Homeಕರೋನಾ ತಲ್ಲಣKarnataka Lockdown | ಜೂನ್‌ 14 ರ ವರೆಗೆ ಲಾಕ್‌ಡೌನ್‌ ವಿಸ್ತರಿಸಿದ ರಾಜ್ಯ ಸರ್ಕಾರ

Karnataka Lockdown | ಜೂನ್‌ 14 ರ ವರೆಗೆ ಲಾಕ್‌ಡೌನ್‌ ವಿಸ್ತರಿಸಿದ ರಾಜ್ಯ ಸರ್ಕಾರ

- Advertisement -
- Advertisement -

ರಾಜ್ಯದಲ್ಲಿ ಜೂನ್ 7 ರ ವರೆಗೆ ಜಾರಿಯಲ್ಲಿರುವ ಲಾಕ್‌ಡೌನ್‌ ಅನ್ನು ಜೂನ್‌ 14 ರ ವರೆಗೆ ವಿಸ್ತರಿಸುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಮುಖ್ಯಮಂತ್ರಿ ಬಿಎಸ್​ ಯಡಿಯೂಪ್ಪ ಈ ಬಗ್ಗೆ ಗುರುವಾರ ಸಂಜೆ 5 ಗಂಟೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ನಿನ್ನೆ ನಡೆದ ಸಚಿವರ ಸಭೆಯಲ್ಲಿ ಲಾಕ್​ಡೌನ್​ ವಿಸ್ತರಣೆ ಕುರಿತಾಗಿ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಇಂದು ಸಂಜೆ ಸಿಎಂ ಬಿಎಸ್​ವೈ ಈ ಬಗ್ಗೆ ಅಧಿಕೃತವಾಗಿ ಆದೇಶ ಹೊರಡಿಸಿದ್ದು, ಕೊರೊನಾ ಲಾಕ್‌ಡೌನ್‌ ಪರಿಹಾರವಾಗಿ 500 ಕೋಟಿ ರೂ. ಗಳನ್ನು ಬಿಡುಗಡೆ ಮಾಡುವುದಾಗಿ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕು ಇನ್ನೂ ಸಂಪೂರ್ಣ ನಿಯಂತ್ರಣಕ್ಕೆ ಬಾರದ ಕಾರಣ, ಮುಖ್ಯಮಂತ್ರಿ ಲಾಕ್‌ಡೌನ್​ ಮುಂದುವರಿಸಿದ್ದಾರೆ.

ಚಲನಚಿತ್ರ ಕಲಾವಿದರಿಗೆ 3000 ರೂಪಾಯಿ, ಮೀನುಗಾರರಿಗೆ 3000, ಮುಜುರಾಯಿ ದೇವಸ್ಥಾನ ಅರ್ಚಕರು, ಅಡುಗೆಯವರು ಸಿ ಗ್ರೂಪ್ ನೌಕರರಿಗೆ 3000 ರೂಪಾಯಿ, ಮಗ್ಗಗಳ ಕಾರ್ಮಿಕರಿಗೆ 3000, ಮಸೀದಿ ಮುಹದ್ಝಿನ್‌ಗಳಿಗೆ 3000, ಆಶಾ ಕಾರ್ಯಕರ್ತರು 3000, ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕರಿಗೆ 2000, ಅನುದಾನರಹಿತ ಶಾಲಾ ಶಿಕ್ಷಕರಿಗೆ 5000 ಪರಿಹಾರ ನೀಡುವುದಾಗಿ ಅವರು ಹೇಳಿದ್ದಾರೆ.

ಅತಿಸಣ್ಣ-ಸಣ್ಣ-ಮಧ್ಯಮ ಕೈಗಾರಿಕೆಗಳ ವಿದ್ಯುತ್ ಶುಲ್ಕದಲ್ಲಿ ವಿನಾಯ್ತಿ, ಇತರ ಕೈಗಾರಿಕೆಗಳಿಗೆ ಮೇ,ಜೂನ್ ಶುಲ್ಕ ವಿನಾಯ್ತಿ ಹಾಗೂ ರಫ್ತು ಓರಿಯಂಟ್ ಕೈಗಾರಿಕೆ ಅನುಮತಿ ನೀಡಲಾಗಿದೆ. ಹೊಟೇಲ್‌ಗಳಲ್ಲಿ ಸಂಜೆ 6 ಗಂಟೆಯವರೆ ತೆರೆಯಲು ಅವಕಾಶ ಆದರೆ ಪಾರ್ಸೆಗ್‌ ಮಾತ್ರ ಅವಕಾಶ ನೀಡಲಾಗಿದೆ. ಜೂನ್​ 14ರ ವರೆಗೆ ವಿಸ್ತರಿಸಲಾಗುವ ಲಾಕ್​ಡೌನ್​ ಕೂಡ ಇದೇ ರೀತಿಯಾಗಿಯೆ ಇರಲಿದ್ದು, ಯಾವುದೇ ಸಡಿಲಿಕೆ ಇರುವುದಿಲ್ಲ.

ಮೇ ತಿಂಗಳ 10 ರಿಂದ 24 ರವರೆಗೆ ಮೊಲದ ಹಂತದಲ್ಲಿ ಸಂಪೂರ್ಣ ಲಾಕ್‌ಡೌನ್‌ ಅನ್ನು ರಾಜ್ಯ ಸರ್ಕಾರವು ಹೇರಿತ್ತು. ಆದರೆ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಈ ಲಾಕ್‌ಡೌನ್‌ ಅನ್ನು ಮತ್ತೇ ಜೂನ್ 7 ರವರೆಗೆ ವಿಸ್ತರಿಸಲಾಗಿತ್ತು. ಇದೀಗ ಈ ಲಾಕ್‌ಡೌನ್‌ ಅನ್ನು ಮತ್ತೆ ವಿಸ್ತರಿಸಲಾಗಿದೆ.

ಮೇ 10 ರಂದು ಲಾಕ್‌ಡೌ‌ನ್ ಪ್ರಾರಂಭವಾಗುವುದಕ್ಕಿಂತ ಮೊದಲೆ ರಾಜ್ಯ ಸರ್ಕಾರವು ಕಠಿಣ ನಿರ್ಬಂಧ ಹೇರಿ ಅಘೋಷಿತ ಲಾಕ್‌ಡೌನ್‌ ಹೇರಿತ್ತು.

ರಾಜ್ಯದಲ್ಲಿ ಜಾರಿಯಲ್ಲಿರುವ ನಿರ್ಬಂಧವನ್ನು ಜೂನ್‌‌ 7 ನಂತರವೂ ವಿಸ್ತರಿಸುವ ಬಗ್ಗೆ ಜೂನ್‌‌ 5 ರಂದು ತಜ್ಞರ ಜೊತೆಗೆ ಚರ್ಚಿಸಿ ತೀರ್ಮಾನಿಸಲಾವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಳೆದ ಭಾನುವಾರ ಹೇಳಿದ್ದರು. ಆದರೆ ಇದೀಗ ಎರಡು ದಿನದ ಮೊದಲೆ ನಿರ್ಬಂಧ ಘೋಷಿಸಲಾಗಿದೆ.

ಭಾನುವಾರ ಮಾತನಾಡಿದ್ದ ಯಡಿಯೂರಪ್ಪ, “ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹೆಚ್ಚಿನ ಸೋಂಕು ಪ್ರಕರಣಗಳು ವರದಿಯಾಗುತ್ತಿದೆ. ಆದರೆ, ತಜ್ಞರು ಲಾಕ್‌ಡೌನ್‌ ವಿಸ್ತರಿಸುವಂತೆ ವರದಿ ನೀಡಿಲ್ಲ. ಜೂನ್ 5 ರ ವೇಳೆಗೆ ಕೊರೊನಾ ಪರಿಸ್ಥಿತಿ ನೋಡಿಕೊಂಡು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಕೇಂದ್ರ ಸರ್ಕಾರವು ಈಗಾಗಲೆ ರಾಜ್ಯಗಳ ಸ್ಥಿತಿಗತಿಗೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳುವಂತೆ ಸೂಚಿಸಿದೆ” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...