Homeಕರ್ನಾಟಕ2021-22 ನೇ ಸಾಲಿನ ಪಿಯುಸಿ ಪರೀಕ್ಷಾ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಏ.16 ರಿಂದ ಮೇ 4...

2021-22 ನೇ ಸಾಲಿನ ಪಿಯುಸಿ ಪರೀಕ್ಷಾ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಏ.16 ರಿಂದ ಮೇ 4 ರ ವರೆಗೆ ಪರೀಕ್ಷೆ

- Advertisement -
- Advertisement -

2021-22 ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮತ್ತು ಪೂರ್ವ ಸಿದ್ಧತಾ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪಿಯು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಏಪ್ರಿಲ್ 16 ರಿಂದ ಮೇ 4 ರ ವರೆಗೆ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಪಿಯು ಬೋರ್ಡ್‌ ನಿರ್ಧರಿಸಿದೆ.

ಪಿಯುಸಿ ಪರೀಕ್ಷೆ ನಡೆಸುತ್ತಿರುವ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಫೆ.1ರ ವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಆಕ್ಷೇಪಣೆಗಳನ್ನು [email protected] ಇ-ಮೇಲ್‌ಗೆ ಕಳುಹಿಸಬಹುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಅದೇ ರೀತಿ ದ್ವಿತೀಯ ಪಿಯು ಪೂರ್ವ ಸಿದ್ಧತಾ ಪರೀಕ್ಷೆಯನ್ನು ಮಾ.14 ರಿಂದ 25ರ ವರೆಗೆ ನಡೆಸಲಾಗುವುದು. ಜಿಲ್ಲಾ ಉಪ ನಿರ್ದೇಶಕರ ನೇತೃತ್ವದಲ್ಲಿ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ, ಪರೀಕ್ಷೆ ನಡೆಸಬೇಕು ಎಂದು ಇಲಾಖೆ ಸೂಚಿಸಿದೆ. ಫೆ.17ರಿಂದ ಮಾ.25ರ ವರೆಗೆ ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ ನಡೆಸಲಾಗುವುದು ಎಂದು ಇಲಾಖೆ ಪ್ರಕಟಿಸಿದೆ.

ಇನ್ನು ಮಾ.28 ರಿಂದ ಏ.13ರ ವರೆಗೆ ಪ್ರಥಮ ಪಿಯು ವಾರ್ಷಿಕ ಪರೀಕ್ಷೆ ನಡೆಸುವಂತೆ ಪಿಯು ಇಲಾಖೆ ನಿರ್ದೇಶಕಿ ಆರ್‌.ಸ್ನೇಹಲ್‌ ಆದೇಶಿಸಿದ್ದಾರೆ.

ಇದನ್ನೂ ಓದಿ: ಆಸ್ಕರ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ ’ಜೈ ಭೀಮ್’ ದೃಶ್ಯಗಳು: ಅತ್ಯುನ್ನತ ಗೌರವ ಎಂದ ತಂಡ

2021-22ನೇ ಸಾಲಿನಲ್ಲಿ ಭಾಷಾ ವಿಷಯದಲ್ಲಿ ಕಡಿತಗೊಳಿಸಿರುವ ಶೇ.30 ರಷ್ಟು ಪಠ್ಯಕ್ರಮವನ್ನು ಹೊರತುಪಡಿಸಿ ಉಳಿದ ಶೇ.70 ರಷ್ಟು ಪಠ್ಯಕ್ರಮಕ್ಕೆ ಮಾತ್ರ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಪಿಯು ಇಲಾಖೆ ಸ್ಪಷ್ಟಪಡಿಸಿದೆ. ಆದರೆ, ಐಚ್ಛಿಕ ವಿಷಯಗಳ ಪಠ್ಯಕ್ರಮದಲ್ಲಿ ಯಾವುದೇ ಕಡಿತವಿಲ್ಲದೆ ಶೇ.100 ರಷ್ಟು ಪಠ್ಯಕ್ರಮಕ್ಕೆ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಐಚ್ಛಿಕ ವಿಷಯಗಳಲ್ಲಿ ಪ್ರಶ್ನೆಪತ್ರಿಕೆ ತಯಾರಿಸುವ ವೇಳೆ ಹೆಚ್ಚು ಸಂಖ್ಯೆಯಲ್ಲಿ ಆಯ್ಕೆ ಪ್ರಶ್ನೆಗಳನ್ನು ನೀಡಿ ವಿದ್ಯಾರ್ಥಿಗಳು ತಮಗೆ ತಿಳಿದಿರುವ ಪ್ರಶ್ನೆಗಳನ್ನು ಆರಿಸಿಕೊಂಡು ಉತ್ತರಿಸುವ ಅವಕಾಶ ಕಲ್ಪಿಸಲಾಗುತ್ತದೆ ಎಂದು ತಿಳಿಸಿದೆ.

ಕೊರೊನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ನಂತರ ವಿವಿಧ ವೃತ್ತಿಪರ ಕೋರ್ಸುಗಳ ದಾಖಲಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ಹಿತದೃಷ್ಟಿಯಿಂದ ಪಠ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿತ್ತು. ಅದರಂತೆಯೇ ಜಿಲ್ಲಾ ಉಪ ನಿರ್ದೇಶಕರ ನೇತೃತ್ವದಲ್ಲಿಯೇ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ, ಪರೀಕ್ಷೆ ನಡೆಸಲಾಗುತ್ತಿದೆ.

II PUC ಬೋರ್ಡ್ ಪರೀಕ್ಷೆಯ ವೇಳಾಪಟ್ಟಿ

ಏಪ್ರಿಲ್ 16 – ಗಣಿತ, ಶಿಕ್ಷಣ ಶಾಸ್ತ್ರ, ಮೂಲ ಗಣಿತ

ಏಪ್ರಿಲ್ 18 – ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ

ಏಪ್ರಿಲ್ 19 – ಮಾಹಿತಿ ತಂತ್ರಜ್ಞಾನ, ರೀಟೈಲ್‌, ಆಟೋ ಮೊಬೈಲ್‌, ಹೆಲ್ತ್‌ಕೇರ್‌, ಬ್ಯೂಟಿ ಆ್ಯಂಡ್‌ ವೆಲ್‌ನೆಸ್‌

ಏಪ್ರಿಲ್ 20 – ಇತಿಹಾಸ, ಭೌತಶಾಸ್ತ್ರ

ಏಪ್ರಿಲ್ 21 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೇಬಿಕ್, ಫ್ರೆಂಚ್

ಏಪ್ರಿಲ್ 22 – ತರ್ಕಶಾಸ್ತ್ರ, ಬಿಸಿನೆಸ್ ಸ್ಟಡೀಸ್

ಏಪ್ರಿಲ್ 23 – ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನೋವಿಜ್ಞಾನ, ರಸಾಯನಶಾಸ್ತ್ರ

ಏಪ್ರಿಲ್ 25 – ಅರ್ಥಶಾಸ್ತ್ರ

ಏಪ್ರಿಲ್ 26 – ಹಿಂದಿ

ಏಪ್ರಿಲ್ 28 – ಐಚ್ಛಿಕ ಕನ್ನಡ, ಅಕೌಂಟೆನ್ಸಿ, ಭೂವಿಜ್ಞಾನ, ಗೃಹ ವಿಜ್ಞಾನ

ಏಪ್ರಿಲ್ 29 – ಕನ್ನಡ

ಏಪ್ರಿಲ್ 30 – ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್

ಮೇ 2 – ಭೂಗೋಳ, ಜೀವಶಾಸ್ತ್ರ

ಮೇ 4 – ಇಂಗ್ಲಿಷ್

ಇದನ್ನೂ ಓದಿ: ಉಡುಪಿ: ಹಿಜಾಬ್ ಧರಿಸಿ ಬರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಇನ್ನೂ ಪ್ರವೇಶ ನೀಡದ ಕಾಲೇಜು

ಕೊರೊನಾ ಸಾಂಕ್ರಾಮಿಕದಿಂದ ಶೈಕ್ಷಣಿಕ ವರ್ಷದಲ್ಲಿ ಏರುಪೇರಾಗಿರುವ ಹಿನ್ನೆಲೆಯಲ್ಲಿ ಈ ಬಾರಿ ಪರೀಕ್ಷಾ ವೇಳಾಪಟ್ಟಿ ಹಿಂದೆ- ಮುಂದೆಯಾಗಿವೆ. ಈ ಪ್ರಕಾರ ಮಾ.28 ರಿಂದ ಏ.11ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದಾಗಿ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವೇಳಾಪಟ್ಟಿ ಪ್ರಕಟಿಸಿದೆ. ಬಳಿಕ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.


ಇದನ್ನೂ ಓದಿ: ಸಂಸ್ಕೃತ ಕಲಿತು ಮೇಷ್ಟ್ರಾಗಬೇಕಷ್ಟೇ, ಬೇರೆ ಅವಕಾಶಗಳಿಲ್ಲ: ಸಂಸ್ಕೃತ ಪ್ರಾಧ್ಯಾಪಕ ವೇಣುಗೋಪಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...