Homeಕರ್ನಾಟಕಭೂಮಿ ಕಿತ್ತುಕೊಳ್ಳುವುದು: ಮೋದಿ ಕೂಡ ಮಾಡಲಾಗದ್ದನ್ನು ಮಾಡಿ ತೋರಿಸಿದ ಭ್ರಷ್ಟ ರಾಜ್ಯ ಸರ್ಕಾರ

ಭೂಮಿ ಕಿತ್ತುಕೊಳ್ಳುವುದು: ಮೋದಿ ಕೂಡ ಮಾಡಲಾಗದ್ದನ್ನು ಮಾಡಿ ತೋರಿಸಿದ ಭ್ರಷ್ಟ ರಾಜ್ಯ ಸರ್ಕಾರ

- Advertisement -
- Advertisement -

| ಮುತ್ತುರಾಜು |

ಅದು 2014ರ ಡಿಸೆಂಬರ್. ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರಕ್ಕೆ ಬಂದು ಕೇವಲ ಆರು ತಿಂಗಳಾಗಿತ್ತು ಅಷ್ಟೆ. ತನ್ನನ್ನು ಅನಾಯಾಸವಾಗಿ ಅಧಿಕಾರಕ್ಕೆ ತಂದ ಅದಾನಿ ಅಂಬಾನಿಗಳ ಋಣ ತೀರಿಸಲು 2013ರಲ್ಲಿ ಜನರ ಹೋರಾಟಕ್ಕೆ ಮಣಿದು ಯುಪಿಎ2 ತಂದಿದ್ದ ಭೂಸ್ವಾಧೀನ ಪರಿಹಾರ ಮತ್ತು ಪುನರ್ವಸತಿ ಕಾಯ್ದೆಗೆ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರಲು ಮೋದಿ ಮುಂದಾಗಿದ್ದರು. ಆದರೆ ಇದರ ವಿರುದ್ಧ ದೇಶಾದ್ಯಂತ ಎಲ್ಲಾ ರೈತ ಸಂಘಟನೆಗಳು, ಜನಪರ ಸಂಘಟನೆಗಳು ಧೀರೋಧಾತ್ತ ಹೋರಾಟ ನಡೆಸಿದರು. ವಿಧಿ ಇಲ್ಲದೇ ನರೇಂದ್ರ ಮೋದಿಯವರು ಸುಗ್ರಿವಾಜ್ಞೆ ವಾಪಸ್ ಪಡೆದರು. ಇದು ಮೋದಿ ಅಧಿಕಾರಕ್ಕೆ ಬಂದ ನಂತರ ಮೊದಲ ಬಾರಿಗೆ ಅವರಿಗೆ ಸೋಲಾಗಿತ್ತು. ಜೊತೆಗೆ ಅದು ರೈತರ ಮೊದಲ ಗೆಲುವಾಗಿತ್ತೂ ಕೂಡ.

ಇದು 2019ರ ಫೆಬ್ರವರಿಯಲ್ಲಿ ನಾಲ್ಕು ವರ್ಷಗಳ ನಂತರ ರೈತರ ಪಾಲಿಗೆ ಕರಾಳ ಶಾಸನವಾಗಿರುವ ದೊಡ್ಡ ಬಂಡವಾಳದಾರರು, ಬಹುರಾಷ್ಟ್ರೀಯ ಸಂಸ್ಥೆಗಳ ಲೂಟಿಗೆ ನೆರವಾಗುವ ಭೂ ಸ್ವಾಧೀನ, ಪುನರ್ವಸತಿ ಹಾಗೂ ಪುನರ್ ವ್ಯವಸ್ಥೆಯಲ್ಲಿ ನ್ಯಾಯಯುತ ಪರಿಹಾರ ಮತ್ತು ಪಾರದರ್ಶಕ ಹಕ್ಕು ಕರ್ನಾಟಕ ತಿದ್ದುಪಡಿ ಮಸೂದೆ -2019 ಯನ್ನು ಕರ್ನಾಟಕ ಸರ್ಕಾರ ಯಾವುದೇ ಚರ್ಚೆ ಇಲ್ಲದೇ ಅಂಗಿಕರಿಸಿದೆ. ಅಂದರೆ ಮೋದಿ ಮಾಡಲಾಗದ್ದನ್ನು ಮಾಡಿ ತೋರಿಸಿದೆ ಭ್ರಷ್ಟ ರಾಜ್ಯ ಸರ್ಕಾರ.

 

ಕಳೆದ ಫೆಬ್ರವರಿ 6 ರಿಂದ 13 ರವರೆಗೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಏನೊಂದು ಚರ್ಚೆ ಮಾಡದೇ, ಬಿಜೆಪಿಯ ಸರ್ಕಾರ ಬೀಳಿಸುವ ದುಷ್ಕೃತ್ಯದಿಂದುಂಟಾದ ಪರಿಸ್ಥಿತಿಯನ್ನು ವಿಧಾನಸಭೆಯಲ್ಲಿ ದುರುಪಯೋಗಪಡಿಸಿಕೊಂಡು ಸರ್ಕಾರ ಈ ಮಸೂದೆ ಅಂಗೀಕರಿಸಿದೆ. ರೈತರ ಮತ್ತು ರೈತಸಂಘಗಳ ಜೊತೆ ಕನಿಷ್ಠ ಚರ್ಚೆ ನಡೆಸುವ ಸೌಜನ್ಯವನ್ನು ಸರಕಾರ ತೋರದಿರುವುದು ದುರಾದೃಷ್ಟಕರವಾಗಿದೆ.

ಇದೊಂದು ರೈತ ವಿರೋಧಿಯಾದ ಕರಾಳ ತಿದ್ದುಪಡಿಯಾಗಿದೆ. ಇದು ರೈತರ ಜಮೀನುಗಳನ್ನು ಯಾವುದೇ ಒಪ್ಪಿಗೆಯಿಲ್ಲದೇ, ಭೂಸ್ವಾಧೀನದಿಂದ ಸಮಾಜ ಹಾಗೂ ಪರಿಸರದ ಮೇಲಾಗುವ ಪರಿಣಾಮಗಳನ್ನಾಗಲೀ ಮತ್ತು ದೇಶದ, ರಾಜ್ಯದ ಆಹಾರ ಭದ್ರತೆ ಹಾಗೂ ಆಹಾರದ ಸ್ವಾವಲಂಬನೆಯ ಮೇಲಾಗುವ ದುಷ್ಪರಿಣಾಮಗಳನ್ನಾಗಲೀ ಪರಿಗಣಿಸದೇ, ಪುನರ್ವಸತಿ ಕ್ರಮಗಳನ್ನು ದುರ್ಬಲಗೊಳಿಸುವ ಹಾಗೂ ಬೇಕಾಬಿಟ್ಟಿ ದರಕ್ಕೆ ಸ್ವಾಧೀನ ಮಾಡುವ ದುರುದ್ದೇಶವನ್ನು ಹೊಂದಿದೆ. ಇದು ಈ ಹಿಂದೆ ಕೇಂದ್ರದ ನರೇಂದ್ರ ಮೋದಿ ಸರಕಾರ ಮೂರು ಬಾರಿ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಮಾಡಲು ಯತ್ನಿಸಿದುದರ ಪಡಿಯಚ್ಚಾಗಿದೆ.

ಕಾಯ್ದೆಯಲ್ಲಿ ಈ ಮೊದಲು ಭೂಸ್ವಾಧೀನಕ್ಕೆ ಶೇ.80 ರಷ್ಟು ರೈತರ ಒಪ್ಪಿಗೆ ಪಡೆಯಬೇಕಿತ್ತು, ಕೈಗಾರಿಕಾ ಪ್ರದೇಶಾಭಿವೃದ್ಧಿ , ನಗರೀಕರಣ, ರಸ್ತೆಗೆ ಸೇರಿದಂತೆ 6 ಅಂಶಗಳಿಗೆ ಮಾತ್ರ ಭೂಸ್ವಾಧೀನಕ್ಕೆ ಅವಕಾಶ ಇತ್ತು. ಆದರೀಗ ಉದ್ಧೇಶಿತ ತಿದ್ದುಪಡಿ ಬಿಲ್‍ನಲ್ಲಿ 6 ಅಂಶಗಳನ್ನು ಸೇರಿಸಿಲ್ಲ. ಇದರಿಂದ ಕೇವಲ ಉದ್ಯಮಿಗಳು, ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶವಿರುವುದು ಸ್ಪಷ್ಟವಾಗಿದೆ. ಸಮಾಜವಾದಿ, ಬಡವರ ಪರ ಎಂದು ಹೇಳಿಕೊಳ್ಳುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಈ ಕಾಯ್ದೆ ತಿದ್ದುಪಡಿಗೆ ಸೂಚಿಸಿರುವುದು ದೊಡ್ಡ ದುರಂತವಾಗಿದೆ. ಅವರು ಸಹ ಈ ಬಂಡವಾಳಿಗರ ಕಪಿಮುಷ್ಟಿಯಲ್ಲಿಯೇ ಇದ್ದಾರೆ ಅನ್ನುವುದಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕಾಗಿಲ್ಲ.

ಇನ್ನು ರೈತರ ಪಕ್ಷ, ಮಣ್ಣಿನ ಮಕ್ಕಳು ಎಂದು ಬಡಾಯಿ ಕೊಚ್ಚಿಕೊಳ್ಳುವ ದೇವೇಗೌಡರು ಮತ್ತು ಕುಮಾರಸ್ವಾಮಿ
ಕರ್ನಾಟಕ ಜನರಿಗೆ ಮಾಡಿರುವ ದೊಡ್ಡ ದ್ರೋಹ ಇದಾಗಿದೆ. ಹಣ ಅಧಿಕಾರಕ್ಕಾಗಿ ತಾವು ಏನು ಬೇಕಾದರೂ ಮಾಡುತ್ತೇವೆ ಎಂಬುದನ್ನು ಅವರು ಈ ಮಸೂದೆ ಅಂಗೀಕಾರದ ಮೂಲಕ ತೋರಿಸಿದ್ದಾರೆ. ಇನ್ನು ಪ್ರತಿಪಕ್ಷವಾದ ಬಿಜೆಪಿ ತಮಗೂ ಕೂಡ ಇದೇ ಬೇಕಾಗಿತ್ತು ಎನ್ನುವ ಮೂಲಕ ಮಸೂದೆ ಮಂಡನೆಗೆ ಯಾವುದೇ ಪ್ರತಿರೋಧ ವ್ಯಕ್ತಪಡಿಸಿಲ್ಲ.

ಒಟ್ಟಾರೆ ಕರ್ನಾಟಕ ಈ ಮೂರು ಪಕ್ಷಗಳು ಸಹ ಆರ್ಥಿಕ ವಿಚಾರಗಳು, ರೈತರು ವರ್ಸಸ್ ಬಂಡವಾಳಶಾಹಿಗಳು ಎಂದು ಬಂದಾಗ ತಾವೆಲ್ಲರೂ ಒಂದೇ ಅಂದರೆ ಪಾರ್ಟಿ ಫಂಡ್ ಕೊಡುವ ಬಂಡವಾಳಶಾಹಿಬಳ ಪರವೇ ಹೊರತು ಜನಪರವಲ್ಲ ಎಂದು ತೋರಿಸಿವೆ. ಕರ್ನಾಟಕ ಜನತೆ ಮತ್ತು ರೈತ ಸಂಘಗಳು ಈ ಪಕ್ಷಗಳ ಅಸಲಿ ಮುಖವನ್ನು ಅರ್ಥ ಮಾಡಿಕೊಳ್ಳಬೇಕಿದೆ ಮತ್ತು ಮತ್ತೊಂದು ಮಹತ್ವದ ಹೋರಾಟಕ್ಕೆ ತಯಾರಾಗಬೇಕಿದೆ.

ಪುಟ್ಟಣ್ಣಯ್ಯ ನವರಂತಹ ರೈತ ನಾಯಕರು ಏಕೆ ವಿಧಾನಸೌಧದಲ್ಲಿರಬೇಕು ಎಂಬುದು ನಮಗೆ ಈಗ ಅರ್ಥವಾಗುತ್ತಿದೆ. ಜನಪರ ಕಾಳಜಿಯ ಕೆಲವರಾದರು ಶಾಸಕರಿದ್ದರೆ ಕರ್ನಾಟಕಕ್ಕೆ ಈ ಸ್ಥಿತಿ ಬರುತ್ತಿರುತ್ತಿಲ್ಲ. ಅವರು ಈ ರೀತಿಯ ಜನವಿರೋಧಿ ಮಸೂದೆಗಳು ಚರ್ಚೆಗೆ ಬಂದಾಗ ಕನಿಷ್ಟ ದನಿ ಎತ್ತುತ್ತಿದ್ದರು. ಒಂದು ಚರ್ಚೆಗೆ ಅವಕಾಶ ಮಾಡಿಕೊಡುತ್ತಿದ್ದರು. ಆದರೆ ಅಂತಹ ದನಿಗಳು ಶಾಸನಸಭೆಗಳಲ್ಲಿ ಇಲ್ಲದಿರುವುದರಿಂದ ಮತ್ತು ಚಳವಳಿಗಳು ಗಟ್ಟಿಯಾಗಿಲ್ಲದಿರುವುದರಿಂದ ಇಂತಹ ಅನಾಹುತಗಳು ಸಂಭವಿಸುತ್ತಿವೆ.

ಈಗಲೂ ಕಾಲ ಮೀರಿ ಹೋಗಿಲ್ಲ. 2015ರ ಆರಂಭದಲ್ಲಿ ಯಾವ ರೀತಿ ದೇಶದ ರೈತ ಸಂಘಟನೆಗಳು ಕೆಚ್ಚಿನಿಂದ ಹೋರಾಟ ಮಾಡಿ ಗೆಲುವು ಸಾಧಿಸಿದರೋ ಅಂತಹ ಮತ್ತೊಂದು ಹೋರಾಟವನ್ನು ರಾಜ್ಯದಲ್ಲಿ ಎಲ್ಲಾ ಸಂಘಟನೆಗಳು ಸೇರಿ ಕಟ್ಟಬೇಕಿದೆ. ಈಗಾಗಲೇ ಕರ್ನಾಟಕ ರಾಜ್ಯ ರೈತ ಸಂಘ, ಪ್ರಾಂತ ರೈತ ಸಂಘ ಅಲ್ಲಲ್ಲಿ ಈ ಮಸೂದೆಯ ವಿರುದ್ಧ ದನಿ ಎತ್ತಿವೆ. ನಿನ್ನೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ರಾಜ್ಯ ಹೆದ್ದಾರ್ ಬಂದ್ ಗೆ ಕರೆನೀಡಿ ರಾಜ್ಯಸರ್ಕಾರಕ್ಕೆ ಬಿಸಿಮುಟ್ಟಿಸಿದ್ದಾರೆ. ಇದು ದೊಡ್ಡ ಆಂದೋಲನವಾಗಬೇಕಿದೆ. ಆಗ ಮಾತ್ರ ಉದ್ದೇಶಿತ ದುಷ್ಟ ಮಸೂದೆಯನ್ನು ಸೋಲಿಸಲು ಸಾಧ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಳ್ಳೆಯ ಲೇಖನ, ಇಂತಹ ವಿಚಾರಗಳು ಬೆಳಕಿಗೆ ಬರದೇ ಹಾಗೇ ಮುಚ್ಚಿಹೋಗುತ್ತವೆ. ಈ ಲೇಖನಕ್ಕಾಗಿ ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...