Homeಕರ್ನಾಟಕಭೂಮಿ ಕಿತ್ತುಕೊಳ್ಳುವುದು: ಮೋದಿ ಕೂಡ ಮಾಡಲಾಗದ್ದನ್ನು ಮಾಡಿ ತೋರಿಸಿದ ಭ್ರಷ್ಟ ರಾಜ್ಯ ಸರ್ಕಾರ

ಭೂಮಿ ಕಿತ್ತುಕೊಳ್ಳುವುದು: ಮೋದಿ ಕೂಡ ಮಾಡಲಾಗದ್ದನ್ನು ಮಾಡಿ ತೋರಿಸಿದ ಭ್ರಷ್ಟ ರಾಜ್ಯ ಸರ್ಕಾರ

- Advertisement -
- Advertisement -

| ಮುತ್ತುರಾಜು |

ಅದು 2014ರ ಡಿಸೆಂಬರ್. ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರಕ್ಕೆ ಬಂದು ಕೇವಲ ಆರು ತಿಂಗಳಾಗಿತ್ತು ಅಷ್ಟೆ. ತನ್ನನ್ನು ಅನಾಯಾಸವಾಗಿ ಅಧಿಕಾರಕ್ಕೆ ತಂದ ಅದಾನಿ ಅಂಬಾನಿಗಳ ಋಣ ತೀರಿಸಲು 2013ರಲ್ಲಿ ಜನರ ಹೋರಾಟಕ್ಕೆ ಮಣಿದು ಯುಪಿಎ2 ತಂದಿದ್ದ ಭೂಸ್ವಾಧೀನ ಪರಿಹಾರ ಮತ್ತು ಪುನರ್ವಸತಿ ಕಾಯ್ದೆಗೆ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರಲು ಮೋದಿ ಮುಂದಾಗಿದ್ದರು. ಆದರೆ ಇದರ ವಿರುದ್ಧ ದೇಶಾದ್ಯಂತ ಎಲ್ಲಾ ರೈತ ಸಂಘಟನೆಗಳು, ಜನಪರ ಸಂಘಟನೆಗಳು ಧೀರೋಧಾತ್ತ ಹೋರಾಟ ನಡೆಸಿದರು. ವಿಧಿ ಇಲ್ಲದೇ ನರೇಂದ್ರ ಮೋದಿಯವರು ಸುಗ್ರಿವಾಜ್ಞೆ ವಾಪಸ್ ಪಡೆದರು. ಇದು ಮೋದಿ ಅಧಿಕಾರಕ್ಕೆ ಬಂದ ನಂತರ ಮೊದಲ ಬಾರಿಗೆ ಅವರಿಗೆ ಸೋಲಾಗಿತ್ತು. ಜೊತೆಗೆ ಅದು ರೈತರ ಮೊದಲ ಗೆಲುವಾಗಿತ್ತೂ ಕೂಡ.

ಇದು 2019ರ ಫೆಬ್ರವರಿಯಲ್ಲಿ ನಾಲ್ಕು ವರ್ಷಗಳ ನಂತರ ರೈತರ ಪಾಲಿಗೆ ಕರಾಳ ಶಾಸನವಾಗಿರುವ ದೊಡ್ಡ ಬಂಡವಾಳದಾರರು, ಬಹುರಾಷ್ಟ್ರೀಯ ಸಂಸ್ಥೆಗಳ ಲೂಟಿಗೆ ನೆರವಾಗುವ ಭೂ ಸ್ವಾಧೀನ, ಪುನರ್ವಸತಿ ಹಾಗೂ ಪುನರ್ ವ್ಯವಸ್ಥೆಯಲ್ಲಿ ನ್ಯಾಯಯುತ ಪರಿಹಾರ ಮತ್ತು ಪಾರದರ್ಶಕ ಹಕ್ಕು ಕರ್ನಾಟಕ ತಿದ್ದುಪಡಿ ಮಸೂದೆ -2019 ಯನ್ನು ಕರ್ನಾಟಕ ಸರ್ಕಾರ ಯಾವುದೇ ಚರ್ಚೆ ಇಲ್ಲದೇ ಅಂಗಿಕರಿಸಿದೆ. ಅಂದರೆ ಮೋದಿ ಮಾಡಲಾಗದ್ದನ್ನು ಮಾಡಿ ತೋರಿಸಿದೆ ಭ್ರಷ್ಟ ರಾಜ್ಯ ಸರ್ಕಾರ.

 

ಕಳೆದ ಫೆಬ್ರವರಿ 6 ರಿಂದ 13 ರವರೆಗೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಏನೊಂದು ಚರ್ಚೆ ಮಾಡದೇ, ಬಿಜೆಪಿಯ ಸರ್ಕಾರ ಬೀಳಿಸುವ ದುಷ್ಕೃತ್ಯದಿಂದುಂಟಾದ ಪರಿಸ್ಥಿತಿಯನ್ನು ವಿಧಾನಸಭೆಯಲ್ಲಿ ದುರುಪಯೋಗಪಡಿಸಿಕೊಂಡು ಸರ್ಕಾರ ಈ ಮಸೂದೆ ಅಂಗೀಕರಿಸಿದೆ. ರೈತರ ಮತ್ತು ರೈತಸಂಘಗಳ ಜೊತೆ ಕನಿಷ್ಠ ಚರ್ಚೆ ನಡೆಸುವ ಸೌಜನ್ಯವನ್ನು ಸರಕಾರ ತೋರದಿರುವುದು ದುರಾದೃಷ್ಟಕರವಾಗಿದೆ.

ಇದೊಂದು ರೈತ ವಿರೋಧಿಯಾದ ಕರಾಳ ತಿದ್ದುಪಡಿಯಾಗಿದೆ. ಇದು ರೈತರ ಜಮೀನುಗಳನ್ನು ಯಾವುದೇ ಒಪ್ಪಿಗೆಯಿಲ್ಲದೇ, ಭೂಸ್ವಾಧೀನದಿಂದ ಸಮಾಜ ಹಾಗೂ ಪರಿಸರದ ಮೇಲಾಗುವ ಪರಿಣಾಮಗಳನ್ನಾಗಲೀ ಮತ್ತು ದೇಶದ, ರಾಜ್ಯದ ಆಹಾರ ಭದ್ರತೆ ಹಾಗೂ ಆಹಾರದ ಸ್ವಾವಲಂಬನೆಯ ಮೇಲಾಗುವ ದುಷ್ಪರಿಣಾಮಗಳನ್ನಾಗಲೀ ಪರಿಗಣಿಸದೇ, ಪುನರ್ವಸತಿ ಕ್ರಮಗಳನ್ನು ದುರ್ಬಲಗೊಳಿಸುವ ಹಾಗೂ ಬೇಕಾಬಿಟ್ಟಿ ದರಕ್ಕೆ ಸ್ವಾಧೀನ ಮಾಡುವ ದುರುದ್ದೇಶವನ್ನು ಹೊಂದಿದೆ. ಇದು ಈ ಹಿಂದೆ ಕೇಂದ್ರದ ನರೇಂದ್ರ ಮೋದಿ ಸರಕಾರ ಮೂರು ಬಾರಿ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಮಾಡಲು ಯತ್ನಿಸಿದುದರ ಪಡಿಯಚ್ಚಾಗಿದೆ.

ಕಾಯ್ದೆಯಲ್ಲಿ ಈ ಮೊದಲು ಭೂಸ್ವಾಧೀನಕ್ಕೆ ಶೇ.80 ರಷ್ಟು ರೈತರ ಒಪ್ಪಿಗೆ ಪಡೆಯಬೇಕಿತ್ತು, ಕೈಗಾರಿಕಾ ಪ್ರದೇಶಾಭಿವೃದ್ಧಿ , ನಗರೀಕರಣ, ರಸ್ತೆಗೆ ಸೇರಿದಂತೆ 6 ಅಂಶಗಳಿಗೆ ಮಾತ್ರ ಭೂಸ್ವಾಧೀನಕ್ಕೆ ಅವಕಾಶ ಇತ್ತು. ಆದರೀಗ ಉದ್ಧೇಶಿತ ತಿದ್ದುಪಡಿ ಬಿಲ್‍ನಲ್ಲಿ 6 ಅಂಶಗಳನ್ನು ಸೇರಿಸಿಲ್ಲ. ಇದರಿಂದ ಕೇವಲ ಉದ್ಯಮಿಗಳು, ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶವಿರುವುದು ಸ್ಪಷ್ಟವಾಗಿದೆ. ಸಮಾಜವಾದಿ, ಬಡವರ ಪರ ಎಂದು ಹೇಳಿಕೊಳ್ಳುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಈ ಕಾಯ್ದೆ ತಿದ್ದುಪಡಿಗೆ ಸೂಚಿಸಿರುವುದು ದೊಡ್ಡ ದುರಂತವಾಗಿದೆ. ಅವರು ಸಹ ಈ ಬಂಡವಾಳಿಗರ ಕಪಿಮುಷ್ಟಿಯಲ್ಲಿಯೇ ಇದ್ದಾರೆ ಅನ್ನುವುದಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕಾಗಿಲ್ಲ.

ಇನ್ನು ರೈತರ ಪಕ್ಷ, ಮಣ್ಣಿನ ಮಕ್ಕಳು ಎಂದು ಬಡಾಯಿ ಕೊಚ್ಚಿಕೊಳ್ಳುವ ದೇವೇಗೌಡರು ಮತ್ತು ಕುಮಾರಸ್ವಾಮಿ
ಕರ್ನಾಟಕ ಜನರಿಗೆ ಮಾಡಿರುವ ದೊಡ್ಡ ದ್ರೋಹ ಇದಾಗಿದೆ. ಹಣ ಅಧಿಕಾರಕ್ಕಾಗಿ ತಾವು ಏನು ಬೇಕಾದರೂ ಮಾಡುತ್ತೇವೆ ಎಂಬುದನ್ನು ಅವರು ಈ ಮಸೂದೆ ಅಂಗೀಕಾರದ ಮೂಲಕ ತೋರಿಸಿದ್ದಾರೆ. ಇನ್ನು ಪ್ರತಿಪಕ್ಷವಾದ ಬಿಜೆಪಿ ತಮಗೂ ಕೂಡ ಇದೇ ಬೇಕಾಗಿತ್ತು ಎನ್ನುವ ಮೂಲಕ ಮಸೂದೆ ಮಂಡನೆಗೆ ಯಾವುದೇ ಪ್ರತಿರೋಧ ವ್ಯಕ್ತಪಡಿಸಿಲ್ಲ.

ಒಟ್ಟಾರೆ ಕರ್ನಾಟಕ ಈ ಮೂರು ಪಕ್ಷಗಳು ಸಹ ಆರ್ಥಿಕ ವಿಚಾರಗಳು, ರೈತರು ವರ್ಸಸ್ ಬಂಡವಾಳಶಾಹಿಗಳು ಎಂದು ಬಂದಾಗ ತಾವೆಲ್ಲರೂ ಒಂದೇ ಅಂದರೆ ಪಾರ್ಟಿ ಫಂಡ್ ಕೊಡುವ ಬಂಡವಾಳಶಾಹಿಬಳ ಪರವೇ ಹೊರತು ಜನಪರವಲ್ಲ ಎಂದು ತೋರಿಸಿವೆ. ಕರ್ನಾಟಕ ಜನತೆ ಮತ್ತು ರೈತ ಸಂಘಗಳು ಈ ಪಕ್ಷಗಳ ಅಸಲಿ ಮುಖವನ್ನು ಅರ್ಥ ಮಾಡಿಕೊಳ್ಳಬೇಕಿದೆ ಮತ್ತು ಮತ್ತೊಂದು ಮಹತ್ವದ ಹೋರಾಟಕ್ಕೆ ತಯಾರಾಗಬೇಕಿದೆ.

ಪುಟ್ಟಣ್ಣಯ್ಯ ನವರಂತಹ ರೈತ ನಾಯಕರು ಏಕೆ ವಿಧಾನಸೌಧದಲ್ಲಿರಬೇಕು ಎಂಬುದು ನಮಗೆ ಈಗ ಅರ್ಥವಾಗುತ್ತಿದೆ. ಜನಪರ ಕಾಳಜಿಯ ಕೆಲವರಾದರು ಶಾಸಕರಿದ್ದರೆ ಕರ್ನಾಟಕಕ್ಕೆ ಈ ಸ್ಥಿತಿ ಬರುತ್ತಿರುತ್ತಿಲ್ಲ. ಅವರು ಈ ರೀತಿಯ ಜನವಿರೋಧಿ ಮಸೂದೆಗಳು ಚರ್ಚೆಗೆ ಬಂದಾಗ ಕನಿಷ್ಟ ದನಿ ಎತ್ತುತ್ತಿದ್ದರು. ಒಂದು ಚರ್ಚೆಗೆ ಅವಕಾಶ ಮಾಡಿಕೊಡುತ್ತಿದ್ದರು. ಆದರೆ ಅಂತಹ ದನಿಗಳು ಶಾಸನಸಭೆಗಳಲ್ಲಿ ಇಲ್ಲದಿರುವುದರಿಂದ ಮತ್ತು ಚಳವಳಿಗಳು ಗಟ್ಟಿಯಾಗಿಲ್ಲದಿರುವುದರಿಂದ ಇಂತಹ ಅನಾಹುತಗಳು ಸಂಭವಿಸುತ್ತಿವೆ.

ಈಗಲೂ ಕಾಲ ಮೀರಿ ಹೋಗಿಲ್ಲ. 2015ರ ಆರಂಭದಲ್ಲಿ ಯಾವ ರೀತಿ ದೇಶದ ರೈತ ಸಂಘಟನೆಗಳು ಕೆಚ್ಚಿನಿಂದ ಹೋರಾಟ ಮಾಡಿ ಗೆಲುವು ಸಾಧಿಸಿದರೋ ಅಂತಹ ಮತ್ತೊಂದು ಹೋರಾಟವನ್ನು ರಾಜ್ಯದಲ್ಲಿ ಎಲ್ಲಾ ಸಂಘಟನೆಗಳು ಸೇರಿ ಕಟ್ಟಬೇಕಿದೆ. ಈಗಾಗಲೇ ಕರ್ನಾಟಕ ರಾಜ್ಯ ರೈತ ಸಂಘ, ಪ್ರಾಂತ ರೈತ ಸಂಘ ಅಲ್ಲಲ್ಲಿ ಈ ಮಸೂದೆಯ ವಿರುದ್ಧ ದನಿ ಎತ್ತಿವೆ. ನಿನ್ನೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ರಾಜ್ಯ ಹೆದ್ದಾರ್ ಬಂದ್ ಗೆ ಕರೆನೀಡಿ ರಾಜ್ಯಸರ್ಕಾರಕ್ಕೆ ಬಿಸಿಮುಟ್ಟಿಸಿದ್ದಾರೆ. ಇದು ದೊಡ್ಡ ಆಂದೋಲನವಾಗಬೇಕಿದೆ. ಆಗ ಮಾತ್ರ ಉದ್ದೇಶಿತ ದುಷ್ಟ ಮಸೂದೆಯನ್ನು ಸೋಲಿಸಲು ಸಾಧ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಳ್ಳೆಯ ಲೇಖನ, ಇಂತಹ ವಿಚಾರಗಳು ಬೆಳಕಿಗೆ ಬರದೇ ಹಾಗೇ ಮುಚ್ಚಿಹೋಗುತ್ತವೆ. ಈ ಲೇಖನಕ್ಕಾಗಿ ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...