Homeಕರ್ನಾಟಕಟ್ವಿಟರ್ ಅಭಿಯಾನದ ಮೂಲಕ ಸಾಮಾಜಿಕ ಹೋರಾಟಗಳಿಗೆ ಜೊತೆಯಾದ ಕರ್ನಾಟಕ ಕ್ರಾಂತಿಕಾರಿ ಪಡೆ!

ಟ್ವಿಟರ್ ಅಭಿಯಾನದ ಮೂಲಕ ಸಾಮಾಜಿಕ ಹೋರಾಟಗಳಿಗೆ ಜೊತೆಯಾದ ಕರ್ನಾಟಕ ಕ್ರಾಂತಿಕಾರಿ ಪಡೆ!

'ಒಟ್ಟಿನಲ್ಲಿ ಕ್ರಾಂತಿಯಾಗಬೇಕು' ಎಂಬ ಟ್ಯಾಗ್‌ಲೈನ್‌ನೊಂದಿಗೆ ಗುರುತಿಸಿಕೊಂಡಿರುವ, ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವ ಕರ್ನಾಟಕ ಕ್ರಾಂತಿಕಾರಿ ಪಡೆಯ ಕಿರುಪರಿಚಯ..

- Advertisement -
- Advertisement -

ಇವತ್ತು ‘ಹೆಂಗ್ ಪುಂಗ್‌ ಲೀ’ ಅನ್ನೋದು ಚಕ್ರವರ್ತಿ ಸೂಲಿಬೆಲೆಯವರ ಹೆಸರಿಗೆ ಸಮನಾರ್ಥಕನಾಮವಾಗಿ ಬಳಸುವಷ್ಟು ಪ್ರಸಿದ್ದವಾಗಿದೆ. ಕರ್ನಾಟಕದಲ್ಲಿ ಸುಳ್ಳು ಹೇಳುವವರಿಗೆ ಅನ್ವರ್ಥನಾಮವಾಗಿ ಈ ಪದವನ್ನು ಬಳಸಲಾಗುತ್ತಿದೆ. ಇಷ್ಟು ಸಹಜವಾಗಿ ಬಳಕೆಯಾಗುತ್ತಿರುವ ಈ ಪದದ ಸೃಷ್ಟಿಕರ್ತರು ಮತ್ತು ಮೊದಲು ಬಳಸಿದ್ದು ಕರ್ನಾಟಕ ಕ್ರಾಂತಿಕಾರಿ ಪಡೆ.

ಹೌದು, ‘ಒಟ್ಟಿನಲ್ಲಿ ಕ್ರಾಂತಿಯಾಗಬೇಕು’ ಎಂಬ ಟ್ಯಾಗ್‌ಲೈನ್‌ನೊಂದಿಗೆ ಗುರುತಿಸಿಕೊಂಡಿರುವ, ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವ ಕರ್ನಾಟಕ ಕ್ರಾಂತಿಕಾರಿ ಪಡೆ ವಿದ್ಯಾವಂತ, ಉತ್ಸಾಹಿ ಯುವಜನರ ಒಂದು ತಂಡ. ಎಂಜಿನಿಯರ್‌ಗಳು, ಡಾಕ್ಟರ್‌ಗಳು, ವಕೀಲರು ಸೇರಿದಂತೆ ಐಟಿ ವಲಯದಲ್ಲಿ ಕೆಲಸ ಮಾಡುವವರು ಈ ಪಡೆಯ ಸಕ್ರಿಯ ಕಾರ್ಯಕರ್ತರು. ಅಧಿಕೃತವಾಗಿ‌ 50 ಜನರಿರುವ ಈ ತಂಡದಲ್ಲಿ ತಮ್ಮ ಹೆಸರು ಗುರುತಿಸಿಕೊಳ್ಳಲು ಇಚ್ಛಿಸದೇ ಪಡೆಗಾಗಿ ಕೆಲಸ ಮಾಡುವವರು 2000 ಕ್ಕೂ ಹೆಚ್ಚು ಜನರಿದ್ದಾರೆ.

2014 ರ ಬಳಿಕ ದೇಶದಲ್ಲಿ ನಡೆಯುತ್ತಿರುವ ಘಟನೆಗಳು ನಮ್ಮನ್ನು ಚಿಂತೆಗೀಡುಮಾಡಿವೆ. ಸಾಮಾಜಿಕ ಜಾಲತಾಣಗಳಲ್ಲಿ ಅತಿಯಾಗಿ ತೊಡಗಿಸಿಕೊಂಡಿರುವ ಯುವ ಜನತೆಯನ್ನು ಸುಳ್ಳುಗಳು, ಕಟ್ಟುಕಥೆಗಳ ಮೂಲಕ ದಾರಿ ತಪ್ಪಿಸಲಾಗುತ್ತಿದೆ. ಹಾಗಾಗಿ ಅದೇ ಸಾಮಾಜಿಕ ಜಾಲತಾಣದ ಮೂಲಕ ಅವರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು, ಸಮಾಜಕ್ಕೆ ಏನಾದರೂ ಕೊಡಗು ನೀಡಬೇಕು ಎಂದು ಈ ತಂಡ ಕಟ್ಟಿದ್ದೇವೆ ಎನ್ನುತ್ತಾರೆ ಕರ್ನಾಟಕ ಕ್ರಾಂತಿಕಾರಿ ಪಡೆ ಸದಸ್ಯರು.

ಟ್ವಿಟ್ಟರ್‌ ಮೂಲಕ ಜನಾಭಿಪ್ರಾಯ ಮೂಡಿಸುವಲ್ಲಿ ಈ ಪಡೆ ಕಾರ್ಯನಿರತವಾಗಿದೆ. ಸಾಮಾಜಿಕ ಕಳಕಳಿಯ ವಿಷಯಗಳನ್ನು ಟ್ರೆಂಡ್ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯುವುದು, ಸಾರ್ವಜನಿಕರಿಗೆ ವಿಷಯ ಮುಟ್ಟಿಸುವುದು ಇವರ ಆದ್ಯತೆ. ಹಾಗಂತ ಅವರು ಟ್ವಿಟರ್‌ಗೆ ಮಾತ್ರ ಸೀಮಿತವಾಗದೆ ಲಾಕ್‌ಡೌನ್‌ ಸಮಯದಲ್ಲಿ ಬಡವರಿಗೆ ಆಹಾರ ಧಾನ್ಯಗಳ ವಿತರಣೆ, ಅಗತ್ಯವಿದ್ದವರಿಗೆ ತಕ್ಷಣ ರಕ್ತದಾನ ಮಾಡುವುದು, ಬೀದಿ ಬದಿಯಲ್ಲಿ ಮಲಗುವವರಿಗೆ ಊಟ, ಹೊದಿಕೆ ನೀಡುವ ಕಾಯಕದಲ್ಲಿಯೂ ತೊಡಗಿಸಿಕೊಂಡು ಅಭಿನಂದನೆಗೆ ಪಾತ್ರರಾಗಿದ್ದಾರೆ.

ಇದನ್ನೂ ಓದಿ: ಬಂಗಾಳ ಚುನಾವಣೆ ಪ್ರಚಾರ: ಮಮತಾ ಬ್ಯಾನರ್ಜಿಗೆ ಸಾಥ್ ನೀಡಲಿರುವ ಹಿರಿಯ ನಟಿ ಜಯಾ ಬಚ್ಚನ್

 

‘ಹೆಂಗ್‌ ಪುಂಗ್ಲಿ’ಯಿಂದ ಶುರುವಾದ ಇವರ ಟ್ವಿಟರ್‌ ಅಭಿಯಾನ, ಸುದ್ದಿ ಮಾಧ್ಯಮದಲ್ಲಿ ಒಂದು ಪಕ್ಷದ ಪರವಾಗಿ ಕಾರ್ಯನಿರ್ವಹಿಸುತ್ತಿದ್ದವರನ್ನು ವಿರೋಧಿಸಿ ಏಜೆಂಟ್ ಅಜಿತ್ ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡ್ ಮಾಡುವವರೆಗೂ ಹೇಗಿದೆ. ಹಿಂದಿ ಹೇರಿಕೆಯನ್ನು ವಿರೋಧಿಸಿದ ತಂಡ ರಾಜ್ಯ ಸರ್ಕಾರ ಜಾತಿ ಆಧಾರದ ಮೇಲೆ ಪ್ರಾಧಿಕಾರಗಳಿಗೆ ಅನುದಾನ ಬಿಡುಗಡೆ ಮಾಡಿದ್ದನ್ನು ಪ್ರಶ್ನಿಸಿ  #CasteMinisterBSY #ಜಾತಿಗಿಷ್ಟುಸವಲತ್ತು_ಒಡೆದುಆಳುವದೌಲತ್ತು ಎನ್ನುವ ಹ್ಯಾಷ್‌ಟ್ಯಾಗ್‌ಗಳನ್ನು ಟ್ರೆಂಡ್ ಮಾಡಿತ್ತು. ಕರ್ನಾಟಕದಲ್ಲಿ ಹೊಸ ಭೂಸುಧಾರಣೆ ಕಾಯ್ದೆ ಪುನಃ ಜಮೀನ್ದಾರಿ ಪದ್ಧತಿ ತರಲು ಹೊರಟಿದೆ ಎಂದು ವಿರೋಧಿಸಿ ರಾಜ್ಯಪಾಲರನ್ನು ಗುರಿಯಾಗಿಸಿಕೊಂಡು #GovernorDontSignKLRA2020 #ರಾಜ್ಯಪಾಲರೇಮಾತುಉಳಿಸಿಕೊಳ್ಳಿ ಹ್ಯಾಷ್‌ಟ್ಯಾಗ್ ಮೂಲಕ ಆಗ್ರಹಿಸಿದೆ.

ಸದ್ಯ ಖಾಸಗೀಕರಣವನ್ನು ವಿರೋಧಿಸಿ ಏಪ್ರೀಲ್ 2 ರಂದು ನಡೆಸಿರುವ ಟ್ವಿಟರ್‌ ಅಭಿಯಾನ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದ್ದು, ಅಂದು ಹಲವು ಗಂಟೆಗಳ ಕಾಲ #ಕಾಸಿಗಾಗಿ_ಖಾಸಗೀಕರಣ #GOI_PVT_LTD ರಾಜ್ಯದಲ್ಲಿ ಟಾಪ್ ಟ್ರೆಂಡಿಂಗ್‌ನಲ್ಲಿ ಇದ್ದ ಹ್ಯಾಶ್‌ಟ್ಯಾಗ್ ಆಗಿದೆ.

ನಾನುಗೌರಿ.ಕಾಂ ಜೊತೆ ತಮ್ಮ ತಂಡದ ಕೆಲಸಗಳ ಬಗ್ಗೆ ಮಾತನಾಡಿರುವ ರವಿ ಕಿರಣ್, “ಇಂದಿನ ಯುವ ಜನತೆ ಹೆಚ್ಚು ಸೋಶಿಯಲ್ ಮೀಡಿಯಾವನ್ನು ಬಳಸುತ್ತಿದ್ದಾರೆ. ಅದರಲ್ಲಿ ಬರುವ ಸುದ್ದಿಯನ್ನು ನಿಜ ಎಂದು ತಿಳಿಯುತ್ತಾರೆ. ಇದನ್ನೇ ತಮ್ಮ ಲಾಭಕ್ಕಾಗಿ ಬಳಸಿಕೊಳ್ಳುತ್ತಿರುವ ಚಕ್ರವರ್ತಿ ಸೂಲಿಬೆಲೆಯಂತಹ ವ್ಯಕ್ತಿಗಳು ಸುಳ್ಳುಗಳನ್ನು ತುಂಬಲು, ಧರ್ಮದ ಅಫೀಮು ತುಂಬಲು ಬಳಸುತ್ತಿದ್ದಾರೆ. ದೇಶ, ಸೈನಿಕರು ಎಂಬಂತಹ ವಿಚಾರಗಳ ಮೂಲಕ ಯುವಜನರನ್ನು ಭಾವನಾತ್ಮಕವಾಗಿ ಹಿಡಿದಿಟ್ಟು ನಂತರ ತಮ್ಮ ಆರ್‌ಎಸ್‌ಎಸ್‌ ಸಿದ್ಧಾಂತಗಳನ್ನು ತುಂಬುತ್ತಾರೆ. ಇದನ್ನು ನಂಬಿದ ಯುವಕರು ಏನ್ ಏನೋ ಮಾಡಲು ಹೊರಡುತ್ತಾರೆ. ಇದರ ವಿರುದ್ಧ ನಾವು ಸಾಮಾಜಿಕ ಜಾಲತಾಣಗಳನ್ನೇ ಬಳಸಿಕೊಂಡು ಅವರ ಮುಖವಾಡಗಳನ್ನು ಕಳಚುವ ಕೆಲಸ ಮಾಡುತ್ತೇವೆ” ಎನ್ನುತ್ತಾರೆ.

’ಹೆಂಗ್ ಪುಂಗ್‌ ಲೀ ಎಂಬುದನ್ನು ಆರಂಭಿಸುವ ಮುನ್ನ ಜನ ಅವರು ಹೇಳುವುದನ್ನೇ ನಂಬುತ್ತಿದ್ದರು. ಅವರು ಹೇಳಿದನ್ನು ಸತ್ಯ ಎನ್ನುತ್ತಿದ್ದರು. ಈಗ ನೋಡಿ ಜನ ಅವರ ಮಾತನ್ನು ಕೇಳಿ ನಗುತ್ತಾರೆ. ಅವರು ಹೇಳುವುದು ಸುಳ್ಳು ಎಂಬುದು ಜನರಿಗೆ ತಿಳಿಯಿತು. ನೂರು ಜನರನ್ನು ಬದಲಿಸುತ್ತೇವೆ ಎಂಬ ಭ್ರಮೆ ನಮಗಿಲ್ಲ. ಆದರೆ ಹತ್ತು ಜನರಾದರೂ ಬದಲಾಗಬೇಕು ಎಂಬುದು ನಮ್ಮ ಆಶಯ” ಎನ್ನುತ್ತಾರೆ ರವಿಕಿರಣ್.

ಇದನ್ನೂ ಓದಿ: ಮಹಿಳೆಯರ ಗೌರವದ ಬದುಕಿಗಾಗಿ ಜಾಗೃತಿ ಮೂಡಿಸುವ ರಾಯಚೂರಿನ ಚಿನ್ನಮ್ಮ

“ಎಷ್ಟೋ ಜನರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ಚಳವಳಿ, ಹೋರಾಟವನ್ನು ಮುನ್ನಡೆಸುತ್ತಿರುತ್ತಾರೆ. ಆದರೆ ಸಾಮಾಜಿಕ ಜಾಲತಾಣಗಳ ಮೂಲಕ ಜನರನ್ನು ತಲುಪಲು ಅವರಿಗೆ ಸಾಧ್ಯವಾಗುವುದಿಲ್ಲ. ಅಂತಹವರಿಗೆ ನಾವು ಬೆಂಬಲ ನೀಡುತ್ತೇವೆ. ರೈತ ಹೋರಾಟಗಳಲ್ಲಿ ನಾವು ತೊಡಗಿಸಿಕೊಂಡಿದ್ದೇವೆ. ರೈತ ಪ್ರತಿಭಟನೆಗೆ ಬೆಂಬಲ ನೀಡಿದ್ದೇವೆ. ಕರ್ನಾಟಕದಲ್ಲಿ ನಡೆಯುತ್ತಿರುವ ಐಕ್ಯ ಹೋರಾಟದಲ್ಲಿ ನಾವು ಭಾಗವಾಗಿದ್ದೇವೆ” ಎನ್ನುತ್ತಾರೆ.


ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...