Homeಕರ್ನಾಟಕ‘ಕೆಎಸ್‌ಆರ್‌‌ಟಿಸಿ’ ಬ್ರಾಂಡ್‌ ನೇಮ್‌ ಕಳೆದುಕೊಂಡ ಕರ್ನಾಟಕ! ಸಾರಿಗೆ ಸಚಿವ ಹೇಳಿದ್ದೇನು?

‘ಕೆಎಸ್‌ಆರ್‌‌ಟಿಸಿ’ ಬ್ರಾಂಡ್‌ ನೇಮ್‌ ಕಳೆದುಕೊಂಡ ಕರ್ನಾಟಕ! ಸಾರಿಗೆ ಸಚಿವ ಹೇಳಿದ್ದೇನು?

- Advertisement -
- Advertisement -

ರಾಜ್ಯದ ಸರ್ಕಾರಿ ಬಸ್ಸಿನ ‘ಕೆಎಸ್‌ಆರ್‌‌ಟಿಸಿ’ ಎಂಬ ಹೆಸರನ್ನು ಕರ್ನಾಟಕ ರಾಜ್ಯ ಸಾರಿಗೆ ನಿಗಮವು ಕಳೆದುಕೊಂಡಿದ್ದು, ಇನ್ನು ಮುಂದಕ್ಕೆ ಈ ಹೆಸರನ್ನು ಕರ್ನಾಟಕವು ಈ ಹೆಸರನ್ನು ಬಳಸುವಂತಿಲ್ಲ. ಕೇಂದ್ರ ಟ್ರೇಡ್ ಮಾರ್ಕ್ಸ್ ರಿಜಿಸ್ಟ್ರಿಯು ‘ಕೆಎಸ್‌ಆರ್‌ಟಿಸಿ’ ಹೆಸರು ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದೆ ಎಂದು ತೀರ್ಪಿತ್ತಿದೆ.

ಕೇರಳ ಮತ್ತು ಕರ್ನಾಟಕದ ಸಾರಿಗೆ ಇಲಾಖೆಗಳ ನಡುವಿನ ಏಳು ವರ್ಷಗಳ ಕಾನೂನು ಹೋರಾಟದ ಅಂತಿಮ ತೀರ್ಪು ಬುಧವಾರ ಪ್ರಕಟವಾಗಿದ್ದು, ‘ಕೇಂದ್ರ ವ್ಯಾಪಾರ ಗುರುತು ನೋಂದಾವಣೆ’ಯು ‘ಕೆಎಸ್‌ಆರ್‌ಟಿಸಿ’ ಎಂಬ ಸಂಕ್ಷಿಪ್ತ ಹೆಸರು ಕೇರಳ ರಸ್ತೆ ಸಾರಿಗೆಗೆ ಸೇರಿದೆ ಎಂದು ಹೇಳಿದೆ.  ಇದರ ಜೊತೆಗೆ ಕೇರಳವು ‘ಆನವಂಡಿ’ ಎಂಬ ಬಸ್ ಸೇವೆಯ ಜನಪ್ರಿಯ ಅಡ್ಡಹೆಸರಿನ ಮಾಲೀಕತ್ವವನ್ನು ಪಡೆದುಕೊಂಡಿದೆ.

ಇದನ್ನೂ ಓದಿ: ರಾಜ್ಯದ ಪ್ರತಿ ಹಳ್ಳಿ, ವಾರ್ಡ್‌ಗಳಿಗೂ ಕೆಸಿವಿಟಿ ಕೊರೊನಾ ವಾಲಂಟಿಯರ್‌ ತಂಡ, ನೀವು ಕೈಜೋಡಿಸಬಹುದು

ಆನ್‌ಲೈನ್‌ ಹುಡುಕಾಟದ ಸಮಯದಲ್ಲಿ ‘ಕೆಎಸ್‌ಆರ್‌ಟಿಸಿ’ ಎಂಬ ಸಂಕಿಪ್ತ ಪದವನ್ನು ಬಳಸಿ ಹುಡುಕಿದಾಗ ಕರ್ನಾಟಕ ಮತ್ತು ಕೇರಳ ಬಸ್‌ನ ವಿವರಗಳು ಕಾಣುತ್ತಿದ್ದರಿಂದ ಪ್ರಯಾಣಿಕರು ಗೊಂದಕ್ಕೆ ಒಳಗಾಗುತ್ತಿದ್ದರು. ಆದರೆ ಸಾವಿರಾರು ಜನರ ದೈನಂದಿನ ಪ್ರಯಾಣಕ್ಕಾಗಿ ಅವಲಂಬಿಸಿದ್ದ ಈ ಹೆಸರು ಅದಾಗಲೆ ಎರಡು ರಾಜ್ಯಗಳಲ್ಲೂ ಬ್ರಾಂಡ್‌ ಆಗಿ ವಿಕಸನಗೊಂಡಿದ್ದವು.

2014 ರಲ್ಲಿ ಕರ್ನಾಟಕವು ‘ಕೆಎಸ್‌ಆರ್‌ಟಿಸಿ’ ಬಳಕೆ ಮಾಡದಂತೆ ಕೇರಳಕ್ಕೆ ನೋಟಿಸ್ ನೀಡಿ, ಈ ಹೆಸರಿನ ಮೇಲೆ ತಾನು ಟ್ರೇಡ್‌ಮಾರ್ಕ್ ಪಡೆದುಕೊಂಡಿದ್ದೇನೆ ಎಂದು ಕರ್ನಾಟಕವು ಕಾನೂನು ಸಮರ ಸಾರಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಕೇರಳವು ತಾನು ಬಸ್‌ಗಳಲ್ಲಿ ‘ಕೆಎಸ್‌ಆರ್‌ಟಿಸಿ’ ಬ್ರಾಂಡ್‌ ಮೊದಲು ಬಳಸಿದ್ದು ಎಂದು ಟ್ರೇಡ್ ಮಾರ್ಕ್ಸ್ ರಿಜಿಸ್ಟ್ರಿಯನ್ನು ಸಂಪರ್ಕಿಸಿತ್ತು. ಏಳು ವರ್ಷಗಳ ಕಾನೂನು ಸಮರದ ನಂತರ ಅಂತಿಮವಾಗಿ ಇದೀಗ ‘ಕೆಎಸ್‌ಆರ್‌ಟಿಸಿ’ ಪದವು ಕೇರಳ ರಾಜ್ಯ ಸಾರಿಗೆಗೆ ಸೇರಿದೆ.

ಇದನ್ನೂ ಓದಿ: ಬಿಹಾರದಲ್ಲಿ ಭಾರಿ ಮಳೆಯ ಹೊಡೆತಕ್ಕೆ ಇಬ್ಬಾಗವಾದ ಸೇತುವೆ

ಈ ಬಗ್ಗೆ ಪ್ರತಿಕ್ರಿಯೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ ಕಳಸದ್ ಅವರನ್ನು ನಾನುಗೌರಿ.ಕಾಂ ಸಂಪರ್ಕಿಸಿತ್ತು. ಆದರೆ ಅವರು ಕರೆಯನ್ನು ಸ್ವೀಕರಿಸಲಿಲ್ಲ.

ಕೆಎಸ್‌ಆರ್‌ಟಿಸಿ ಬ್ರಾಂಡ್‌ ನೇಮ್‌ ಕೇರಳಕ್ಕೆ ಸೇರಿದುದರ ಬಗ್ಗೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, “ಕೇರಳವು ಕೆಎಸ್ಆರ್ಟಿಸಿ ಎಂಬ ಶಬ್ದವನ್ನು ತಾವೇ ಮೊದಲು ಬಳಸಿದ್ದರಿಂದ ಕರ್ನಾಟಕವು ಈ ಶಬ್ದವನ್ನು ಬಳಸಬಾರದು ಎಂದು ತಕರಾರು ತೆಗೆದ ಬಗ್ಗೆ ಈಗ ಟ್ರೇಡ್ಮಾರ್ಕ್ ರಜಿಸ್ಟ್ರಿಯು ತೀರ್ಪು ನೀಡಿದೆ ಎಂದು ಮಾಹಿತಿ ಬಂದಿದೆ. ಆದರೆ ಈ ತೀರ್ಪಿನಲ್ಲಿ ಏನಿದೆ ಎಂಬ ಅಂಶವು ನಮಗೆ ಅಧಿಕೃತವಾಗಿ ಇನ್ನೂ ಬಂದಿಲ್ಲ, ಅದು ಲಭ್ಯವಾದ ನಂತರ ಕರ್ನಾಟಕ ರಾಜ್ಯದ ಮುಂದಿನ ನಿಲುವು ಮತ್ತು ಕಾನೂನು ಹೋರಾಟ ಏನು ಎಂಬುದರ ಬಗ್ಗೆ ತೀರ್ಮಾನಿಸಲಾಗುವುದು” ಎಂದು ಹೇಳಿದ್ದಾರೆ.

“ನಮ್ಮದು ಒಕ್ಕೂಟ ವ್ಯವಸ್ಥೆ ಎಂದರೆ ಫೆಡರಲ್ ಸಿಸ್ಟಮ್. ಒಂದು ರಾಜ್ಯವು ಮತ್ತೊಂದು ರಾಜ್ಯದ ಜೊತೆಗೆ ಯಾವುದೇ ಸಂಘರ್ಷವಿಲ್ಲದೆ ಸೌಹಾರ್ದಯುತವಾಗಿ ಸಂಬಂಧವನ್ನು ಇಟ್ಟುಕೊಂಡು ಹೋಗಬೇಕೆಂದು ಈ ಫೆಡರಲ್ ಸಿಸ್ಟಮ್ ಹೇಳುತ್ತದೆ. ಆದರೆ ದುರದೃಷ್ಟವಶಾತ್ ಈ ವಿವಾದ ಅನಗತ್ಯವಾಗಿ ಎದ್ದಿದ್ದು, ಖಾಸಗಿ ಸಂಸ್ಥೆಗಳಲ್ಲಾದರೆ ಈ ರೀತಿಯ ಹೆಸರು ಅಥವಾ ಟ್ರೇಡ್ಮಾರ್ಕ್‌ಗಳಿಂದ ಅವರ ವ್ಯವಹಾರ ಮತ್ತು ಲಾಭಗಳ ಮೇಲೆ ಪ್ರಭಾವ ಬೀಳುತ್ತದೆ. ಆದರೆ ಸರ್ಕಾರಿ ಸಂಸ್ಥೆಗಳು ಹಾಗಲ್ಲ. ಇಲ್ಲಿ ಜನರ ಸೇವೆಯ ಮುಖ್ಯ. ಕರ್ನಾಟಕವಾಗಲಿ ಕೇರಳವಾಗಲಿ ಪರಸ್ಪರ ಸಾರಿಗೆ ಕ್ಷೇತ್ರದಲ್ಲಿ ಲಾಭಗಳಿಸುವ ಮೇಲಾಟಕ್ಕೆ ಅಥವಾ ಸ್ಪರ್ಧೆಗೆ ಮುಂದಾಗದೆ ಸಾರ್ವಜನಿಕರ ಹಿತಾಸಕ್ತಿ ಮತ್ತು ಸೇವೆಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿವೆ. ಹೀಗಾಗಿ ಈ ವಿಷಯವನ್ನು ಯಾವುದೇ ರಾಜ್ಯಗಳು ಪ್ರತಿಷ್ಠೆಯ ವಿಷಯವನ್ನಾಗಿ ಮಾಡಿಕೊಳ್ಳಬಾರದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮ್ಯಾಗಿ ಸೇರಿದಂತೆ ನೆಸ್ಲೆಯ 60% ಉತ್ಪನ್ನಗಳು ಆರೋಗ್ಯಕರವಲ್ಲ: ಸಂಸ್ಥೆಯ ಆಂತರಿಕ ವರದಿ

ಕೇರಳದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ತಿರುವಾಂಕೂರು ರಾಜ ಕುಟುಂಬವು 1937 ರ ಬ್ರಿಟಿಷರ ಕಾಲದಲ್ಲೇ ಪ್ರಾರಂಭಿಸಿತು. ಮೊದಲಿಗೆ ತಿರುವಾಂಕೂರು ರಾಜ್ಯ ಸಾರಿಗೆ ಇಲಾಖೆ (ಟಿಎಸ್‌ಟಿಡಿ) ಎಂದು ಇದ್ದ ಹೆಸರು ನಂತರ 1965 ರಲ್ಲಿ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ ಎಂದು ಮರುನಾಮಕರಣ ಮಾಡಲಾಯಯಿತು. ಆದರೆ ಕರ್ನಾಟಕವು ಕೆಎಸ್‌ಆರ್‌ಟಿಸಿಯ ಸಂಕ್ಷಿಪ್ತ ಹೆಸರನ್ನು 1973 ಬಳಸಲಾರಂಭಿಸಿತ್ತು.

ಕೇರಳ ಸಾರಿಗೆ ಕಾರ್ಯದರ್ಶಿ ಬಿಜು ಪ್ರಭಾಕರ್ ಅವರು ತಮ್ಮ ಬಸ್‌ಗಳಲ್ಲಿ ಬ್ರಾಂಡ್ ಹೆಸರನ್ನು ಬಳಸುವುದನ್ನು ನಿಲ್ಲಿಸುವಂತೆ ಕೋರಿ ಕರ್ನಾಟಕ ಸಾರಿಗೆ ನಿಗಮಕ್ಕೆ ನೋಟಿಸ್ ಕಳುಹಿಸಲಾಗುವುದು ಎಂದು ಹೇಳಿದ್ದಾರೆ ಎಂದು ಆನ್‌ಮನೋರಮ ವರದಿ ಮಾಡಿದೆ.

ಇದನ್ನೂ ಓದಿ: ಮ್ಯಾಗಿ ಸೇರಿದಂತೆ ನೆಸ್ಲೆಯ 60% ಉತ್ಪನ್ನಗಳು ಆರೋಗ್ಯಕರವಲ್ಲ: ಸಂಸ್ಥೆಯ ಆಂತರಿಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...