. ಆದರೆ, ಈ ಹೋರಾಟಗಳು ಯಶಸ್ವಿಯಾಗಿರಲಿಲ್ಲ. ಆದರೆ, ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರಾಗುತ್ತಿದ್ದಂತೆ ಇಂತಹ ಹೋರಾಟಗಳು ಮತ್ತೆ ತಲೆ ಎತ್ತುತ್ತಿರುವುದು ವಿಪರ್ಯಾಸ” ಎಂದು ಅಭಿಪ್ರಾಯಪಟ್ಟಿದೆ.

ಸ್ವತಃ ತಮಿಳುನಾಡು ಆರ್‌ಎಸ್‌ಎಸ್ ಮುಖಂಡ ರಾಮಸುಬ್ರಮಣ್ಯಂ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದು, “ಅನ್ಯ ಕೋಮಿನ ಖಾಸಗಿ ಧಾರ್ಮಿಕ ಆಚರಣೆಯನ್ನು ಗೌರವಿಸಬೇಕಾದದ್ದು ಮತ್ತು ಅವರ ಧಾರ್ಮಿಕ ಹಕ್ಕುಚ್ಯುತಿ ಆಗದಂತೆ ತಡೆಯುವುದು ಎಲ್ಲಾ ಹಿಂದುಗಳ ಕರ್ತವ್ಯ. ಆದರೆ, ಹಿಜಾಬ್ ವಿಚಾರಕ್ಕೆ ಕರ್ನಾಟಕದಲ್ಲಿ ನಡೆಯುತ್ತಿರುವುದು ತೀರಾ ಕ್ಷುಲ್ಲಕ” ಎಂದು ಮಾಧ್ಯಮಗಳ ಮುಂದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಪುರುಷರ ಸಾಕ್ಷರತಾ ಪ್ರಮಾಣಕ್ಕೆ ಹೋಲಿಸಿದರೆ, ಮಹಿಳಾ ಸಾಕ್ಷತರಾ ಪ್ರಮಾಣ ತೀರಾ ಹಿಂದುಳಿದಿದೆ. ಹಿಂದೂ ಮಹಿಳೆಯರ ಸಾಕ್ಷರತಾ ಪ್ರಮಾಣ ಶೇ. 55.97 ರಷ್ಟಾಗಿದ್ದರೆ, ಮುಸ್ಲಿಂ ಮಹಿಳೆಯರ ಸಾಕ್ಷರತಾ ಪ್ರಮಾಣ ಕೇವಲ 51.89 ಮಾತ್ರ. ಹಿಜಾಬ್ ಸುತ್ತಲಿನ ರಾಜಕಾರಣದಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸಮಸ್ಯೆಯಾಗುತ್ತಿರುವುದು ಶೋಚನೀಯ.


ಇದನ್ನೂ ಓದಿ: Hijab Live | ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿಲ್ಲ ಎಂದು ಕೋರ್ಟ್‌ನಲ್ಲಿ ಸುಳ್ಳು ಹೇಳಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...