Homeಕರ್ನಾಟಕಭೂಮಿ ಕಿತ್ತುಕೊಳ್ಳುವುದು: ಮೋದಿ ಕೂಡ ಮಾಡಲಾಗದ್ದನ್ನು ಮಾಡಿ ತೋರಿಸಿದ ಭ್ರಷ್ಟ ರಾಜ್ಯ ಸರ್ಕಾರ

ಭೂಮಿ ಕಿತ್ತುಕೊಳ್ಳುವುದು: ಮೋದಿ ಕೂಡ ಮಾಡಲಾಗದ್ದನ್ನು ಮಾಡಿ ತೋರಿಸಿದ ಭ್ರಷ್ಟ ರಾಜ್ಯ ಸರ್ಕಾರ

- Advertisement -
- Advertisement -

| ಮುತ್ತುರಾಜು |

ಅದು 2014ರ ಡಿಸೆಂಬರ್. ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರಕ್ಕೆ ಬಂದು ಕೇವಲ ಆರು ತಿಂಗಳಾಗಿತ್ತು ಅಷ್ಟೆ. ತನ್ನನ್ನು ಅನಾಯಾಸವಾಗಿ ಅಧಿಕಾರಕ್ಕೆ ತಂದ ಅದಾನಿ ಅಂಬಾನಿಗಳ ಋಣ ತೀರಿಸಲು 2013ರಲ್ಲಿ ಜನರ ಹೋರಾಟಕ್ಕೆ ಮಣಿದು ಯುಪಿಎ2 ತಂದಿದ್ದ ಭೂಸ್ವಾಧೀನ ಪರಿಹಾರ ಮತ್ತು ಪುನರ್ವಸತಿ ಕಾಯ್ದೆಗೆ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರಲು ಮೋದಿ ಮುಂದಾಗಿದ್ದರು. ಆದರೆ ಇದರ ವಿರುದ್ಧ ದೇಶಾದ್ಯಂತ ಎಲ್ಲಾ ರೈತ ಸಂಘಟನೆಗಳು, ಜನಪರ ಸಂಘಟನೆಗಳು ಧೀರೋಧಾತ್ತ ಹೋರಾಟ ನಡೆಸಿದರು. ವಿಧಿ ಇಲ್ಲದೇ ನರೇಂದ್ರ ಮೋದಿಯವರು ಸುಗ್ರಿವಾಜ್ಞೆ ವಾಪಸ್ ಪಡೆದರು. ಇದು ಮೋದಿ ಅಧಿಕಾರಕ್ಕೆ ಬಂದ ನಂತರ ಮೊದಲ ಬಾರಿಗೆ ಅವರಿಗೆ ಸೋಲಾಗಿತ್ತು. ಜೊತೆಗೆ ಅದು ರೈತರ ಮೊದಲ ಗೆಲುವಾಗಿತ್ತೂ ಕೂಡ.

ಇದು 2019ರ ಫೆಬ್ರವರಿಯಲ್ಲಿ ನಾಲ್ಕು ವರ್ಷಗಳ ನಂತರ ರೈತರ ಪಾಲಿಗೆ ಕರಾಳ ಶಾಸನವಾಗಿರುವ ದೊಡ್ಡ ಬಂಡವಾಳದಾರರು, ಬಹುರಾಷ್ಟ್ರೀಯ ಸಂಸ್ಥೆಗಳ ಲೂಟಿಗೆ ನೆರವಾಗುವ ಭೂ ಸ್ವಾಧೀನ, ಪುನರ್ವಸತಿ ಹಾಗೂ ಪುನರ್ ವ್ಯವಸ್ಥೆಯಲ್ಲಿ ನ್ಯಾಯಯುತ ಪರಿಹಾರ ಮತ್ತು ಪಾರದರ್ಶಕ ಹಕ್ಕು ಕರ್ನಾಟಕ ತಿದ್ದುಪಡಿ ಮಸೂದೆ -2019 ಯನ್ನು ಕರ್ನಾಟಕ ಸರ್ಕಾರ ಯಾವುದೇ ಚರ್ಚೆ ಇಲ್ಲದೇ ಅಂಗಿಕರಿಸಿದೆ. ಅಂದರೆ ಮೋದಿ ಮಾಡಲಾಗದ್ದನ್ನು ಮಾಡಿ ತೋರಿಸಿದೆ ಭ್ರಷ್ಟ ರಾಜ್ಯ ಸರ್ಕಾರ.

 

ಕಳೆದ ಫೆಬ್ರವರಿ 6 ರಿಂದ 13 ರವರೆಗೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಏನೊಂದು ಚರ್ಚೆ ಮಾಡದೇ, ಬಿಜೆಪಿಯ ಸರ್ಕಾರ ಬೀಳಿಸುವ ದುಷ್ಕೃತ್ಯದಿಂದುಂಟಾದ ಪರಿಸ್ಥಿತಿಯನ್ನು ವಿಧಾನಸಭೆಯಲ್ಲಿ ದುರುಪಯೋಗಪಡಿಸಿಕೊಂಡು ಸರ್ಕಾರ ಈ ಮಸೂದೆ ಅಂಗೀಕರಿಸಿದೆ. ರೈತರ ಮತ್ತು ರೈತಸಂಘಗಳ ಜೊತೆ ಕನಿಷ್ಠ ಚರ್ಚೆ ನಡೆಸುವ ಸೌಜನ್ಯವನ್ನು ಸರಕಾರ ತೋರದಿರುವುದು ದುರಾದೃಷ್ಟಕರವಾಗಿದೆ.

ಇದೊಂದು ರೈತ ವಿರೋಧಿಯಾದ ಕರಾಳ ತಿದ್ದುಪಡಿಯಾಗಿದೆ. ಇದು ರೈತರ ಜಮೀನುಗಳನ್ನು ಯಾವುದೇ ಒಪ್ಪಿಗೆಯಿಲ್ಲದೇ, ಭೂಸ್ವಾಧೀನದಿಂದ ಸಮಾಜ ಹಾಗೂ ಪರಿಸರದ ಮೇಲಾಗುವ ಪರಿಣಾಮಗಳನ್ನಾಗಲೀ ಮತ್ತು ದೇಶದ, ರಾಜ್ಯದ ಆಹಾರ ಭದ್ರತೆ ಹಾಗೂ ಆಹಾರದ ಸ್ವಾವಲಂಬನೆಯ ಮೇಲಾಗುವ ದುಷ್ಪರಿಣಾಮಗಳನ್ನಾಗಲೀ ಪರಿಗಣಿಸದೇ, ಪುನರ್ವಸತಿ ಕ್ರಮಗಳನ್ನು ದುರ್ಬಲಗೊಳಿಸುವ ಹಾಗೂ ಬೇಕಾಬಿಟ್ಟಿ ದರಕ್ಕೆ ಸ್ವಾಧೀನ ಮಾಡುವ ದುರುದ್ದೇಶವನ್ನು ಹೊಂದಿದೆ. ಇದು ಈ ಹಿಂದೆ ಕೇಂದ್ರದ ನರೇಂದ್ರ ಮೋದಿ ಸರಕಾರ ಮೂರು ಬಾರಿ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಮಾಡಲು ಯತ್ನಿಸಿದುದರ ಪಡಿಯಚ್ಚಾಗಿದೆ.

ಕಾಯ್ದೆಯಲ್ಲಿ ಈ ಮೊದಲು ಭೂಸ್ವಾಧೀನಕ್ಕೆ ಶೇ.80 ರಷ್ಟು ರೈತರ ಒಪ್ಪಿಗೆ ಪಡೆಯಬೇಕಿತ್ತು, ಕೈಗಾರಿಕಾ ಪ್ರದೇಶಾಭಿವೃದ್ಧಿ , ನಗರೀಕರಣ, ರಸ್ತೆಗೆ ಸೇರಿದಂತೆ 6 ಅಂಶಗಳಿಗೆ ಮಾತ್ರ ಭೂಸ್ವಾಧೀನಕ್ಕೆ ಅವಕಾಶ ಇತ್ತು. ಆದರೀಗ ಉದ್ಧೇಶಿತ ತಿದ್ದುಪಡಿ ಬಿಲ್‍ನಲ್ಲಿ 6 ಅಂಶಗಳನ್ನು ಸೇರಿಸಿಲ್ಲ. ಇದರಿಂದ ಕೇವಲ ಉದ್ಯಮಿಗಳು, ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶವಿರುವುದು ಸ್ಪಷ್ಟವಾಗಿದೆ. ಸಮಾಜವಾದಿ, ಬಡವರ ಪರ ಎಂದು ಹೇಳಿಕೊಳ್ಳುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಈ ಕಾಯ್ದೆ ತಿದ್ದುಪಡಿಗೆ ಸೂಚಿಸಿರುವುದು ದೊಡ್ಡ ದುರಂತವಾಗಿದೆ. ಅವರು ಸಹ ಈ ಬಂಡವಾಳಿಗರ ಕಪಿಮುಷ್ಟಿಯಲ್ಲಿಯೇ ಇದ್ದಾರೆ ಅನ್ನುವುದಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕಾಗಿಲ್ಲ.

ಇನ್ನು ರೈತರ ಪಕ್ಷ, ಮಣ್ಣಿನ ಮಕ್ಕಳು ಎಂದು ಬಡಾಯಿ ಕೊಚ್ಚಿಕೊಳ್ಳುವ ದೇವೇಗೌಡರು ಮತ್ತು ಕುಮಾರಸ್ವಾಮಿ
ಕರ್ನಾಟಕ ಜನರಿಗೆ ಮಾಡಿರುವ ದೊಡ್ಡ ದ್ರೋಹ ಇದಾಗಿದೆ. ಹಣ ಅಧಿಕಾರಕ್ಕಾಗಿ ತಾವು ಏನು ಬೇಕಾದರೂ ಮಾಡುತ್ತೇವೆ ಎಂಬುದನ್ನು ಅವರು ಈ ಮಸೂದೆ ಅಂಗೀಕಾರದ ಮೂಲಕ ತೋರಿಸಿದ್ದಾರೆ. ಇನ್ನು ಪ್ರತಿಪಕ್ಷವಾದ ಬಿಜೆಪಿ ತಮಗೂ ಕೂಡ ಇದೇ ಬೇಕಾಗಿತ್ತು ಎನ್ನುವ ಮೂಲಕ ಮಸೂದೆ ಮಂಡನೆಗೆ ಯಾವುದೇ ಪ್ರತಿರೋಧ ವ್ಯಕ್ತಪಡಿಸಿಲ್ಲ.

ಒಟ್ಟಾರೆ ಕರ್ನಾಟಕ ಈ ಮೂರು ಪಕ್ಷಗಳು ಸಹ ಆರ್ಥಿಕ ವಿಚಾರಗಳು, ರೈತರು ವರ್ಸಸ್ ಬಂಡವಾಳಶಾಹಿಗಳು ಎಂದು ಬಂದಾಗ ತಾವೆಲ್ಲರೂ ಒಂದೇ ಅಂದರೆ ಪಾರ್ಟಿ ಫಂಡ್ ಕೊಡುವ ಬಂಡವಾಳಶಾಹಿಬಳ ಪರವೇ ಹೊರತು ಜನಪರವಲ್ಲ ಎಂದು ತೋರಿಸಿವೆ. ಕರ್ನಾಟಕ ಜನತೆ ಮತ್ತು ರೈತ ಸಂಘಗಳು ಈ ಪಕ್ಷಗಳ ಅಸಲಿ ಮುಖವನ್ನು ಅರ್ಥ ಮಾಡಿಕೊಳ್ಳಬೇಕಿದೆ ಮತ್ತು ಮತ್ತೊಂದು ಮಹತ್ವದ ಹೋರಾಟಕ್ಕೆ ತಯಾರಾಗಬೇಕಿದೆ.

ಪುಟ್ಟಣ್ಣಯ್ಯ ನವರಂತಹ ರೈತ ನಾಯಕರು ಏಕೆ ವಿಧಾನಸೌಧದಲ್ಲಿರಬೇಕು ಎಂಬುದು ನಮಗೆ ಈಗ ಅರ್ಥವಾಗುತ್ತಿದೆ. ಜನಪರ ಕಾಳಜಿಯ ಕೆಲವರಾದರು ಶಾಸಕರಿದ್ದರೆ ಕರ್ನಾಟಕಕ್ಕೆ ಈ ಸ್ಥಿತಿ ಬರುತ್ತಿರುತ್ತಿಲ್ಲ. ಅವರು ಈ ರೀತಿಯ ಜನವಿರೋಧಿ ಮಸೂದೆಗಳು ಚರ್ಚೆಗೆ ಬಂದಾಗ ಕನಿಷ್ಟ ದನಿ ಎತ್ತುತ್ತಿದ್ದರು. ಒಂದು ಚರ್ಚೆಗೆ ಅವಕಾಶ ಮಾಡಿಕೊಡುತ್ತಿದ್ದರು. ಆದರೆ ಅಂತಹ ದನಿಗಳು ಶಾಸನಸಭೆಗಳಲ್ಲಿ ಇಲ್ಲದಿರುವುದರಿಂದ ಮತ್ತು ಚಳವಳಿಗಳು ಗಟ್ಟಿಯಾಗಿಲ್ಲದಿರುವುದರಿಂದ ಇಂತಹ ಅನಾಹುತಗಳು ಸಂಭವಿಸುತ್ತಿವೆ.

ಈಗಲೂ ಕಾಲ ಮೀರಿ ಹೋಗಿಲ್ಲ. 2015ರ ಆರಂಭದಲ್ಲಿ ಯಾವ ರೀತಿ ದೇಶದ ರೈತ ಸಂಘಟನೆಗಳು ಕೆಚ್ಚಿನಿಂದ ಹೋರಾಟ ಮಾಡಿ ಗೆಲುವು ಸಾಧಿಸಿದರೋ ಅಂತಹ ಮತ್ತೊಂದು ಹೋರಾಟವನ್ನು ರಾಜ್ಯದಲ್ಲಿ ಎಲ್ಲಾ ಸಂಘಟನೆಗಳು ಸೇರಿ ಕಟ್ಟಬೇಕಿದೆ. ಈಗಾಗಲೇ ಕರ್ನಾಟಕ ರಾಜ್ಯ ರೈತ ಸಂಘ, ಪ್ರಾಂತ ರೈತ ಸಂಘ ಅಲ್ಲಲ್ಲಿ ಈ ಮಸೂದೆಯ ವಿರುದ್ಧ ದನಿ ಎತ್ತಿವೆ. ನಿನ್ನೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ರಾಜ್ಯ ಹೆದ್ದಾರ್ ಬಂದ್ ಗೆ ಕರೆನೀಡಿ ರಾಜ್ಯಸರ್ಕಾರಕ್ಕೆ ಬಿಸಿಮುಟ್ಟಿಸಿದ್ದಾರೆ. ಇದು ದೊಡ್ಡ ಆಂದೋಲನವಾಗಬೇಕಿದೆ. ಆಗ ಮಾತ್ರ ಉದ್ದೇಶಿತ ದುಷ್ಟ ಮಸೂದೆಯನ್ನು ಸೋಲಿಸಲು ಸಾಧ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಳ್ಳೆಯ ಲೇಖನ, ಇಂತಹ ವಿಚಾರಗಳು ಬೆಳಕಿಗೆ ಬರದೇ ಹಾಗೇ ಮುಚ್ಚಿಹೋಗುತ್ತವೆ. ಈ ಲೇಖನಕ್ಕಾಗಿ ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...