Homeಮುಖಪುಟದೆಹಲಿಯಾನ 2: ದೆಹಲಿ ಗಡಿಗಳಿಗೆ ಹೊರಟ ಕರ್ನಾಟಕ ಜನಶಕ್ತಿ ತಂಡ

ದೆಹಲಿಯಾನ 2: ದೆಹಲಿ ಗಡಿಗಳಿಗೆ ಹೊರಟ ಕರ್ನಾಟಕ ಜನಶಕ್ತಿ ತಂಡ

- Advertisement -
- Advertisement -

ಇಂದು ಸಂಸತ್ತಿನ ಉಭಯ ಸದನಗಳಲ್ಲಿ ಕೃಷಿ ಕಾಯ್ದೆಗಳ ರದ್ದತಿ ಮಸೂದೆ 2021 ಮಂಡನೆಯಾಗಿ ಅಂಗೀಕಾರವಾಗಿದೆ. ರೈತರ ಚಾರಿತ್ರಿಕ ಹೋರಾಟಕ್ಕೆ ಅಧಿಕೃತ ಗೆಲುವು ಸಂದಿದೆ. ಆದರೆ ರೈತರ ಪ್ರತಿಭಟನೆ ಮಾತ್ರ ಮುಗಿದಿಲ್ಲ. ಎಂಎಸ್‌ಪಿ ಖಾತ್ರಿಗೆ ಕಾನೂನು ಸೇರಿದಂತೆ ಹಲವು ಬೇಡಿಕೆಗಳನ್ನಿಟ್ಟುಕೊಂಡು ರೈತರು ಹೋರಾಟ ಮುಂದುವರೆಸಿದ್ದಾರೆ. ದೇಶಾದ್ಯಂತದ ಜನ ದೆಹಲಿ ಗಡಿಗಳನ್ನು ತಲುಪಿ ಬೆಂಬಲ ಸೂಚಿಸುತ್ತಿದ್ದಾರೆ. ಅದರಂತೆ ಕರ್ನಾಟಕದಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿ ಯುವಜನರ ತಂಡ ರೈತ ಹೋರಾಟ ಬೆಂಬಲಿಸಲು ದೆಹಲಿಗೆ ಹೊರಟಿದೆ.

ರಾಜ್ಯದಲ್ಲಿ ರೈತ ಹೋರಾಟ ಮುನ್ನಡೆಸುತ್ತಿರುವ ಸಂಯುಕ್ತ ಹೋರಾಟ ಕರ್ನಾಟಕ, ಐಕ್ಯ ಹೋರಾಟ ಸಮಿತಿ ಮತ್ತು ಎಐಕೆಎಸ್‌ಸಿಸಿಯ ಭಾಗವಾಗಿರುವ ಕರ್ನಾಟಕ ಜನಶಕ್ತಿ ತಂಡವು ದೆಹಲಿಯಾನ 2 ಹೆಸರಿನಲ್ಲಿ ದೆಹಲಿಗೆ ಹೊರಟಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಕರ್ನಾಟಕ ಜನಶಕ್ತಿ ರಾಜ್ಯಸಮಿತಿ ಸದಸ್ಯರಾದ ಸರೋವರ್ ಬೆಂಕಿಕೆರೆ ಮಾತನಾಡಿ, “ವ್ಯಕ್ತಿಯೊಬ್ಬನ ಪ್ರತಿಷ್ಠೆ ಮತ್ತು ಖಾಸಗೀ ಕಂಪನಿಗಳಿಗೆ ಲಾಭ ಮಾಡಿಕೊಡಲು ಮಾತ್ರ ಬಂದಿದ್ದ ಕರಾಳ ಕೃಷಿ ಕಾಯ್ದೆ ರೈತರ ಹೋರಾಟದಿಂದ ವಾಪಾಸ್ಸಾಗಿದೆ. ಇದು ರೈತರ ಗೆಲುವು ಮಾತ್ರವಲ್ಲ ಇಡೀ ದೇಶದ ಜನರ ಗೆಲವು, ಅನ್ನ ತಿನ್ನುವವರ ಪ್ರತಿಯೊಬ್ಬರ ಗೆಲುವು. ಈ ಭಂಡ ಸರ್ಕಾರ ಕಾಯ್ದೆ ಮಾತ್ರ ವಾಪಾಸ್ ತಗೆದುಕೊಂಡಿದೆ ಆದರೆ ಎಮ್.ಎಸ್.ಪಿ ಅನ್ನು ಶಾಸನಬದ್ಧ ಗೊಳಿಸುವ ತೀರ್ಮಾನ ಇನ್ನೂ ಮಾಡಿಲ್ಲ. ಹುತಾತ್ಮ ರೈತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಮತ್ತು ಆ ಸಾವುಗಳಿಗೆ ಕ್ಷಮೆ ಕೇಳಬೇಕು‌. ಹಾಗಾಗಿ ಈ ಹೋರಾಟ ಇನ್ನೂ ಜಾರಿಯಲ್ಲಿದೆ. ಅದನ್ನು ಸೇರಿಕೊಳ್ಳಲು ನಾವು ಹೊರಟಿದ್ದೇವೆ” ಎಂದರು.

ಇದೊಂದು ಐತಿಹಾಸಿಕ ಹೋರಾಟವೇ ಹೌದು. ಇದನ್ನು ಬೆಂಬಲಿಸಿ ರಾಜ್ಯದಲ್ಲಿ ಸೈಕಲ್ ಜಾಥಾ, ಹಳ್ಳಿಯಾನ ದಂತಹ ಪ್ರಚಾರಾಂದೋಲನವನ್ನು ನಾವು ಮಾಡಿದ್ದೆವು‌. ಎಲ್ಲಾ ಹೋರಾಟಗಳಲ್ಲಿಯೂ ಭಾಗಿಯಾಗಿದ್ದೆವು. ವಿದ್ಯಾರ್ಥಿ ಯುವಜನರಾಗಿ, ರೈತರ ಮಕ್ಕಳಾಗಿ ದೆಹಲಿಯ ರೈತ ಹೋರಾಟದಲ್ಲಿ ಭಾಗಿಯಾಗುವುದು ನಮ್ಮ ಕರ್ತವ್ಯ ಎಂದು ಭಾವಿಸಿ ಮತ್ತೊಮ್ಮೆ ದೆಹಲಿಗೆ ಹೊರಟಿದ್ದೇವೆ. ರಾಜ್ಯದಲ್ಲಿಯೂ ಕೃಷಿ ವಿರೋಧಿ, ಜನವಿರೋಧಿ ನೀತಿಗಳು ಜಾರಿಯಾಗಿದ್ದು ಅವುಗಳನ್ನೂ ವಾಪಾಸ್ ಪಡೆದುಕೊಳ್ಳಬೇಕೆಂದು ಒತ್ತಾಯಿಸುತ್ತೇವೆ ಮತ್ತು ಅಂತಹ ಹೋರಾಟಗಳಲ್ಲಿಯೂ ಭಾಗವಹಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಈ ವರ್ಷದ ಆರಂಭದಲ್ಲಿಯೂ ಸಹ ಕರ್ನಾಟಕ ಜನಶಕ್ತಿಯ ಭಾಗವಾಗಿ ನೂರಕ್ಕೂ ಹೆಚ್ಚು ರೈತರು, ಯುವಜನರು ದೆಹಲಿ ಗಡಿಗಳಿಗೆ ತಲುಪಿ ಒಂದು ವಾರಗಳ ಕಾಲ ಇದ್ದು ರೈತ ಹೋರಾಟದಲ್ಲಿ ಭಾಗಿಯಾಗಿದ್ದರು.


ಇದನ್ನೂ ಓದಿ: ಕೃಷಿ ಕಾಯ್ದೆಗಳು ವಾಪಸ್: ದೆಹಲಿ ಗಡಿಗಳಲ್ಲಿ ರೈತರ ಸಂಭ್ರಮಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕರ್ನಾಟಕ ದಿಂದ ಹೊರಟಿರುವ ಜನ ಶಕ್ತಿ ತಂಡಕ್ಕೆ ಅಭಿನಂದನೆಗಳು. ಇತಿಹಾಸದ ಪುಟಗಳಲ್ಲಿ ಸೇರಿ ಹೋಗಲಿರುವ ಹೋರಾಟದಲ್ಲಿ ಭಾಗವಹಿಸುತ್ತಿರುವ ಎಲ್ಲಾ ಬಂಧುಗಳಿಗೆ ಭೀಮ ವಂದನೆಗಳು.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...