Homeಕರ್ನಾಟಕಸಮಾಜವನ್ನು ಬದಲಾಯಿಸುವ ಮುನ್ನ ಯುವಜನರು ತಮ್ಮನ್ನು ಬದಲಾಯಿಸಿಕೊಳ್ಳಬೇಕು- ಕಾಮ್ರೇಡ್ ಪ್ರತಿಭಾ ನಾಯಕ್

ಸಮಾಜವನ್ನು ಬದಲಾಯಿಸುವ ಮುನ್ನ ಯುವಜನರು ತಮ್ಮನ್ನು ಬದಲಾಯಿಸಿಕೊಳ್ಳಬೇಕು- ಕಾಮ್ರೇಡ್ ಪ್ರತಿಭಾ ನಾಯಕ್

- Advertisement -
- Advertisement -

“ಸಮಾಜವನ್ನು ಬದಲಾಯಿಸುವ ಹೋರಾಟಕ್ಕೆ ಕಾಲಿಡುವ ಯುವಜನರು ಮೊದಲು ತಮ್ಮನ್ನೇ ಬದಲಾಯಿಸಿಕೊಳ್ಳಬೇಕು, ಸಮಾಜದ ಸಮಸ್ಯೆಗಳ ವಿರುದ್ಧ ಹೋರಾಟಗಳನ್ನು ಕಟ್ಟಬೇಕು. ಆ ಹೋರಾಟಗಳ ಮೂಲಕವೇ ನಮ್ಮ ಚಾರಿತ್ರ್ಯ ಮೇಲೇರುತ್ತದೆ” ಎಂದು ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಪ್ರತಿಭಾ ನಾಯಕ್ ಹೇಳಿದ್ದಾರೆ.

ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಓ) ಕರ್ನಾಟಕ  ರಾಜ್ಯ ಸಮಿತಿಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ಎರಡು ದಿನಗಳ 5ನೇ ರಾಜ್ಯ ಮಟ್ಟದ ಯುವಜನ ಸಮ್ಮೇಳನ ನಡೆದಿದೆ. ಈ ವೇಳೆ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿರುವ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಪ್ರತಿಭಾ ನಾಯಕ್, “ಇಂದು ನಮ್ಮ ಸಮಾಜದಲ್ಲಿ ಮೌಲ್ಯಗಳು ನಶಿಸುತ್ತಿವೆ.  ಆದರೆ, ನಾವು ಮೌಲ್ಯಗಳನ್ನು ಕಳೆದುಕೊಳ್ಳಬಾರದು. ಹೇಗೆ ಸುಗಂಧಯುಕ್ತ ಹೂವೊಂದು ತಾನಿರುವ ಸ್ಥಳವನ್ನು ಪರಿಮಳಯುಕ್ತಗೊಳಿಸುವುದೋ ಹಾಗೆಯೇ ಸಚ್ಚಾರಿತ್ರ್ಯವುಳ್ಳ ಯುವಕರಾಗಿ  ನಾವು  ನಮ್ಮ ಸಮಾಜದಲ್ಲಿಯೂ ಉನ್ನತ ಚಾರಿತ್ಯ್ರ ಮತ್ತು  ಮ್ಯೌಗಳನ್ನು ಬೆಳೆಸಬೇಕು”  ಎಂದು ಹೇಳಿದ್ದಾರೆ.

“ಕೋವಿಡ್‌ನ ಸಂದರ್ಭದಲ್ಲಿ ಸರ್ಕಾರವು ಸಾಕಷ್ಟು ಜನವಿರೋಧಿ ಕ್ರಮಗಳನ್ನು ಕೈಗೊಂಡಿದೆ. ಸರ್ಕಾರದ ಉದ್ಯಮಗಳನ್ನು ಖಾಸಗಿ ಬಂಡವಾಳಿಗರಿಗೆ ಉಡುಗೊರೆಯಾಗಿ ನೀಡಿದೆ. ಪ್ರಪಂಚದಲ್ಲೇ  ದೊಡ್ಡ ಪ್ರಜಾಪ್ರಭುತ್ವವೆಂದು ಬೀಗುವ ರಾಷ್ಟ್ರದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳ ಹರಣವಾಗುತ್ತಿದೆ. ಅವುಗಳನ್ನು ರಕ್ಷಿಸಲು ನಾವು ಹೋರಾಟ ಬೆಳೆಸಬೇಕು. ಯುವಜನರು ತಮ್ಮ ವಿರುದ್ಧ ಸರ್ಕಾರ  ತರುವ ನೀತಿಗಳ ವಿರುದ್ಧ, ತಮ್ಮ ಸಮಸ್ಯೆಗಳ ವಿರುದ್ಧದ ಹೋರಾಟಕ್ಕೆ ನಾಯಕತ್ವಕ್ಕಾಗಿ ಸಂಘಟನೆಯತ್ತ ನೋಡುತ್ತಿದ್ದಾರೆ. ಅವರನ್ನು ಸಂಘಟಿಸಿ ಹೋರಾಟವನ್ನು ಒಂದು ಗಮ್ಯಕ್ಕೆ ಹೊಯ್ಯುವ  ಹೊಣೆ ನಮ್ಮದು. ನಮಗಾಗಿ ಬದುಕುವುದಷ್ಟೇ ನಿಜವಾದ ಬದುಕಲ್ಲ, ಪರರಿಗಾಗಿ ಬದುಕುವವರು ನಿಜವಾದ ಮಾನವರು. ನಮ್ಮ ನಡುವೆ ಇರುವ ಯುವಕರಲ್ಲಿ ಅಂತಹ ಗುಣವುಳ್ಳ ಯುವಜನರಿದ್ದಾರೆ. ಅಂಥವರನ್ನು ಹುಡುಕಿ ಅವರಿಗೆ ವೈಚಾರಿಕತೆಯನ್ನು ನೀಡಿ ಯುವ ಸಂಘಟನಕಾರರಾಗಿ ಬೆಳೆಸುವ ಹೊಣೆಯನ್ನು ಯುವಜನರು ತೆಗೆದುಕೊಳ್ಳಬೇಕು” ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: ಸರ್ಕಾರಗಳ ಆದ್ಯತೆ ಜನಸಾಮಾನ್ಯರಲ್ಲ, ಕಾರ್ಪೊರೇಟರ್‌ಗಳು- ಡಾ.ಬರಗೂರು ರಾಮಚಂದ್ರಪ್ಪ

ಎಐಡಿವೈಓನ ರಾಷ್ಟಾಧ್ಯಕ್ಷರಾದ ಕಾ. ರಾಮಾಂಜನಪ್ಪ ಆಲ್ದಳ್ಳಿ ಮಾತನಾಡಿ, “ನಮ್ಮ ದೇಶದಲ್ಲಿ ವಿಭಿನ್ನ ಸಂಸ್ಕೃತಿಯ ಜನ ಸಾವಿರಾರು ವರ್ಷಗಳಿಂದ ಸಾಮರಸ್ಯದಿಂದ ಬದುಕುತ್ತಿದ್ದಾರೆ. ಈಗ ಅವರ ನಡುವೆ ವಿಘಟನೆಯನ್ನು ತರಲು ಪಟ್ಟಭದ್ರ ಶಕ್ತಿಗಳು ಹವಣಿಸುತ್ತಿವೆ. ಅವರ ಹುನ್ನಾರವನ್ನು ಯುವಜನರು ಅರ್ಥಮಾಡಿಕೊಳ್ಳಬೇಕು. ಜನಸಾಮಾನ್ಯರಿಗೆ ಸತ್ಯದ ಅರಿವು ಮೂಡಿಸಿ ತಮ್ಮ ನೈಜ ಸಮಸ್ಯೆಗಳ ವಿರುದ್ಧ ಸಂಘಟಿತ ಹೋರಾಟಕಟ್ಟುವಂತೆ ಮಾಡುವ ಜವಾಬ್ದಾರಿ ಯುವಜನರ ಮೇಲಿದೆ. ನಮ್ಮ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ  ಹೋರಾಟಗಾರರಾದ ಭಗತ್‌ಸಿಂಗ್, ನೇತಾಜಿ ಮೊದಲಾದವರು  ಮಾನವನಿಂದ  ಮಾನವನ  ಶೋಷಣೆಯನ್ನು  ಅಂತ್ಯಗೊಳಿಸುವ  ಸಮ  ಸಮಾಜ ನಿರ್ಮಾಣದ  ಕನಸು  ಕಂಡಿದ್ದರು. ಅವರ  ವಿಚಾರದ ಬೆಳಕಿನಡಿಯಲ್ಲಿ ನಾವು ಹೋರಾಟವನ್ನು ಮಂದುವರೆಸಬೇಕು” ಎಂದಿದ್ದಾರೆ.

ಇದೆ ಸಂದರ್ಭದಲ್ಲಿ ಎಐಡಿವೈಓ ಹೊಸ ರಾಜ್ಯ ಸಮಿತಿಯನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಶರಣಪ್ಪ ಉದ್ಬಾಳ್, ಉಪಾಧ್ಯಕ್ಷರುಗಳಾಗಿ  ಚನ್ನಬಸವ  ಜಾನೇಕಲ್, ವಿಜಯಕುಮಾರ್, ಕೃಷ್ಣ, ಜಗನ್ನಾಥ ಎಸ್.ಎಚ್, ವಿನಯ ಸಾರಥಿ ಆಯ್ಕೆಯಾಗಿದ್ದಾರೆ.


ಇದನ್ನೂ ಓದಿ: ಗೌರವದಿಂದ ವರ್ತಿಸಿ; ಘನತೆಯುತ್ತ ಕೆಲಸದ ವಾತಾವರಣ ನಿರ್ಮಿಸಿ: ಬೆಂಗಳೂರು ಪೌರ ಕಾರ್ಮಿಕರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...