Homeಕರ್ನಾಟಕಹಿರಿಯ ರಂಗಕರ್ಮಿ, ಚಿಂತಕ ಪ್ರೊ.ಜಿ.ಕೆ ಗೋವಿಂದ ರಾವ್ (84) ನಿಧನ

ಹಿರಿಯ ರಂಗಕರ್ಮಿ, ಚಿಂತಕ ಪ್ರೊ.ಜಿ.ಕೆ ಗೋವಿಂದ ರಾವ್ (84) ನಿಧನ

- Advertisement -
- Advertisement -

ಹಿರಿಯ ರಂಗಕರ್ಮಿ, ನಟ, ಚಿಂತಕ, ಬರಹಗಾರ, ನಾಡಿನ ಸಾಕ್ಷಿಪ್ರಜ್ಞೆಯಾಗಿದ್ದ ಪ್ರೊ.ಜಿ.ಕೆ ಗೋವಿಂದ ರಾವ್ (84) ಶುಕ್ರವಾರ (ಅ.15) ಮುಂಜಾನೆ ಹುಬ್ಬಳ್ಳಿಯ ತಮ್ಮ ಮಗಳ ಮನೆಯಲ್ಲಿ ನಿಧನರಾಗಿದ್ದಾರೆ.

ವಿಚಾರವಾದಿ ಪ್ರೊ. ಜಿ.ಕೆ. ಗೋವಿಂದ ರಾವ್ ಅವರು 1937 ಏಪ್ರಿಲ್ 27ರಂದು ಬೆಂಗಳೂರಿನಲ್ಲಿ ಜನಿಸಿದರು. ಪ್ರೀತಿಯಿಂದ ಜಿಕೆಜಿ ಸರ್‌ ಎಂದು ಕರೆಸಿಕೊಳ್ಳುತ್ತಿದ್ದ ಅವರು ಇಂಗ್ಲಿಷ್ ಸಾಹಿತ್ಯದ ಅಧ್ಯಯನ ನಡೆಸಿ, ಇಂಗ್ಲಿಷ್‌ ಪ್ರಾಧ್ಯಾಪಕರಾಗಿ ಕೆಲಸ ಮಾಡಿದ್ದರು.

ರಂಗಭೂಮಿ, ಸಿನಿಮಾರಂಗದಲ್ಲಿ ಸಕ್ರಿಯ ಒಡನಾಟ ಇಟ್ಟುಕೊಂಡಿದ್ದ ಇವರು ಕಥಾ ಸಂಗಮ, ಗ್ರಹಣ, ಮಿಥಿಲೆಯ ಸೀತೆಯರು, ಕರ್ಫ್ಯೂ, ನಿಶ್ಯಬ್ದ, ಭೂಮಿ ತಾಯಿಯ ಚೊಚ್ಚಲ ಮಗ, ಅಜ್ಜು, ಶಾಸ್ತ್ರಿ, ರೇ ಮುಂತಾದ ಚಲನ ಚಿತ್ರಗಳಲ್ಲಿ ಅಭಿನಯಿಸಿದ್ದರು. ಮಾಲ್ಗುಡಿ ಡೇಸ್, ಮಹಾಪರ್ವ ಧಾರಾವಾಹಿ ಸೇರಿದಂತೆ ಹಲವಾರು ಧಾರಾವಾಹಿಗಳಲ್ಲಿ ನಟಿಸಿದ್ದರು.

ಜಿಕೆಜಿ ಅವರು ಸಮಕಾಲೀನ ಪ್ರಜಾಸತ್ತಾತ್ಮಕ ಹೋರಾಟಗಳಲ್ಲಿ ಭಾಗವಹಿಸಿ ತಮ್ಮ ಜನಪರ ನಿಲುವು ಪ್ರಕಟಿಸಿದ್ದಾರೆ. ಈಶ್ವರ ಅಲ್ಲಾ (ಕಿರುಕಾದಂಬರಿ), ಶೇಕ್ಸ್‌ಪಿಯರ್ ಎರಡು ನಾಟಕಗಳ ಅಧ್ಯಯನ, ಶೇಕ್ಸ್‌ಪಿಯರ್ ಸಂವಾದ (ವಿಮರ್ಶಾ ಲೇಖನಾ ಮಾಲಿಕೆ), ನಡೆ-ನುಡಿ, ನಾಗರಿಕತೆ ಮತ್ತು ಅರಾಜಕತೆ, ಬಿಂಬ ಪ್ರತಿಬಿಂಬ, ಕ್ರಿಯೆ ಪ್ರತಿಕ್ರಿಯೆ, ಮನು ವರ್ಸಸ್ ಅಂಬೇಡ್ಕರ್: ತಮ್ಮ ಆಯ್ಕೆ ಯಾವುದು? ಮುಂತಾದ ಹಲವು ಕೃತಿಗಳನ್ನು ಬರೆದಿದ್ದಾರೆ.

ಇದನ್ನೂ ಓದಿ: ಚಿತ್ರರಂಗದಲ್ಲಿ ಸ್ವಜನ ಪಕ್ಷಪಾತಕ್ಕಿಂತ ಜನಾಂಗೀಯತೆ ಹೆಚ್ಚಾಗಿದೆ: ನಟ ನವಾಜುದ್ದೀನ್ ಸಿದ್ದಿಕಿ

ಪ್ರೊ. ಜಿ.ಕೆ. ಗೋವಿಂದ ರಾವ್ ನಿಧನಕ್ಕೆ ಗಣ್ಯರು, ಸಾಮಾಜಿಕ ಹೋರಾಟಗಾರರು ಸಂತಾಪ ಸೂಚಿಸಿದ್ದಾರೆ.

“ಹಿರಿಯ ಲೇಖಕ, ಚಿಂತಕ,‌ ನಟ ಪ್ರೊ.ಜಿ.ಕೆ.ಗೋವಿಂದರಾವ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ನನ್ನ ಹಿತೈಷಿ, ಮಾರ್ಗದರ್ಶಕ ಮತ್ತು ಆತ್ಮೀಯ ಸ್ನೇಹಿತರಾಗಿದ್ದ ಪ್ರೊ.ಜಿಕೆಜಿ ಅವರಿಗೆ ಗೌರವದ ನಮನಗಳು. ಅವರನ್ನು ಕಳೆದುಕೊಂಡ ಕುಟುಂಬದ ಸದಸ್ಯರು, ಶಿಷ್ಯರು, ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಟ್ವಿಟರ್‌ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ. “ರಂಗಭೂಮಿ, ಸಿನಿಮಾ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮ ಛಾಪನ್ನು ಮೂಡಿಸಿದ್ದ ಅವರು, ತಮ್ಮ ಜನಪರ ನಿಲುವಿನಿಂದ ಜನಮಾನಸದಲ್ಲಿ ವಿಶಿಷ್ಟ ಸ್ಥಾನ ಗಳಿಸಿದ್ದರು. ಅವರ ನಿಧನದಿಂದ ಒಬ್ಬ ಅನನ್ಯ ಚಿಂತಕನನ್ನು ನಾಡು ಕಳೆದುಕೊಂಡಂತಾಗಿದೆ. ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ” ಎಂದಿದ್ದಾರೆ.
Actor, literature, thinker G K Govindarao is no more
“ವಯಸ್ಸು, ಅನಾರೋಗ್ಯದಿಂದ ದೇಹ ಬಳಲಿದ್ದರೂ ಆಗಾಗ ತಮ್ಮ ಕಂಚಿನ ಕಂಠದಿಂದ ನಮ್ಮನ್ನೆಲ್ಲ ಬಡಿದೆಚ್ಚರಿಸುತ್ತಿದ್ದ, ಕೊನೆ ಉಸಿರಿನ ವರೆಗೆ ಸೈದ್ಧಾಂತಿಕವಾಗಿ ರಾಜಿ ಮಾಡಿಕೊಳ್ಳದೆ ನೇರ-ನಿಷ್ಠುರ ಮಾತು, ಬರಹಗಳ ಮೂಲಕ ನಾಡಿನ ನಿಜವಾದ ಸಾಕ್ಷಿ‌ಪ್ರಜ್ಞೆಯಂತಿದ್ದ ಜಿ.ಕೆ.ಗೋವಿಂದ ರಾವ್ ಇನ್ನಿಲ್ಲ. ಹಳೆಮರಗಳು ಉರುಳಿ ಬೀಳಲಿವೆ ಎನ್ನುವುದು ಅವರಿಗೆ ಗೊತ್ತಿತ್ತು, ಇದಕ್ಕಾಗಿಯೇ ಹೊಸ ಚಿಗುರು ಹುಟ್ಟಿಸುವ ಸತತ ಪ್ರಯತ್ನದಲ್ಲಿದ್ದರು. ಅವರ ನಿರೀಕ್ಷೆಯ ಹೊಸ ಕಾಲವನ್ನು ಕಾಣಲಾಗದೆ ಅಗಲಿ ಹೋದರು.
ಈ ‌ನಿರ್ವಾತ ಬಹಳ ದಿನ ನಮ್ಮನ್ನು ಕಾಡಲಿದೆ. ಹಿರಿಯ ಜೀವಕ್ಕೆ ಒಂದು ನಮಸ್ಕಾರ, ಇನ್ನೊಂದು Sorry” ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಬರೆದಿದ್ದಾರೆ.

 

ಪ್ರೊ. ಜಿ.ಕೆ ಗೋವಿಂದ ರಾವ್ ಅವರು ತಮ್ಮ ಇಬ್ಬರು ಪುತ್ರಿಯರನ್ನು, ಸಾವಿರಾರೂ ಅಭಿಮಾನಿಗಳು ಮತ್ತು ಶಿಷ್ಯರನ್ನು ಅಗಲಿದ್ದಾರೆ.


ಇದನ್ನೂ ಓದಿ: ಮಹಿಳಾ ಚಳವಳಿಗೆ ದೊಡ್ಡ ನಷ್ಟ: ಪ್ರಖ್ಯಾತ ಸ್ತ್ರೀವಾದಿ ಕಮಲ ಭಾಸಿನ್‌ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...