Homeಕರ್ನಾಟಕ2021-22 ನೇ ಸಾಲಿನ ಪಿಯುಸಿ ಪರೀಕ್ಷಾ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಏ.16 ರಿಂದ ಮೇ 4...

2021-22 ನೇ ಸಾಲಿನ ಪಿಯುಸಿ ಪರೀಕ್ಷಾ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಏ.16 ರಿಂದ ಮೇ 4 ರ ವರೆಗೆ ಪರೀಕ್ಷೆ

- Advertisement -
- Advertisement -

2021-22 ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮತ್ತು ಪೂರ್ವ ಸಿದ್ಧತಾ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪಿಯು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಏಪ್ರಿಲ್ 16 ರಿಂದ ಮೇ 4 ರ ವರೆಗೆ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಪಿಯು ಬೋರ್ಡ್‌ ನಿರ್ಧರಿಸಿದೆ.

ಪಿಯುಸಿ ಪರೀಕ್ಷೆ ನಡೆಸುತ್ತಿರುವ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಫೆ.1ರ ವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಆಕ್ಷೇಪಣೆಗಳನ್ನು [email protected] ಇ-ಮೇಲ್‌ಗೆ ಕಳುಹಿಸಬಹುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಅದೇ ರೀತಿ ದ್ವಿತೀಯ ಪಿಯು ಪೂರ್ವ ಸಿದ್ಧತಾ ಪರೀಕ್ಷೆಯನ್ನು ಮಾ.14 ರಿಂದ 25ರ ವರೆಗೆ ನಡೆಸಲಾಗುವುದು. ಜಿಲ್ಲಾ ಉಪ ನಿರ್ದೇಶಕರ ನೇತೃತ್ವದಲ್ಲಿ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ, ಪರೀಕ್ಷೆ ನಡೆಸಬೇಕು ಎಂದು ಇಲಾಖೆ ಸೂಚಿಸಿದೆ. ಫೆ.17ರಿಂದ ಮಾ.25ರ ವರೆಗೆ ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ ನಡೆಸಲಾಗುವುದು ಎಂದು ಇಲಾಖೆ ಪ್ರಕಟಿಸಿದೆ.

ಇನ್ನು ಮಾ.28 ರಿಂದ ಏ.13ರ ವರೆಗೆ ಪ್ರಥಮ ಪಿಯು ವಾರ್ಷಿಕ ಪರೀಕ್ಷೆ ನಡೆಸುವಂತೆ ಪಿಯು ಇಲಾಖೆ ನಿರ್ದೇಶಕಿ ಆರ್‌.ಸ್ನೇಹಲ್‌ ಆದೇಶಿಸಿದ್ದಾರೆ.

ಇದನ್ನೂ ಓದಿ: ಆಸ್ಕರ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ ’ಜೈ ಭೀಮ್’ ದೃಶ್ಯಗಳು: ಅತ್ಯುನ್ನತ ಗೌರವ ಎಂದ ತಂಡ

2021-22ನೇ ಸಾಲಿನಲ್ಲಿ ಭಾಷಾ ವಿಷಯದಲ್ಲಿ ಕಡಿತಗೊಳಿಸಿರುವ ಶೇ.30 ರಷ್ಟು ಪಠ್ಯಕ್ರಮವನ್ನು ಹೊರತುಪಡಿಸಿ ಉಳಿದ ಶೇ.70 ರಷ್ಟು ಪಠ್ಯಕ್ರಮಕ್ಕೆ ಮಾತ್ರ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಪಿಯು ಇಲಾಖೆ ಸ್ಪಷ್ಟಪಡಿಸಿದೆ. ಆದರೆ, ಐಚ್ಛಿಕ ವಿಷಯಗಳ ಪಠ್ಯಕ್ರಮದಲ್ಲಿ ಯಾವುದೇ ಕಡಿತವಿಲ್ಲದೆ ಶೇ.100 ರಷ್ಟು ಪಠ್ಯಕ್ರಮಕ್ಕೆ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಐಚ್ಛಿಕ ವಿಷಯಗಳಲ್ಲಿ ಪ್ರಶ್ನೆಪತ್ರಿಕೆ ತಯಾರಿಸುವ ವೇಳೆ ಹೆಚ್ಚು ಸಂಖ್ಯೆಯಲ್ಲಿ ಆಯ್ಕೆ ಪ್ರಶ್ನೆಗಳನ್ನು ನೀಡಿ ವಿದ್ಯಾರ್ಥಿಗಳು ತಮಗೆ ತಿಳಿದಿರುವ ಪ್ರಶ್ನೆಗಳನ್ನು ಆರಿಸಿಕೊಂಡು ಉತ್ತರಿಸುವ ಅವಕಾಶ ಕಲ್ಪಿಸಲಾಗುತ್ತದೆ ಎಂದು ತಿಳಿಸಿದೆ.

ಕೊರೊನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ನಂತರ ವಿವಿಧ ವೃತ್ತಿಪರ ಕೋರ್ಸುಗಳ ದಾಖಲಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ಹಿತದೃಷ್ಟಿಯಿಂದ ಪಠ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿತ್ತು. ಅದರಂತೆಯೇ ಜಿಲ್ಲಾ ಉಪ ನಿರ್ದೇಶಕರ ನೇತೃತ್ವದಲ್ಲಿಯೇ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ, ಪರೀಕ್ಷೆ ನಡೆಸಲಾಗುತ್ತಿದೆ.

II PUC ಬೋರ್ಡ್ ಪರೀಕ್ಷೆಯ ವೇಳಾಪಟ್ಟಿ

ಏಪ್ರಿಲ್ 16 – ಗಣಿತ, ಶಿಕ್ಷಣ ಶಾಸ್ತ್ರ, ಮೂಲ ಗಣಿತ

ಏಪ್ರಿಲ್ 18 – ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ

ಏಪ್ರಿಲ್ 19 – ಮಾಹಿತಿ ತಂತ್ರಜ್ಞಾನ, ರೀಟೈಲ್‌, ಆಟೋ ಮೊಬೈಲ್‌, ಹೆಲ್ತ್‌ಕೇರ್‌, ಬ್ಯೂಟಿ ಆ್ಯಂಡ್‌ ವೆಲ್‌ನೆಸ್‌

ಏಪ್ರಿಲ್ 20 – ಇತಿಹಾಸ, ಭೌತಶಾಸ್ತ್ರ

ಏಪ್ರಿಲ್ 21 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೇಬಿಕ್, ಫ್ರೆಂಚ್

ಏಪ್ರಿಲ್ 22 – ತರ್ಕಶಾಸ್ತ್ರ, ಬಿಸಿನೆಸ್ ಸ್ಟಡೀಸ್

ಏಪ್ರಿಲ್ 23 – ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನೋವಿಜ್ಞಾನ, ರಸಾಯನಶಾಸ್ತ್ರ

ಏಪ್ರಿಲ್ 25 – ಅರ್ಥಶಾಸ್ತ್ರ

ಏಪ್ರಿಲ್ 26 – ಹಿಂದಿ

ಏಪ್ರಿಲ್ 28 – ಐಚ್ಛಿಕ ಕನ್ನಡ, ಅಕೌಂಟೆನ್ಸಿ, ಭೂವಿಜ್ಞಾನ, ಗೃಹ ವಿಜ್ಞಾನ

ಏಪ್ರಿಲ್ 29 – ಕನ್ನಡ

ಏಪ್ರಿಲ್ 30 – ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್

ಮೇ 2 – ಭೂಗೋಳ, ಜೀವಶಾಸ್ತ್ರ

ಮೇ 4 – ಇಂಗ್ಲಿಷ್

ಇದನ್ನೂ ಓದಿ: ಉಡುಪಿ: ಹಿಜಾಬ್ ಧರಿಸಿ ಬರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಇನ್ನೂ ಪ್ರವೇಶ ನೀಡದ ಕಾಲೇಜು

ಕೊರೊನಾ ಸಾಂಕ್ರಾಮಿಕದಿಂದ ಶೈಕ್ಷಣಿಕ ವರ್ಷದಲ್ಲಿ ಏರುಪೇರಾಗಿರುವ ಹಿನ್ನೆಲೆಯಲ್ಲಿ ಈ ಬಾರಿ ಪರೀಕ್ಷಾ ವೇಳಾಪಟ್ಟಿ ಹಿಂದೆ- ಮುಂದೆಯಾಗಿವೆ. ಈ ಪ್ರಕಾರ ಮಾ.28 ರಿಂದ ಏ.11ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದಾಗಿ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವೇಳಾಪಟ್ಟಿ ಪ್ರಕಟಿಸಿದೆ. ಬಳಿಕ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.


ಇದನ್ನೂ ಓದಿ: ಸಂಸ್ಕೃತ ಕಲಿತು ಮೇಷ್ಟ್ರಾಗಬೇಕಷ್ಟೇ, ಬೇರೆ ಅವಕಾಶಗಳಿಲ್ಲ: ಸಂಸ್ಕೃತ ಪ್ರಾಧ್ಯಾಪಕ ವೇಣುಗೋಪಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

ದೇಶದಲ್ಲಿ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ಮೇಲೆ ಅತೀವ ಕೆಲಸದ ಹೊರೆಯನ್ನು ಹೇರಿ ಅವರ ಖಾಸಗಿ ಜೀವನವನ್ನು ಕಿತ್ತುಕೊಳ್ಳುವ ಮೂಲಕ ಮಾನಸಿಕ ಒತ್ತಡಕ್ಕೆ ತಳ್ಳುತ್ತಿರುವ ಪರಿಸ್ಥಿತಿ ಗಂಭೀರ ಹಂತಕ್ಕೆ ತಲುಪಿದೆ. ಅದಾಗ್ಯೂ ಕೆಲ ಕಾರ್ಪೋರೇಟ್‌...

ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ವೇಳೆ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲೋರಾ ಶಾಂತಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಎಸ್‌ಆರ್‌ಎಂನ ಆಂತರಿಕ ಸಮಿತಿಯ ವರದಿಯು ಲೋರಾ...

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ. ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ...

ಒಳಮೀಸಲಾತಿ : ಶೇ.17ರ ಪ್ರಮಾಣದಲ್ಲೇ ಮುಂದುವರಿಯಲು ಸರ್ಕಾರ ತೀರ್ಮಾನ?

ಒಳಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಕಗ್ಗಂಟನ್ನು ಎದುರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೇಕಡ 17ರ ಮೀಸಲಾತಿ ಪ್ರಮಾಣದಲ್ಲೇ ಮುಂದುವರಿಯಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಶನಿವಾರ ಸಂಜೆ (ಡಿಸೆಂಬರ್ 6) ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಗೋವಾ ನೈಟ್ ಕ್ಲಬ್‌ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು

ಉತ್ತರ ಗೋವಾದ ನೈಟ್‌ ಕ್ಲಬ್‌ವೊಂದರಲ್ಲಿ ಶನಿವಾರ (ಡಿಸೆಂಬರ್ 6) ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಕ್ಲಬ್‌ನ ಅಡುಗೆ ಸಿಬ್ಬಂದಿಯಾಗಿದ್ದು,...

ಮೈಸೂರು| ಒಳಮೀಸಲಾತಿ ಹೋರಾಟ ಹತ್ತಿಕ್ಕಲು ನಿಷೇಧಾಜ್ಞೆ ಹೇರಿದ ಕಾಂಗ್ರೆಸ್ ಸರ್ಕಾರ

ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿಗೆ ಆಗ್ರಹಿಸಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ' ನಡೆಸುತ್ತಿದ್ದ ಹೋರಾಟಕ್ಕೆ ಜಿಲ್ಲಾ ಪೊಲೀಸರು ಅನುಮತಿ ನಿರಾಕರಿಸಿದ್ದು, ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಇಂದು ಪಾದಯಾತ್ರೆ ಆರಂಭಿಸಿದ ಹೋರಾಟಗಾರರನ್ನು...

‘ನಕಲಿ ಬ್ಯಾಂಕ್ ಗ್ಯಾರಂಟಿ’ ಪ್ರಕರಣ : ರಿಲಯನ್ಸ್ ಪವರ್, ಇತರ ಸಂಸ್ಥೆಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ರಿಲಯನ್ಸ್ ಪವರ್ ಕಂಪನಿಯು ಭಾರತೀಯ ಸೌರಶಕ್ತಿ ನಿಗಮಕ್ಕೆ (ಎಸ್‌ಇಸಿಐ) ಟೆಂಡರ್ ಪಡೆಯಲು ಸಲ್ಲಿಸಿದ 68 ಕೋಟಿ ರೂಪಾಯಿಗಳ ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಪವರ್ ಲಿಮಿಟೆಡ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್‌ನ...

ಉತ್ತರ ಪ್ರದೇಶ| ಬಾಬರಿ ಮಸೀದಿ ಮೇಲಿನ ದಾಳಿಗೆ 33 ವರ್ಷ; ಅಯೋಧ್ಯೆ-ವಾರಣಾಸಿಯಲ್ಲಿ ಬಿಗಿ ಭದ್ರತೆ

ಬಾಬರಿ ಮಸೀದಿ ಧ್ವಂಸವಾಗಿ 33ನೇ ವರ್ಷ ತುಂಬುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಮತ್ತು ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಜಾಗರೂಕರಾಗಿದ್ದು, ಎಲ್ಲಾ ಮಾರ್ಗಗಳಲ್ಲಿ ವಾಹನಗಳ ಸಂಪೂರ್ಣ ತಪಾಸಣೆ ನಡೆಸುತ್ತಿವೆ. ಈ ಕುರಿತು...

ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ: ‘ಡಿಕೆ’ ಸಹೋದರರಿಗೆ ಇಡಿ-ದೆಹಲಿ ಪೊಲೀಸರಿಂದ ಸಮನ್ಸ್

ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳಿಗೆ ನೀಡಿದ ದೇಣಿಗೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೈಗೊಂಡಿರುವ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯವು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು...