Homeಕರ್ನಾಟಕಬೆಂಗಳೂರು: ಶೀಘ್ರದಲ್ಲೇ ಜೆಡಿಎಸ್‌ನಿಂದ ’ಜನತಾ ಜಲಧಾರೆ’ ಕಾರ್ಯಕ್ರಮ

ಬೆಂಗಳೂರು: ಶೀಘ್ರದಲ್ಲೇ ಜೆಡಿಎಸ್‌ನಿಂದ ’ಜನತಾ ಜಲಧಾರೆ’ ಕಾರ್ಯಕ್ರಮ

- Advertisement -
- Advertisement -

 

ರಾಜ್ಯದ ನದಿ ನೀರು ಬಳಕೆ ಹಾಗೂ ಜನರಿಗೆ ಜಲ ಭದ್ರತೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ದೀರ್ಘಕಾಲೀನ ಅನುಕೂಲತೆಯ ’ಜನತಾ ಜಲಧಾರೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

“ರಾಜ್ಯದಲ್ಲಿ ನದಿ, ಉಪನದಿಗಳು ಸೇರಿ 38 ಜೀವ ನದಿಗಳು ಇದ್ದು, ಅವುಗಳ ಜಲ ಸಂಗ್ರಹ ಮಾಡಿ ನೀರಿನ ಬಳಕೆಯ ಬಗ್ಗೆ ನಾಡಿನ ಜನರಿಗೆ ಅರಿವು ಮೂಡಿಸುವ ಹಾಗೂ ರಾಜ್ಯದ ನೀರಾವರಿ ಹಿತಾಸಕ್ತಿಗಳನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ದೊಡ್ಡ ಪ್ರಮಾಣದಲ್ಲಿ ಜನತಾ ಜಲಧಾರೆ ಕಾರ್ಯಕ್ರಮ ರೂಪಿಸಲಾಗಿದೆ. ಶೀಘ್ರದಲ್ಲೇ ಈ ಬಗ್ಗೆ ಮಾಹಿತಿ ನೀಡುವೆ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಈ ವೇಳೆ ನೀರಾವರಿ ವಿಷಯಗಳಲ್ಲಿ ಅಕ್ಕಪಕ್ಕದ ರಾಜ್ಯಗಳು ಕರ್ನಾಟಕದ ಬಗ್ಗೆ ಹೃದಯ ವೈಶಾಲ್ಯತೆ ಮೆರೆಯಬೇಕು ಹಾಗೂ ನೀರಾವರಿ ಬಿಕ್ಕಟ್ಟುಗಳನ್ನು ನ್ಯಾಯಾಲಯದ ಹೊರಗೆ ಬಗೆಹರಿಸಿಕೊಳ್ಳಲು ಮುಂದಾಗಬೇಕು ಎಂದು  ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ!- ಎಚ್.ಡಿ.ಕುಮಾರಸ್ವಾಮಿ ಆಕ್ರೋಶ

’ಕಾವೇರಿ, ಮೇಕೆದಾಟು ವಿಷಯದಲ್ಲಿ ತಮಿಳುನಾಡು ತಗಾದೆ ತೆಗೆಯುತ್ತದೆ. ಕೃಷ್ಣಾ ವಿಷಯದಲ್ಲಿ ಮಹಾರಾಷ್ಟ್ರ, ತೆಲಂಗಾಣ, ಆಂಧ್ರ ಪ್ರದೇಶ ರಾಜ್ಯಗಳು ವಿವಾದ ಹುಟ್ಟು ಹಾಕುತ್ತಿದೆ. ಆದರೆ, ಆ ರಾಜ್ಯಗಳ ಅಸಂಖ್ಯಾತ ಜನರು   ಬೆಂಗಳೂರು ಮಹಾನಗರದಲ್ಲಿ ವಾಸ ಮಾಡುತ್ತಿದ್ದಾರೆ. ಅವರೆಲ್ಲರೂ ಕಾವೇರಿ ನೀರು ಕುಡಿಯುತ್ತಾ ಬದುಕುತ್ತಿದ್ದಾರೆ. ಇಲ್ಲಿಯೇ ಬದುಕು ಕಟ್ಟಿಕೊಂಡಿದ್ದಾರೆ. ಇದನ್ನು ಆಯಾ ರಾಜ್ಯಗಳ ಸರಕಾರಗಳು ಅರ್ಥ ಮಾಡಿಕೊಳ್ಳಬೇಕು’ ಎಂದಿದ್ದಾರೆ.

ಮುಂದುವರಿದು, ’ರಾಷ್ಟ್ರೀಯ ಪಕ್ಷಗಳು ರಾಜ್ಯದ ನೀರಾವರಿ ಹಿತರಕ್ಷಣೆ ಮಾಡುವುದಿಲ್ಲ. ಈ ಸತ್ಯ ಜನರಿಗೆ ಮನವರಿಕೆ ಮಾಡಿಕೊಡಲಾಗುವುದು. ಕೇಂದ್ರದ ಮುಂದೆ ನಮ್ಮ ಸರ್ಕಾರದಿಂದ ಮನವಿ ಕಳುಹಿಸಲಾಗಿದೆ. ಅದಕ್ಕೆ ಸರಿಯಾದ ಪ್ರತಿಕ್ರಿಯೆ ಬಂದಿಲ್ಲ. ಇವೆಲ್ಲ ಕಾರಣಕ್ಕೆ ಜಲಧಾರೆ ಕಾರ್ಯಕ್ರಮ ರೂಪಿಸುತ್ತಿದ್ದೇವೆ. ಜನತೆಯ ಮುಂದೆ ಈ ಕಾರ್ಯಕ್ರಮ ಇಡುತ್ತೇವೆ ಎಂದು ತಿಳಿಸಿದ್ದಾರೆ.

ನಮ್ಮ ರಾಜ್ಯದ 38 ನದಿಗಳ ನೀರು ಬಳಕೆ ಮಾಡಬೇಕು. ಹೀಗಾಗಿ ನಾವು ಹೋರಾಟ ಮಾಡುತೇವೆ. ನಾವು ಯಾವುದೇ ಗಿಮಿಕ್ ಮಾಡುತ್ತಿಲ್ಲ. ನಾವು ಬದ್ಧತೆ ಇಟ್ಟುಕೊಂಡು ಹೋಗುವವರು. ನಮ್ಮ ಕಾರ್ಯಕ್ರಮ ರೂಪರೇಷ ವಿಭಿನ್ನವಾಗಿರುತ್ತದೆ. ನೀರಾವರಿ ವಿಚಾರವಾಗಿ ರಾಜ್ಯಕ್ಕೆ ದೊಡ್ಡ ಕೊಡುಗೆ ನೀಡಿದವರಲ್ಲಿ ಮೊದಲಿಗರು ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.


ಇದನ್ನೂ ಓದಿ: ʼಒಂದೇ ದೇಶ, ಒಂದೇ ಭಾಷೆʼ ಎಂಬ ಕರಾಳ ನೀತಿಯ ಮೂಲಕ ಹಿಂದಿ ಹೇರಿಕೆ: ಎಚ್.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...