Homeಕರ್ನಾಟಕ‘ಕರ್ನಾಟಕ ಬಿಲ್ಕಿಸ್ ಜೊತೆಗಿದೆ’: ಬಿಜೆಪಿ ಸರ್ಕಾರದ ನಡೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

‘ಕರ್ನಾಟಕ ಬಿಲ್ಕಿಸ್ ಜೊತೆಗಿದೆ’: ಬಿಜೆಪಿ ಸರ್ಕಾರದ ನಡೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

- Advertisement -
- Advertisement -

ಗುಜರಾತಿನ ಬಿಜೆಪಿ ಸರ್ಕಾರ ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರಿಗಳಿಗೆ ಕ್ಷಮಾದಾನ ನೀಡಿರುವುದನ್ನು ವಿರೋಧಿಸಿ ‘ಬಿಲ್ಕಿಸ್‌ಗೆ ನ್ಯಾಯ ದೊರಕಿಸಿಕೊಡುವಂತೆ ಕರ್ನಾಟಕ ಆಗ್ರಹಿಸುತ್ತದೆ’ ಎಂಬ ಘೋಷವಾಕ್ಯದೊಂದಿಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯದ ಪ್ರಮುಖ ಮಹಿಳಾ ಸಂಘಟನೆಗಳು, ಲೈಂಗಿಕ ಸಂಖ್ಯಾತರ ಸಂಘಟನೆ, ಜಾತ್ಯಾತೀತ ಪಕ್ಷಗಳು ಸೇರಿದಂತೆ ಹಲವಾರು ಜನಪರ ಸಂಘಟನೆಗಳು ಬೃಹತ್‌ ಪ್ರತಿಭಟನಾ ಸಮಾವೇಶವನ್ನು ಶನಿವಾರ ನಡೆಸಿದೆ.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ನಾಯಕಿ ಕೆ.ಎಸ್‌. ವಿಮಲಾ, “ಬಿಲ್ಕೀಸ್ ಪರವಾಗಿರು ಧ್ವನಿ ಇಡೀ ದೇಶದಾದ್ಯಂತ ಮೊಳಗುತ್ತಿದೆ. ದೇಶದ ಸ್ವಾತಂತ್ಯ್ರದ 75 ನೇ ವರ್ಷದ ಧ್ವಜಾರೋಹಣ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರು ‘ಮಹಿಳೆಯ ಘನತೆಯನ್ನು ಕಾಪಾಡುವುದು, ಅದನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು. ಅದಕ್ಕಾಗಿ ನಾವೆಲ್ಲರೂ ಪ್ರತಿಜ್ಞೆ ಮಾಡೋಣ’ ಎಂದು ಹೇಳಿದ್ದರು” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆದರೆ ಪ್ರಧಾನಿ ಮೋದಿ ನಾಚಿಕೆ ಆಗಬೇಕಾಗಿದೆ. ಈ ಮಾತನ್ನು ಅವರು ಕೆಂಪು ಕೋಟೆಯಲ್ಲಿ ನಿಂತು ಹೇಳಬೇಕಾದ ಸಂದರ್ಭ ಅವರದ್ದೇ ಸರ್ಕಾರ ಗುಜರಾತಿನಲ್ಲಿ ನನ್ನ ಸಹೋದರಿಯನ್ನು ಅತ್ಯಾಚಾರ ಮಾಡಿದ್ದ ದುಷ್ಕರ್ಮಿಗಳನ್ನು ಕ್ಷಮಾದಾನ ಮಾಡಿ ಬಿಡುಗಡೆ ಮಾಡುತ್ತಿದೆ. ಪ್ರಧಾನಿ ಮೋದಿಗೆ ಮಹಿಳೆಯ ಘಟನೆಯ ಬಗ್ಗೆ ಮಾತನಾಡಲು ಕನಿಷ್ಠ ನೈತಿಕತೆ ಇದೆಯೆ?” ಎಂದು ವಿಮಲಾ ಅವರು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಜನಶಕ್ತಿ ಕಾರ್ಯದರ್ಶಿ ಕುಮಾರ್‌‌ ಸಮತಳ ಮಾತನಾಡಿ, “ಬಿಲ್ಕೀಸ್ ಬಾನೊ ಅತ್ಯಾಚಾರ ಆರೋಪಿಗಳನ್ನು ಬಿಡುಗಡೆ ಮಾಡಿರುವುದು ಅತ್ಯಂತ ಖಂಡನೀಯ. ನಮ್ಮ ದೇಶದ ಸ್ವಾತಂತ್ಯ್ರಕ್ಕೆ ಮಾಡಿದ ಅವಮಾನವಿದು. ಸರ್ಕಾರವು ಒಂದು ಕಡೆ ದೇಶದಾದ್ಯಂತ ಸ್ವಾತಂತ್ಯ್ರದ ಅಮೃತ ಮಹೋತ್ಸವವನ್ನು ಆಚರಿಸುತ್ತಿದೆ, ಇನ್ನೊಂದು ಕಡೆ ಅತ್ಯಾಚಾರಿಗಳನ್ನು ಬಿಡುಗಡೆ ಮಾಡುತ್ತಿದೆ. ಅತ್ಯಾಚಾರಿಗಳನ್ನು ಗೌರವದಿಂದ ಸ್ವಾಗತಿಸಿದ್ದು ಸಮಾಜವೇ ತಲೆ ತಗ್ಗಿಸುವಂತಹ ಘಟನೆ” ಎಂದು ಹೇಳಿದರು.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಪ್ರಕರಣ: ಕೊಲೆ, ಅತ್ಯಾಚಾರದಂತಹ ಹೀನಕೃತ್ಯ ಎಸಗಿದವರಿಗೆ ಕ್ಷಮಾದಾನ ಸರಿಯೇ?

ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಕೈ ಪದ್ಮಶಾಲಿ ಮಾತನಾಡಿ,“ದೆಹಲಿಯ ಗ್ಯಾಂಗ್‌ ರೇಪ್‌ನಿಂದ ಹಿಡಿದು ಬಿಲ್ಕೀಸ್ ಬಾನೋ ತನಕ ಕೇಂದ್ರ ಹಾಗೂ ಗುಜರಾತ್ ಸರ್ಕಾರ ಹೇಗೆ ಮಹಿಳಾ ವಿರೋಧಿ ಎಂಬುದಜಕ್ಕೆ ಇದೊಂದು ನಿದರ್ಶನವಾಗಿದೆ. ದೇಶವೂ 75 ನೇ ಸ್ವಾತಂತ್ಯ್ರೋತ್ಸವ ಆಚರಿಸುತ್ತಿರಬೇಕಾದರೆ ಪ್ರಧಾನ ಮಂತ್ರಿ ಮಹಿಳಾ ಪರವಾದ ಭಾಷಣ ಮಾಡಿದ್ದಾರೆ. ಬೇಟಿ ಪಡಾವೊ-ಬೇಟಿ ಬಚಾವೊ ಎಂದು ಹೇಳುತ್ತಿದ್ದಾರೆ. ಆದರೆ ಇಲ್ಲಿ ಯಾವ ಬೇಟಿ, ಹೇಗೆ ಓದಬೇಕು ಎಂಬುವುದೇ ಯಕ್ಷ ಪ್ರಶ್ನೆಯಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮೈಸೂರಿನಲ್ಲೂ ಪ್ರತಿಭಟನೆ

ಬಿಲ್ಕಿಸ್ ಬಾನೊ ಅವರಿಗೆ ಬಿಜೆಪಿ ಸರ್ಕಾರ ಮಾಡಿರುವ ಅನ್ಯಾಯ ಖಂಡಿಸಿ ಶನಿವಾರ ಮೈಸೂರಿನ ಟೌನ್ ಹಾಲ್ ಎದುರು ಪ್ರತಿಭಟನೆಕ ಕೂಡಾ ಪ್ರತಿಭಟನೆ ನಡೆಸಲಾಗಿದೆ.

ರ್ನಾಟಕ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ನೇತೃತ್ವದಲ್ಲಿ ಪ್ರಕಾಶ್ ರಾಜ್, ಪ.ಮಲ್ಲೇಶ್, ಸಿ.ಬಸವಲಿಂಗಯ್ಯ ಒಳಗೊಂಡಂತೆ ಹಲವಾರು ಹೋರಾಟಗಾರರು, ಚಿಂತಕರು, ಮಹಿಳಾ ಮತ್ತು ಜನಪರ ಸಂಘಟನೆಗಳು ಭಾಗವಹಿಸಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಿಲ್ಕಿಸ್ ಬಾನು ಅವರ ಜೊತೆಗೆ ನಿಲ್ಲುವುದರ ಜೊತೆಗೆ ನಾವಿಂದು, ಮುರುಗಾ ಶರಣರ ವಿರುದ್ಧ ದೂರು ನೀಡಿರುವ ಇಬ್ಬರು ಅಪ್ರಾಪ್ತ ಬಾಲಕಿಯರ ಪರವಾಗಿ ದನಿ ಎತ್ತಬೇಕು. ಏಕೆಂದರೆ ಕರ್ನಾಟಕ ಸರ್ಕಾರವು ಈಗಾಗಲೇ ಮುರುಗಾಶರಣರ ಪರವಾಗಿ ಕಾರ್ಯಾಚರಣೆಗೆ ಇಳಿದಿದೆ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...