Homeಕರ್ನಾಟಕಭೂಮಿ ಕಿತ್ತುಕೊಳ್ಳುವುದು: ಮೋದಿ ಕೂಡ ಮಾಡಲಾಗದ್ದನ್ನು ಮಾಡಿ ತೋರಿಸಿದ ಭ್ರಷ್ಟ ರಾಜ್ಯ ಸರ್ಕಾರ

ಭೂಮಿ ಕಿತ್ತುಕೊಳ್ಳುವುದು: ಮೋದಿ ಕೂಡ ಮಾಡಲಾಗದ್ದನ್ನು ಮಾಡಿ ತೋರಿಸಿದ ಭ್ರಷ್ಟ ರಾಜ್ಯ ಸರ್ಕಾರ

- Advertisement -
- Advertisement -

| ಮುತ್ತುರಾಜು |

ಅದು 2014ರ ಡಿಸೆಂಬರ್. ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರಕ್ಕೆ ಬಂದು ಕೇವಲ ಆರು ತಿಂಗಳಾಗಿತ್ತು ಅಷ್ಟೆ. ತನ್ನನ್ನು ಅನಾಯಾಸವಾಗಿ ಅಧಿಕಾರಕ್ಕೆ ತಂದ ಅದಾನಿ ಅಂಬಾನಿಗಳ ಋಣ ತೀರಿಸಲು 2013ರಲ್ಲಿ ಜನರ ಹೋರಾಟಕ್ಕೆ ಮಣಿದು ಯುಪಿಎ2 ತಂದಿದ್ದ ಭೂಸ್ವಾಧೀನ ಪರಿಹಾರ ಮತ್ತು ಪುನರ್ವಸತಿ ಕಾಯ್ದೆಗೆ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರಲು ಮೋದಿ ಮುಂದಾಗಿದ್ದರು. ಆದರೆ ಇದರ ವಿರುದ್ಧ ದೇಶಾದ್ಯಂತ ಎಲ್ಲಾ ರೈತ ಸಂಘಟನೆಗಳು, ಜನಪರ ಸಂಘಟನೆಗಳು ಧೀರೋಧಾತ್ತ ಹೋರಾಟ ನಡೆಸಿದರು. ವಿಧಿ ಇಲ್ಲದೇ ನರೇಂದ್ರ ಮೋದಿಯವರು ಸುಗ್ರಿವಾಜ್ಞೆ ವಾಪಸ್ ಪಡೆದರು. ಇದು ಮೋದಿ ಅಧಿಕಾರಕ್ಕೆ ಬಂದ ನಂತರ ಮೊದಲ ಬಾರಿಗೆ ಅವರಿಗೆ ಸೋಲಾಗಿತ್ತು. ಜೊತೆಗೆ ಅದು ರೈತರ ಮೊದಲ ಗೆಲುವಾಗಿತ್ತೂ ಕೂಡ.

ಇದು 2019ರ ಫೆಬ್ರವರಿಯಲ್ಲಿ ನಾಲ್ಕು ವರ್ಷಗಳ ನಂತರ ರೈತರ ಪಾಲಿಗೆ ಕರಾಳ ಶಾಸನವಾಗಿರುವ ದೊಡ್ಡ ಬಂಡವಾಳದಾರರು, ಬಹುರಾಷ್ಟ್ರೀಯ ಸಂಸ್ಥೆಗಳ ಲೂಟಿಗೆ ನೆರವಾಗುವ ಭೂ ಸ್ವಾಧೀನ, ಪುನರ್ವಸತಿ ಹಾಗೂ ಪುನರ್ ವ್ಯವಸ್ಥೆಯಲ್ಲಿ ನ್ಯಾಯಯುತ ಪರಿಹಾರ ಮತ್ತು ಪಾರದರ್ಶಕ ಹಕ್ಕು ಕರ್ನಾಟಕ ತಿದ್ದುಪಡಿ ಮಸೂದೆ -2019 ಯನ್ನು ಕರ್ನಾಟಕ ಸರ್ಕಾರ ಯಾವುದೇ ಚರ್ಚೆ ಇಲ್ಲದೇ ಅಂಗಿಕರಿಸಿದೆ. ಅಂದರೆ ಮೋದಿ ಮಾಡಲಾಗದ್ದನ್ನು ಮಾಡಿ ತೋರಿಸಿದೆ ಭ್ರಷ್ಟ ರಾಜ್ಯ ಸರ್ಕಾರ.

 

ಕಳೆದ ಫೆಬ್ರವರಿ 6 ರಿಂದ 13 ರವರೆಗೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಏನೊಂದು ಚರ್ಚೆ ಮಾಡದೇ, ಬಿಜೆಪಿಯ ಸರ್ಕಾರ ಬೀಳಿಸುವ ದುಷ್ಕೃತ್ಯದಿಂದುಂಟಾದ ಪರಿಸ್ಥಿತಿಯನ್ನು ವಿಧಾನಸಭೆಯಲ್ಲಿ ದುರುಪಯೋಗಪಡಿಸಿಕೊಂಡು ಸರ್ಕಾರ ಈ ಮಸೂದೆ ಅಂಗೀಕರಿಸಿದೆ. ರೈತರ ಮತ್ತು ರೈತಸಂಘಗಳ ಜೊತೆ ಕನಿಷ್ಠ ಚರ್ಚೆ ನಡೆಸುವ ಸೌಜನ್ಯವನ್ನು ಸರಕಾರ ತೋರದಿರುವುದು ದುರಾದೃಷ್ಟಕರವಾಗಿದೆ.

ಇದೊಂದು ರೈತ ವಿರೋಧಿಯಾದ ಕರಾಳ ತಿದ್ದುಪಡಿಯಾಗಿದೆ. ಇದು ರೈತರ ಜಮೀನುಗಳನ್ನು ಯಾವುದೇ ಒಪ್ಪಿಗೆಯಿಲ್ಲದೇ, ಭೂಸ್ವಾಧೀನದಿಂದ ಸಮಾಜ ಹಾಗೂ ಪರಿಸರದ ಮೇಲಾಗುವ ಪರಿಣಾಮಗಳನ್ನಾಗಲೀ ಮತ್ತು ದೇಶದ, ರಾಜ್ಯದ ಆಹಾರ ಭದ್ರತೆ ಹಾಗೂ ಆಹಾರದ ಸ್ವಾವಲಂಬನೆಯ ಮೇಲಾಗುವ ದುಷ್ಪರಿಣಾಮಗಳನ್ನಾಗಲೀ ಪರಿಗಣಿಸದೇ, ಪುನರ್ವಸತಿ ಕ್ರಮಗಳನ್ನು ದುರ್ಬಲಗೊಳಿಸುವ ಹಾಗೂ ಬೇಕಾಬಿಟ್ಟಿ ದರಕ್ಕೆ ಸ್ವಾಧೀನ ಮಾಡುವ ದುರುದ್ದೇಶವನ್ನು ಹೊಂದಿದೆ. ಇದು ಈ ಹಿಂದೆ ಕೇಂದ್ರದ ನರೇಂದ್ರ ಮೋದಿ ಸರಕಾರ ಮೂರು ಬಾರಿ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಮಾಡಲು ಯತ್ನಿಸಿದುದರ ಪಡಿಯಚ್ಚಾಗಿದೆ.

ಕಾಯ್ದೆಯಲ್ಲಿ ಈ ಮೊದಲು ಭೂಸ್ವಾಧೀನಕ್ಕೆ ಶೇ.80 ರಷ್ಟು ರೈತರ ಒಪ್ಪಿಗೆ ಪಡೆಯಬೇಕಿತ್ತು, ಕೈಗಾರಿಕಾ ಪ್ರದೇಶಾಭಿವೃದ್ಧಿ , ನಗರೀಕರಣ, ರಸ್ತೆಗೆ ಸೇರಿದಂತೆ 6 ಅಂಶಗಳಿಗೆ ಮಾತ್ರ ಭೂಸ್ವಾಧೀನಕ್ಕೆ ಅವಕಾಶ ಇತ್ತು. ಆದರೀಗ ಉದ್ಧೇಶಿತ ತಿದ್ದುಪಡಿ ಬಿಲ್‍ನಲ್ಲಿ 6 ಅಂಶಗಳನ್ನು ಸೇರಿಸಿಲ್ಲ. ಇದರಿಂದ ಕೇವಲ ಉದ್ಯಮಿಗಳು, ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶವಿರುವುದು ಸ್ಪಷ್ಟವಾಗಿದೆ. ಸಮಾಜವಾದಿ, ಬಡವರ ಪರ ಎಂದು ಹೇಳಿಕೊಳ್ಳುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಈ ಕಾಯ್ದೆ ತಿದ್ದುಪಡಿಗೆ ಸೂಚಿಸಿರುವುದು ದೊಡ್ಡ ದುರಂತವಾಗಿದೆ. ಅವರು ಸಹ ಈ ಬಂಡವಾಳಿಗರ ಕಪಿಮುಷ್ಟಿಯಲ್ಲಿಯೇ ಇದ್ದಾರೆ ಅನ್ನುವುದಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕಾಗಿಲ್ಲ.

ಇನ್ನು ರೈತರ ಪಕ್ಷ, ಮಣ್ಣಿನ ಮಕ್ಕಳು ಎಂದು ಬಡಾಯಿ ಕೊಚ್ಚಿಕೊಳ್ಳುವ ದೇವೇಗೌಡರು ಮತ್ತು ಕುಮಾರಸ್ವಾಮಿ
ಕರ್ನಾಟಕ ಜನರಿಗೆ ಮಾಡಿರುವ ದೊಡ್ಡ ದ್ರೋಹ ಇದಾಗಿದೆ. ಹಣ ಅಧಿಕಾರಕ್ಕಾಗಿ ತಾವು ಏನು ಬೇಕಾದರೂ ಮಾಡುತ್ತೇವೆ ಎಂಬುದನ್ನು ಅವರು ಈ ಮಸೂದೆ ಅಂಗೀಕಾರದ ಮೂಲಕ ತೋರಿಸಿದ್ದಾರೆ. ಇನ್ನು ಪ್ರತಿಪಕ್ಷವಾದ ಬಿಜೆಪಿ ತಮಗೂ ಕೂಡ ಇದೇ ಬೇಕಾಗಿತ್ತು ಎನ್ನುವ ಮೂಲಕ ಮಸೂದೆ ಮಂಡನೆಗೆ ಯಾವುದೇ ಪ್ರತಿರೋಧ ವ್ಯಕ್ತಪಡಿಸಿಲ್ಲ.

ಒಟ್ಟಾರೆ ಕರ್ನಾಟಕ ಈ ಮೂರು ಪಕ್ಷಗಳು ಸಹ ಆರ್ಥಿಕ ವಿಚಾರಗಳು, ರೈತರು ವರ್ಸಸ್ ಬಂಡವಾಳಶಾಹಿಗಳು ಎಂದು ಬಂದಾಗ ತಾವೆಲ್ಲರೂ ಒಂದೇ ಅಂದರೆ ಪಾರ್ಟಿ ಫಂಡ್ ಕೊಡುವ ಬಂಡವಾಳಶಾಹಿಬಳ ಪರವೇ ಹೊರತು ಜನಪರವಲ್ಲ ಎಂದು ತೋರಿಸಿವೆ. ಕರ್ನಾಟಕ ಜನತೆ ಮತ್ತು ರೈತ ಸಂಘಗಳು ಈ ಪಕ್ಷಗಳ ಅಸಲಿ ಮುಖವನ್ನು ಅರ್ಥ ಮಾಡಿಕೊಳ್ಳಬೇಕಿದೆ ಮತ್ತು ಮತ್ತೊಂದು ಮಹತ್ವದ ಹೋರಾಟಕ್ಕೆ ತಯಾರಾಗಬೇಕಿದೆ.

ಪುಟ್ಟಣ್ಣಯ್ಯ ನವರಂತಹ ರೈತ ನಾಯಕರು ಏಕೆ ವಿಧಾನಸೌಧದಲ್ಲಿರಬೇಕು ಎಂಬುದು ನಮಗೆ ಈಗ ಅರ್ಥವಾಗುತ್ತಿದೆ. ಜನಪರ ಕಾಳಜಿಯ ಕೆಲವರಾದರು ಶಾಸಕರಿದ್ದರೆ ಕರ್ನಾಟಕಕ್ಕೆ ಈ ಸ್ಥಿತಿ ಬರುತ್ತಿರುತ್ತಿಲ್ಲ. ಅವರು ಈ ರೀತಿಯ ಜನವಿರೋಧಿ ಮಸೂದೆಗಳು ಚರ್ಚೆಗೆ ಬಂದಾಗ ಕನಿಷ್ಟ ದನಿ ಎತ್ತುತ್ತಿದ್ದರು. ಒಂದು ಚರ್ಚೆಗೆ ಅವಕಾಶ ಮಾಡಿಕೊಡುತ್ತಿದ್ದರು. ಆದರೆ ಅಂತಹ ದನಿಗಳು ಶಾಸನಸಭೆಗಳಲ್ಲಿ ಇಲ್ಲದಿರುವುದರಿಂದ ಮತ್ತು ಚಳವಳಿಗಳು ಗಟ್ಟಿಯಾಗಿಲ್ಲದಿರುವುದರಿಂದ ಇಂತಹ ಅನಾಹುತಗಳು ಸಂಭವಿಸುತ್ತಿವೆ.

ಈಗಲೂ ಕಾಲ ಮೀರಿ ಹೋಗಿಲ್ಲ. 2015ರ ಆರಂಭದಲ್ಲಿ ಯಾವ ರೀತಿ ದೇಶದ ರೈತ ಸಂಘಟನೆಗಳು ಕೆಚ್ಚಿನಿಂದ ಹೋರಾಟ ಮಾಡಿ ಗೆಲುವು ಸಾಧಿಸಿದರೋ ಅಂತಹ ಮತ್ತೊಂದು ಹೋರಾಟವನ್ನು ರಾಜ್ಯದಲ್ಲಿ ಎಲ್ಲಾ ಸಂಘಟನೆಗಳು ಸೇರಿ ಕಟ್ಟಬೇಕಿದೆ. ಈಗಾಗಲೇ ಕರ್ನಾಟಕ ರಾಜ್ಯ ರೈತ ಸಂಘ, ಪ್ರಾಂತ ರೈತ ಸಂಘ ಅಲ್ಲಲ್ಲಿ ಈ ಮಸೂದೆಯ ವಿರುದ್ಧ ದನಿ ಎತ್ತಿವೆ. ನಿನ್ನೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ರಾಜ್ಯ ಹೆದ್ದಾರ್ ಬಂದ್ ಗೆ ಕರೆನೀಡಿ ರಾಜ್ಯಸರ್ಕಾರಕ್ಕೆ ಬಿಸಿಮುಟ್ಟಿಸಿದ್ದಾರೆ. ಇದು ದೊಡ್ಡ ಆಂದೋಲನವಾಗಬೇಕಿದೆ. ಆಗ ಮಾತ್ರ ಉದ್ದೇಶಿತ ದುಷ್ಟ ಮಸೂದೆಯನ್ನು ಸೋಲಿಸಲು ಸಾಧ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಳ್ಳೆಯ ಲೇಖನ, ಇಂತಹ ವಿಚಾರಗಳು ಬೆಳಕಿಗೆ ಬರದೇ ಹಾಗೇ ಮುಚ್ಚಿಹೋಗುತ್ತವೆ. ಈ ಲೇಖನಕ್ಕಾಗಿ ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...