Homeಕರ್ನಾಟಕಭೂಮಿ ಕಿತ್ತುಕೊಳ್ಳುವುದು: ಮೋದಿ ಕೂಡ ಮಾಡಲಾಗದ್ದನ್ನು ಮಾಡಿ ತೋರಿಸಿದ ಭ್ರಷ್ಟ ರಾಜ್ಯ ಸರ್ಕಾರ

ಭೂಮಿ ಕಿತ್ತುಕೊಳ್ಳುವುದು: ಮೋದಿ ಕೂಡ ಮಾಡಲಾಗದ್ದನ್ನು ಮಾಡಿ ತೋರಿಸಿದ ಭ್ರಷ್ಟ ರಾಜ್ಯ ಸರ್ಕಾರ

- Advertisement -
- Advertisement -

| ಮುತ್ತುರಾಜು |

ಅದು 2014ರ ಡಿಸೆಂಬರ್. ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರಕ್ಕೆ ಬಂದು ಕೇವಲ ಆರು ತಿಂಗಳಾಗಿತ್ತು ಅಷ್ಟೆ. ತನ್ನನ್ನು ಅನಾಯಾಸವಾಗಿ ಅಧಿಕಾರಕ್ಕೆ ತಂದ ಅದಾನಿ ಅಂಬಾನಿಗಳ ಋಣ ತೀರಿಸಲು 2013ರಲ್ಲಿ ಜನರ ಹೋರಾಟಕ್ಕೆ ಮಣಿದು ಯುಪಿಎ2 ತಂದಿದ್ದ ಭೂಸ್ವಾಧೀನ ಪರಿಹಾರ ಮತ್ತು ಪುನರ್ವಸತಿ ಕಾಯ್ದೆಗೆ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರಲು ಮೋದಿ ಮುಂದಾಗಿದ್ದರು. ಆದರೆ ಇದರ ವಿರುದ್ಧ ದೇಶಾದ್ಯಂತ ಎಲ್ಲಾ ರೈತ ಸಂಘಟನೆಗಳು, ಜನಪರ ಸಂಘಟನೆಗಳು ಧೀರೋಧಾತ್ತ ಹೋರಾಟ ನಡೆಸಿದರು. ವಿಧಿ ಇಲ್ಲದೇ ನರೇಂದ್ರ ಮೋದಿಯವರು ಸುಗ್ರಿವಾಜ್ಞೆ ವಾಪಸ್ ಪಡೆದರು. ಇದು ಮೋದಿ ಅಧಿಕಾರಕ್ಕೆ ಬಂದ ನಂತರ ಮೊದಲ ಬಾರಿಗೆ ಅವರಿಗೆ ಸೋಲಾಗಿತ್ತು. ಜೊತೆಗೆ ಅದು ರೈತರ ಮೊದಲ ಗೆಲುವಾಗಿತ್ತೂ ಕೂಡ.

ಇದು 2019ರ ಫೆಬ್ರವರಿಯಲ್ಲಿ ನಾಲ್ಕು ವರ್ಷಗಳ ನಂತರ ರೈತರ ಪಾಲಿಗೆ ಕರಾಳ ಶಾಸನವಾಗಿರುವ ದೊಡ್ಡ ಬಂಡವಾಳದಾರರು, ಬಹುರಾಷ್ಟ್ರೀಯ ಸಂಸ್ಥೆಗಳ ಲೂಟಿಗೆ ನೆರವಾಗುವ ಭೂ ಸ್ವಾಧೀನ, ಪುನರ್ವಸತಿ ಹಾಗೂ ಪುನರ್ ವ್ಯವಸ್ಥೆಯಲ್ಲಿ ನ್ಯಾಯಯುತ ಪರಿಹಾರ ಮತ್ತು ಪಾರದರ್ಶಕ ಹಕ್ಕು ಕರ್ನಾಟಕ ತಿದ್ದುಪಡಿ ಮಸೂದೆ -2019 ಯನ್ನು ಕರ್ನಾಟಕ ಸರ್ಕಾರ ಯಾವುದೇ ಚರ್ಚೆ ಇಲ್ಲದೇ ಅಂಗಿಕರಿಸಿದೆ. ಅಂದರೆ ಮೋದಿ ಮಾಡಲಾಗದ್ದನ್ನು ಮಾಡಿ ತೋರಿಸಿದೆ ಭ್ರಷ್ಟ ರಾಜ್ಯ ಸರ್ಕಾರ.

 

ಕಳೆದ ಫೆಬ್ರವರಿ 6 ರಿಂದ 13 ರವರೆಗೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಏನೊಂದು ಚರ್ಚೆ ಮಾಡದೇ, ಬಿಜೆಪಿಯ ಸರ್ಕಾರ ಬೀಳಿಸುವ ದುಷ್ಕೃತ್ಯದಿಂದುಂಟಾದ ಪರಿಸ್ಥಿತಿಯನ್ನು ವಿಧಾನಸಭೆಯಲ್ಲಿ ದುರುಪಯೋಗಪಡಿಸಿಕೊಂಡು ಸರ್ಕಾರ ಈ ಮಸೂದೆ ಅಂಗೀಕರಿಸಿದೆ. ರೈತರ ಮತ್ತು ರೈತಸಂಘಗಳ ಜೊತೆ ಕನಿಷ್ಠ ಚರ್ಚೆ ನಡೆಸುವ ಸೌಜನ್ಯವನ್ನು ಸರಕಾರ ತೋರದಿರುವುದು ದುರಾದೃಷ್ಟಕರವಾಗಿದೆ.

ಇದೊಂದು ರೈತ ವಿರೋಧಿಯಾದ ಕರಾಳ ತಿದ್ದುಪಡಿಯಾಗಿದೆ. ಇದು ರೈತರ ಜಮೀನುಗಳನ್ನು ಯಾವುದೇ ಒಪ್ಪಿಗೆಯಿಲ್ಲದೇ, ಭೂಸ್ವಾಧೀನದಿಂದ ಸಮಾಜ ಹಾಗೂ ಪರಿಸರದ ಮೇಲಾಗುವ ಪರಿಣಾಮಗಳನ್ನಾಗಲೀ ಮತ್ತು ದೇಶದ, ರಾಜ್ಯದ ಆಹಾರ ಭದ್ರತೆ ಹಾಗೂ ಆಹಾರದ ಸ್ವಾವಲಂಬನೆಯ ಮೇಲಾಗುವ ದುಷ್ಪರಿಣಾಮಗಳನ್ನಾಗಲೀ ಪರಿಗಣಿಸದೇ, ಪುನರ್ವಸತಿ ಕ್ರಮಗಳನ್ನು ದುರ್ಬಲಗೊಳಿಸುವ ಹಾಗೂ ಬೇಕಾಬಿಟ್ಟಿ ದರಕ್ಕೆ ಸ್ವಾಧೀನ ಮಾಡುವ ದುರುದ್ದೇಶವನ್ನು ಹೊಂದಿದೆ. ಇದು ಈ ಹಿಂದೆ ಕೇಂದ್ರದ ನರೇಂದ್ರ ಮೋದಿ ಸರಕಾರ ಮೂರು ಬಾರಿ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಮಾಡಲು ಯತ್ನಿಸಿದುದರ ಪಡಿಯಚ್ಚಾಗಿದೆ.

ಕಾಯ್ದೆಯಲ್ಲಿ ಈ ಮೊದಲು ಭೂಸ್ವಾಧೀನಕ್ಕೆ ಶೇ.80 ರಷ್ಟು ರೈತರ ಒಪ್ಪಿಗೆ ಪಡೆಯಬೇಕಿತ್ತು, ಕೈಗಾರಿಕಾ ಪ್ರದೇಶಾಭಿವೃದ್ಧಿ , ನಗರೀಕರಣ, ರಸ್ತೆಗೆ ಸೇರಿದಂತೆ 6 ಅಂಶಗಳಿಗೆ ಮಾತ್ರ ಭೂಸ್ವಾಧೀನಕ್ಕೆ ಅವಕಾಶ ಇತ್ತು. ಆದರೀಗ ಉದ್ಧೇಶಿತ ತಿದ್ದುಪಡಿ ಬಿಲ್‍ನಲ್ಲಿ 6 ಅಂಶಗಳನ್ನು ಸೇರಿಸಿಲ್ಲ. ಇದರಿಂದ ಕೇವಲ ಉದ್ಯಮಿಗಳು, ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶವಿರುವುದು ಸ್ಪಷ್ಟವಾಗಿದೆ. ಸಮಾಜವಾದಿ, ಬಡವರ ಪರ ಎಂದು ಹೇಳಿಕೊಳ್ಳುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಈ ಕಾಯ್ದೆ ತಿದ್ದುಪಡಿಗೆ ಸೂಚಿಸಿರುವುದು ದೊಡ್ಡ ದುರಂತವಾಗಿದೆ. ಅವರು ಸಹ ಈ ಬಂಡವಾಳಿಗರ ಕಪಿಮುಷ್ಟಿಯಲ್ಲಿಯೇ ಇದ್ದಾರೆ ಅನ್ನುವುದಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕಾಗಿಲ್ಲ.

ಇನ್ನು ರೈತರ ಪಕ್ಷ, ಮಣ್ಣಿನ ಮಕ್ಕಳು ಎಂದು ಬಡಾಯಿ ಕೊಚ್ಚಿಕೊಳ್ಳುವ ದೇವೇಗೌಡರು ಮತ್ತು ಕುಮಾರಸ್ವಾಮಿ
ಕರ್ನಾಟಕ ಜನರಿಗೆ ಮಾಡಿರುವ ದೊಡ್ಡ ದ್ರೋಹ ಇದಾಗಿದೆ. ಹಣ ಅಧಿಕಾರಕ್ಕಾಗಿ ತಾವು ಏನು ಬೇಕಾದರೂ ಮಾಡುತ್ತೇವೆ ಎಂಬುದನ್ನು ಅವರು ಈ ಮಸೂದೆ ಅಂಗೀಕಾರದ ಮೂಲಕ ತೋರಿಸಿದ್ದಾರೆ. ಇನ್ನು ಪ್ರತಿಪಕ್ಷವಾದ ಬಿಜೆಪಿ ತಮಗೂ ಕೂಡ ಇದೇ ಬೇಕಾಗಿತ್ತು ಎನ್ನುವ ಮೂಲಕ ಮಸೂದೆ ಮಂಡನೆಗೆ ಯಾವುದೇ ಪ್ರತಿರೋಧ ವ್ಯಕ್ತಪಡಿಸಿಲ್ಲ.

ಒಟ್ಟಾರೆ ಕರ್ನಾಟಕ ಈ ಮೂರು ಪಕ್ಷಗಳು ಸಹ ಆರ್ಥಿಕ ವಿಚಾರಗಳು, ರೈತರು ವರ್ಸಸ್ ಬಂಡವಾಳಶಾಹಿಗಳು ಎಂದು ಬಂದಾಗ ತಾವೆಲ್ಲರೂ ಒಂದೇ ಅಂದರೆ ಪಾರ್ಟಿ ಫಂಡ್ ಕೊಡುವ ಬಂಡವಾಳಶಾಹಿಬಳ ಪರವೇ ಹೊರತು ಜನಪರವಲ್ಲ ಎಂದು ತೋರಿಸಿವೆ. ಕರ್ನಾಟಕ ಜನತೆ ಮತ್ತು ರೈತ ಸಂಘಗಳು ಈ ಪಕ್ಷಗಳ ಅಸಲಿ ಮುಖವನ್ನು ಅರ್ಥ ಮಾಡಿಕೊಳ್ಳಬೇಕಿದೆ ಮತ್ತು ಮತ್ತೊಂದು ಮಹತ್ವದ ಹೋರಾಟಕ್ಕೆ ತಯಾರಾಗಬೇಕಿದೆ.

ಪುಟ್ಟಣ್ಣಯ್ಯ ನವರಂತಹ ರೈತ ನಾಯಕರು ಏಕೆ ವಿಧಾನಸೌಧದಲ್ಲಿರಬೇಕು ಎಂಬುದು ನಮಗೆ ಈಗ ಅರ್ಥವಾಗುತ್ತಿದೆ. ಜನಪರ ಕಾಳಜಿಯ ಕೆಲವರಾದರು ಶಾಸಕರಿದ್ದರೆ ಕರ್ನಾಟಕಕ್ಕೆ ಈ ಸ್ಥಿತಿ ಬರುತ್ತಿರುತ್ತಿಲ್ಲ. ಅವರು ಈ ರೀತಿಯ ಜನವಿರೋಧಿ ಮಸೂದೆಗಳು ಚರ್ಚೆಗೆ ಬಂದಾಗ ಕನಿಷ್ಟ ದನಿ ಎತ್ತುತ್ತಿದ್ದರು. ಒಂದು ಚರ್ಚೆಗೆ ಅವಕಾಶ ಮಾಡಿಕೊಡುತ್ತಿದ್ದರು. ಆದರೆ ಅಂತಹ ದನಿಗಳು ಶಾಸನಸಭೆಗಳಲ್ಲಿ ಇಲ್ಲದಿರುವುದರಿಂದ ಮತ್ತು ಚಳವಳಿಗಳು ಗಟ್ಟಿಯಾಗಿಲ್ಲದಿರುವುದರಿಂದ ಇಂತಹ ಅನಾಹುತಗಳು ಸಂಭವಿಸುತ್ತಿವೆ.

ಈಗಲೂ ಕಾಲ ಮೀರಿ ಹೋಗಿಲ್ಲ. 2015ರ ಆರಂಭದಲ್ಲಿ ಯಾವ ರೀತಿ ದೇಶದ ರೈತ ಸಂಘಟನೆಗಳು ಕೆಚ್ಚಿನಿಂದ ಹೋರಾಟ ಮಾಡಿ ಗೆಲುವು ಸಾಧಿಸಿದರೋ ಅಂತಹ ಮತ್ತೊಂದು ಹೋರಾಟವನ್ನು ರಾಜ್ಯದಲ್ಲಿ ಎಲ್ಲಾ ಸಂಘಟನೆಗಳು ಸೇರಿ ಕಟ್ಟಬೇಕಿದೆ. ಈಗಾಗಲೇ ಕರ್ನಾಟಕ ರಾಜ್ಯ ರೈತ ಸಂಘ, ಪ್ರಾಂತ ರೈತ ಸಂಘ ಅಲ್ಲಲ್ಲಿ ಈ ಮಸೂದೆಯ ವಿರುದ್ಧ ದನಿ ಎತ್ತಿವೆ. ನಿನ್ನೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ರಾಜ್ಯ ಹೆದ್ದಾರ್ ಬಂದ್ ಗೆ ಕರೆನೀಡಿ ರಾಜ್ಯಸರ್ಕಾರಕ್ಕೆ ಬಿಸಿಮುಟ್ಟಿಸಿದ್ದಾರೆ. ಇದು ದೊಡ್ಡ ಆಂದೋಲನವಾಗಬೇಕಿದೆ. ಆಗ ಮಾತ್ರ ಉದ್ದೇಶಿತ ದುಷ್ಟ ಮಸೂದೆಯನ್ನು ಸೋಲಿಸಲು ಸಾಧ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಳ್ಳೆಯ ಲೇಖನ, ಇಂತಹ ವಿಚಾರಗಳು ಬೆಳಕಿಗೆ ಬರದೇ ಹಾಗೇ ಮುಚ್ಚಿಹೋಗುತ್ತವೆ. ಈ ಲೇಖನಕ್ಕಾಗಿ ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...