Homeಕರ್ನಾಟಕಟ್ವಿಟರ್ ಅಭಿಯಾನದ ಮೂಲಕ ಸಾಮಾಜಿಕ ಹೋರಾಟಗಳಿಗೆ ಜೊತೆಯಾದ ಕರ್ನಾಟಕ ಕ್ರಾಂತಿಕಾರಿ ಪಡೆ!

ಟ್ವಿಟರ್ ಅಭಿಯಾನದ ಮೂಲಕ ಸಾಮಾಜಿಕ ಹೋರಾಟಗಳಿಗೆ ಜೊತೆಯಾದ ಕರ್ನಾಟಕ ಕ್ರಾಂತಿಕಾರಿ ಪಡೆ!

'ಒಟ್ಟಿನಲ್ಲಿ ಕ್ರಾಂತಿಯಾಗಬೇಕು' ಎಂಬ ಟ್ಯಾಗ್‌ಲೈನ್‌ನೊಂದಿಗೆ ಗುರುತಿಸಿಕೊಂಡಿರುವ, ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವ ಕರ್ನಾಟಕ ಕ್ರಾಂತಿಕಾರಿ ಪಡೆಯ ಕಿರುಪರಿಚಯ..

- Advertisement -
- Advertisement -

ಇವತ್ತು ‘ಹೆಂಗ್ ಪುಂಗ್‌ ಲೀ’ ಅನ್ನೋದು ಚಕ್ರವರ್ತಿ ಸೂಲಿಬೆಲೆಯವರ ಹೆಸರಿಗೆ ಸಮನಾರ್ಥಕನಾಮವಾಗಿ ಬಳಸುವಷ್ಟು ಪ್ರಸಿದ್ದವಾಗಿದೆ. ಕರ್ನಾಟಕದಲ್ಲಿ ಸುಳ್ಳು ಹೇಳುವವರಿಗೆ ಅನ್ವರ್ಥನಾಮವಾಗಿ ಈ ಪದವನ್ನು ಬಳಸಲಾಗುತ್ತಿದೆ. ಇಷ್ಟು ಸಹಜವಾಗಿ ಬಳಕೆಯಾಗುತ್ತಿರುವ ಈ ಪದದ ಸೃಷ್ಟಿಕರ್ತರು ಮತ್ತು ಮೊದಲು ಬಳಸಿದ್ದು ಕರ್ನಾಟಕ ಕ್ರಾಂತಿಕಾರಿ ಪಡೆ.

ಹೌದು, ‘ಒಟ್ಟಿನಲ್ಲಿ ಕ್ರಾಂತಿಯಾಗಬೇಕು’ ಎಂಬ ಟ್ಯಾಗ್‌ಲೈನ್‌ನೊಂದಿಗೆ ಗುರುತಿಸಿಕೊಂಡಿರುವ, ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವ ಕರ್ನಾಟಕ ಕ್ರಾಂತಿಕಾರಿ ಪಡೆ ವಿದ್ಯಾವಂತ, ಉತ್ಸಾಹಿ ಯುವಜನರ ಒಂದು ತಂಡ. ಎಂಜಿನಿಯರ್‌ಗಳು, ಡಾಕ್ಟರ್‌ಗಳು, ವಕೀಲರು ಸೇರಿದಂತೆ ಐಟಿ ವಲಯದಲ್ಲಿ ಕೆಲಸ ಮಾಡುವವರು ಈ ಪಡೆಯ ಸಕ್ರಿಯ ಕಾರ್ಯಕರ್ತರು. ಅಧಿಕೃತವಾಗಿ‌ 50 ಜನರಿರುವ ಈ ತಂಡದಲ್ಲಿ ತಮ್ಮ ಹೆಸರು ಗುರುತಿಸಿಕೊಳ್ಳಲು ಇಚ್ಛಿಸದೇ ಪಡೆಗಾಗಿ ಕೆಲಸ ಮಾಡುವವರು 2000 ಕ್ಕೂ ಹೆಚ್ಚು ಜನರಿದ್ದಾರೆ.

2014 ರ ಬಳಿಕ ದೇಶದಲ್ಲಿ ನಡೆಯುತ್ತಿರುವ ಘಟನೆಗಳು ನಮ್ಮನ್ನು ಚಿಂತೆಗೀಡುಮಾಡಿವೆ. ಸಾಮಾಜಿಕ ಜಾಲತಾಣಗಳಲ್ಲಿ ಅತಿಯಾಗಿ ತೊಡಗಿಸಿಕೊಂಡಿರುವ ಯುವ ಜನತೆಯನ್ನು ಸುಳ್ಳುಗಳು, ಕಟ್ಟುಕಥೆಗಳ ಮೂಲಕ ದಾರಿ ತಪ್ಪಿಸಲಾಗುತ್ತಿದೆ. ಹಾಗಾಗಿ ಅದೇ ಸಾಮಾಜಿಕ ಜಾಲತಾಣದ ಮೂಲಕ ಅವರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು, ಸಮಾಜಕ್ಕೆ ಏನಾದರೂ ಕೊಡಗು ನೀಡಬೇಕು ಎಂದು ಈ ತಂಡ ಕಟ್ಟಿದ್ದೇವೆ ಎನ್ನುತ್ತಾರೆ ಕರ್ನಾಟಕ ಕ್ರಾಂತಿಕಾರಿ ಪಡೆ ಸದಸ್ಯರು.

ಟ್ವಿಟ್ಟರ್‌ ಮೂಲಕ ಜನಾಭಿಪ್ರಾಯ ಮೂಡಿಸುವಲ್ಲಿ ಈ ಪಡೆ ಕಾರ್ಯನಿರತವಾಗಿದೆ. ಸಾಮಾಜಿಕ ಕಳಕಳಿಯ ವಿಷಯಗಳನ್ನು ಟ್ರೆಂಡ್ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯುವುದು, ಸಾರ್ವಜನಿಕರಿಗೆ ವಿಷಯ ಮುಟ್ಟಿಸುವುದು ಇವರ ಆದ್ಯತೆ. ಹಾಗಂತ ಅವರು ಟ್ವಿಟರ್‌ಗೆ ಮಾತ್ರ ಸೀಮಿತವಾಗದೆ ಲಾಕ್‌ಡೌನ್‌ ಸಮಯದಲ್ಲಿ ಬಡವರಿಗೆ ಆಹಾರ ಧಾನ್ಯಗಳ ವಿತರಣೆ, ಅಗತ್ಯವಿದ್ದವರಿಗೆ ತಕ್ಷಣ ರಕ್ತದಾನ ಮಾಡುವುದು, ಬೀದಿ ಬದಿಯಲ್ಲಿ ಮಲಗುವವರಿಗೆ ಊಟ, ಹೊದಿಕೆ ನೀಡುವ ಕಾಯಕದಲ್ಲಿಯೂ ತೊಡಗಿಸಿಕೊಂಡು ಅಭಿನಂದನೆಗೆ ಪಾತ್ರರಾಗಿದ್ದಾರೆ.

ಇದನ್ನೂ ಓದಿ: ಬಂಗಾಳ ಚುನಾವಣೆ ಪ್ರಚಾರ: ಮಮತಾ ಬ್ಯಾನರ್ಜಿಗೆ ಸಾಥ್ ನೀಡಲಿರುವ ಹಿರಿಯ ನಟಿ ಜಯಾ ಬಚ್ಚನ್

 

‘ಹೆಂಗ್‌ ಪುಂಗ್ಲಿ’ಯಿಂದ ಶುರುವಾದ ಇವರ ಟ್ವಿಟರ್‌ ಅಭಿಯಾನ, ಸುದ್ದಿ ಮಾಧ್ಯಮದಲ್ಲಿ ಒಂದು ಪಕ್ಷದ ಪರವಾಗಿ ಕಾರ್ಯನಿರ್ವಹಿಸುತ್ತಿದ್ದವರನ್ನು ವಿರೋಧಿಸಿ ಏಜೆಂಟ್ ಅಜಿತ್ ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡ್ ಮಾಡುವವರೆಗೂ ಹೇಗಿದೆ. ಹಿಂದಿ ಹೇರಿಕೆಯನ್ನು ವಿರೋಧಿಸಿದ ತಂಡ ರಾಜ್ಯ ಸರ್ಕಾರ ಜಾತಿ ಆಧಾರದ ಮೇಲೆ ಪ್ರಾಧಿಕಾರಗಳಿಗೆ ಅನುದಾನ ಬಿಡುಗಡೆ ಮಾಡಿದ್ದನ್ನು ಪ್ರಶ್ನಿಸಿ  #CasteMinisterBSY #ಜಾತಿಗಿಷ್ಟುಸವಲತ್ತು_ಒಡೆದುಆಳುವದೌಲತ್ತು ಎನ್ನುವ ಹ್ಯಾಷ್‌ಟ್ಯಾಗ್‌ಗಳನ್ನು ಟ್ರೆಂಡ್ ಮಾಡಿತ್ತು. ಕರ್ನಾಟಕದಲ್ಲಿ ಹೊಸ ಭೂಸುಧಾರಣೆ ಕಾಯ್ದೆ ಪುನಃ ಜಮೀನ್ದಾರಿ ಪದ್ಧತಿ ತರಲು ಹೊರಟಿದೆ ಎಂದು ವಿರೋಧಿಸಿ ರಾಜ್ಯಪಾಲರನ್ನು ಗುರಿಯಾಗಿಸಿಕೊಂಡು #GovernorDontSignKLRA2020 #ರಾಜ್ಯಪಾಲರೇಮಾತುಉಳಿಸಿಕೊಳ್ಳಿ ಹ್ಯಾಷ್‌ಟ್ಯಾಗ್ ಮೂಲಕ ಆಗ್ರಹಿಸಿದೆ.

ಸದ್ಯ ಖಾಸಗೀಕರಣವನ್ನು ವಿರೋಧಿಸಿ ಏಪ್ರೀಲ್ 2 ರಂದು ನಡೆಸಿರುವ ಟ್ವಿಟರ್‌ ಅಭಿಯಾನ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದ್ದು, ಅಂದು ಹಲವು ಗಂಟೆಗಳ ಕಾಲ #ಕಾಸಿಗಾಗಿ_ಖಾಸಗೀಕರಣ #GOI_PVT_LTD ರಾಜ್ಯದಲ್ಲಿ ಟಾಪ್ ಟ್ರೆಂಡಿಂಗ್‌ನಲ್ಲಿ ಇದ್ದ ಹ್ಯಾಶ್‌ಟ್ಯಾಗ್ ಆಗಿದೆ.

ನಾನುಗೌರಿ.ಕಾಂ ಜೊತೆ ತಮ್ಮ ತಂಡದ ಕೆಲಸಗಳ ಬಗ್ಗೆ ಮಾತನಾಡಿರುವ ರವಿ ಕಿರಣ್, “ಇಂದಿನ ಯುವ ಜನತೆ ಹೆಚ್ಚು ಸೋಶಿಯಲ್ ಮೀಡಿಯಾವನ್ನು ಬಳಸುತ್ತಿದ್ದಾರೆ. ಅದರಲ್ಲಿ ಬರುವ ಸುದ್ದಿಯನ್ನು ನಿಜ ಎಂದು ತಿಳಿಯುತ್ತಾರೆ. ಇದನ್ನೇ ತಮ್ಮ ಲಾಭಕ್ಕಾಗಿ ಬಳಸಿಕೊಳ್ಳುತ್ತಿರುವ ಚಕ್ರವರ್ತಿ ಸೂಲಿಬೆಲೆಯಂತಹ ವ್ಯಕ್ತಿಗಳು ಸುಳ್ಳುಗಳನ್ನು ತುಂಬಲು, ಧರ್ಮದ ಅಫೀಮು ತುಂಬಲು ಬಳಸುತ್ತಿದ್ದಾರೆ. ದೇಶ, ಸೈನಿಕರು ಎಂಬಂತಹ ವಿಚಾರಗಳ ಮೂಲಕ ಯುವಜನರನ್ನು ಭಾವನಾತ್ಮಕವಾಗಿ ಹಿಡಿದಿಟ್ಟು ನಂತರ ತಮ್ಮ ಆರ್‌ಎಸ್‌ಎಸ್‌ ಸಿದ್ಧಾಂತಗಳನ್ನು ತುಂಬುತ್ತಾರೆ. ಇದನ್ನು ನಂಬಿದ ಯುವಕರು ಏನ್ ಏನೋ ಮಾಡಲು ಹೊರಡುತ್ತಾರೆ. ಇದರ ವಿರುದ್ಧ ನಾವು ಸಾಮಾಜಿಕ ಜಾಲತಾಣಗಳನ್ನೇ ಬಳಸಿಕೊಂಡು ಅವರ ಮುಖವಾಡಗಳನ್ನು ಕಳಚುವ ಕೆಲಸ ಮಾಡುತ್ತೇವೆ” ಎನ್ನುತ್ತಾರೆ.

’ಹೆಂಗ್ ಪುಂಗ್‌ ಲೀ ಎಂಬುದನ್ನು ಆರಂಭಿಸುವ ಮುನ್ನ ಜನ ಅವರು ಹೇಳುವುದನ್ನೇ ನಂಬುತ್ತಿದ್ದರು. ಅವರು ಹೇಳಿದನ್ನು ಸತ್ಯ ಎನ್ನುತ್ತಿದ್ದರು. ಈಗ ನೋಡಿ ಜನ ಅವರ ಮಾತನ್ನು ಕೇಳಿ ನಗುತ್ತಾರೆ. ಅವರು ಹೇಳುವುದು ಸುಳ್ಳು ಎಂಬುದು ಜನರಿಗೆ ತಿಳಿಯಿತು. ನೂರು ಜನರನ್ನು ಬದಲಿಸುತ್ತೇವೆ ಎಂಬ ಭ್ರಮೆ ನಮಗಿಲ್ಲ. ಆದರೆ ಹತ್ತು ಜನರಾದರೂ ಬದಲಾಗಬೇಕು ಎಂಬುದು ನಮ್ಮ ಆಶಯ” ಎನ್ನುತ್ತಾರೆ ರವಿಕಿರಣ್.

ಇದನ್ನೂ ಓದಿ: ಮಹಿಳೆಯರ ಗೌರವದ ಬದುಕಿಗಾಗಿ ಜಾಗೃತಿ ಮೂಡಿಸುವ ರಾಯಚೂರಿನ ಚಿನ್ನಮ್ಮ

“ಎಷ್ಟೋ ಜನರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ಚಳವಳಿ, ಹೋರಾಟವನ್ನು ಮುನ್ನಡೆಸುತ್ತಿರುತ್ತಾರೆ. ಆದರೆ ಸಾಮಾಜಿಕ ಜಾಲತಾಣಗಳ ಮೂಲಕ ಜನರನ್ನು ತಲುಪಲು ಅವರಿಗೆ ಸಾಧ್ಯವಾಗುವುದಿಲ್ಲ. ಅಂತಹವರಿಗೆ ನಾವು ಬೆಂಬಲ ನೀಡುತ್ತೇವೆ. ರೈತ ಹೋರಾಟಗಳಲ್ಲಿ ನಾವು ತೊಡಗಿಸಿಕೊಂಡಿದ್ದೇವೆ. ರೈತ ಪ್ರತಿಭಟನೆಗೆ ಬೆಂಬಲ ನೀಡಿದ್ದೇವೆ. ಕರ್ನಾಟಕದಲ್ಲಿ ನಡೆಯುತ್ತಿರುವ ಐಕ್ಯ ಹೋರಾಟದಲ್ಲಿ ನಾವು ಭಾಗವಾಗಿದ್ದೇವೆ” ಎನ್ನುತ್ತಾರೆ.


ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...