Homeಮುಖಪುಟದೆಹಲಿಯಾನ 2: ದೆಹಲಿ ಗಡಿಗಳಿಗೆ ಹೊರಟ ಕರ್ನಾಟಕ ಜನಶಕ್ತಿ ತಂಡ

ದೆಹಲಿಯಾನ 2: ದೆಹಲಿ ಗಡಿಗಳಿಗೆ ಹೊರಟ ಕರ್ನಾಟಕ ಜನಶಕ್ತಿ ತಂಡ

- Advertisement -
- Advertisement -

ಇಂದು ಸಂಸತ್ತಿನ ಉಭಯ ಸದನಗಳಲ್ಲಿ ಕೃಷಿ ಕಾಯ್ದೆಗಳ ರದ್ದತಿ ಮಸೂದೆ 2021 ಮಂಡನೆಯಾಗಿ ಅಂಗೀಕಾರವಾಗಿದೆ. ರೈತರ ಚಾರಿತ್ರಿಕ ಹೋರಾಟಕ್ಕೆ ಅಧಿಕೃತ ಗೆಲುವು ಸಂದಿದೆ. ಆದರೆ ರೈತರ ಪ್ರತಿಭಟನೆ ಮಾತ್ರ ಮುಗಿದಿಲ್ಲ. ಎಂಎಸ್‌ಪಿ ಖಾತ್ರಿಗೆ ಕಾನೂನು ಸೇರಿದಂತೆ ಹಲವು ಬೇಡಿಕೆಗಳನ್ನಿಟ್ಟುಕೊಂಡು ರೈತರು ಹೋರಾಟ ಮುಂದುವರೆಸಿದ್ದಾರೆ. ದೇಶಾದ್ಯಂತದ ಜನ ದೆಹಲಿ ಗಡಿಗಳನ್ನು ತಲುಪಿ ಬೆಂಬಲ ಸೂಚಿಸುತ್ತಿದ್ದಾರೆ. ಅದರಂತೆ ಕರ್ನಾಟಕದಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿ ಯುವಜನರ ತಂಡ ರೈತ ಹೋರಾಟ ಬೆಂಬಲಿಸಲು ದೆಹಲಿಗೆ ಹೊರಟಿದೆ.

ರಾಜ್ಯದಲ್ಲಿ ರೈತ ಹೋರಾಟ ಮುನ್ನಡೆಸುತ್ತಿರುವ ಸಂಯುಕ್ತ ಹೋರಾಟ ಕರ್ನಾಟಕ, ಐಕ್ಯ ಹೋರಾಟ ಸಮಿತಿ ಮತ್ತು ಎಐಕೆಎಸ್‌ಸಿಸಿಯ ಭಾಗವಾಗಿರುವ ಕರ್ನಾಟಕ ಜನಶಕ್ತಿ ತಂಡವು ದೆಹಲಿಯಾನ 2 ಹೆಸರಿನಲ್ಲಿ ದೆಹಲಿಗೆ ಹೊರಟಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಕರ್ನಾಟಕ ಜನಶಕ್ತಿ ರಾಜ್ಯಸಮಿತಿ ಸದಸ್ಯರಾದ ಸರೋವರ್ ಬೆಂಕಿಕೆರೆ ಮಾತನಾಡಿ, “ವ್ಯಕ್ತಿಯೊಬ್ಬನ ಪ್ರತಿಷ್ಠೆ ಮತ್ತು ಖಾಸಗೀ ಕಂಪನಿಗಳಿಗೆ ಲಾಭ ಮಾಡಿಕೊಡಲು ಮಾತ್ರ ಬಂದಿದ್ದ ಕರಾಳ ಕೃಷಿ ಕಾಯ್ದೆ ರೈತರ ಹೋರಾಟದಿಂದ ವಾಪಾಸ್ಸಾಗಿದೆ. ಇದು ರೈತರ ಗೆಲುವು ಮಾತ್ರವಲ್ಲ ಇಡೀ ದೇಶದ ಜನರ ಗೆಲವು, ಅನ್ನ ತಿನ್ನುವವರ ಪ್ರತಿಯೊಬ್ಬರ ಗೆಲುವು. ಈ ಭಂಡ ಸರ್ಕಾರ ಕಾಯ್ದೆ ಮಾತ್ರ ವಾಪಾಸ್ ತಗೆದುಕೊಂಡಿದೆ ಆದರೆ ಎಮ್.ಎಸ್.ಪಿ ಅನ್ನು ಶಾಸನಬದ್ಧ ಗೊಳಿಸುವ ತೀರ್ಮಾನ ಇನ್ನೂ ಮಾಡಿಲ್ಲ. ಹುತಾತ್ಮ ರೈತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಮತ್ತು ಆ ಸಾವುಗಳಿಗೆ ಕ್ಷಮೆ ಕೇಳಬೇಕು‌. ಹಾಗಾಗಿ ಈ ಹೋರಾಟ ಇನ್ನೂ ಜಾರಿಯಲ್ಲಿದೆ. ಅದನ್ನು ಸೇರಿಕೊಳ್ಳಲು ನಾವು ಹೊರಟಿದ್ದೇವೆ” ಎಂದರು.

ಇದೊಂದು ಐತಿಹಾಸಿಕ ಹೋರಾಟವೇ ಹೌದು. ಇದನ್ನು ಬೆಂಬಲಿಸಿ ರಾಜ್ಯದಲ್ಲಿ ಸೈಕಲ್ ಜಾಥಾ, ಹಳ್ಳಿಯಾನ ದಂತಹ ಪ್ರಚಾರಾಂದೋಲನವನ್ನು ನಾವು ಮಾಡಿದ್ದೆವು‌. ಎಲ್ಲಾ ಹೋರಾಟಗಳಲ್ಲಿಯೂ ಭಾಗಿಯಾಗಿದ್ದೆವು. ವಿದ್ಯಾರ್ಥಿ ಯುವಜನರಾಗಿ, ರೈತರ ಮಕ್ಕಳಾಗಿ ದೆಹಲಿಯ ರೈತ ಹೋರಾಟದಲ್ಲಿ ಭಾಗಿಯಾಗುವುದು ನಮ್ಮ ಕರ್ತವ್ಯ ಎಂದು ಭಾವಿಸಿ ಮತ್ತೊಮ್ಮೆ ದೆಹಲಿಗೆ ಹೊರಟಿದ್ದೇವೆ. ರಾಜ್ಯದಲ್ಲಿಯೂ ಕೃಷಿ ವಿರೋಧಿ, ಜನವಿರೋಧಿ ನೀತಿಗಳು ಜಾರಿಯಾಗಿದ್ದು ಅವುಗಳನ್ನೂ ವಾಪಾಸ್ ಪಡೆದುಕೊಳ್ಳಬೇಕೆಂದು ಒತ್ತಾಯಿಸುತ್ತೇವೆ ಮತ್ತು ಅಂತಹ ಹೋರಾಟಗಳಲ್ಲಿಯೂ ಭಾಗವಹಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಈ ವರ್ಷದ ಆರಂಭದಲ್ಲಿಯೂ ಸಹ ಕರ್ನಾಟಕ ಜನಶಕ್ತಿಯ ಭಾಗವಾಗಿ ನೂರಕ್ಕೂ ಹೆಚ್ಚು ರೈತರು, ಯುವಜನರು ದೆಹಲಿ ಗಡಿಗಳಿಗೆ ತಲುಪಿ ಒಂದು ವಾರಗಳ ಕಾಲ ಇದ್ದು ರೈತ ಹೋರಾಟದಲ್ಲಿ ಭಾಗಿಯಾಗಿದ್ದರು.


ಇದನ್ನೂ ಓದಿ: ಕೃಷಿ ಕಾಯ್ದೆಗಳು ವಾಪಸ್: ದೆಹಲಿ ಗಡಿಗಳಲ್ಲಿ ರೈತರ ಸಂಭ್ರಮಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕರ್ನಾಟಕ ದಿಂದ ಹೊರಟಿರುವ ಜನ ಶಕ್ತಿ ತಂಡಕ್ಕೆ ಅಭಿನಂದನೆಗಳು. ಇತಿಹಾಸದ ಪುಟಗಳಲ್ಲಿ ಸೇರಿ ಹೋಗಲಿರುವ ಹೋರಾಟದಲ್ಲಿ ಭಾಗವಹಿಸುತ್ತಿರುವ ಎಲ್ಲಾ ಬಂಧುಗಳಿಗೆ ಭೀಮ ವಂದನೆಗಳು.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...