Homeಕರ್ನಾಟಕಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟರ ನಿಧಿ ಬಳಕೆ: ಸದನ ಸಮಿತಿ ಆಕ್ಷೇಪ

ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟರ ನಿಧಿ ಬಳಕೆ: ಸದನ ಸಮಿತಿ ಆಕ್ಷೇಪ

- Advertisement -
- Advertisement -

ಪರಿಶಿಷ್ಟ ಜಾತಿಗಳ ಉಪ ಯೋಜನೆ (ಎಸ್‌ಸಿಎಸ್‌ಪಿ) ಪರಿಶಿಷ್ಟ ಪಂಗಡಗಳ ಯೋಜನೆ (ಟಿಎಸ್‌ಪಿ) ನಿಧಿಯನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿರುವುದಕ್ಕೆ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ.

ಗುರುವಾರ ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಿದ ಸಮಿತಿಯ ಮೂರನೇ ವರದಿಯಲ್ಲಿ ಆಕ್ಷೇಪ ಇದೆ.

ಐದು ಗ್ಯಾರಂಟಿ ಯೋಜನೆಗಳಿಗೆ 14,730.53 ಕೋಟಿ ರೂಪಾಯಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ನಿಧಿಯನ್ನು ಬಳಸಿಕೊಳ್ಳುತ್ತಿರುವುದಕ್ಕೆ ಕಾಂಗ್ರೆಸ್ ಸರ್ಕಾರ ಈಗಾಗಲೇ ಟೀಕೆಗೆ ಗುರಿಯಾಗಿದೆ.

“ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ನಿಧಿಯನ್ನು ಐದು ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆ ‘ಶಕ್ತಿ’ ಹಾಗೂ ವಿದ್ಯಾರ್ಥಿನಿಯರ ಉಚಿತ ಬಸ್‌ ಪಾಸ್‌ನಂತಹ ಕಾರ್ಯಕ್ರಮಗಳಿಗೆ ಬಳಸಲಾಗುತ್ತಿದೆ. ಎಲ್ಲಾ ಸಮುದಾಯಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್‌ಗಳನ್ನು ನೀಡಲಾಗುತ್ತಿದೆ. ಈ ಉದ್ದೇಶಕ್ಕೆ ಪರಿಶಿಷ್ಟರಿಗೆ ಮೀಸಲಾದ ಹಣವನ್ನು ಬಳಸುವುದು ಕಾನೂನು ಉಲ್ಲಂಘನೆ ಮತ್ತು ದುರುಪಯೋಗವಾಗಿದೆ. ವಿವಿಧ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಪರಿಶಿಷ್ಟರ ಹಣವನ್ನು ಅವರಿಗೇ ಬಳಸಬೇಕು” ಎಂದು ಮಳವಳ್ಳಿ ಶಾಸಕ ಪಿ.ಎಂ ನರೇಂದ್ರಸ್ವಾಮಿ ಅಧ್ಯಕ್ಷತೆಯ ಸಮಿತಿ ಆಗ್ರಹಿಸಿದೆ.

ವರದಿಯ ಪ್ರಕಾರ ಎಸ್‌ಸಿ/ಎಸ್‌ಟಿಗಳಿಗೆ ಪ್ರತ್ಯೇಕವಾಗಿ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯವಿಲ್ಲ. ಬಸ್‌ಗಳಲ್ಲಿ ಪ್ರಯಾಣಿಸುವವರು ಹೆಚ್ಚಾಗಿ ಬಡವರು ಮತ್ತು ಎಸ್‌ಸಿ /ಎಸ್‌ಟಿಗಳೇ ಎಂದು ಎಂದು ಸಾರಿಗೆ ಇಲಾಖೆ ಸಮಿತಿಗೆ ತಿಳಿಸಿದೆ. ಇಲಾಖೆಯ ಈ ವಾದವನ್ನು ಸಮಿತಿಯು ವಿರೋಧಿಸಿದೆ.

“ಕಳೆದ 10 ವರ್ಷಗಳಿಂದ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಹಣವನ್ನು ಕಾನೂನು ಉಲ್ಲಂಘಿಸಿ ಬಳಸಲಾಗುತ್ತಿದೆ. ಇದು ಶಿಕ್ಷಾರ್ಹವಾಗಿದೆ. ಸಮಾಜ ಕಲ್ಯಾಣ ಇಲಾಖೆಯಡಿ ಹಾಸ್ಟೆಲ್‌ಗಳಲ್ಲಿ ಮೂಲ ಸೌಕರ್ಯ ಮತ್ತು ವಿದ್ಯಾರ್ಥಿವೇತನವನ್ನು ಒದಗಿಸಲು ಹಣವನ್ನು ಬಳಸಬೇಕು “ಎಂದು ಸಮಿತಿಯು ಹಣಕಾಸು ಇಲಾಖೆಗೆ ತನ್ನ ಶಿಫಾರಸಿನಲ್ಲಿ ಹೇಳಿದೆ.

ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣವನ್ನು ಹೆಚ್ಚಿನ ಇಲಾಖೆಗಳ ಸಾಮಾನ್ಯ ಯೋಜನೆಗಳಿಗೆ ಬಳಸುತ್ತಿದ್ದಾರೆ ಎಂದು ನರೇಂದ್ರಸ್ವಾಮಿ ಸಮಿತಿ ಹೇಳಿದೆ. ಶಿಕ್ಷಣ ಇಲಾಖೆಯು ಈ ಹಣವನ್ನು ಪಠ್ಯಪುಸ್ತಕಗಳು, ಶೂಗಳನ್ನು ಒದಗಿಸಲು ಬಳಸುತ್ತಿದೆ ಎಂದು ವರದಿ ತಿಳಿಸಿದೆ.

ಕರ್ನಾಟಕ ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ (ಹಣಕಾಸಿನ ಸಂಪನ್ಮೂಲಗಳ ಯೋಜನೆ, ಹಂಚಿಕೆ ಮತ್ತು ಬಳಕೆ) ಕಾಯ್ದೆಯಿಂದ ಸೆಕ್ಷನ್ 7(ಸಿ) ಅನ್ನು ರದ್ದುಗೊಳಿಸುವಂತೆ ಸಮಿತಿಯು ಸರ್ಕಾರವನ್ನು ಆಗ್ರಹಿಸಿದೆ. ಈ ಸೆಕ್ಷನ್ ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣವನ್ನು ಸಾಮಾನ್ಯ ಸಾಮಾಜಿಕ ವಲಯದ ಯೋಜನೆಗಳಿಗೆ ಇತರರೊಂದಿಗೆ ಎಸ್‌ಸಿ/ಎಸ್‌ಟಿಗಳಿಗೆ ಬಳಸಲು ಅವಕಾಶ ನೀಡುತ್ತದೆ. ಈ ನಿಬಂಧನೆಯನ್ನು ದುರುಪಯೋಗ ಮಾಡಲಾಗುತ್ತಿದೆ. ಇದು ಎಸ್‌ಸಿ, ಎಸ್‌ಟಿಗಳ ಆರ್ಥಿಕ ಉನ್ನತಿಗೆ ಅವಕಾಶ ನೀಡುವುದಿಲ್ಲ ಎಂದು ವರದಿ ಹೇಳಿದೆ.

ಸಮಾಜ ಕಲ್ಯಾಣ ಇಲಾಖೆಯ ಅಧೀನದ ಆರು ನಿಗಮಗಳಿಗೆ ನೀಡಿದ್ದ ಅನುದಾನದಲ್ಲಿ 2023-24ನೇ ಸಾಲಿನ ಅಂತ್ಯಕ್ಕೆ ಖರ್ಚಾಗದೆ ಉಳಿದ ಹಣ 985 ಕೋಟಿ ರೂಪಾಯಿ. ಈ ಎಲ್ಲಾ ಹಣ ಆಯಾ ನಿಗಮಗಳ ವೈಯಕ್ತಿಕ ಖಾತೆಗಳಲ್ಲಿ (ಪಿಡಿ) ಇವೆ. ಸಮಾಜ ಕಲ್ಯಾಣ ಇಲಾಖೆಗೆ ಒದಗಿಸಲಾದ ಅನುದಾನವನ್ನು ನಿಗಮಗಳ ಪಿಡಿ ಇಟ್ಟಿರುವುದಕ್ಕೆ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದೆ.

ಇದನ್ನೂ ಓದಿ : ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ಕೋರಿ ನಿರ್ಣಯ ಅಂಗೀಕರಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...