Homeಕರ್ನಾಟಕಹಿಜಾಬ್ ವಿವಾದ: ತಮಿಳುನಾಡು, ಕೇರಳ, ಆಂಧ್ರದ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರಕ್ಕೆ ಛೀಮಾರಿ

ಹಿಜಾಬ್ ವಿವಾದ: ತಮಿಳುನಾಡು, ಕೇರಳ, ಆಂಧ್ರದ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರಕ್ಕೆ ಛೀಮಾರಿ

- Advertisement -
- Advertisement -

ರಾಜ್ಯದಲ್ಲಿ ಆರಂಭವಾದ ಹಿಜಾಬ್ ವಿವಾದ ಕರಾವಳಿಯನ್ನೂ ದಾಟಿ ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲೂ ಸದ್ದು ಮಾಡುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಮತ್ತು ಯುಎಇ ರಾಜಕುಮಾರಿ ಮೊದಲಾದವರು ಈ ಘಟನೆಯನ್ನು ಖಂಡಿಸಿ ಹೇಳಿಕೆ ನೀಡಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ನೆರೆಯ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶದ ಹಲವಾರು ಸುದ್ದಿ ಮಾಧ್ಯಮಗಳು ರಾಜ್ಯದ ಪ್ರಕರಣವನ್ನು ಮತ್ತು ಇದರ ಬೆನ್ನಿಗೆ ಶಾಲಾ ಕಾಲೇಜಿನಲ್ಲಿ ಸಮವಸ್ತ್ರವನ್ನು ಕಡ್ಡಾಯಗೊಳಿಸಿ ಹಿಜಾಬ್ ನಿಷೇಧಿಸಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿವೆ.

ತಮಿಳುನಾಡಿನ ಅರನ್ ಸೈ, ಸವುಕ್ಕು ಶಂಕರ್, ರೆಡ್ಪಿಕ್ಸ್, ತಮಿಳ್ ಪೊಕ್ಕಿಶಮ್, ಕೇರಳದ ನ್ಯೂಸ್ ಇಂಡಿಯಾ ಮಲಯಾಳಂ, ಮೀಡಿಯಾ ಒನ್ ಟಿವಿ, ಆಂಧ್ರಪ್ರದೇಶದ 10ಟಿವಿ ನ್ಯೂಸ್ ತೆಲುಗು, ಎಚ್‌ಎಂಟಿವಿ ತೆಲುಗು ನ್ಯೂಸ್ ಚಾನೆಲ್‌ಗಳು (ಡಿಜಿಟಲ್-ಯೂಟ್ಯೂಬ್ ಮೀಡಿಯಾಗಳೂ ಸೇರಿ) ಸೇರಿದಂತೆ ದಕ್ಷಿಣ ರಾಜ್ಯಗಳ ಹಲವು ಮಾಧ್ಯಮಗಳು ಕರ್ನಾಟಕದ ಈ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ವಿಷಾದ ಪಡಿಸಿವೆ.

ಕರ್ನಾಟಕದಲ್ಲಿ ಹಿಜಾಬ್ ನಿಷೇಧ ಸರಿಯೇ..? ಎಂಬ ಕಾರ್ಯಕ್ರಮ ಮೂಲಕ ತಮ್ಮ ಅಭಿಪ್ರಾಯವನ್ನು ಮುಂದಿಟ್ಟಿರುವ ’ಅರನ್‌ ಸೈ’ ಎಂಬ ತಮಿಳು ಸುದ್ದಿ ಮಾಧ್ಯಮ, “ಸಂವಿಧಾನ ಕಲಂ 14 ಮತ್ತು 25ರ ಅಡಿಯಲ್ಲಿ ಪ್ರತಿಯೊಬ್ಬ ಭಾರತೀಯನಿಗೂ ತನ್ನ ಧರ್ಮವನ್ನು ಅನುಸರಿಸುವ ಮತ್ತು ಆಚರಿಸುವ ಹಕ್ಕು ನೀಡಲಾಗಿದೆ. ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬ್ ಧರಿಸುವುದು ಅಥವಾ ಧರಿಸದೆ ಇರುವುದು ಸೇರಿದಂತೆ ಎಲ್ಲಾ ಧರ್ಮಗಳ ಖಾಸಗಿ ಆಚರಣೆಗಳು ಈ ಹಕ್ಕಿನ ಅಡಿಯಲ್ಲೇ ಬರುತ್ತದೆ ಮತ್ತು ಅದು ಅವರಿಗೆ ಬಿಟ್ಟ ವಿಚಾರ” ಎಂದು ಹೇಳಿದೆ.

ಇದನ್ನೂ ಓದಿ: ‘ರಾಜ್ಯವು ನಿಯಂತ್ರಣದಲ್ಲಿದೆ’: ‘ಹಿಜಾಬ್‌‌’ ವಿಚಾರಣೆಯ ಸಮಯ ನ್ಯಾಯಾಲಯಕ್ಕೆ ತಿಳಿಸಿದ ರಾಜ್ಯ ಸರ್ಕಾರ!

“ಈ ವಿಚಾರದಲ್ಲಿ ಅನ್ಯ ಕೋಮಿನವರ ಹಸ್ತಕ್ಷೇಪಕ್ಕೆ ಅವಕಾಶ ಇಲ್ಲ. ಆದರೆ, ಕರ್ನಾಟಕದಲ್ಲಿ ನಡೆಯುತ್ತಿರುವುದು ಏನು? ಹಿಜಾಬ್‌ಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಶುದ್ಧ ಕೋಮುವಾದವಲ್ಲವೇ? ದ್ವೇಷ ರಾಜಕಾರಣವಲ್ಲವೇ? ವಿದ್ಯಾರ್ಥಿಗಳ ಎದೆಗೆ ನಂಜು ಬಿತ್ತುವ ಕೆಲಸವಲ್ಲವೇ? ಇದೇ ಶಾಲೆಗಳಲ್ಲಿ ಸರಸ್ವತಿ ಪೋಟೋ ಪ್ರತಿಮೆ ಇಡುವುದನ್ನು ಸರಸ್ವತಿ-ಗಣಪತಿ ಪೂಜೆಯನ್ನು ಇಷ್ಟು ವರ್ಷಗಳ ಕಾಲ ಮುಸ್ಲಿಂ ವಿದ್ಯಾರ್ಥಿಗಳು ಪ್ರಶ್ನೆ ಮಾಡಿರಲಿಲ್ಲ. ಅಣ್ಣ ತಮ್ಮಂದಿರಂತೆ ಸ್ನೇಹಿತರಂತೆ ಇದ್ದವರ ನಡುವೆ ಧರ್ಮದ ಕಾರಣಕ್ಕೆ ಬಿರುಕು ಮೂಡುವಂತೆ ಮಾಡಿರುವುದು ಸರಿಯೇ?” ಎಂದು ’ಅರನ್‌ ಸೈ’ ಪ್ರಶ್ನಿಸಿದೆ.

ಮತ್ತೊಂದು ಚಾನೆಲ್ ಆದ ‘ತಮಿಳ್ ಪೊಕ್ಕಿಶಂ’, “ಕರ್ನಾಟಕದಲ್ಲಿ ಮತಾಂಧ ರಾಜಕಾರಣ ಹೊಸದೇನಲ್ಲ. ಮತೀಯತೆ ಮುಂದಿಟ್ಟು ರಾಜಕಾರಣ ಮಾಡುವ ದೊಡ್ಡ ಪರಂಪರೆಯೇ ಕರ್ನಾಟಕಕ್ಕೆ ಇದೆ. ಇನ್ನೂ ಈ ಹಿಂದೆ 2009 ರಲ್ಲಿ ಬಂಟ್ವಾಳದ ಎಸ್ವಿಎಸ್ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ವಿರುದ್ಧ ಅಲ್ಲಿನ ಬಲಪಂಥೀಯ ಸಂಘಟನೆಗಳು ಹೋರಾಟ ನಡೆಸಿದ್ದವು, 2016 ರಲ್ಲಿ ಬಳ್ಳಾರಿಯ ಶಿವರಾಮ ಕಾರಂತ ಮತ್ತು ಶ್ರೀನಿವಾಸ ಎಂಬ ಸರ್ಕಾರಿ ಕಾಲೇಜುಗಳಲ್ಲೂ ಹಿಜಾಬ್ ವಿರುದ್ಧ ಹೋರಾಟ ನಡೆಸಲಾಗಿತ್ತು. ಆದರೆ, ಈ ಹೋರಾಟಗಳು ಯಶಸ್ವಿಯಾಗಿರಲಿಲ್ಲ. ಆದರೆ, ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರಾಗುತ್ತಿದ್ದಂತೆ ಇಂತಹ ಹೋರಾಟಗಳು ಮತ್ತೆ ತಲೆ ಎತ್ತುತ್ತಿರುವುದು ವಿಪರ್ಯಾಸ” ಎಂದು ಅಭಿಪ್ರಾಯಪಟ್ಟಿದೆ.

ಸ್ವತಃ ತಮಿಳುನಾಡು ಆರ್‌ಎಸ್‌ಎಸ್ ಮುಖಂಡ ರಾಮಸುಬ್ರಮಣ್ಯಂ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದು, “ಅನ್ಯ ಕೋಮಿನ ಖಾಸಗಿ ಧಾರ್ಮಿಕ ಆಚರಣೆಯನ್ನು ಗೌರವಿಸಬೇಕಾದದ್ದು ಮತ್ತು ಅವರ ಧಾರ್ಮಿಕ ಹಕ್ಕುಚ್ಯುತಿ ಆಗದಂತೆ ತಡೆಯುವುದು ಎಲ್ಲಾ ಹಿಂದುಗಳ ಕರ್ತವ್ಯ. ಆದರೆ, ಹಿಜಾಬ್ ವಿಚಾರಕ್ಕೆ ಕರ್ನಾಟಕದಲ್ಲಿ ನಡೆಯುತ್ತಿರುವುದು ತೀರಾ ಕ್ಷುಲ್ಲಕ” ಎಂದು ಮಾಧ್ಯಮಗಳ ಮುಂದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಪುರುಷರ ಸಾಕ್ಷರತಾ ಪ್ರಮಾಣಕ್ಕೆ ಹೋಲಿಸಿದರೆ, ಮಹಿಳಾ ಸಾಕ್ಷತರಾ ಪ್ರಮಾಣ ತೀರಾ ಹಿಂದುಳಿದಿದೆ. ಹಿಂದೂ ಮಹಿಳೆಯರ ಸಾಕ್ಷರತಾ ಪ್ರಮಾಣ ಶೇ. 55.97 ರಷ್ಟಾಗಿದ್ದರೆ, ಮುಸ್ಲಿಂ ಮಹಿಳೆಯರ ಸಾಕ್ಷರತಾ ಪ್ರಮಾಣ ಕೇವಲ 51.89 ಮಾತ್ರ. ಹಿಜಾಬ್ ಸುತ್ತಲಿನ ರಾಜಕಾರಣದಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸಮಸ್ಯೆಯಾಗುತ್ತಿರುವುದು ಶೋಚನೀಯ.


ಇದನ್ನೂ ಓದಿ: Hijab Live | ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿಲ್ಲ ಎಂದು ಕೋರ್ಟ್‌ನಲ್ಲಿ ಸುಳ್ಳು ಹೇಳಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....