Homeಚಳವಳಿರೈತರನ್ನು ಕಾರ್ಪೊರೇಟ್ ಕಾಲಡಿಗೆ ದೂಕುತ್ತಿರುವ ಕೇಂದ್ರ ಸರ್ಕಾರ: ಬಿ.ಸಿ ಬಸವರಾಜ್

ರೈತರನ್ನು ಕಾರ್ಪೊರೇಟ್ ಕಾಲಡಿಗೆ ದೂಕುತ್ತಿರುವ ಕೇಂದ್ರ ಸರ್ಕಾರ: ಬಿ.ಸಿ ಬಸವರಾಜ್

- Advertisement -
- Advertisement -

ಭಾರತದಲ್ಲಿ 70 ಕೋಟಿಗಿಂತ ಹೆಚ್ಚಿನ ಜನ ನೇರವಾಗಿ ಕೃಷಿಯನ್ನು ಅವಲಂಬಿಸಿದ್ದಾರೆ. ಇಲ್ಲಿ ಫುಡ್ ಪ್ರೊಸೆಸಿಂಗ್ ಪ್ರಾಡಕ್ಟ್‌ಗಳದು ಹಲವಾರು ಬಿಲಿಯನ್ ಡಾಲರ್ ವಹಿವಾಟು ನಡೆಸುತ್ತಿದೆ. ಇಂತಹ ಸಂದರ್ಭದಲ್ಲಿ ಕೃಷಿ ಕಾಯ್ದೆಗಳ ಮೂಲಕ ಅತಿದೊಡ್ಡ ರೈತ ವಲಯವನ್ನು ಕಾರ್ಪೊರೇಟ್ ಕಾಲಡಿಯಲ್ಲಿ ಇಡಲು ಸರ್ಕಾರ ನಿರ್ಧರಿಸಿದೆ ಎಂದು ಪ್ರಾಧ್ಯಾಪಕರಾದ ಬಿ.ಸಿ ಬಸವರಾಜು ಅಸಮಾಧಾನ ವ್ಯಕ್ತಪಡಿಸಿದರು.

ಕರ್ನಾಟಕ ಜನಶಕ್ತಿ ಸಂಘಟನೆಯು ಬೆಂಗಳೂರಿನ ಗಾಂಧಿ ಭವನದಲ್ಲಿ ಏರ್ಪಡಿಸಿದ್ದ ಐತಿಹಾಸಿಕ ರೈತಾಂದೋಲನ ಕಲಿಸುವ ಪಾಠ- ತೋರುವ ಹಾದಿ: ಮಂಥನ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಕಾಯ್ದೆಗಳು ಜಾರಿಯಾದರೆ ಕೃಷಿ ವಹಿವಾಟಿನಲ್ಲಿ ಶೇ.90 ಪಾಲನ್ನು ಕಾರ್ಪೋರೇಟ್ ಕಂಪನಿಗಳು ಪಡೆಯುತ್ತಿವೆ. ಹಾಗಾಗಿ ಕೃಷಿ ಕಾಯ್ದೆಗಳ ಹಿಂದೆ ಕಾರ್ಪೋರೇಟ್ ಹಿತಾಸಕ್ತಿ ಸ್ಪಷ್ಟವಾಗಿದೆ ಎಂದರು.

ಜಾಗತೀಕರಣಕ್ಕೆ ತೆರೆದುಕೊಂಡ ದಿನಗಳಿಂದಲೂ ಕಾರ್ಪೋರೇಟ್ ಕಂಪನಿಗಳು ದೇಶವನ್ನು ಆಳುತ್ತಿವೆ. ಕಾರ್ಪೊರೇಟ್ ಕಂಪನಿಗಳು ದಿನದಿಂದ ದಿನಕ್ಕೆ ಪ್ರಬಲವಾಗುತ್ತ ಬಂದಿದೆ. ಯುಪಿಎ ಅವಧಿಯಲ್ಲಿ ಕಾರ್ಪೋರೇಟ್ ಪರವಾಗಿ ನಿಲುವುಗಳನ್ನು ತಾಳುತ್ತಿದ್ದರೂ ಜನಸಮಾನ್ಯರಿಗೂ ಉಸಿರಾಡಲು ಸ್ಪಲ್ಪ ಅವಕಾಶವಿತ್ತು. ಆದರೆ ಎನ್‌ಡಿಎ ಸಂಪೂರ್ಣವಾಗಿ ಕಾರ್ಪೊರೇಟ್‌ಗಳ ಕೈಗೊಪ್ಪಿಸಿವೆ.ಅವರು ಭಾವನಾತ್ಮಕ ವಿಷಯದ ಮೇಲೆಯೇ ಚುನಾವಣೆಯ ಗೆಲ್ಲುವ ಭರವಸೆ ಇರುವುದರಿಂದ ಭ್ರಷ್ಟಾಚಾರವನ್ನು ಕಾನೂನಾತ್ಮಕವಾಗಿಸಲಾಗುತ್ತಿದೆ. ಎಲೆಕ್ಟರೊಲ್ ಬಾಂಡ್‌ಗಳು ಬಂದ ಮೇಲಂತೂ ಭ್ರಷ್ಟಾಚಾರ ವ್ಯಾಪಕವಾಗಿದೆ” ಎಂದರು.

2019 ನೇ ಸಾಲಿನಲ್ಲಿ ದೇಶದಲ್ಲಿ ಉತ್ಪನವಾದ ಒಟ್ಟು ಸಂಪತ್ತಿನ ಶೇ.80 ರಷ್ಟು ಪಾಲು ಶೇ.01 ರಷ್ಟು ಜನರ ಪಾಲಾಗಿದೆ. ಕೊರೊನಾ ನಂತರ ಎಲ್ಲಾ ಉದ್ದಿಮೆಗಳು ನಷ್ಟದಲ್ಲಿದ್ದರೆ 11 ಜನ ಕಾರ್ಪೋರೇಟ್‌ಗಳ ಆಸ್ತಿಯಲ್ಲಿ ಶೇ.35 ರಷ್ಟು ಹೆಚ್ಚಾಯಿತು. ಇದೆಲ್ಲವೂ ಈ ಕಾಯ್ದೆಗಳು ಕಾರ್ಪೋರೇಟ್ ಪರವಾಗಿವೆ ಎನ್ನಲು ಸಾಕ್ಷಿ. ಮೋದಿಯವರು ಹಿಂದೆ ಎಂಎಸ್‌ಪಿ ಕಾನೂನುಬದ್ಧಗೊಳಿಸಬೇಕು ಎಂದಿದ್ದರು. ಅಧಿಕಾರಕ್ಕೆ ಬಂದಾಗ ಅದನ್ನು ಮರೆತರು. ಅಧಿಕಾರದಲ್ಲಿದ್ದಾಗ ಒಂದು ರೀತಿ, ಅಧಿಕಾರ ಕಳೆದುಕೊಂಡಾಗ ಒಂದು ರೀತಿ ವರ್ತಿಸುವುದನ್ನು ಕಾಣಬಹುದು ಎಂದು ಎಂದು ಬಸವರಾಜ್‌ರವರು ತಿಳಿಸಿದರು.

ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, “ಕೇಂದ್ರ ಸರ್ಕಾರ ಜಾರಿಗೊಳಿಸಿದ ಕಾನೂನುಗಳು ಸಂಪೂರ್ಣವಾಗಿ ಜಾರಿಯಾಗಬೇಕಾದರೆ ರಾಜ್ಯಗಳು ಸಹ ಅವುಗಳಿಗೆ ಪೂರಕವಾಗಿ ಕಾನೂನುಗಳನ್ನು ತರಬೇಕು. ಇಂದು ದೇಶದಲ್ಲಿ 16 ರಾಜ್ಯಗಳಲ್ಲಿ ಬಿಜೆಪಿ ಆಡಳಿತದಲ್ಲಿದೆ. ಆ ಯಾವ ರಾಜ್ಯಗಳು ಈ ಕೃಷಿ ಕಾನೂನನ್ನು ಜಾರಿಗೆ ತರುವ ಪ್ರಯತ್ನ ಮಾಡಲಿಲ್ಲ. ಆದರೆ ಕರ್ನಾಟಕ ಜಾರಿಗೆ ತಂದಿರುವುದು ನಮ್ಮ ದುರಂತ” ಎಂದರು.

ಇದರ ಪರಿಣಾಮವಾಗಿ ರೈತರು ಹಳ್ಳಿಗಳಿಂದ ಕಳೆದುಹೋಗುತ್ತಿದ್ದಾರೆ. ಕೃಷಿ ಮಾರುಕಟ್ಟೆ ಮತ್ತು ಕೃಷಿ ಭೂಮಿ ರೈತರ ಕೈತಪ್ಪುತ್ತಿದೆ. ಎಪಿಎಂಸಿ ಕಾಯ್ದೆ ಜಾರಿಗೆ ಬಂದರೆ ಕೆಲವೇ ತಿಂಗಳಿನಲ್ಲಿ ನಮ್ಮ ಮಾರುಕಟ್ಟೆ ಶಕ್ತಿ ಕಳೆದುಕೊಳ್ಳುತ್ತದೆ ಎಂದು ನಾವು ಎಚ್ಚರಿಸಿದ್ದೆವು. ಅದರಂತೆ ಈಗ
ಕೃಷಿ ಉತ್ಪನನ್ನ ಮಾರುಕಟ್ಟೆ ವರದಿ ತೆಗೆಸಿಕೊಂಡಿದ್ದೇನೆ. ಶೇ. 80ರಷ್ಟು ಭಾಗ ಕೃಷಿ ಉತ್ಪನ್ನಗಳು ಮಾರುಕಟ್ಟೆಗೆ ಬರುತ್ತಿಲ್ಲ. ತೆರಿಗೆ ಕಟ್ಟುವುದನ್ನು ತಪ್ಪಿಸಿಕೊಳ್ಳಲು ಮತ್ತು ತಮಗಿಷ್ಟ ಬಂದಂತೆ ಮಾಡಲು ವ್ಯಾಪಾರಿಗಳು ಮುಂದಾಗುತ್ತಿದ್ದಾರೆ ಎಂದರು.

ಕರ್ನಾಟಕ ಪ್ರಾಂತ ರೈತ ಸಂಘದ ಟಿ.ಯಶವಂತ್‌ರವರು ಮಾತನಾಡಿ “2018ರ ಅಂಕಿಅಂಶದ ಪ್ರಕಾರ ಕನಿಷ್ಠ ಭೂಮಿ ಇಲ್ಲದ ಶೇ. 35ರಷ್ಟು ಜನರು ದೇಶದಲ್ಲಿದ್ದಾರೆ. ಒಂದು ಎಕರೆ, ಅರ್ಧ ಎಕರೆ ಹೊಂದಿರುವ ಸಣ್ಣ ರೈತರನ್ನೆಲ್ಲ ಭೂಮಿ ಹೀನರು ಎಂದು ತಿಳಿದರೆ ಈ ಪ್ರಮಾಣ ಶೇ. 90ರಷ್ಟಾಗುತ್ತದೆ. ಭೂ ಕಾಯ್ದೆ ತಿದ್ದುಪಡಿಯ ಅಪಾಯ ಇರುವುದು ಇಲ್ಲಿ. ನಾನು ರೈತ ಸಂಘಕ್ಕೆ ಬಂದಾಗ ಇದ್ದ ಒಂದು ಕ್ವಿಂಟಾಲ್ ಭತ್ತದ ಬೆಲೆ ಎಷ್ಟಿತ್ತೋ ಅಷ್ಟೇ ಈಗಲೂ ಇದೆ. ಹದಿನೈದು ವರ್ಷಗಳ ಹಿಂದೆ ಇದ್ದ ಚಪ್ಪಲಿ ಬೆಲೆ ಈಗಲೂ ಅಷ್ಟೇ ಇದೆಯೇ? ಎಂದು ಪ್ರಶ್ನಿಸಿದರು.

ರೈತ ನಾಯಕಿ ಕವಿತಾ ಕುರುಗಂಟಿ ಮಾತನಾಡಿ, “ರೈತರ ಹೋರಾಟ ಈಗ ಶುರುವಾಗಿದ್ದಲ್ಲ. ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಹೋರಾಟ ನಡೆಸಲಾಗುತ್ತಿದೆ. ಸಂಪೂರ್ಣ ಸಾಲ ಮನ್ನಾ, ಎಂಎಸ್‌ಪಿ ಶಾಸನಬದ್ಧತೆಗಾಗಿ 2017 ರಿಂದ ಹೋರಾಟ ನಡೆಯುತ್ತಿದೆ” ಎಂದರು.

“ರೈತರು ಹೇಳಿದ ಎಲ್ಲ ಮಾತುಗಳು ನಿಜವಾಗಿದೆ. ಎಪಿಎಂಸಿ- ಕುರಿತು ವ್ಯಕ್ತಪಡಿಸಿದ ಆತಂಕ ನಿಜವಾಗಿದೆ. ಇಂದಿನ ಪ್ರಜಾವಾಣಿಯ ಮುಖಪುಟದ ವರದಿಯು ಇದನ್ನೇ ಹೇಳುತ್ತಿದೆ. ಎಪಿಎಂಸಿ ಬಿಟ್ಟು ಹೊರಗಡೆ ವ್ಯಾಪಾರ ಮಾಡಿದರೆ ರೈತರಿಗೆ ಮೋಸವಾಗುತ್ತದೆ. ಈ ತಿದ್ದುಪಡಿ ಕಾಯ್ದೆಗಳಿಂದ ರೈತರಿಗೆ ಯಾವ ರೀತಿ ಉಪಯೋಗವಾಗುತ್ತದೆ ಎಂದು ಕೇಳಿದರೆ ಪ್ರಧಾನಿ ಮೋದಿಯವರ ಬಳಿ ಉತ್ತರವಿಲ್ಲ” ಎಂದು ತಿಳಿಸಿದರು.

ಪಂಜಾಬ್‌ನಲ್ಲಿ ಬಿಜೆಪಿ ಶಾಸಕರು, ಸಂಸದರು ಎಲ್ಲೇ ಹೋದರು ರೈತರು ಮುತ್ತಿಗೆ ಹಾಕುತ್ತಾರೆ. ಕಪ್ಪು ಬಾವುಟ ತೋರಿಸಿ ಪ್ರತಿಭಟನೆ ನಡೆಸುತ್ತಾರೆ. ರಾತ್ರಿ ಹೊತ್ತು ಅವರು ಕಾರ್ಯಕ್ರಮಗಳನ್ನು ನಡೆಸಬೇಕಾದ ಪರಿಸ್ಥಿತಿ ಬಂದಿದೆ. ಇದನ್ನು ದೇಶದ್ಯಂತ ವಿಸ್ತರಿಸಬೇಕು ಎಂದರು.

ಕರ್ನಾಟಕ ಜನಶಕ್ತಿಯ ರಾಜ್ಯಾಧ್ಯಕ್ಷರಾದ ನೂರ್ ಶ್ರೀಧರ್‌ರವರು ಸಮಾರೋಪ ನುಡಿಗಳನ್ನಾಡುತ್ತಾ “ಇದೊಂದು ಐತಿಹಾಸಿಕ ಸಂದರ್ಭ, ಇದರಲ್ಲಿ ರೈತ ಸಮುದಾಯ ಮಾಡು ಇಲ್ಲವೆ ಮಡಿ ಎಂಬ ಹೋರಾಟಕ್ಕಿಳಿದಿದೆ. ಈ ಸಂದರ್ಭದಲ್ಲಿ ಅನ್ನದ ರುಣ ಹೊಂದಿರುವ ನಾವೆಲ್ಲರೂ ಅವರೊಂದಿಗೆ ಕೈಜೋಡಿಸುವುದು ನಮ್ಮ ಕರ್ತವ್ಯ, ನಮ್ಮ ದೇಶ ಮತ್ತು ಅನ್ನದಾತರ ಉಳಿವಿಗಾಗಿ ಒಗ್ಗೂಡೋಣ” ಎಂದು ಕರೆ ನೀಡಿದರು. ಈ ನಿಟ್ಟಿನಲ್ಲಿ ಜನರಲ್ಲಿ ಅರಿವು ಮೂಡಿಸಲು, ನವೆಂಬರ್ 10ರಿಂದ 20ರವೆಗೆ ಕರ್ನಾಟಕ ಜನಶಕ್ತಿ ‘ಹಳ್ಳಿ ಉಳಿಸಿ’ ಅಭಿಯಾನ ಹಮ್ಮಿಕೊಂಡಿರುವುದಾಗಿ ತಿಳಿಸಿದರು.


ಇದನ್ನೂ ಓದಿ: ದೆಹಲಿ ಹೋರಾಟದಲ್ಲಿ ಮೃತಪಟ್ಟ ಹೆಚ್ಚಿನ ರೈತರು 3 ಎಕರೆಗಿಂಲೂ ಕಡಿಮೆ ಜಮೀನು ಹೊಂದಿರುವವರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...