Homeಮುಖಪುಟದೆಹಲಿಯಾನ 2: ದೆಹಲಿ ಗಡಿಗಳಿಗೆ ಹೊರಟ ಕರ್ನಾಟಕ ಜನಶಕ್ತಿ ತಂಡ

ದೆಹಲಿಯಾನ 2: ದೆಹಲಿ ಗಡಿಗಳಿಗೆ ಹೊರಟ ಕರ್ನಾಟಕ ಜನಶಕ್ತಿ ತಂಡ

- Advertisement -
- Advertisement -

ಇಂದು ಸಂಸತ್ತಿನ ಉಭಯ ಸದನಗಳಲ್ಲಿ ಕೃಷಿ ಕಾಯ್ದೆಗಳ ರದ್ದತಿ ಮಸೂದೆ 2021 ಮಂಡನೆಯಾಗಿ ಅಂಗೀಕಾರವಾಗಿದೆ. ರೈತರ ಚಾರಿತ್ರಿಕ ಹೋರಾಟಕ್ಕೆ ಅಧಿಕೃತ ಗೆಲುವು ಸಂದಿದೆ. ಆದರೆ ರೈತರ ಪ್ರತಿಭಟನೆ ಮಾತ್ರ ಮುಗಿದಿಲ್ಲ. ಎಂಎಸ್‌ಪಿ ಖಾತ್ರಿಗೆ ಕಾನೂನು ಸೇರಿದಂತೆ ಹಲವು ಬೇಡಿಕೆಗಳನ್ನಿಟ್ಟುಕೊಂಡು ರೈತರು ಹೋರಾಟ ಮುಂದುವರೆಸಿದ್ದಾರೆ. ದೇಶಾದ್ಯಂತದ ಜನ ದೆಹಲಿ ಗಡಿಗಳನ್ನು ತಲುಪಿ ಬೆಂಬಲ ಸೂಚಿಸುತ್ತಿದ್ದಾರೆ. ಅದರಂತೆ ಕರ್ನಾಟಕದಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿ ಯುವಜನರ ತಂಡ ರೈತ ಹೋರಾಟ ಬೆಂಬಲಿಸಲು ದೆಹಲಿಗೆ ಹೊರಟಿದೆ.

ರಾಜ್ಯದಲ್ಲಿ ರೈತ ಹೋರಾಟ ಮುನ್ನಡೆಸುತ್ತಿರುವ ಸಂಯುಕ್ತ ಹೋರಾಟ ಕರ್ನಾಟಕ, ಐಕ್ಯ ಹೋರಾಟ ಸಮಿತಿ ಮತ್ತು ಎಐಕೆಎಸ್‌ಸಿಸಿಯ ಭಾಗವಾಗಿರುವ ಕರ್ನಾಟಕ ಜನಶಕ್ತಿ ತಂಡವು ದೆಹಲಿಯಾನ 2 ಹೆಸರಿನಲ್ಲಿ ದೆಹಲಿಗೆ ಹೊರಟಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಕರ್ನಾಟಕ ಜನಶಕ್ತಿ ರಾಜ್ಯಸಮಿತಿ ಸದಸ್ಯರಾದ ಸರೋವರ್ ಬೆಂಕಿಕೆರೆ ಮಾತನಾಡಿ, “ವ್ಯಕ್ತಿಯೊಬ್ಬನ ಪ್ರತಿಷ್ಠೆ ಮತ್ತು ಖಾಸಗೀ ಕಂಪನಿಗಳಿಗೆ ಲಾಭ ಮಾಡಿಕೊಡಲು ಮಾತ್ರ ಬಂದಿದ್ದ ಕರಾಳ ಕೃಷಿ ಕಾಯ್ದೆ ರೈತರ ಹೋರಾಟದಿಂದ ವಾಪಾಸ್ಸಾಗಿದೆ. ಇದು ರೈತರ ಗೆಲುವು ಮಾತ್ರವಲ್ಲ ಇಡೀ ದೇಶದ ಜನರ ಗೆಲವು, ಅನ್ನ ತಿನ್ನುವವರ ಪ್ರತಿಯೊಬ್ಬರ ಗೆಲುವು. ಈ ಭಂಡ ಸರ್ಕಾರ ಕಾಯ್ದೆ ಮಾತ್ರ ವಾಪಾಸ್ ತಗೆದುಕೊಂಡಿದೆ ಆದರೆ ಎಮ್.ಎಸ್.ಪಿ ಅನ್ನು ಶಾಸನಬದ್ಧ ಗೊಳಿಸುವ ತೀರ್ಮಾನ ಇನ್ನೂ ಮಾಡಿಲ್ಲ. ಹುತಾತ್ಮ ರೈತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಮತ್ತು ಆ ಸಾವುಗಳಿಗೆ ಕ್ಷಮೆ ಕೇಳಬೇಕು‌. ಹಾಗಾಗಿ ಈ ಹೋರಾಟ ಇನ್ನೂ ಜಾರಿಯಲ್ಲಿದೆ. ಅದನ್ನು ಸೇರಿಕೊಳ್ಳಲು ನಾವು ಹೊರಟಿದ್ದೇವೆ” ಎಂದರು.

ಇದೊಂದು ಐತಿಹಾಸಿಕ ಹೋರಾಟವೇ ಹೌದು. ಇದನ್ನು ಬೆಂಬಲಿಸಿ ರಾಜ್ಯದಲ್ಲಿ ಸೈಕಲ್ ಜಾಥಾ, ಹಳ್ಳಿಯಾನ ದಂತಹ ಪ್ರಚಾರಾಂದೋಲನವನ್ನು ನಾವು ಮಾಡಿದ್ದೆವು‌. ಎಲ್ಲಾ ಹೋರಾಟಗಳಲ್ಲಿಯೂ ಭಾಗಿಯಾಗಿದ್ದೆವು. ವಿದ್ಯಾರ್ಥಿ ಯುವಜನರಾಗಿ, ರೈತರ ಮಕ್ಕಳಾಗಿ ದೆಹಲಿಯ ರೈತ ಹೋರಾಟದಲ್ಲಿ ಭಾಗಿಯಾಗುವುದು ನಮ್ಮ ಕರ್ತವ್ಯ ಎಂದು ಭಾವಿಸಿ ಮತ್ತೊಮ್ಮೆ ದೆಹಲಿಗೆ ಹೊರಟಿದ್ದೇವೆ. ರಾಜ್ಯದಲ್ಲಿಯೂ ಕೃಷಿ ವಿರೋಧಿ, ಜನವಿರೋಧಿ ನೀತಿಗಳು ಜಾರಿಯಾಗಿದ್ದು ಅವುಗಳನ್ನೂ ವಾಪಾಸ್ ಪಡೆದುಕೊಳ್ಳಬೇಕೆಂದು ಒತ್ತಾಯಿಸುತ್ತೇವೆ ಮತ್ತು ಅಂತಹ ಹೋರಾಟಗಳಲ್ಲಿಯೂ ಭಾಗವಹಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಈ ವರ್ಷದ ಆರಂಭದಲ್ಲಿಯೂ ಸಹ ಕರ್ನಾಟಕ ಜನಶಕ್ತಿಯ ಭಾಗವಾಗಿ ನೂರಕ್ಕೂ ಹೆಚ್ಚು ರೈತರು, ಯುವಜನರು ದೆಹಲಿ ಗಡಿಗಳಿಗೆ ತಲುಪಿ ಒಂದು ವಾರಗಳ ಕಾಲ ಇದ್ದು ರೈತ ಹೋರಾಟದಲ್ಲಿ ಭಾಗಿಯಾಗಿದ್ದರು.


ಇದನ್ನೂ ಓದಿ: ಕೃಷಿ ಕಾಯ್ದೆಗಳು ವಾಪಸ್: ದೆಹಲಿ ಗಡಿಗಳಲ್ಲಿ ರೈತರ ಸಂಭ್ರಮಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕರ್ನಾಟಕ ದಿಂದ ಹೊರಟಿರುವ ಜನ ಶಕ್ತಿ ತಂಡಕ್ಕೆ ಅಭಿನಂದನೆಗಳು. ಇತಿಹಾಸದ ಪುಟಗಳಲ್ಲಿ ಸೇರಿ ಹೋಗಲಿರುವ ಹೋರಾಟದಲ್ಲಿ ಭಾಗವಹಿಸುತ್ತಿರುವ ಎಲ್ಲಾ ಬಂಧುಗಳಿಗೆ ಭೀಮ ವಂದನೆಗಳು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...