Homeಕರ್ನಾಟಕಸಮಾಜವನ್ನು ಬದಲಾಯಿಸುವ ಮುನ್ನ ಯುವಜನರು ತಮ್ಮನ್ನು ಬದಲಾಯಿಸಿಕೊಳ್ಳಬೇಕು- ಕಾಮ್ರೇಡ್ ಪ್ರತಿಭಾ ನಾಯಕ್

ಸಮಾಜವನ್ನು ಬದಲಾಯಿಸುವ ಮುನ್ನ ಯುವಜನರು ತಮ್ಮನ್ನು ಬದಲಾಯಿಸಿಕೊಳ್ಳಬೇಕು- ಕಾಮ್ರೇಡ್ ಪ್ರತಿಭಾ ನಾಯಕ್

- Advertisement -
- Advertisement -

“ಸಮಾಜವನ್ನು ಬದಲಾಯಿಸುವ ಹೋರಾಟಕ್ಕೆ ಕಾಲಿಡುವ ಯುವಜನರು ಮೊದಲು ತಮ್ಮನ್ನೇ ಬದಲಾಯಿಸಿಕೊಳ್ಳಬೇಕು, ಸಮಾಜದ ಸಮಸ್ಯೆಗಳ ವಿರುದ್ಧ ಹೋರಾಟಗಳನ್ನು ಕಟ್ಟಬೇಕು. ಆ ಹೋರಾಟಗಳ ಮೂಲಕವೇ ನಮ್ಮ ಚಾರಿತ್ರ್ಯ ಮೇಲೇರುತ್ತದೆ” ಎಂದು ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಪ್ರತಿಭಾ ನಾಯಕ್ ಹೇಳಿದ್ದಾರೆ.

ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಓ) ಕರ್ನಾಟಕ  ರಾಜ್ಯ ಸಮಿತಿಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ಎರಡು ದಿನಗಳ 5ನೇ ರಾಜ್ಯ ಮಟ್ಟದ ಯುವಜನ ಸಮ್ಮೇಳನ ನಡೆದಿದೆ. ಈ ವೇಳೆ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿರುವ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಪ್ರತಿಭಾ ನಾಯಕ್, “ಇಂದು ನಮ್ಮ ಸಮಾಜದಲ್ಲಿ ಮೌಲ್ಯಗಳು ನಶಿಸುತ್ತಿವೆ.  ಆದರೆ, ನಾವು ಮೌಲ್ಯಗಳನ್ನು ಕಳೆದುಕೊಳ್ಳಬಾರದು. ಹೇಗೆ ಸುಗಂಧಯುಕ್ತ ಹೂವೊಂದು ತಾನಿರುವ ಸ್ಥಳವನ್ನು ಪರಿಮಳಯುಕ್ತಗೊಳಿಸುವುದೋ ಹಾಗೆಯೇ ಸಚ್ಚಾರಿತ್ರ್ಯವುಳ್ಳ ಯುವಕರಾಗಿ  ನಾವು  ನಮ್ಮ ಸಮಾಜದಲ್ಲಿಯೂ ಉನ್ನತ ಚಾರಿತ್ಯ್ರ ಮತ್ತು  ಮ್ಯೌಗಳನ್ನು ಬೆಳೆಸಬೇಕು”  ಎಂದು ಹೇಳಿದ್ದಾರೆ.

“ಕೋವಿಡ್‌ನ ಸಂದರ್ಭದಲ್ಲಿ ಸರ್ಕಾರವು ಸಾಕಷ್ಟು ಜನವಿರೋಧಿ ಕ್ರಮಗಳನ್ನು ಕೈಗೊಂಡಿದೆ. ಸರ್ಕಾರದ ಉದ್ಯಮಗಳನ್ನು ಖಾಸಗಿ ಬಂಡವಾಳಿಗರಿಗೆ ಉಡುಗೊರೆಯಾಗಿ ನೀಡಿದೆ. ಪ್ರಪಂಚದಲ್ಲೇ  ದೊಡ್ಡ ಪ್ರಜಾಪ್ರಭುತ್ವವೆಂದು ಬೀಗುವ ರಾಷ್ಟ್ರದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳ ಹರಣವಾಗುತ್ತಿದೆ. ಅವುಗಳನ್ನು ರಕ್ಷಿಸಲು ನಾವು ಹೋರಾಟ ಬೆಳೆಸಬೇಕು. ಯುವಜನರು ತಮ್ಮ ವಿರುದ್ಧ ಸರ್ಕಾರ  ತರುವ ನೀತಿಗಳ ವಿರುದ್ಧ, ತಮ್ಮ ಸಮಸ್ಯೆಗಳ ವಿರುದ್ಧದ ಹೋರಾಟಕ್ಕೆ ನಾಯಕತ್ವಕ್ಕಾಗಿ ಸಂಘಟನೆಯತ್ತ ನೋಡುತ್ತಿದ್ದಾರೆ. ಅವರನ್ನು ಸಂಘಟಿಸಿ ಹೋರಾಟವನ್ನು ಒಂದು ಗಮ್ಯಕ್ಕೆ ಹೊಯ್ಯುವ  ಹೊಣೆ ನಮ್ಮದು. ನಮಗಾಗಿ ಬದುಕುವುದಷ್ಟೇ ನಿಜವಾದ ಬದುಕಲ್ಲ, ಪರರಿಗಾಗಿ ಬದುಕುವವರು ನಿಜವಾದ ಮಾನವರು. ನಮ್ಮ ನಡುವೆ ಇರುವ ಯುವಕರಲ್ಲಿ ಅಂತಹ ಗುಣವುಳ್ಳ ಯುವಜನರಿದ್ದಾರೆ. ಅಂಥವರನ್ನು ಹುಡುಕಿ ಅವರಿಗೆ ವೈಚಾರಿಕತೆಯನ್ನು ನೀಡಿ ಯುವ ಸಂಘಟನಕಾರರಾಗಿ ಬೆಳೆಸುವ ಹೊಣೆಯನ್ನು ಯುವಜನರು ತೆಗೆದುಕೊಳ್ಳಬೇಕು” ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: ಸರ್ಕಾರಗಳ ಆದ್ಯತೆ ಜನಸಾಮಾನ್ಯರಲ್ಲ, ಕಾರ್ಪೊರೇಟರ್‌ಗಳು- ಡಾ.ಬರಗೂರು ರಾಮಚಂದ್ರಪ್ಪ

ಎಐಡಿವೈಓನ ರಾಷ್ಟಾಧ್ಯಕ್ಷರಾದ ಕಾ. ರಾಮಾಂಜನಪ್ಪ ಆಲ್ದಳ್ಳಿ ಮಾತನಾಡಿ, “ನಮ್ಮ ದೇಶದಲ್ಲಿ ವಿಭಿನ್ನ ಸಂಸ್ಕೃತಿಯ ಜನ ಸಾವಿರಾರು ವರ್ಷಗಳಿಂದ ಸಾಮರಸ್ಯದಿಂದ ಬದುಕುತ್ತಿದ್ದಾರೆ. ಈಗ ಅವರ ನಡುವೆ ವಿಘಟನೆಯನ್ನು ತರಲು ಪಟ್ಟಭದ್ರ ಶಕ್ತಿಗಳು ಹವಣಿಸುತ್ತಿವೆ. ಅವರ ಹುನ್ನಾರವನ್ನು ಯುವಜನರು ಅರ್ಥಮಾಡಿಕೊಳ್ಳಬೇಕು. ಜನಸಾಮಾನ್ಯರಿಗೆ ಸತ್ಯದ ಅರಿವು ಮೂಡಿಸಿ ತಮ್ಮ ನೈಜ ಸಮಸ್ಯೆಗಳ ವಿರುದ್ಧ ಸಂಘಟಿತ ಹೋರಾಟಕಟ್ಟುವಂತೆ ಮಾಡುವ ಜವಾಬ್ದಾರಿ ಯುವಜನರ ಮೇಲಿದೆ. ನಮ್ಮ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ  ಹೋರಾಟಗಾರರಾದ ಭಗತ್‌ಸಿಂಗ್, ನೇತಾಜಿ ಮೊದಲಾದವರು  ಮಾನವನಿಂದ  ಮಾನವನ  ಶೋಷಣೆಯನ್ನು  ಅಂತ್ಯಗೊಳಿಸುವ  ಸಮ  ಸಮಾಜ ನಿರ್ಮಾಣದ  ಕನಸು  ಕಂಡಿದ್ದರು. ಅವರ  ವಿಚಾರದ ಬೆಳಕಿನಡಿಯಲ್ಲಿ ನಾವು ಹೋರಾಟವನ್ನು ಮಂದುವರೆಸಬೇಕು” ಎಂದಿದ್ದಾರೆ.

ಇದೆ ಸಂದರ್ಭದಲ್ಲಿ ಎಐಡಿವೈಓ ಹೊಸ ರಾಜ್ಯ ಸಮಿತಿಯನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಶರಣಪ್ಪ ಉದ್ಬಾಳ್, ಉಪಾಧ್ಯಕ್ಷರುಗಳಾಗಿ  ಚನ್ನಬಸವ  ಜಾನೇಕಲ್, ವಿಜಯಕುಮಾರ್, ಕೃಷ್ಣ, ಜಗನ್ನಾಥ ಎಸ್.ಎಚ್, ವಿನಯ ಸಾರಥಿ ಆಯ್ಕೆಯಾಗಿದ್ದಾರೆ.


ಇದನ್ನೂ ಓದಿ: ಗೌರವದಿಂದ ವರ್ತಿಸಿ; ಘನತೆಯುತ್ತ ಕೆಲಸದ ವಾತಾವರಣ ನಿರ್ಮಿಸಿ: ಬೆಂಗಳೂರು ಪೌರ ಕಾರ್ಮಿಕರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...