Homeಕರ್ನಾಟಕಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟರ ನಿಧಿ ಬಳಕೆ: ಸದನ ಸಮಿತಿ ಆಕ್ಷೇಪ

ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟರ ನಿಧಿ ಬಳಕೆ: ಸದನ ಸಮಿತಿ ಆಕ್ಷೇಪ

- Advertisement -
- Advertisement -

ಪರಿಶಿಷ್ಟ ಜಾತಿಗಳ ಉಪ ಯೋಜನೆ (ಎಸ್‌ಸಿಎಸ್‌ಪಿ) ಪರಿಶಿಷ್ಟ ಪಂಗಡಗಳ ಯೋಜನೆ (ಟಿಎಸ್‌ಪಿ) ನಿಧಿಯನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿರುವುದಕ್ಕೆ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ.

ಗುರುವಾರ ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಿದ ಸಮಿತಿಯ ಮೂರನೇ ವರದಿಯಲ್ಲಿ ಆಕ್ಷೇಪ ಇದೆ.

ಐದು ಗ್ಯಾರಂಟಿ ಯೋಜನೆಗಳಿಗೆ 14,730.53 ಕೋಟಿ ರೂಪಾಯಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ನಿಧಿಯನ್ನು ಬಳಸಿಕೊಳ್ಳುತ್ತಿರುವುದಕ್ಕೆ ಕಾಂಗ್ರೆಸ್ ಸರ್ಕಾರ ಈಗಾಗಲೇ ಟೀಕೆಗೆ ಗುರಿಯಾಗಿದೆ.

“ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ನಿಧಿಯನ್ನು ಐದು ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆ ‘ಶಕ್ತಿ’ ಹಾಗೂ ವಿದ್ಯಾರ್ಥಿನಿಯರ ಉಚಿತ ಬಸ್‌ ಪಾಸ್‌ನಂತಹ ಕಾರ್ಯಕ್ರಮಗಳಿಗೆ ಬಳಸಲಾಗುತ್ತಿದೆ. ಎಲ್ಲಾ ಸಮುದಾಯಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್‌ಗಳನ್ನು ನೀಡಲಾಗುತ್ತಿದೆ. ಈ ಉದ್ದೇಶಕ್ಕೆ ಪರಿಶಿಷ್ಟರಿಗೆ ಮೀಸಲಾದ ಹಣವನ್ನು ಬಳಸುವುದು ಕಾನೂನು ಉಲ್ಲಂಘನೆ ಮತ್ತು ದುರುಪಯೋಗವಾಗಿದೆ. ವಿವಿಧ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಪರಿಶಿಷ್ಟರ ಹಣವನ್ನು ಅವರಿಗೇ ಬಳಸಬೇಕು” ಎಂದು ಮಳವಳ್ಳಿ ಶಾಸಕ ಪಿ.ಎಂ ನರೇಂದ್ರಸ್ವಾಮಿ ಅಧ್ಯಕ್ಷತೆಯ ಸಮಿತಿ ಆಗ್ರಹಿಸಿದೆ.

ವರದಿಯ ಪ್ರಕಾರ ಎಸ್‌ಸಿ/ಎಸ್‌ಟಿಗಳಿಗೆ ಪ್ರತ್ಯೇಕವಾಗಿ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯವಿಲ್ಲ. ಬಸ್‌ಗಳಲ್ಲಿ ಪ್ರಯಾಣಿಸುವವರು ಹೆಚ್ಚಾಗಿ ಬಡವರು ಮತ್ತು ಎಸ್‌ಸಿ /ಎಸ್‌ಟಿಗಳೇ ಎಂದು ಎಂದು ಸಾರಿಗೆ ಇಲಾಖೆ ಸಮಿತಿಗೆ ತಿಳಿಸಿದೆ. ಇಲಾಖೆಯ ಈ ವಾದವನ್ನು ಸಮಿತಿಯು ವಿರೋಧಿಸಿದೆ.

“ಕಳೆದ 10 ವರ್ಷಗಳಿಂದ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಹಣವನ್ನು ಕಾನೂನು ಉಲ್ಲಂಘಿಸಿ ಬಳಸಲಾಗುತ್ತಿದೆ. ಇದು ಶಿಕ್ಷಾರ್ಹವಾಗಿದೆ. ಸಮಾಜ ಕಲ್ಯಾಣ ಇಲಾಖೆಯಡಿ ಹಾಸ್ಟೆಲ್‌ಗಳಲ್ಲಿ ಮೂಲ ಸೌಕರ್ಯ ಮತ್ತು ವಿದ್ಯಾರ್ಥಿವೇತನವನ್ನು ಒದಗಿಸಲು ಹಣವನ್ನು ಬಳಸಬೇಕು “ಎಂದು ಸಮಿತಿಯು ಹಣಕಾಸು ಇಲಾಖೆಗೆ ತನ್ನ ಶಿಫಾರಸಿನಲ್ಲಿ ಹೇಳಿದೆ.

ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣವನ್ನು ಹೆಚ್ಚಿನ ಇಲಾಖೆಗಳ ಸಾಮಾನ್ಯ ಯೋಜನೆಗಳಿಗೆ ಬಳಸುತ್ತಿದ್ದಾರೆ ಎಂದು ನರೇಂದ್ರಸ್ವಾಮಿ ಸಮಿತಿ ಹೇಳಿದೆ. ಶಿಕ್ಷಣ ಇಲಾಖೆಯು ಈ ಹಣವನ್ನು ಪಠ್ಯಪುಸ್ತಕಗಳು, ಶೂಗಳನ್ನು ಒದಗಿಸಲು ಬಳಸುತ್ತಿದೆ ಎಂದು ವರದಿ ತಿಳಿಸಿದೆ.

ಕರ್ನಾಟಕ ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ (ಹಣಕಾಸಿನ ಸಂಪನ್ಮೂಲಗಳ ಯೋಜನೆ, ಹಂಚಿಕೆ ಮತ್ತು ಬಳಕೆ) ಕಾಯ್ದೆಯಿಂದ ಸೆಕ್ಷನ್ 7(ಸಿ) ಅನ್ನು ರದ್ದುಗೊಳಿಸುವಂತೆ ಸಮಿತಿಯು ಸರ್ಕಾರವನ್ನು ಆಗ್ರಹಿಸಿದೆ. ಈ ಸೆಕ್ಷನ್ ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣವನ್ನು ಸಾಮಾನ್ಯ ಸಾಮಾಜಿಕ ವಲಯದ ಯೋಜನೆಗಳಿಗೆ ಇತರರೊಂದಿಗೆ ಎಸ್‌ಸಿ/ಎಸ್‌ಟಿಗಳಿಗೆ ಬಳಸಲು ಅವಕಾಶ ನೀಡುತ್ತದೆ. ಈ ನಿಬಂಧನೆಯನ್ನು ದುರುಪಯೋಗ ಮಾಡಲಾಗುತ್ತಿದೆ. ಇದು ಎಸ್‌ಸಿ, ಎಸ್‌ಟಿಗಳ ಆರ್ಥಿಕ ಉನ್ನತಿಗೆ ಅವಕಾಶ ನೀಡುವುದಿಲ್ಲ ಎಂದು ವರದಿ ಹೇಳಿದೆ.

ಸಮಾಜ ಕಲ್ಯಾಣ ಇಲಾಖೆಯ ಅಧೀನದ ಆರು ನಿಗಮಗಳಿಗೆ ನೀಡಿದ್ದ ಅನುದಾನದಲ್ಲಿ 2023-24ನೇ ಸಾಲಿನ ಅಂತ್ಯಕ್ಕೆ ಖರ್ಚಾಗದೆ ಉಳಿದ ಹಣ 985 ಕೋಟಿ ರೂಪಾಯಿ. ಈ ಎಲ್ಲಾ ಹಣ ಆಯಾ ನಿಗಮಗಳ ವೈಯಕ್ತಿಕ ಖಾತೆಗಳಲ್ಲಿ (ಪಿಡಿ) ಇವೆ. ಸಮಾಜ ಕಲ್ಯಾಣ ಇಲಾಖೆಗೆ ಒದಗಿಸಲಾದ ಅನುದಾನವನ್ನು ನಿಗಮಗಳ ಪಿಡಿ ಇಟ್ಟಿರುವುದಕ್ಕೆ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದೆ.

ಇದನ್ನೂ ಓದಿ : ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ಕೋರಿ ನಿರ್ಣಯ ಅಂಗೀಕರಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...