Homeಕರ್ನಾಟಕಉಪ್ಪಿನಂಗಡಿ: ಹಿಜಾಬ್‌ಗೆ ಅವಕಾಶ ನೀಡಿ ಎಂದು ಪ್ರತಿಭಟಿಸಿದ್ದ 23 ವಿದ್ಯಾರ್ಥಿನಿಯರ ಅಮಾನತು

ಉಪ್ಪಿನಂಗಡಿ: ಹಿಜಾಬ್‌ಗೆ ಅವಕಾಶ ನೀಡಿ ಎಂದು ಪ್ರತಿಭಟಿಸಿದ್ದ 23 ವಿದ್ಯಾರ್ಥಿನಿಯರ ಅಮಾನತು

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಆಗ್ರಹಿಸಿ ಕಳೆದ ವಾರ ಪ್ರತಿಭಟನೆ ನಡೆಸಿದ್ದ 23 ವಿದ್ಯಾರ್ಥಿನಿಯರನ್ನು ಕಾಲೇಜು ಆಡಳಿತ ಮಂಡಳಿ ಅಮಾನತುಗೊಳಿಸಿದೆ.

“ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರಿಂದ ಅವರನ್ನು ಸೋಮವಾರ ಅಮಾನತುಗೊಳಿಸಲಾಗಿದೆ,” ಎಂದು ಪುತ್ತೂರು ಬಿಜೆಪಿ ಶಾಸಕ ಮತ್ತು ಕಾಲೇಜು ಅಭಿವೃದ್ಧಿ ಸಮಿತಿ (ಸಿಡಿಸಿ) ಅಧ್ಯಕ್ಷ ಸಂಜೀವ ಮಠಂದೂರು ಮಂಗಳವಾರ ಪಿಟಿಐಗೆ ತಿಳಿಸಿದ್ದಾರೆ.

ಕಳೆದ ವಾರ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದು, ಸ್ಕಾರ್ಫ್ ಧರಿಸಲು ತಮಗೆ ಅನುಮತಿ ನೀಡಬೇಕೆಂದು ಒತ್ತಾಯಿಸಿ, ಪ್ರತಿಭಟಿಸಿದ್ದರು. ಈ ಬಗ್ಗೆ ಸೋಮವಾರ ಸಿಡಿಸಿ ಸಭೆ ನಡೆಸಿ ಅವರನ್ನು ಅಮಾನತುಗೊಳಿಸಿದೆ.

ಇದನ್ನೂ ಓದಿ: ಹಿಜಾಬ್ ವಿಚಾರದಲ್ಲಿ ಹುಡುಗಿಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ: ‘ಮಿಸ್‌ ಯುನಿವರ್ಸ್’ ಹರ್ನಾಜ್ ಸಂಧು

ಈ ಹಿಂದೆಯೂ ಹಿಜಾಬ್‌ ಧರಿಸಿ ಕಾಲೇಜಿಗೆ ಬಂದಿದ್ದ ಏಳು ವಿದ್ಯಾರ್ಥಿನಿಯರನ್ನು ಸಮಿತಿ ಅಮಾನತುಗೊಳಿಸಿತ್ತು.

ಶಿಕ್ಷಣ ಸಂಸ್ಥೆಗಳಲ್ಲಿ ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ ಯಾವುದೇ ಬಟ್ಟೆಯನ್ನು ನಿಷೇಧಿಸಿರುವ ಕರ್ನಾಟಕ ಸರ್ಕಾರದ ಆದೇಶವನ್ನು ನ್ಯಾಯಾಲಯ ಎತ್ತಿ ಹಿಡಿದಿದೆ. ಇಸ್ಲಾಂ ಧರ್ಮದಲ್ಲಿ ಸ್ಕಾರ್ಫ್ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ. ಸಮವಸ್ತ್ರ ಇರುವ ಶಿಕ್ಷಣ ಸಂಸ್ಥೆಗಳಲ್ಲಿ ಎಲ್ಲರೂ ಏಕರೂಪದ ಉಡುಗೆ ನಿಯಮವನ್ನು ಪಾಲಿಸಬೇಕು ಎಂದು ಈ ವರ್ಷದ ಮಾರ್ಚ್‌ನಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿತ್ತು.

ಹಿಜಾಬ್‌ ಕುರಿತ ಕರ್ನಾಟಕ ಹೈಕೋರ್ಟ್‌ ತೀರ್ಪು ತನ್ನ ಮುಂದಿರುವ ಅಗತ್ಯ ಪ್ರಶ್ನೆಗಳನ್ನು ಬದಿಗಿಟ್ಟಿದೆ ಎಂದು ಬೆಂಗಳೂರಿನ ವಿದ್ಯಾರ್ಥಿ ಒಕ್ಕೂಟ ಆಕ್ಷೇಪ ವ್ಯಕ್ತಪಡಿಸಿ ಪತ್ರಿಕಾ ಹೇಳಿಕೆ ನೀಡಿತ್ತು.

ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌), ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಜೇಷನ್ ಆಫ್ ಇಂಡಿಯಾ (ಎಸ್‌ಐಒ), ಸ್ಟೂಡೆಂಟ್ಸ್ ಕಲೆಕ್ಟೀವ್ ಬೆಂಗಳೂರು, ದಲಿತ ವಿದ್ಯಾರ್ಥಿ ಪರಿಷತ್‌ (ಡಿವಿಪಿ), ಸ್ಟೂಡೆಂಟ್ಸ್ ಕ್ರಿಶ್ಚಿಯನ್ ಮೂವ್‌ಮೆಂಟ್‌ ಆಫ್ ಇಂಡಿಯಾ (ಎಸ್‌ಸಿಎಂಐ), ಗರ್ಲ್ಸ್ ಇಸ್ಲಾಮಿಕ್ ಆರ್ಗನೈಜೇಷನ್ ಆಫ್ ಇಂಡಿಯಾ (ಜಿಐಒ) ಸಂಘಟನೆಗಳು ಈ ಒಕ್ಕೂಟದಲ್ಲಿದ್ದು, ಹೈಕೋರ್ಟ್ ತೀರ್ಪಿನ ಕುರಿತು ಆಕ್ಷೇಪಗಳನ್ನು ಎತ್ತಿ‌ವೆ.


ಇದನ್ನೂ ಓದಿ: ಉಡುಪಿ: ಹಿಜಾಬ್‌ ತೀರ್ಪಿನ ಬಳಿಕ 400ಕ್ಕೂ ಹೆಚ್ಚು ಮುಸ್ಲಿಂ ಹೆಣ್ಣುಮಕ್ಕಳು ತರಗತಿಯಿಂದ ಹೊರಕ್ಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...