Homeಕರ್ನಾಟಕಭೂಮಿ ಕಿತ್ತುಕೊಳ್ಳುವುದು: ಮೋದಿ ಕೂಡ ಮಾಡಲಾಗದ್ದನ್ನು ಮಾಡಿ ತೋರಿಸಿದ ಭ್ರಷ್ಟ ರಾಜ್ಯ ಸರ್ಕಾರ

ಭೂಮಿ ಕಿತ್ತುಕೊಳ್ಳುವುದು: ಮೋದಿ ಕೂಡ ಮಾಡಲಾಗದ್ದನ್ನು ಮಾಡಿ ತೋರಿಸಿದ ಭ್ರಷ್ಟ ರಾಜ್ಯ ಸರ್ಕಾರ

- Advertisement -
- Advertisement -

| ಮುತ್ತುರಾಜು |

ಅದು 2014ರ ಡಿಸೆಂಬರ್. ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರಕ್ಕೆ ಬಂದು ಕೇವಲ ಆರು ತಿಂಗಳಾಗಿತ್ತು ಅಷ್ಟೆ. ತನ್ನನ್ನು ಅನಾಯಾಸವಾಗಿ ಅಧಿಕಾರಕ್ಕೆ ತಂದ ಅದಾನಿ ಅಂಬಾನಿಗಳ ಋಣ ತೀರಿಸಲು 2013ರಲ್ಲಿ ಜನರ ಹೋರಾಟಕ್ಕೆ ಮಣಿದು ಯುಪಿಎ2 ತಂದಿದ್ದ ಭೂಸ್ವಾಧೀನ ಪರಿಹಾರ ಮತ್ತು ಪುನರ್ವಸತಿ ಕಾಯ್ದೆಗೆ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರಲು ಮೋದಿ ಮುಂದಾಗಿದ್ದರು. ಆದರೆ ಇದರ ವಿರುದ್ಧ ದೇಶಾದ್ಯಂತ ಎಲ್ಲಾ ರೈತ ಸಂಘಟನೆಗಳು, ಜನಪರ ಸಂಘಟನೆಗಳು ಧೀರೋಧಾತ್ತ ಹೋರಾಟ ನಡೆಸಿದರು. ವಿಧಿ ಇಲ್ಲದೇ ನರೇಂದ್ರ ಮೋದಿಯವರು ಸುಗ್ರಿವಾಜ್ಞೆ ವಾಪಸ್ ಪಡೆದರು. ಇದು ಮೋದಿ ಅಧಿಕಾರಕ್ಕೆ ಬಂದ ನಂತರ ಮೊದಲ ಬಾರಿಗೆ ಅವರಿಗೆ ಸೋಲಾಗಿತ್ತು. ಜೊತೆಗೆ ಅದು ರೈತರ ಮೊದಲ ಗೆಲುವಾಗಿತ್ತೂ ಕೂಡ.

ಇದು 2019ರ ಫೆಬ್ರವರಿಯಲ್ಲಿ ನಾಲ್ಕು ವರ್ಷಗಳ ನಂತರ ರೈತರ ಪಾಲಿಗೆ ಕರಾಳ ಶಾಸನವಾಗಿರುವ ದೊಡ್ಡ ಬಂಡವಾಳದಾರರು, ಬಹುರಾಷ್ಟ್ರೀಯ ಸಂಸ್ಥೆಗಳ ಲೂಟಿಗೆ ನೆರವಾಗುವ ಭೂ ಸ್ವಾಧೀನ, ಪುನರ್ವಸತಿ ಹಾಗೂ ಪುನರ್ ವ್ಯವಸ್ಥೆಯಲ್ಲಿ ನ್ಯಾಯಯುತ ಪರಿಹಾರ ಮತ್ತು ಪಾರದರ್ಶಕ ಹಕ್ಕು ಕರ್ನಾಟಕ ತಿದ್ದುಪಡಿ ಮಸೂದೆ -2019 ಯನ್ನು ಕರ್ನಾಟಕ ಸರ್ಕಾರ ಯಾವುದೇ ಚರ್ಚೆ ಇಲ್ಲದೇ ಅಂಗಿಕರಿಸಿದೆ. ಅಂದರೆ ಮೋದಿ ಮಾಡಲಾಗದ್ದನ್ನು ಮಾಡಿ ತೋರಿಸಿದೆ ಭ್ರಷ್ಟ ರಾಜ್ಯ ಸರ್ಕಾರ.

 

ಕಳೆದ ಫೆಬ್ರವರಿ 6 ರಿಂದ 13 ರವರೆಗೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಏನೊಂದು ಚರ್ಚೆ ಮಾಡದೇ, ಬಿಜೆಪಿಯ ಸರ್ಕಾರ ಬೀಳಿಸುವ ದುಷ್ಕೃತ್ಯದಿಂದುಂಟಾದ ಪರಿಸ್ಥಿತಿಯನ್ನು ವಿಧಾನಸಭೆಯಲ್ಲಿ ದುರುಪಯೋಗಪಡಿಸಿಕೊಂಡು ಸರ್ಕಾರ ಈ ಮಸೂದೆ ಅಂಗೀಕರಿಸಿದೆ. ರೈತರ ಮತ್ತು ರೈತಸಂಘಗಳ ಜೊತೆ ಕನಿಷ್ಠ ಚರ್ಚೆ ನಡೆಸುವ ಸೌಜನ್ಯವನ್ನು ಸರಕಾರ ತೋರದಿರುವುದು ದುರಾದೃಷ್ಟಕರವಾಗಿದೆ.

ಇದೊಂದು ರೈತ ವಿರೋಧಿಯಾದ ಕರಾಳ ತಿದ್ದುಪಡಿಯಾಗಿದೆ. ಇದು ರೈತರ ಜಮೀನುಗಳನ್ನು ಯಾವುದೇ ಒಪ್ಪಿಗೆಯಿಲ್ಲದೇ, ಭೂಸ್ವಾಧೀನದಿಂದ ಸಮಾಜ ಹಾಗೂ ಪರಿಸರದ ಮೇಲಾಗುವ ಪರಿಣಾಮಗಳನ್ನಾಗಲೀ ಮತ್ತು ದೇಶದ, ರಾಜ್ಯದ ಆಹಾರ ಭದ್ರತೆ ಹಾಗೂ ಆಹಾರದ ಸ್ವಾವಲಂಬನೆಯ ಮೇಲಾಗುವ ದುಷ್ಪರಿಣಾಮಗಳನ್ನಾಗಲೀ ಪರಿಗಣಿಸದೇ, ಪುನರ್ವಸತಿ ಕ್ರಮಗಳನ್ನು ದುರ್ಬಲಗೊಳಿಸುವ ಹಾಗೂ ಬೇಕಾಬಿಟ್ಟಿ ದರಕ್ಕೆ ಸ್ವಾಧೀನ ಮಾಡುವ ದುರುದ್ದೇಶವನ್ನು ಹೊಂದಿದೆ. ಇದು ಈ ಹಿಂದೆ ಕೇಂದ್ರದ ನರೇಂದ್ರ ಮೋದಿ ಸರಕಾರ ಮೂರು ಬಾರಿ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಮಾಡಲು ಯತ್ನಿಸಿದುದರ ಪಡಿಯಚ್ಚಾಗಿದೆ.

ಕಾಯ್ದೆಯಲ್ಲಿ ಈ ಮೊದಲು ಭೂಸ್ವಾಧೀನಕ್ಕೆ ಶೇ.80 ರಷ್ಟು ರೈತರ ಒಪ್ಪಿಗೆ ಪಡೆಯಬೇಕಿತ್ತು, ಕೈಗಾರಿಕಾ ಪ್ರದೇಶಾಭಿವೃದ್ಧಿ , ನಗರೀಕರಣ, ರಸ್ತೆಗೆ ಸೇರಿದಂತೆ 6 ಅಂಶಗಳಿಗೆ ಮಾತ್ರ ಭೂಸ್ವಾಧೀನಕ್ಕೆ ಅವಕಾಶ ಇತ್ತು. ಆದರೀಗ ಉದ್ಧೇಶಿತ ತಿದ್ದುಪಡಿ ಬಿಲ್‍ನಲ್ಲಿ 6 ಅಂಶಗಳನ್ನು ಸೇರಿಸಿಲ್ಲ. ಇದರಿಂದ ಕೇವಲ ಉದ್ಯಮಿಗಳು, ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶವಿರುವುದು ಸ್ಪಷ್ಟವಾಗಿದೆ. ಸಮಾಜವಾದಿ, ಬಡವರ ಪರ ಎಂದು ಹೇಳಿಕೊಳ್ಳುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಈ ಕಾಯ್ದೆ ತಿದ್ದುಪಡಿಗೆ ಸೂಚಿಸಿರುವುದು ದೊಡ್ಡ ದುರಂತವಾಗಿದೆ. ಅವರು ಸಹ ಈ ಬಂಡವಾಳಿಗರ ಕಪಿಮುಷ್ಟಿಯಲ್ಲಿಯೇ ಇದ್ದಾರೆ ಅನ್ನುವುದಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕಾಗಿಲ್ಲ.

ಇನ್ನು ರೈತರ ಪಕ್ಷ, ಮಣ್ಣಿನ ಮಕ್ಕಳು ಎಂದು ಬಡಾಯಿ ಕೊಚ್ಚಿಕೊಳ್ಳುವ ದೇವೇಗೌಡರು ಮತ್ತು ಕುಮಾರಸ್ವಾಮಿ
ಕರ್ನಾಟಕ ಜನರಿಗೆ ಮಾಡಿರುವ ದೊಡ್ಡ ದ್ರೋಹ ಇದಾಗಿದೆ. ಹಣ ಅಧಿಕಾರಕ್ಕಾಗಿ ತಾವು ಏನು ಬೇಕಾದರೂ ಮಾಡುತ್ತೇವೆ ಎಂಬುದನ್ನು ಅವರು ಈ ಮಸೂದೆ ಅಂಗೀಕಾರದ ಮೂಲಕ ತೋರಿಸಿದ್ದಾರೆ. ಇನ್ನು ಪ್ರತಿಪಕ್ಷವಾದ ಬಿಜೆಪಿ ತಮಗೂ ಕೂಡ ಇದೇ ಬೇಕಾಗಿತ್ತು ಎನ್ನುವ ಮೂಲಕ ಮಸೂದೆ ಮಂಡನೆಗೆ ಯಾವುದೇ ಪ್ರತಿರೋಧ ವ್ಯಕ್ತಪಡಿಸಿಲ್ಲ.

ಒಟ್ಟಾರೆ ಕರ್ನಾಟಕ ಈ ಮೂರು ಪಕ್ಷಗಳು ಸಹ ಆರ್ಥಿಕ ವಿಚಾರಗಳು, ರೈತರು ವರ್ಸಸ್ ಬಂಡವಾಳಶಾಹಿಗಳು ಎಂದು ಬಂದಾಗ ತಾವೆಲ್ಲರೂ ಒಂದೇ ಅಂದರೆ ಪಾರ್ಟಿ ಫಂಡ್ ಕೊಡುವ ಬಂಡವಾಳಶಾಹಿಬಳ ಪರವೇ ಹೊರತು ಜನಪರವಲ್ಲ ಎಂದು ತೋರಿಸಿವೆ. ಕರ್ನಾಟಕ ಜನತೆ ಮತ್ತು ರೈತ ಸಂಘಗಳು ಈ ಪಕ್ಷಗಳ ಅಸಲಿ ಮುಖವನ್ನು ಅರ್ಥ ಮಾಡಿಕೊಳ್ಳಬೇಕಿದೆ ಮತ್ತು ಮತ್ತೊಂದು ಮಹತ್ವದ ಹೋರಾಟಕ್ಕೆ ತಯಾರಾಗಬೇಕಿದೆ.

ಪುಟ್ಟಣ್ಣಯ್ಯ ನವರಂತಹ ರೈತ ನಾಯಕರು ಏಕೆ ವಿಧಾನಸೌಧದಲ್ಲಿರಬೇಕು ಎಂಬುದು ನಮಗೆ ಈಗ ಅರ್ಥವಾಗುತ್ತಿದೆ. ಜನಪರ ಕಾಳಜಿಯ ಕೆಲವರಾದರು ಶಾಸಕರಿದ್ದರೆ ಕರ್ನಾಟಕಕ್ಕೆ ಈ ಸ್ಥಿತಿ ಬರುತ್ತಿರುತ್ತಿಲ್ಲ. ಅವರು ಈ ರೀತಿಯ ಜನವಿರೋಧಿ ಮಸೂದೆಗಳು ಚರ್ಚೆಗೆ ಬಂದಾಗ ಕನಿಷ್ಟ ದನಿ ಎತ್ತುತ್ತಿದ್ದರು. ಒಂದು ಚರ್ಚೆಗೆ ಅವಕಾಶ ಮಾಡಿಕೊಡುತ್ತಿದ್ದರು. ಆದರೆ ಅಂತಹ ದನಿಗಳು ಶಾಸನಸಭೆಗಳಲ್ಲಿ ಇಲ್ಲದಿರುವುದರಿಂದ ಮತ್ತು ಚಳವಳಿಗಳು ಗಟ್ಟಿಯಾಗಿಲ್ಲದಿರುವುದರಿಂದ ಇಂತಹ ಅನಾಹುತಗಳು ಸಂಭವಿಸುತ್ತಿವೆ.

ಈಗಲೂ ಕಾಲ ಮೀರಿ ಹೋಗಿಲ್ಲ. 2015ರ ಆರಂಭದಲ್ಲಿ ಯಾವ ರೀತಿ ದೇಶದ ರೈತ ಸಂಘಟನೆಗಳು ಕೆಚ್ಚಿನಿಂದ ಹೋರಾಟ ಮಾಡಿ ಗೆಲುವು ಸಾಧಿಸಿದರೋ ಅಂತಹ ಮತ್ತೊಂದು ಹೋರಾಟವನ್ನು ರಾಜ್ಯದಲ್ಲಿ ಎಲ್ಲಾ ಸಂಘಟನೆಗಳು ಸೇರಿ ಕಟ್ಟಬೇಕಿದೆ. ಈಗಾಗಲೇ ಕರ್ನಾಟಕ ರಾಜ್ಯ ರೈತ ಸಂಘ, ಪ್ರಾಂತ ರೈತ ಸಂಘ ಅಲ್ಲಲ್ಲಿ ಈ ಮಸೂದೆಯ ವಿರುದ್ಧ ದನಿ ಎತ್ತಿವೆ. ನಿನ್ನೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ರಾಜ್ಯ ಹೆದ್ದಾರ್ ಬಂದ್ ಗೆ ಕರೆನೀಡಿ ರಾಜ್ಯಸರ್ಕಾರಕ್ಕೆ ಬಿಸಿಮುಟ್ಟಿಸಿದ್ದಾರೆ. ಇದು ದೊಡ್ಡ ಆಂದೋಲನವಾಗಬೇಕಿದೆ. ಆಗ ಮಾತ್ರ ಉದ್ದೇಶಿತ ದುಷ್ಟ ಮಸೂದೆಯನ್ನು ಸೋಲಿಸಲು ಸಾಧ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಳ್ಳೆಯ ಲೇಖನ, ಇಂತಹ ವಿಚಾರಗಳು ಬೆಳಕಿಗೆ ಬರದೇ ಹಾಗೇ ಮುಚ್ಚಿಹೋಗುತ್ತವೆ. ಈ ಲೇಖನಕ್ಕಾಗಿ ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...