Homeಕರ್ನಾಟಕಟ್ವಿಟರ್ ಅಭಿಯಾನದ ಮೂಲಕ ಸಾಮಾಜಿಕ ಹೋರಾಟಗಳಿಗೆ ಜೊತೆಯಾದ ಕರ್ನಾಟಕ ಕ್ರಾಂತಿಕಾರಿ ಪಡೆ!

ಟ್ವಿಟರ್ ಅಭಿಯಾನದ ಮೂಲಕ ಸಾಮಾಜಿಕ ಹೋರಾಟಗಳಿಗೆ ಜೊತೆಯಾದ ಕರ್ನಾಟಕ ಕ್ರಾಂತಿಕಾರಿ ಪಡೆ!

'ಒಟ್ಟಿನಲ್ಲಿ ಕ್ರಾಂತಿಯಾಗಬೇಕು' ಎಂಬ ಟ್ಯಾಗ್‌ಲೈನ್‌ನೊಂದಿಗೆ ಗುರುತಿಸಿಕೊಂಡಿರುವ, ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವ ಕರ್ನಾಟಕ ಕ್ರಾಂತಿಕಾರಿ ಪಡೆಯ ಕಿರುಪರಿಚಯ..

- Advertisement -
- Advertisement -

ಇವತ್ತು ‘ಹೆಂಗ್ ಪುಂಗ್‌ ಲೀ’ ಅನ್ನೋದು ಚಕ್ರವರ್ತಿ ಸೂಲಿಬೆಲೆಯವರ ಹೆಸರಿಗೆ ಸಮನಾರ್ಥಕನಾಮವಾಗಿ ಬಳಸುವಷ್ಟು ಪ್ರಸಿದ್ದವಾಗಿದೆ. ಕರ್ನಾಟಕದಲ್ಲಿ ಸುಳ್ಳು ಹೇಳುವವರಿಗೆ ಅನ್ವರ್ಥನಾಮವಾಗಿ ಈ ಪದವನ್ನು ಬಳಸಲಾಗುತ್ತಿದೆ. ಇಷ್ಟು ಸಹಜವಾಗಿ ಬಳಕೆಯಾಗುತ್ತಿರುವ ಈ ಪದದ ಸೃಷ್ಟಿಕರ್ತರು ಮತ್ತು ಮೊದಲು ಬಳಸಿದ್ದು ಕರ್ನಾಟಕ ಕ್ರಾಂತಿಕಾರಿ ಪಡೆ.

ಹೌದು, ‘ಒಟ್ಟಿನಲ್ಲಿ ಕ್ರಾಂತಿಯಾಗಬೇಕು’ ಎಂಬ ಟ್ಯಾಗ್‌ಲೈನ್‌ನೊಂದಿಗೆ ಗುರುತಿಸಿಕೊಂಡಿರುವ, ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವ ಕರ್ನಾಟಕ ಕ್ರಾಂತಿಕಾರಿ ಪಡೆ ವಿದ್ಯಾವಂತ, ಉತ್ಸಾಹಿ ಯುವಜನರ ಒಂದು ತಂಡ. ಎಂಜಿನಿಯರ್‌ಗಳು, ಡಾಕ್ಟರ್‌ಗಳು, ವಕೀಲರು ಸೇರಿದಂತೆ ಐಟಿ ವಲಯದಲ್ಲಿ ಕೆಲಸ ಮಾಡುವವರು ಈ ಪಡೆಯ ಸಕ್ರಿಯ ಕಾರ್ಯಕರ್ತರು. ಅಧಿಕೃತವಾಗಿ‌ 50 ಜನರಿರುವ ಈ ತಂಡದಲ್ಲಿ ತಮ್ಮ ಹೆಸರು ಗುರುತಿಸಿಕೊಳ್ಳಲು ಇಚ್ಛಿಸದೇ ಪಡೆಗಾಗಿ ಕೆಲಸ ಮಾಡುವವರು 2000 ಕ್ಕೂ ಹೆಚ್ಚು ಜನರಿದ್ದಾರೆ.

2014 ರ ಬಳಿಕ ದೇಶದಲ್ಲಿ ನಡೆಯುತ್ತಿರುವ ಘಟನೆಗಳು ನಮ್ಮನ್ನು ಚಿಂತೆಗೀಡುಮಾಡಿವೆ. ಸಾಮಾಜಿಕ ಜಾಲತಾಣಗಳಲ್ಲಿ ಅತಿಯಾಗಿ ತೊಡಗಿಸಿಕೊಂಡಿರುವ ಯುವ ಜನತೆಯನ್ನು ಸುಳ್ಳುಗಳು, ಕಟ್ಟುಕಥೆಗಳ ಮೂಲಕ ದಾರಿ ತಪ್ಪಿಸಲಾಗುತ್ತಿದೆ. ಹಾಗಾಗಿ ಅದೇ ಸಾಮಾಜಿಕ ಜಾಲತಾಣದ ಮೂಲಕ ಅವರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು, ಸಮಾಜಕ್ಕೆ ಏನಾದರೂ ಕೊಡಗು ನೀಡಬೇಕು ಎಂದು ಈ ತಂಡ ಕಟ್ಟಿದ್ದೇವೆ ಎನ್ನುತ್ತಾರೆ ಕರ್ನಾಟಕ ಕ್ರಾಂತಿಕಾರಿ ಪಡೆ ಸದಸ್ಯರು.

ಟ್ವಿಟ್ಟರ್‌ ಮೂಲಕ ಜನಾಭಿಪ್ರಾಯ ಮೂಡಿಸುವಲ್ಲಿ ಈ ಪಡೆ ಕಾರ್ಯನಿರತವಾಗಿದೆ. ಸಾಮಾಜಿಕ ಕಳಕಳಿಯ ವಿಷಯಗಳನ್ನು ಟ್ರೆಂಡ್ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯುವುದು, ಸಾರ್ವಜನಿಕರಿಗೆ ವಿಷಯ ಮುಟ್ಟಿಸುವುದು ಇವರ ಆದ್ಯತೆ. ಹಾಗಂತ ಅವರು ಟ್ವಿಟರ್‌ಗೆ ಮಾತ್ರ ಸೀಮಿತವಾಗದೆ ಲಾಕ್‌ಡೌನ್‌ ಸಮಯದಲ್ಲಿ ಬಡವರಿಗೆ ಆಹಾರ ಧಾನ್ಯಗಳ ವಿತರಣೆ, ಅಗತ್ಯವಿದ್ದವರಿಗೆ ತಕ್ಷಣ ರಕ್ತದಾನ ಮಾಡುವುದು, ಬೀದಿ ಬದಿಯಲ್ಲಿ ಮಲಗುವವರಿಗೆ ಊಟ, ಹೊದಿಕೆ ನೀಡುವ ಕಾಯಕದಲ್ಲಿಯೂ ತೊಡಗಿಸಿಕೊಂಡು ಅಭಿನಂದನೆಗೆ ಪಾತ್ರರಾಗಿದ್ದಾರೆ.

ಇದನ್ನೂ ಓದಿ: ಬಂಗಾಳ ಚುನಾವಣೆ ಪ್ರಚಾರ: ಮಮತಾ ಬ್ಯಾನರ್ಜಿಗೆ ಸಾಥ್ ನೀಡಲಿರುವ ಹಿರಿಯ ನಟಿ ಜಯಾ ಬಚ್ಚನ್

 

‘ಹೆಂಗ್‌ ಪುಂಗ್ಲಿ’ಯಿಂದ ಶುರುವಾದ ಇವರ ಟ್ವಿಟರ್‌ ಅಭಿಯಾನ, ಸುದ್ದಿ ಮಾಧ್ಯಮದಲ್ಲಿ ಒಂದು ಪಕ್ಷದ ಪರವಾಗಿ ಕಾರ್ಯನಿರ್ವಹಿಸುತ್ತಿದ್ದವರನ್ನು ವಿರೋಧಿಸಿ ಏಜೆಂಟ್ ಅಜಿತ್ ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡ್ ಮಾಡುವವರೆಗೂ ಹೇಗಿದೆ. ಹಿಂದಿ ಹೇರಿಕೆಯನ್ನು ವಿರೋಧಿಸಿದ ತಂಡ ರಾಜ್ಯ ಸರ್ಕಾರ ಜಾತಿ ಆಧಾರದ ಮೇಲೆ ಪ್ರಾಧಿಕಾರಗಳಿಗೆ ಅನುದಾನ ಬಿಡುಗಡೆ ಮಾಡಿದ್ದನ್ನು ಪ್ರಶ್ನಿಸಿ  #CasteMinisterBSY #ಜಾತಿಗಿಷ್ಟುಸವಲತ್ತು_ಒಡೆದುಆಳುವದೌಲತ್ತು ಎನ್ನುವ ಹ್ಯಾಷ್‌ಟ್ಯಾಗ್‌ಗಳನ್ನು ಟ್ರೆಂಡ್ ಮಾಡಿತ್ತು. ಕರ್ನಾಟಕದಲ್ಲಿ ಹೊಸ ಭೂಸುಧಾರಣೆ ಕಾಯ್ದೆ ಪುನಃ ಜಮೀನ್ದಾರಿ ಪದ್ಧತಿ ತರಲು ಹೊರಟಿದೆ ಎಂದು ವಿರೋಧಿಸಿ ರಾಜ್ಯಪಾಲರನ್ನು ಗುರಿಯಾಗಿಸಿಕೊಂಡು #GovernorDontSignKLRA2020 #ರಾಜ್ಯಪಾಲರೇಮಾತುಉಳಿಸಿಕೊಳ್ಳಿ ಹ್ಯಾಷ್‌ಟ್ಯಾಗ್ ಮೂಲಕ ಆಗ್ರಹಿಸಿದೆ.

ಸದ್ಯ ಖಾಸಗೀಕರಣವನ್ನು ವಿರೋಧಿಸಿ ಏಪ್ರೀಲ್ 2 ರಂದು ನಡೆಸಿರುವ ಟ್ವಿಟರ್‌ ಅಭಿಯಾನ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದ್ದು, ಅಂದು ಹಲವು ಗಂಟೆಗಳ ಕಾಲ #ಕಾಸಿಗಾಗಿ_ಖಾಸಗೀಕರಣ #GOI_PVT_LTD ರಾಜ್ಯದಲ್ಲಿ ಟಾಪ್ ಟ್ರೆಂಡಿಂಗ್‌ನಲ್ಲಿ ಇದ್ದ ಹ್ಯಾಶ್‌ಟ್ಯಾಗ್ ಆಗಿದೆ.

ನಾನುಗೌರಿ.ಕಾಂ ಜೊತೆ ತಮ್ಮ ತಂಡದ ಕೆಲಸಗಳ ಬಗ್ಗೆ ಮಾತನಾಡಿರುವ ರವಿ ಕಿರಣ್, “ಇಂದಿನ ಯುವ ಜನತೆ ಹೆಚ್ಚು ಸೋಶಿಯಲ್ ಮೀಡಿಯಾವನ್ನು ಬಳಸುತ್ತಿದ್ದಾರೆ. ಅದರಲ್ಲಿ ಬರುವ ಸುದ್ದಿಯನ್ನು ನಿಜ ಎಂದು ತಿಳಿಯುತ್ತಾರೆ. ಇದನ್ನೇ ತಮ್ಮ ಲಾಭಕ್ಕಾಗಿ ಬಳಸಿಕೊಳ್ಳುತ್ತಿರುವ ಚಕ್ರವರ್ತಿ ಸೂಲಿಬೆಲೆಯಂತಹ ವ್ಯಕ್ತಿಗಳು ಸುಳ್ಳುಗಳನ್ನು ತುಂಬಲು, ಧರ್ಮದ ಅಫೀಮು ತುಂಬಲು ಬಳಸುತ್ತಿದ್ದಾರೆ. ದೇಶ, ಸೈನಿಕರು ಎಂಬಂತಹ ವಿಚಾರಗಳ ಮೂಲಕ ಯುವಜನರನ್ನು ಭಾವನಾತ್ಮಕವಾಗಿ ಹಿಡಿದಿಟ್ಟು ನಂತರ ತಮ್ಮ ಆರ್‌ಎಸ್‌ಎಸ್‌ ಸಿದ್ಧಾಂತಗಳನ್ನು ತುಂಬುತ್ತಾರೆ. ಇದನ್ನು ನಂಬಿದ ಯುವಕರು ಏನ್ ಏನೋ ಮಾಡಲು ಹೊರಡುತ್ತಾರೆ. ಇದರ ವಿರುದ್ಧ ನಾವು ಸಾಮಾಜಿಕ ಜಾಲತಾಣಗಳನ್ನೇ ಬಳಸಿಕೊಂಡು ಅವರ ಮುಖವಾಡಗಳನ್ನು ಕಳಚುವ ಕೆಲಸ ಮಾಡುತ್ತೇವೆ” ಎನ್ನುತ್ತಾರೆ.

’ಹೆಂಗ್ ಪುಂಗ್‌ ಲೀ ಎಂಬುದನ್ನು ಆರಂಭಿಸುವ ಮುನ್ನ ಜನ ಅವರು ಹೇಳುವುದನ್ನೇ ನಂಬುತ್ತಿದ್ದರು. ಅವರು ಹೇಳಿದನ್ನು ಸತ್ಯ ಎನ್ನುತ್ತಿದ್ದರು. ಈಗ ನೋಡಿ ಜನ ಅವರ ಮಾತನ್ನು ಕೇಳಿ ನಗುತ್ತಾರೆ. ಅವರು ಹೇಳುವುದು ಸುಳ್ಳು ಎಂಬುದು ಜನರಿಗೆ ತಿಳಿಯಿತು. ನೂರು ಜನರನ್ನು ಬದಲಿಸುತ್ತೇವೆ ಎಂಬ ಭ್ರಮೆ ನಮಗಿಲ್ಲ. ಆದರೆ ಹತ್ತು ಜನರಾದರೂ ಬದಲಾಗಬೇಕು ಎಂಬುದು ನಮ್ಮ ಆಶಯ” ಎನ್ನುತ್ತಾರೆ ರವಿಕಿರಣ್.

ಇದನ್ನೂ ಓದಿ: ಮಹಿಳೆಯರ ಗೌರವದ ಬದುಕಿಗಾಗಿ ಜಾಗೃತಿ ಮೂಡಿಸುವ ರಾಯಚೂರಿನ ಚಿನ್ನಮ್ಮ

“ಎಷ್ಟೋ ಜನರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ಚಳವಳಿ, ಹೋರಾಟವನ್ನು ಮುನ್ನಡೆಸುತ್ತಿರುತ್ತಾರೆ. ಆದರೆ ಸಾಮಾಜಿಕ ಜಾಲತಾಣಗಳ ಮೂಲಕ ಜನರನ್ನು ತಲುಪಲು ಅವರಿಗೆ ಸಾಧ್ಯವಾಗುವುದಿಲ್ಲ. ಅಂತಹವರಿಗೆ ನಾವು ಬೆಂಬಲ ನೀಡುತ್ತೇವೆ. ರೈತ ಹೋರಾಟಗಳಲ್ಲಿ ನಾವು ತೊಡಗಿಸಿಕೊಂಡಿದ್ದೇವೆ. ರೈತ ಪ್ರತಿಭಟನೆಗೆ ಬೆಂಬಲ ನೀಡಿದ್ದೇವೆ. ಕರ್ನಾಟಕದಲ್ಲಿ ನಡೆಯುತ್ತಿರುವ ಐಕ್ಯ ಹೋರಾಟದಲ್ಲಿ ನಾವು ಭಾಗವಾಗಿದ್ದೇವೆ” ಎನ್ನುತ್ತಾರೆ.


ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...