Homeಕರ್ನಾಟಕಟ್ವಿಟರ್ ಅಭಿಯಾನದ ಮೂಲಕ ಸಾಮಾಜಿಕ ಹೋರಾಟಗಳಿಗೆ ಜೊತೆಯಾದ ಕರ್ನಾಟಕ ಕ್ರಾಂತಿಕಾರಿ ಪಡೆ!

ಟ್ವಿಟರ್ ಅಭಿಯಾನದ ಮೂಲಕ ಸಾಮಾಜಿಕ ಹೋರಾಟಗಳಿಗೆ ಜೊತೆಯಾದ ಕರ್ನಾಟಕ ಕ್ರಾಂತಿಕಾರಿ ಪಡೆ!

'ಒಟ್ಟಿನಲ್ಲಿ ಕ್ರಾಂತಿಯಾಗಬೇಕು' ಎಂಬ ಟ್ಯಾಗ್‌ಲೈನ್‌ನೊಂದಿಗೆ ಗುರುತಿಸಿಕೊಂಡಿರುವ, ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವ ಕರ್ನಾಟಕ ಕ್ರಾಂತಿಕಾರಿ ಪಡೆಯ ಕಿರುಪರಿಚಯ..

- Advertisement -
- Advertisement -

ಇವತ್ತು ‘ಹೆಂಗ್ ಪುಂಗ್‌ ಲೀ’ ಅನ್ನೋದು ಚಕ್ರವರ್ತಿ ಸೂಲಿಬೆಲೆಯವರ ಹೆಸರಿಗೆ ಸಮನಾರ್ಥಕನಾಮವಾಗಿ ಬಳಸುವಷ್ಟು ಪ್ರಸಿದ್ದವಾಗಿದೆ. ಕರ್ನಾಟಕದಲ್ಲಿ ಸುಳ್ಳು ಹೇಳುವವರಿಗೆ ಅನ್ವರ್ಥನಾಮವಾಗಿ ಈ ಪದವನ್ನು ಬಳಸಲಾಗುತ್ತಿದೆ. ಇಷ್ಟು ಸಹಜವಾಗಿ ಬಳಕೆಯಾಗುತ್ತಿರುವ ಈ ಪದದ ಸೃಷ್ಟಿಕರ್ತರು ಮತ್ತು ಮೊದಲು ಬಳಸಿದ್ದು ಕರ್ನಾಟಕ ಕ್ರಾಂತಿಕಾರಿ ಪಡೆ.

ಹೌದು, ‘ಒಟ್ಟಿನಲ್ಲಿ ಕ್ರಾಂತಿಯಾಗಬೇಕು’ ಎಂಬ ಟ್ಯಾಗ್‌ಲೈನ್‌ನೊಂದಿಗೆ ಗುರುತಿಸಿಕೊಂಡಿರುವ, ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವ ಕರ್ನಾಟಕ ಕ್ರಾಂತಿಕಾರಿ ಪಡೆ ವಿದ್ಯಾವಂತ, ಉತ್ಸಾಹಿ ಯುವಜನರ ಒಂದು ತಂಡ. ಎಂಜಿನಿಯರ್‌ಗಳು, ಡಾಕ್ಟರ್‌ಗಳು, ವಕೀಲರು ಸೇರಿದಂತೆ ಐಟಿ ವಲಯದಲ್ಲಿ ಕೆಲಸ ಮಾಡುವವರು ಈ ಪಡೆಯ ಸಕ್ರಿಯ ಕಾರ್ಯಕರ್ತರು. ಅಧಿಕೃತವಾಗಿ‌ 50 ಜನರಿರುವ ಈ ತಂಡದಲ್ಲಿ ತಮ್ಮ ಹೆಸರು ಗುರುತಿಸಿಕೊಳ್ಳಲು ಇಚ್ಛಿಸದೇ ಪಡೆಗಾಗಿ ಕೆಲಸ ಮಾಡುವವರು 2000 ಕ್ಕೂ ಹೆಚ್ಚು ಜನರಿದ್ದಾರೆ.

2014 ರ ಬಳಿಕ ದೇಶದಲ್ಲಿ ನಡೆಯುತ್ತಿರುವ ಘಟನೆಗಳು ನಮ್ಮನ್ನು ಚಿಂತೆಗೀಡುಮಾಡಿವೆ. ಸಾಮಾಜಿಕ ಜಾಲತಾಣಗಳಲ್ಲಿ ಅತಿಯಾಗಿ ತೊಡಗಿಸಿಕೊಂಡಿರುವ ಯುವ ಜನತೆಯನ್ನು ಸುಳ್ಳುಗಳು, ಕಟ್ಟುಕಥೆಗಳ ಮೂಲಕ ದಾರಿ ತಪ್ಪಿಸಲಾಗುತ್ತಿದೆ. ಹಾಗಾಗಿ ಅದೇ ಸಾಮಾಜಿಕ ಜಾಲತಾಣದ ಮೂಲಕ ಅವರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು, ಸಮಾಜಕ್ಕೆ ಏನಾದರೂ ಕೊಡಗು ನೀಡಬೇಕು ಎಂದು ಈ ತಂಡ ಕಟ್ಟಿದ್ದೇವೆ ಎನ್ನುತ್ತಾರೆ ಕರ್ನಾಟಕ ಕ್ರಾಂತಿಕಾರಿ ಪಡೆ ಸದಸ್ಯರು.

ಟ್ವಿಟ್ಟರ್‌ ಮೂಲಕ ಜನಾಭಿಪ್ರಾಯ ಮೂಡಿಸುವಲ್ಲಿ ಈ ಪಡೆ ಕಾರ್ಯನಿರತವಾಗಿದೆ. ಸಾಮಾಜಿಕ ಕಳಕಳಿಯ ವಿಷಯಗಳನ್ನು ಟ್ರೆಂಡ್ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯುವುದು, ಸಾರ್ವಜನಿಕರಿಗೆ ವಿಷಯ ಮುಟ್ಟಿಸುವುದು ಇವರ ಆದ್ಯತೆ. ಹಾಗಂತ ಅವರು ಟ್ವಿಟರ್‌ಗೆ ಮಾತ್ರ ಸೀಮಿತವಾಗದೆ ಲಾಕ್‌ಡೌನ್‌ ಸಮಯದಲ್ಲಿ ಬಡವರಿಗೆ ಆಹಾರ ಧಾನ್ಯಗಳ ವಿತರಣೆ, ಅಗತ್ಯವಿದ್ದವರಿಗೆ ತಕ್ಷಣ ರಕ್ತದಾನ ಮಾಡುವುದು, ಬೀದಿ ಬದಿಯಲ್ಲಿ ಮಲಗುವವರಿಗೆ ಊಟ, ಹೊದಿಕೆ ನೀಡುವ ಕಾಯಕದಲ್ಲಿಯೂ ತೊಡಗಿಸಿಕೊಂಡು ಅಭಿನಂದನೆಗೆ ಪಾತ್ರರಾಗಿದ್ದಾರೆ.

ಇದನ್ನೂ ಓದಿ: ಬಂಗಾಳ ಚುನಾವಣೆ ಪ್ರಚಾರ: ಮಮತಾ ಬ್ಯಾನರ್ಜಿಗೆ ಸಾಥ್ ನೀಡಲಿರುವ ಹಿರಿಯ ನಟಿ ಜಯಾ ಬಚ್ಚನ್

 

‘ಹೆಂಗ್‌ ಪುಂಗ್ಲಿ’ಯಿಂದ ಶುರುವಾದ ಇವರ ಟ್ವಿಟರ್‌ ಅಭಿಯಾನ, ಸುದ್ದಿ ಮಾಧ್ಯಮದಲ್ಲಿ ಒಂದು ಪಕ್ಷದ ಪರವಾಗಿ ಕಾರ್ಯನಿರ್ವಹಿಸುತ್ತಿದ್ದವರನ್ನು ವಿರೋಧಿಸಿ ಏಜೆಂಟ್ ಅಜಿತ್ ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡ್ ಮಾಡುವವರೆಗೂ ಹೇಗಿದೆ. ಹಿಂದಿ ಹೇರಿಕೆಯನ್ನು ವಿರೋಧಿಸಿದ ತಂಡ ರಾಜ್ಯ ಸರ್ಕಾರ ಜಾತಿ ಆಧಾರದ ಮೇಲೆ ಪ್ರಾಧಿಕಾರಗಳಿಗೆ ಅನುದಾನ ಬಿಡುಗಡೆ ಮಾಡಿದ್ದನ್ನು ಪ್ರಶ್ನಿಸಿ  #CasteMinisterBSY #ಜಾತಿಗಿಷ್ಟುಸವಲತ್ತು_ಒಡೆದುಆಳುವದೌಲತ್ತು ಎನ್ನುವ ಹ್ಯಾಷ್‌ಟ್ಯಾಗ್‌ಗಳನ್ನು ಟ್ರೆಂಡ್ ಮಾಡಿತ್ತು. ಕರ್ನಾಟಕದಲ್ಲಿ ಹೊಸ ಭೂಸುಧಾರಣೆ ಕಾಯ್ದೆ ಪುನಃ ಜಮೀನ್ದಾರಿ ಪದ್ಧತಿ ತರಲು ಹೊರಟಿದೆ ಎಂದು ವಿರೋಧಿಸಿ ರಾಜ್ಯಪಾಲರನ್ನು ಗುರಿಯಾಗಿಸಿಕೊಂಡು #GovernorDontSignKLRA2020 #ರಾಜ್ಯಪಾಲರೇಮಾತುಉಳಿಸಿಕೊಳ್ಳಿ ಹ್ಯಾಷ್‌ಟ್ಯಾಗ್ ಮೂಲಕ ಆಗ್ರಹಿಸಿದೆ.

ಸದ್ಯ ಖಾಸಗೀಕರಣವನ್ನು ವಿರೋಧಿಸಿ ಏಪ್ರೀಲ್ 2 ರಂದು ನಡೆಸಿರುವ ಟ್ವಿಟರ್‌ ಅಭಿಯಾನ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದ್ದು, ಅಂದು ಹಲವು ಗಂಟೆಗಳ ಕಾಲ #ಕಾಸಿಗಾಗಿ_ಖಾಸಗೀಕರಣ #GOI_PVT_LTD ರಾಜ್ಯದಲ್ಲಿ ಟಾಪ್ ಟ್ರೆಂಡಿಂಗ್‌ನಲ್ಲಿ ಇದ್ದ ಹ್ಯಾಶ್‌ಟ್ಯಾಗ್ ಆಗಿದೆ.

ನಾನುಗೌರಿ.ಕಾಂ ಜೊತೆ ತಮ್ಮ ತಂಡದ ಕೆಲಸಗಳ ಬಗ್ಗೆ ಮಾತನಾಡಿರುವ ರವಿ ಕಿರಣ್, “ಇಂದಿನ ಯುವ ಜನತೆ ಹೆಚ್ಚು ಸೋಶಿಯಲ್ ಮೀಡಿಯಾವನ್ನು ಬಳಸುತ್ತಿದ್ದಾರೆ. ಅದರಲ್ಲಿ ಬರುವ ಸುದ್ದಿಯನ್ನು ನಿಜ ಎಂದು ತಿಳಿಯುತ್ತಾರೆ. ಇದನ್ನೇ ತಮ್ಮ ಲಾಭಕ್ಕಾಗಿ ಬಳಸಿಕೊಳ್ಳುತ್ತಿರುವ ಚಕ್ರವರ್ತಿ ಸೂಲಿಬೆಲೆಯಂತಹ ವ್ಯಕ್ತಿಗಳು ಸುಳ್ಳುಗಳನ್ನು ತುಂಬಲು, ಧರ್ಮದ ಅಫೀಮು ತುಂಬಲು ಬಳಸುತ್ತಿದ್ದಾರೆ. ದೇಶ, ಸೈನಿಕರು ಎಂಬಂತಹ ವಿಚಾರಗಳ ಮೂಲಕ ಯುವಜನರನ್ನು ಭಾವನಾತ್ಮಕವಾಗಿ ಹಿಡಿದಿಟ್ಟು ನಂತರ ತಮ್ಮ ಆರ್‌ಎಸ್‌ಎಸ್‌ ಸಿದ್ಧಾಂತಗಳನ್ನು ತುಂಬುತ್ತಾರೆ. ಇದನ್ನು ನಂಬಿದ ಯುವಕರು ಏನ್ ಏನೋ ಮಾಡಲು ಹೊರಡುತ್ತಾರೆ. ಇದರ ವಿರುದ್ಧ ನಾವು ಸಾಮಾಜಿಕ ಜಾಲತಾಣಗಳನ್ನೇ ಬಳಸಿಕೊಂಡು ಅವರ ಮುಖವಾಡಗಳನ್ನು ಕಳಚುವ ಕೆಲಸ ಮಾಡುತ್ತೇವೆ” ಎನ್ನುತ್ತಾರೆ.

’ಹೆಂಗ್ ಪುಂಗ್‌ ಲೀ ಎಂಬುದನ್ನು ಆರಂಭಿಸುವ ಮುನ್ನ ಜನ ಅವರು ಹೇಳುವುದನ್ನೇ ನಂಬುತ್ತಿದ್ದರು. ಅವರು ಹೇಳಿದನ್ನು ಸತ್ಯ ಎನ್ನುತ್ತಿದ್ದರು. ಈಗ ನೋಡಿ ಜನ ಅವರ ಮಾತನ್ನು ಕೇಳಿ ನಗುತ್ತಾರೆ. ಅವರು ಹೇಳುವುದು ಸುಳ್ಳು ಎಂಬುದು ಜನರಿಗೆ ತಿಳಿಯಿತು. ನೂರು ಜನರನ್ನು ಬದಲಿಸುತ್ತೇವೆ ಎಂಬ ಭ್ರಮೆ ನಮಗಿಲ್ಲ. ಆದರೆ ಹತ್ತು ಜನರಾದರೂ ಬದಲಾಗಬೇಕು ಎಂಬುದು ನಮ್ಮ ಆಶಯ” ಎನ್ನುತ್ತಾರೆ ರವಿಕಿರಣ್.

ಇದನ್ನೂ ಓದಿ: ಮಹಿಳೆಯರ ಗೌರವದ ಬದುಕಿಗಾಗಿ ಜಾಗೃತಿ ಮೂಡಿಸುವ ರಾಯಚೂರಿನ ಚಿನ್ನಮ್ಮ

“ಎಷ್ಟೋ ಜನರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ಚಳವಳಿ, ಹೋರಾಟವನ್ನು ಮುನ್ನಡೆಸುತ್ತಿರುತ್ತಾರೆ. ಆದರೆ ಸಾಮಾಜಿಕ ಜಾಲತಾಣಗಳ ಮೂಲಕ ಜನರನ್ನು ತಲುಪಲು ಅವರಿಗೆ ಸಾಧ್ಯವಾಗುವುದಿಲ್ಲ. ಅಂತಹವರಿಗೆ ನಾವು ಬೆಂಬಲ ನೀಡುತ್ತೇವೆ. ರೈತ ಹೋರಾಟಗಳಲ್ಲಿ ನಾವು ತೊಡಗಿಸಿಕೊಂಡಿದ್ದೇವೆ. ರೈತ ಪ್ರತಿಭಟನೆಗೆ ಬೆಂಬಲ ನೀಡಿದ್ದೇವೆ. ಕರ್ನಾಟಕದಲ್ಲಿ ನಡೆಯುತ್ತಿರುವ ಐಕ್ಯ ಹೋರಾಟದಲ್ಲಿ ನಾವು ಭಾಗವಾಗಿದ್ದೇವೆ” ಎನ್ನುತ್ತಾರೆ.


ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...