Homeಕರ್ನಾಟಕಕೋಲಾರ: ಬದುಕಿರುವ ರೈತನಿಗೆ ಮರಣ ಪ್ರಮಾಣ ಪತ್ರ ಕೊಟ್ಟ ಅಧಿಕಾರಿಗಳು

ಕೋಲಾರ: ಬದುಕಿರುವ ರೈತನಿಗೆ ಮರಣ ಪ್ರಮಾಣ ಪತ್ರ ಕೊಟ್ಟ ಅಧಿಕಾರಿಗಳು

- Advertisement -
- Advertisement -

ಜೀವಂತವಾಗಿರುವ ರೈತರೊಬ್ಬರಿಗೆ ತಾಲೂಕು ಕಂದಾಯ ಇಲಾಖೆ ಅಧಿಕಾರಿಗಳು ಮರಣ ಪ್ರಮಾಣ ಪತ್ರ ನೀಡಿ ಬೇಜವಾಬ್ದಾರಿ ಮೆರೆದಿರುವ ಘಟನೆ ಕೋಲಾರದ ಮುಳಬಾಗಿಲಿನಲ್ಲಿ ನಡೆದಿದೆ.

ಮುಳಬಾಗಿಲು ತಾಲೂಕಿನ ಎಂ.ಹೊಸಹಳ್ಳಿ ಗ್ರಾಮದ 40 ವರ್ಷದ ರೈತ ಶಿವರಾಜ್ ಅವರಿಗೆ ಬದುಕಿರುವಾಗಲೇ ಅಧಿಕಾರಿಗಳು ಮರಣ ಪ್ರಮಾಣ ಪತ್ರ ನೀಡಿದ್ದಾರೆ. ಇದರಿಂದ ರೈತ ಶಿವರಾಜ್ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ದು, ಎಫ್‌ಐಆರ್‌ ದಾಖಲಿಸಿದ್ದಾರೆ.

ತಾಲೂಕಿನಲ್ಲಿ ಈ ಹಿಂದೆ ತಹಶಿಲ್ದಾರ್‌ ಆಗಿದ್ದ ಜಿ.ರಾಜಶೇಖರ್ ಹಾಗೂ ಗ್ರಾಮ ಲೆಕ್ಕಿಗ ಅರವಿಂದ, ಕಂದಾಯ ನಿರೀಕ್ಷಿಕ ಸಾದತ್ ವುಲ್ಲಾ ಖಾನ್, ನಾಡಕಚೇರಿ ಶಿರೇಸ್ತೆದಾರ್ ಜಯರಾಂ ವಿರುದ್ಧ ಮುಳಬಾಗಿಲು ನಗರ ಪೊಲೀಸ್‌ ಠಾಣೆಯಲ್ಲಿ ರೈತ ಶಿವರಾಜ್ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಜಿಂದಾಲ್‌‌ ಯೋಜನೆ ವಿರುದ್ಧ ಸಂತ್ರಸ್ತರನ್ನು ಬೆಂಬಲಿಸಿದ ‘O.P. ಜಿಂದಾಲ್ ಗ್ಲೋಬಲ್ ವಿವಿ’ ವಿದ್ಯಾರ್ಥಿಗಳು

ಪಡಿತರ ತರಲು ನ್ಯಾಯಬೆಲೆ ಅಂಗಡಿಗೆ ತೆರಳಿದ್ದಾಗ ಪಡಿತರ ಚೀಟಿಯಲ್ಲಿ ಹೆಸರು ತೆಗೆದು ಹಾಕಿರುವುದು ಶಿವರಾಜ್ ಗಮನಕ್ಕೆ ಬಂದಿದ್ದು, ಈ ವೇಳೆ ವಿಚಾರಿಸಿದಾಗ ನೀವು ಮರಣ ಹೊಂದಿರುವುದಾಗಿ ಉಲ್ಲೇಖಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದರಿಂದ ಆತಂಕಕ್ಕೆ ಒಳಗಾದ ಶಿವರಾಜ್ ತಾಲೂಕು ಕಚೇರಿಯಲ್ಲಿ ವಿಚಾರಣೆ ನಡೆಸಿದ್ದು, ಮರಣ ಪ್ರಮಣ ಪತ್ರ ನೀಡಿದ್ದಾರೆ. ಇದು ಉದ್ದೇಶಪೂರ್ವಕ ಕೃತ್ಯ, ತನ್ನ ಜಮೀನು ಕಸಿಯಲು ಮಾಡಿರುವ ತಂತ್ರ ಎಂದು ರೈತ ಆರೋಪಿಸಿದ್ದಾರೆ.

“ಪೋಸ್ಟ್ ಆಫೀಸ್‌, ಅಂಗನವಾಡಿ ಕೇಂದ್ರಗಳ ಬಳಿಯೆಲ್ಲಾ ಮರಣ ಪ್ರಮಾಣ ಪತ್ರ ಅಂಟಿಸಿದ್ದಾರೆ. ಇದನ್ನು ಯಾರು ಮಾಡಿದ್ದಾರೆ, ಯಾಕೆ ಮಾಡಿದ್ದಾರೆ ಗೊತ್ತಿಲ್ಲ. ಪೋಸ್ಟರ್‌ಗಳನ್ನೆಲ್ಲ ಆಕಿತ್ತು ಹಾಕಿ, ಎಸಿ, ಡಿಸಿ, ಕಮಿಷನರ್‌, ಜಿಲ್ಲಾಡಳಿತ, ಸರ್ಕಾರ ಎಲ್ಲರಿಗೂ ತಿಳಿಸಿದೆ. ಪ್ರಯೋಜನವಾಗಲಿಲ್ಲ. ಅದಕ್ಕೆ ದೂರ ದಾಖಲಿಸಿದ್ದೇನೆ” ಎಂದು ರೈತ ಶಿವರಾಜ್ ತಿಳಿಸಿದ್ದಾರೆ.


ಇದನ್ನೂ ಓದಿ: ಬೆಂಗಳೂರು: ವಿಕಲಾಂಗ ಮಹಿಳೆಯ ಮೇಲೆ ಟ್ರಾಫಿಕ್‌ ಎಎಸ್‌ಐ ಹಲ್ಲೆ; ಮಹಿಳೆಯ ಮೇಲೆಯೇ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...