Homeಕರೋನಾ ತಲ್ಲಣKarnataka Lockdown | ಜೂನ್‌ 14 ರ ವರೆಗೆ ಲಾಕ್‌ಡೌನ್‌ ವಿಸ್ತರಿಸಿದ ರಾಜ್ಯ ಸರ್ಕಾರ

Karnataka Lockdown | ಜೂನ್‌ 14 ರ ವರೆಗೆ ಲಾಕ್‌ಡೌನ್‌ ವಿಸ್ತರಿಸಿದ ರಾಜ್ಯ ಸರ್ಕಾರ

- Advertisement -
- Advertisement -

ರಾಜ್ಯದಲ್ಲಿ ಜೂನ್ 7 ರ ವರೆಗೆ ಜಾರಿಯಲ್ಲಿರುವ ಲಾಕ್‌ಡೌನ್‌ ಅನ್ನು ಜೂನ್‌ 14 ರ ವರೆಗೆ ವಿಸ್ತರಿಸುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಮುಖ್ಯಮಂತ್ರಿ ಬಿಎಸ್​ ಯಡಿಯೂಪ್ಪ ಈ ಬಗ್ಗೆ ಗುರುವಾರ ಸಂಜೆ 5 ಗಂಟೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ನಿನ್ನೆ ನಡೆದ ಸಚಿವರ ಸಭೆಯಲ್ಲಿ ಲಾಕ್​ಡೌನ್​ ವಿಸ್ತರಣೆ ಕುರಿತಾಗಿ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಇಂದು ಸಂಜೆ ಸಿಎಂ ಬಿಎಸ್​ವೈ ಈ ಬಗ್ಗೆ ಅಧಿಕೃತವಾಗಿ ಆದೇಶ ಹೊರಡಿಸಿದ್ದು, ಕೊರೊನಾ ಲಾಕ್‌ಡೌನ್‌ ಪರಿಹಾರವಾಗಿ 500 ಕೋಟಿ ರೂ. ಗಳನ್ನು ಬಿಡುಗಡೆ ಮಾಡುವುದಾಗಿ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕು ಇನ್ನೂ ಸಂಪೂರ್ಣ ನಿಯಂತ್ರಣಕ್ಕೆ ಬಾರದ ಕಾರಣ, ಮುಖ್ಯಮಂತ್ರಿ ಲಾಕ್‌ಡೌನ್​ ಮುಂದುವರಿಸಿದ್ದಾರೆ.

ಚಲನಚಿತ್ರ ಕಲಾವಿದರಿಗೆ 3000 ರೂಪಾಯಿ, ಮೀನುಗಾರರಿಗೆ 3000, ಮುಜುರಾಯಿ ದೇವಸ್ಥಾನ ಅರ್ಚಕರು, ಅಡುಗೆಯವರು ಸಿ ಗ್ರೂಪ್ ನೌಕರರಿಗೆ 3000 ರೂಪಾಯಿ, ಮಗ್ಗಗಳ ಕಾರ್ಮಿಕರಿಗೆ 3000, ಮಸೀದಿ ಮುಹದ್ಝಿನ್‌ಗಳಿಗೆ 3000, ಆಶಾ ಕಾರ್ಯಕರ್ತರು 3000, ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕರಿಗೆ 2000, ಅನುದಾನರಹಿತ ಶಾಲಾ ಶಿಕ್ಷಕರಿಗೆ 5000 ಪರಿಹಾರ ನೀಡುವುದಾಗಿ ಅವರು ಹೇಳಿದ್ದಾರೆ.

ಅತಿಸಣ್ಣ-ಸಣ್ಣ-ಮಧ್ಯಮ ಕೈಗಾರಿಕೆಗಳ ವಿದ್ಯುತ್ ಶುಲ್ಕದಲ್ಲಿ ವಿನಾಯ್ತಿ, ಇತರ ಕೈಗಾರಿಕೆಗಳಿಗೆ ಮೇ,ಜೂನ್ ಶುಲ್ಕ ವಿನಾಯ್ತಿ ಹಾಗೂ ರಫ್ತು ಓರಿಯಂಟ್ ಕೈಗಾರಿಕೆ ಅನುಮತಿ ನೀಡಲಾಗಿದೆ. ಹೊಟೇಲ್‌ಗಳಲ್ಲಿ ಸಂಜೆ 6 ಗಂಟೆಯವರೆ ತೆರೆಯಲು ಅವಕಾಶ ಆದರೆ ಪಾರ್ಸೆಗ್‌ ಮಾತ್ರ ಅವಕಾಶ ನೀಡಲಾಗಿದೆ. ಜೂನ್​ 14ರ ವರೆಗೆ ವಿಸ್ತರಿಸಲಾಗುವ ಲಾಕ್​ಡೌನ್​ ಕೂಡ ಇದೇ ರೀತಿಯಾಗಿಯೆ ಇರಲಿದ್ದು, ಯಾವುದೇ ಸಡಿಲಿಕೆ ಇರುವುದಿಲ್ಲ.

ಮೇ ತಿಂಗಳ 10 ರಿಂದ 24 ರವರೆಗೆ ಮೊಲದ ಹಂತದಲ್ಲಿ ಸಂಪೂರ್ಣ ಲಾಕ್‌ಡೌನ್‌ ಅನ್ನು ರಾಜ್ಯ ಸರ್ಕಾರವು ಹೇರಿತ್ತು. ಆದರೆ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಈ ಲಾಕ್‌ಡೌನ್‌ ಅನ್ನು ಮತ್ತೇ ಜೂನ್ 7 ರವರೆಗೆ ವಿಸ್ತರಿಸಲಾಗಿತ್ತು. ಇದೀಗ ಈ ಲಾಕ್‌ಡೌನ್‌ ಅನ್ನು ಮತ್ತೆ ವಿಸ್ತರಿಸಲಾಗಿದೆ.

ಮೇ 10 ರಂದು ಲಾಕ್‌ಡೌ‌ನ್ ಪ್ರಾರಂಭವಾಗುವುದಕ್ಕಿಂತ ಮೊದಲೆ ರಾಜ್ಯ ಸರ್ಕಾರವು ಕಠಿಣ ನಿರ್ಬಂಧ ಹೇರಿ ಅಘೋಷಿತ ಲಾಕ್‌ಡೌನ್‌ ಹೇರಿತ್ತು.

ರಾಜ್ಯದಲ್ಲಿ ಜಾರಿಯಲ್ಲಿರುವ ನಿರ್ಬಂಧವನ್ನು ಜೂನ್‌‌ 7 ನಂತರವೂ ವಿಸ್ತರಿಸುವ ಬಗ್ಗೆ ಜೂನ್‌‌ 5 ರಂದು ತಜ್ಞರ ಜೊತೆಗೆ ಚರ್ಚಿಸಿ ತೀರ್ಮಾನಿಸಲಾವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಳೆದ ಭಾನುವಾರ ಹೇಳಿದ್ದರು. ಆದರೆ ಇದೀಗ ಎರಡು ದಿನದ ಮೊದಲೆ ನಿರ್ಬಂಧ ಘೋಷಿಸಲಾಗಿದೆ.

ಭಾನುವಾರ ಮಾತನಾಡಿದ್ದ ಯಡಿಯೂರಪ್ಪ, “ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹೆಚ್ಚಿನ ಸೋಂಕು ಪ್ರಕರಣಗಳು ವರದಿಯಾಗುತ್ತಿದೆ. ಆದರೆ, ತಜ್ಞರು ಲಾಕ್‌ಡೌನ್‌ ವಿಸ್ತರಿಸುವಂತೆ ವರದಿ ನೀಡಿಲ್ಲ. ಜೂನ್ 5 ರ ವೇಳೆಗೆ ಕೊರೊನಾ ಪರಿಸ್ಥಿತಿ ನೋಡಿಕೊಂಡು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಕೇಂದ್ರ ಸರ್ಕಾರವು ಈಗಾಗಲೆ ರಾಜ್ಯಗಳ ಸ್ಥಿತಿಗತಿಗೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳುವಂತೆ ಸೂಚಿಸಿದೆ” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...