Homeಚಳವಳಿರೈತರನ್ನು ಕಾರ್ಪೊರೇಟ್ ಕಾಲಡಿಗೆ ದೂಕುತ್ತಿರುವ ಕೇಂದ್ರ ಸರ್ಕಾರ: ಬಿ.ಸಿ ಬಸವರಾಜ್

ರೈತರನ್ನು ಕಾರ್ಪೊರೇಟ್ ಕಾಲಡಿಗೆ ದೂಕುತ್ತಿರುವ ಕೇಂದ್ರ ಸರ್ಕಾರ: ಬಿ.ಸಿ ಬಸವರಾಜ್

- Advertisement -
- Advertisement -

ಭಾರತದಲ್ಲಿ 70 ಕೋಟಿಗಿಂತ ಹೆಚ್ಚಿನ ಜನ ನೇರವಾಗಿ ಕೃಷಿಯನ್ನು ಅವಲಂಬಿಸಿದ್ದಾರೆ. ಇಲ್ಲಿ ಫುಡ್ ಪ್ರೊಸೆಸಿಂಗ್ ಪ್ರಾಡಕ್ಟ್‌ಗಳದು ಹಲವಾರು ಬಿಲಿಯನ್ ಡಾಲರ್ ವಹಿವಾಟು ನಡೆಸುತ್ತಿದೆ. ಇಂತಹ ಸಂದರ್ಭದಲ್ಲಿ ಕೃಷಿ ಕಾಯ್ದೆಗಳ ಮೂಲಕ ಅತಿದೊಡ್ಡ ರೈತ ವಲಯವನ್ನು ಕಾರ್ಪೊರೇಟ್ ಕಾಲಡಿಯಲ್ಲಿ ಇಡಲು ಸರ್ಕಾರ ನಿರ್ಧರಿಸಿದೆ ಎಂದು ಪ್ರಾಧ್ಯಾಪಕರಾದ ಬಿ.ಸಿ ಬಸವರಾಜು ಅಸಮಾಧಾನ ವ್ಯಕ್ತಪಡಿಸಿದರು.

ಕರ್ನಾಟಕ ಜನಶಕ್ತಿ ಸಂಘಟನೆಯು ಬೆಂಗಳೂರಿನ ಗಾಂಧಿ ಭವನದಲ್ಲಿ ಏರ್ಪಡಿಸಿದ್ದ ಐತಿಹಾಸಿಕ ರೈತಾಂದೋಲನ ಕಲಿಸುವ ಪಾಠ- ತೋರುವ ಹಾದಿ: ಮಂಥನ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಕಾಯ್ದೆಗಳು ಜಾರಿಯಾದರೆ ಕೃಷಿ ವಹಿವಾಟಿನಲ್ಲಿ ಶೇ.90 ಪಾಲನ್ನು ಕಾರ್ಪೋರೇಟ್ ಕಂಪನಿಗಳು ಪಡೆಯುತ್ತಿವೆ. ಹಾಗಾಗಿ ಕೃಷಿ ಕಾಯ್ದೆಗಳ ಹಿಂದೆ ಕಾರ್ಪೋರೇಟ್ ಹಿತಾಸಕ್ತಿ ಸ್ಪಷ್ಟವಾಗಿದೆ ಎಂದರು.

ಜಾಗತೀಕರಣಕ್ಕೆ ತೆರೆದುಕೊಂಡ ದಿನಗಳಿಂದಲೂ ಕಾರ್ಪೋರೇಟ್ ಕಂಪನಿಗಳು ದೇಶವನ್ನು ಆಳುತ್ತಿವೆ. ಕಾರ್ಪೊರೇಟ್ ಕಂಪನಿಗಳು ದಿನದಿಂದ ದಿನಕ್ಕೆ ಪ್ರಬಲವಾಗುತ್ತ ಬಂದಿದೆ. ಯುಪಿಎ ಅವಧಿಯಲ್ಲಿ ಕಾರ್ಪೋರೇಟ್ ಪರವಾಗಿ ನಿಲುವುಗಳನ್ನು ತಾಳುತ್ತಿದ್ದರೂ ಜನಸಮಾನ್ಯರಿಗೂ ಉಸಿರಾಡಲು ಸ್ಪಲ್ಪ ಅವಕಾಶವಿತ್ತು. ಆದರೆ ಎನ್‌ಡಿಎ ಸಂಪೂರ್ಣವಾಗಿ ಕಾರ್ಪೊರೇಟ್‌ಗಳ ಕೈಗೊಪ್ಪಿಸಿವೆ.ಅವರು ಭಾವನಾತ್ಮಕ ವಿಷಯದ ಮೇಲೆಯೇ ಚುನಾವಣೆಯ ಗೆಲ್ಲುವ ಭರವಸೆ ಇರುವುದರಿಂದ ಭ್ರಷ್ಟಾಚಾರವನ್ನು ಕಾನೂನಾತ್ಮಕವಾಗಿಸಲಾಗುತ್ತಿದೆ. ಎಲೆಕ್ಟರೊಲ್ ಬಾಂಡ್‌ಗಳು ಬಂದ ಮೇಲಂತೂ ಭ್ರಷ್ಟಾಚಾರ ವ್ಯಾಪಕವಾಗಿದೆ” ಎಂದರು.

2019 ನೇ ಸಾಲಿನಲ್ಲಿ ದೇಶದಲ್ಲಿ ಉತ್ಪನವಾದ ಒಟ್ಟು ಸಂಪತ್ತಿನ ಶೇ.80 ರಷ್ಟು ಪಾಲು ಶೇ.01 ರಷ್ಟು ಜನರ ಪಾಲಾಗಿದೆ. ಕೊರೊನಾ ನಂತರ ಎಲ್ಲಾ ಉದ್ದಿಮೆಗಳು ನಷ್ಟದಲ್ಲಿದ್ದರೆ 11 ಜನ ಕಾರ್ಪೋರೇಟ್‌ಗಳ ಆಸ್ತಿಯಲ್ಲಿ ಶೇ.35 ರಷ್ಟು ಹೆಚ್ಚಾಯಿತು. ಇದೆಲ್ಲವೂ ಈ ಕಾಯ್ದೆಗಳು ಕಾರ್ಪೋರೇಟ್ ಪರವಾಗಿವೆ ಎನ್ನಲು ಸಾಕ್ಷಿ. ಮೋದಿಯವರು ಹಿಂದೆ ಎಂಎಸ್‌ಪಿ ಕಾನೂನುಬದ್ಧಗೊಳಿಸಬೇಕು ಎಂದಿದ್ದರು. ಅಧಿಕಾರಕ್ಕೆ ಬಂದಾಗ ಅದನ್ನು ಮರೆತರು. ಅಧಿಕಾರದಲ್ಲಿದ್ದಾಗ ಒಂದು ರೀತಿ, ಅಧಿಕಾರ ಕಳೆದುಕೊಂಡಾಗ ಒಂದು ರೀತಿ ವರ್ತಿಸುವುದನ್ನು ಕಾಣಬಹುದು ಎಂದು ಎಂದು ಬಸವರಾಜ್‌ರವರು ತಿಳಿಸಿದರು.

ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, “ಕೇಂದ್ರ ಸರ್ಕಾರ ಜಾರಿಗೊಳಿಸಿದ ಕಾನೂನುಗಳು ಸಂಪೂರ್ಣವಾಗಿ ಜಾರಿಯಾಗಬೇಕಾದರೆ ರಾಜ್ಯಗಳು ಸಹ ಅವುಗಳಿಗೆ ಪೂರಕವಾಗಿ ಕಾನೂನುಗಳನ್ನು ತರಬೇಕು. ಇಂದು ದೇಶದಲ್ಲಿ 16 ರಾಜ್ಯಗಳಲ್ಲಿ ಬಿಜೆಪಿ ಆಡಳಿತದಲ್ಲಿದೆ. ಆ ಯಾವ ರಾಜ್ಯಗಳು ಈ ಕೃಷಿ ಕಾನೂನನ್ನು ಜಾರಿಗೆ ತರುವ ಪ್ರಯತ್ನ ಮಾಡಲಿಲ್ಲ. ಆದರೆ ಕರ್ನಾಟಕ ಜಾರಿಗೆ ತಂದಿರುವುದು ನಮ್ಮ ದುರಂತ” ಎಂದರು.

ಇದರ ಪರಿಣಾಮವಾಗಿ ರೈತರು ಹಳ್ಳಿಗಳಿಂದ ಕಳೆದುಹೋಗುತ್ತಿದ್ದಾರೆ. ಕೃಷಿ ಮಾರುಕಟ್ಟೆ ಮತ್ತು ಕೃಷಿ ಭೂಮಿ ರೈತರ ಕೈತಪ್ಪುತ್ತಿದೆ. ಎಪಿಎಂಸಿ ಕಾಯ್ದೆ ಜಾರಿಗೆ ಬಂದರೆ ಕೆಲವೇ ತಿಂಗಳಿನಲ್ಲಿ ನಮ್ಮ ಮಾರುಕಟ್ಟೆ ಶಕ್ತಿ ಕಳೆದುಕೊಳ್ಳುತ್ತದೆ ಎಂದು ನಾವು ಎಚ್ಚರಿಸಿದ್ದೆವು. ಅದರಂತೆ ಈಗ
ಕೃಷಿ ಉತ್ಪನನ್ನ ಮಾರುಕಟ್ಟೆ ವರದಿ ತೆಗೆಸಿಕೊಂಡಿದ್ದೇನೆ. ಶೇ. 80ರಷ್ಟು ಭಾಗ ಕೃಷಿ ಉತ್ಪನ್ನಗಳು ಮಾರುಕಟ್ಟೆಗೆ ಬರುತ್ತಿಲ್ಲ. ತೆರಿಗೆ ಕಟ್ಟುವುದನ್ನು ತಪ್ಪಿಸಿಕೊಳ್ಳಲು ಮತ್ತು ತಮಗಿಷ್ಟ ಬಂದಂತೆ ಮಾಡಲು ವ್ಯಾಪಾರಿಗಳು ಮುಂದಾಗುತ್ತಿದ್ದಾರೆ ಎಂದರು.

ಕರ್ನಾಟಕ ಪ್ರಾಂತ ರೈತ ಸಂಘದ ಟಿ.ಯಶವಂತ್‌ರವರು ಮಾತನಾಡಿ “2018ರ ಅಂಕಿಅಂಶದ ಪ್ರಕಾರ ಕನಿಷ್ಠ ಭೂಮಿ ಇಲ್ಲದ ಶೇ. 35ರಷ್ಟು ಜನರು ದೇಶದಲ್ಲಿದ್ದಾರೆ. ಒಂದು ಎಕರೆ, ಅರ್ಧ ಎಕರೆ ಹೊಂದಿರುವ ಸಣ್ಣ ರೈತರನ್ನೆಲ್ಲ ಭೂಮಿ ಹೀನರು ಎಂದು ತಿಳಿದರೆ ಈ ಪ್ರಮಾಣ ಶೇ. 90ರಷ್ಟಾಗುತ್ತದೆ. ಭೂ ಕಾಯ್ದೆ ತಿದ್ದುಪಡಿಯ ಅಪಾಯ ಇರುವುದು ಇಲ್ಲಿ. ನಾನು ರೈತ ಸಂಘಕ್ಕೆ ಬಂದಾಗ ಇದ್ದ ಒಂದು ಕ್ವಿಂಟಾಲ್ ಭತ್ತದ ಬೆಲೆ ಎಷ್ಟಿತ್ತೋ ಅಷ್ಟೇ ಈಗಲೂ ಇದೆ. ಹದಿನೈದು ವರ್ಷಗಳ ಹಿಂದೆ ಇದ್ದ ಚಪ್ಪಲಿ ಬೆಲೆ ಈಗಲೂ ಅಷ್ಟೇ ಇದೆಯೇ? ಎಂದು ಪ್ರಶ್ನಿಸಿದರು.

ರೈತ ನಾಯಕಿ ಕವಿತಾ ಕುರುಗಂಟಿ ಮಾತನಾಡಿ, “ರೈತರ ಹೋರಾಟ ಈಗ ಶುರುವಾಗಿದ್ದಲ್ಲ. ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಹೋರಾಟ ನಡೆಸಲಾಗುತ್ತಿದೆ. ಸಂಪೂರ್ಣ ಸಾಲ ಮನ್ನಾ, ಎಂಎಸ್‌ಪಿ ಶಾಸನಬದ್ಧತೆಗಾಗಿ 2017 ರಿಂದ ಹೋರಾಟ ನಡೆಯುತ್ತಿದೆ” ಎಂದರು.

“ರೈತರು ಹೇಳಿದ ಎಲ್ಲ ಮಾತುಗಳು ನಿಜವಾಗಿದೆ. ಎಪಿಎಂಸಿ- ಕುರಿತು ವ್ಯಕ್ತಪಡಿಸಿದ ಆತಂಕ ನಿಜವಾಗಿದೆ. ಇಂದಿನ ಪ್ರಜಾವಾಣಿಯ ಮುಖಪುಟದ ವರದಿಯು ಇದನ್ನೇ ಹೇಳುತ್ತಿದೆ. ಎಪಿಎಂಸಿ ಬಿಟ್ಟು ಹೊರಗಡೆ ವ್ಯಾಪಾರ ಮಾಡಿದರೆ ರೈತರಿಗೆ ಮೋಸವಾಗುತ್ತದೆ. ಈ ತಿದ್ದುಪಡಿ ಕಾಯ್ದೆಗಳಿಂದ ರೈತರಿಗೆ ಯಾವ ರೀತಿ ಉಪಯೋಗವಾಗುತ್ತದೆ ಎಂದು ಕೇಳಿದರೆ ಪ್ರಧಾನಿ ಮೋದಿಯವರ ಬಳಿ ಉತ್ತರವಿಲ್ಲ” ಎಂದು ತಿಳಿಸಿದರು.

ಪಂಜಾಬ್‌ನಲ್ಲಿ ಬಿಜೆಪಿ ಶಾಸಕರು, ಸಂಸದರು ಎಲ್ಲೇ ಹೋದರು ರೈತರು ಮುತ್ತಿಗೆ ಹಾಕುತ್ತಾರೆ. ಕಪ್ಪು ಬಾವುಟ ತೋರಿಸಿ ಪ್ರತಿಭಟನೆ ನಡೆಸುತ್ತಾರೆ. ರಾತ್ರಿ ಹೊತ್ತು ಅವರು ಕಾರ್ಯಕ್ರಮಗಳನ್ನು ನಡೆಸಬೇಕಾದ ಪರಿಸ್ಥಿತಿ ಬಂದಿದೆ. ಇದನ್ನು ದೇಶದ್ಯಂತ ವಿಸ್ತರಿಸಬೇಕು ಎಂದರು.

ಕರ್ನಾಟಕ ಜನಶಕ್ತಿಯ ರಾಜ್ಯಾಧ್ಯಕ್ಷರಾದ ನೂರ್ ಶ್ರೀಧರ್‌ರವರು ಸಮಾರೋಪ ನುಡಿಗಳನ್ನಾಡುತ್ತಾ “ಇದೊಂದು ಐತಿಹಾಸಿಕ ಸಂದರ್ಭ, ಇದರಲ್ಲಿ ರೈತ ಸಮುದಾಯ ಮಾಡು ಇಲ್ಲವೆ ಮಡಿ ಎಂಬ ಹೋರಾಟಕ್ಕಿಳಿದಿದೆ. ಈ ಸಂದರ್ಭದಲ್ಲಿ ಅನ್ನದ ರುಣ ಹೊಂದಿರುವ ನಾವೆಲ್ಲರೂ ಅವರೊಂದಿಗೆ ಕೈಜೋಡಿಸುವುದು ನಮ್ಮ ಕರ್ತವ್ಯ, ನಮ್ಮ ದೇಶ ಮತ್ತು ಅನ್ನದಾತರ ಉಳಿವಿಗಾಗಿ ಒಗ್ಗೂಡೋಣ” ಎಂದು ಕರೆ ನೀಡಿದರು. ಈ ನಿಟ್ಟಿನಲ್ಲಿ ಜನರಲ್ಲಿ ಅರಿವು ಮೂಡಿಸಲು, ನವೆಂಬರ್ 10ರಿಂದ 20ರವೆಗೆ ಕರ್ನಾಟಕ ಜನಶಕ್ತಿ ‘ಹಳ್ಳಿ ಉಳಿಸಿ’ ಅಭಿಯಾನ ಹಮ್ಮಿಕೊಂಡಿರುವುದಾಗಿ ತಿಳಿಸಿದರು.


ಇದನ್ನೂ ಓದಿ: ದೆಹಲಿ ಹೋರಾಟದಲ್ಲಿ ಮೃತಪಟ್ಟ ಹೆಚ್ಚಿನ ರೈತರು 3 ಎಕರೆಗಿಂಲೂ ಕಡಿಮೆ ಜಮೀನು ಹೊಂದಿರುವವರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...