Homeಕರ್ನಾಟಕಕನ್ನಡ ನಟರ ಅಭಿಮಾನಿಗಳಿಂದ ’ಫ್ಯಾನ್ಸ್ ವಾರ್‌’ಗೆ ಫುಲ್ ಸ್ಟಾಪ್!

ಕನ್ನಡ ನಟರ ಅಭಿಮಾನಿಗಳಿಂದ ’ಫ್ಯಾನ್ಸ್ ವಾರ್‌’ಗೆ ಫುಲ್ ಸ್ಟಾಪ್!

- Advertisement -
- Advertisement -

ಚಂದನವನದಲ್ಲಿ ಅಪ್ಪು ನಿಧನ ದುಃಖದ ಜೊತೆಗೆ ಹಲವು ಪಾಠಗಳನ್ನು ಕಲಿಸುತ್ತಿದೆ. ಹೊಸ ಬೆಳವಣಿಗೆಯೊಂದು ನಡೆಯುತ್ತಿದೆ. ಕನ್ನಡ ಸಿನಿರಂಗದಲ್ಲಿ ಅತಿ ಹೆಚ್ಚು ಸುದ್ದಿಯಾಗುವ ಫ್ಯಾನ್ಸ್ ವಾರ್‌ಗೆ ಕಡಿವಾಣ ಬೀಳುವ ಸಮಯ ಬಂದಿದೆ ಎನ್ನುವ ನಂಬಿಕೆ ಚಿಗುರೊಡೆಯುತ್ತಿದೆ.

ಕನ್ನಡಿಗರ ಅಪ್ಪು, ರಾಜಕುಮಾರ ಪುನೀತ್ ರಾಜ್‌ಕುಮಾರ್‌ ಅವರ ಹಠಾತ್ ಸಾವು ಎಲ್ಲರನ್ನು ದಿಗ್ರ್ಬಮೆಗೆ ತಳ್ಳಿದೆ. ಎಷ್ಟು ದಿನ ಇರುತ್ತೇವೊ ಇಲ್ಲವೋ ಇರುವಷ್ಟು ದಿನ ಎಲ್ಲರು ಖುಷಿಯಿಂದ ಒಗ್ಗಟ್ಟಿನಿಂದ ಇರೋಣಾ. ಈ ಸ್ಟಾರ್ ವಾರ್, ಫ್ಯಾನ್ ವಾರ್ ಎಲ್ಲ ಬಿಟ್ಟು ಬಿಡುವ ಎಂಬ ವಿಚಾರಗಳು ಮುನ್ನಲೆಗೆ ಬರುತ್ತಿವೆ.

ನವೆಂವರ್‌ 2 ರಂದು ಕನ್ನಡ ನಟ, ನಟಿಯರ ಅಭಿಮಾನಿಗಳು ಟ್ವಿಟರ್‌ನಲ್ಲಿ ಈ ಬಗ್ಗೆ ಅಭಿಯಾನ ನಡೆಸಿದ್ದಾರೆ. ಇದಕ್ಕೆ ಕನ್ನಡದ ನಟ, ನಟಿಯರು ಸಾಥ್‌ ನೀಡಿದ್ದಾರೆ. ಸಾವಿರಾರು ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳಲ್ಲಿ #UnitedKFI #UnitedKFIFans ಹ್ಯಾಶ್‌ಟ್ಯಾಗ್‌ ಬಳಸಿ ಟ್ರೆಂಡ್ ಮಾಡಿದ್ದಾರೆ.

ಇದನ್ನೂ ಓದಿ: ನಾಲ್ವರಿಗೆ ಬೆಳಕಾದ ನಟ ಪುನೀತ್‌ ಕಣ್ಣುಗಳು: ರಾಜ್ಯದಲ್ಲಿ ಮೊದಲ ಬಾರಿಗೆ ಹೊಸ ತಂತ್ರ ಬಳಕೆ

ನವರಸ ನಾಯಕ ಜಗ್ಗೇಶ್ ಕೂಡ ಈ ಟ್ವಿಟರ್‌ ಅಭಿಯಾನಕ್ಕೆ ಸಾಥ್‌ ನೀಡಿದ್ದಾರೆ.

“ಈ ಭಾವ ನನ್ನ ಕಣ್ಣಲ್ಲಿ ಆನಂದಭಾಷ್ಪ ತರಿಸಿತು. ಮಾನ್ಯರೆ ನಾವೆಲ್ಲಾ ಶಾರದೆಯ ಮಕ್ಕಳು ಚಿತ್ರರಂಗ ನಮ್ಮ ಮನೆ. ಕನ್ನಡಿಗರು ನಮ್ಮ ಬಂಧುಗಳು. ನಮ್ಮ ಈ ಒಗ್ಗಟ್ಟು ರಾಜಣ್ಣನ ಕಾಲದಲ್ಲಿ ಇತ್ತು. ಮತ್ತೆ ಬರೋದಿಲ್ಲವೆ ಎಂಬ ಕೊರಗು ಕಾಡುತ್ತಿತ್ತು. ಈಗ ಇದನ್ನ ನೋಡಿ ಹಾಲುಜೇನು ಸವಿದಂತೆ ಆಯಿತು. ಈ ಒಗ್ಗಟ್ಟಿನ ಮಂತ್ರ ಯಾವ ಅಡೆತಡೆ ಇಲ್ಲದೆ ಮುಂದುವರಿಯಲಿ love all” ಎಂದು ನವರಸನಾಯಕ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ನಟಿ ಅದಿತಿ ಪ್ರಭುದೇವ ಅವರು ಕೂಡ “ಕನ್ನಡ ಚಿತ್ರರಂಗದಲ್ಲಿ ನಾವೆಲ್ಲ ಒಂದೇ. ಸ್ಟಾಪ್ ಫ್ಯಾನ್ ವಾರ್‌” ಎಂದು ಹೇಳಿದ್ದಾರೆ.

ರಾಕಿಂಗ್ ಸ್ಟಾರ್‌ ಯಶ್ ಅಭಿಮಾನಿಗಳ ಫ್ಯಾನ್ಸ್ ಪೇಜ್‌ ಕೂಡ ಜೇನಿನ ಗೂಡು ನಾವೆಲ್ಲಾ..ಬೇರೆಯಾದರೆ ಜೇನಿಲ್ಲಾ ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: ಪುನೀತ್‌ ನಿಧನ: ಅರ್ಧಕ್ಕೆ ನಿಂತು ಹೋಯಿತು ಸಾಲು ಸಾಲು ಸಿನಿಮಾ

ಕಳೆದೆರಡು ದಿನಗಳ ಹಿಂದೆ ನಟ ಸುದೀಪ್ ಅಭಿಮಾನಿಗಳು ತಮ್ಮ ಪೇಜ್‌ನಿಂದ ಬಹಿರಂಗವಾಗಿಯೇ ಕ್ಷಮೆ ಕೇಳಿ ಪತ್ರ ಬಿಡುಗಡೆ ಮಾಡಿದ್ದರು. ’ಇಷ್ಟು ದಿನ ಬೇರೆ ನಟರನ್ನು ಟ್ರೋಲ್ ಮಾಡಿದಕ್ಕೆ, ಕೆಟ್ಟದಾಗಿ ನಡೆದುಕೊಂಡಿದ್ದಕ್ಕೆ ಕ್ಷಮಿಸಿ, ಫ್ಯಾನ್ಸ್ ವಾರ್ ಬಿಟ್ಟು ಬಿಡೋಣ. ನಾವೆಲ್ಲಾ ಒಂದಾದರೇ ನಮ್ಮ ಚಿತ್ರರಂಗ ಬೆಳೆಯುತ್ತದೆ. ನಮ್ಮ ಒಂದು ದೊಡ್ಡ ಪಿಲ್ಲರ್‌ ಅನ್ನೇ ನಾವು ಕಳೆದುಕೊಂಡಿದ್ದೇವೆ. ದರ್ಶನ್, ಪುನೀತ್‌, ಯಶ್ ಸರ್‌ ಫ್ಯಾನ್ಸ್‌ ನನ್ನನ್ನು ಕ್ಷಮಿಸಿ” ಎಂದು ಮನವಿ ಮಾಡಿದ್ದರು.


ಇದನ್ನೂ ಓದಿ: ಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ಸೆಲೆಬ್ರಿಟಿ ಗಳು , ಪಕ್ಕದ ಆಂಧ್ರ ರಾಜ್ಯದ ಸೆಲೆಬ್ರಿಟಿಗಳ ಮಾದರಿ ಸ್ನೇಹ ಸಂಬಂಧಗಳು ನಟರುಗಳಲ್ಲಿ ಬೆರಸಿ ಕರ್ನಾಟಕ ರಾಜ್ಯದ ಜನರಿಗೆ ತೋರಿಸಿದರೆ ಸಾಕು.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...