Homeಕರ್ನಾಟಕ‘ಕೆಎಸ್‌ಆರ್‌‌ಟಿಸಿ’ ಬ್ರಾಂಡ್‌ ನೇಮ್‌ ಕಳೆದುಕೊಂಡ ಕರ್ನಾಟಕ! ಸಾರಿಗೆ ಸಚಿವ ಹೇಳಿದ್ದೇನು?

‘ಕೆಎಸ್‌ಆರ್‌‌ಟಿಸಿ’ ಬ್ರಾಂಡ್‌ ನೇಮ್‌ ಕಳೆದುಕೊಂಡ ಕರ್ನಾಟಕ! ಸಾರಿಗೆ ಸಚಿವ ಹೇಳಿದ್ದೇನು?

- Advertisement -
- Advertisement -

ರಾಜ್ಯದ ಸರ್ಕಾರಿ ಬಸ್ಸಿನ ‘ಕೆಎಸ್‌ಆರ್‌‌ಟಿಸಿ’ ಎಂಬ ಹೆಸರನ್ನು ಕರ್ನಾಟಕ ರಾಜ್ಯ ಸಾರಿಗೆ ನಿಗಮವು ಕಳೆದುಕೊಂಡಿದ್ದು, ಇನ್ನು ಮುಂದಕ್ಕೆ ಈ ಹೆಸರನ್ನು ಕರ್ನಾಟಕವು ಈ ಹೆಸರನ್ನು ಬಳಸುವಂತಿಲ್ಲ. ಕೇಂದ್ರ ಟ್ರೇಡ್ ಮಾರ್ಕ್ಸ್ ರಿಜಿಸ್ಟ್ರಿಯು ‘ಕೆಎಸ್‌ಆರ್‌ಟಿಸಿ’ ಹೆಸರು ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದೆ ಎಂದು ತೀರ್ಪಿತ್ತಿದೆ.

ಕೇರಳ ಮತ್ತು ಕರ್ನಾಟಕದ ಸಾರಿಗೆ ಇಲಾಖೆಗಳ ನಡುವಿನ ಏಳು ವರ್ಷಗಳ ಕಾನೂನು ಹೋರಾಟದ ಅಂತಿಮ ತೀರ್ಪು ಬುಧವಾರ ಪ್ರಕಟವಾಗಿದ್ದು, ‘ಕೇಂದ್ರ ವ್ಯಾಪಾರ ಗುರುತು ನೋಂದಾವಣೆ’ಯು ‘ಕೆಎಸ್‌ಆರ್‌ಟಿಸಿ’ ಎಂಬ ಸಂಕ್ಷಿಪ್ತ ಹೆಸರು ಕೇರಳ ರಸ್ತೆ ಸಾರಿಗೆಗೆ ಸೇರಿದೆ ಎಂದು ಹೇಳಿದೆ.  ಇದರ ಜೊತೆಗೆ ಕೇರಳವು ‘ಆನವಂಡಿ’ ಎಂಬ ಬಸ್ ಸೇವೆಯ ಜನಪ್ರಿಯ ಅಡ್ಡಹೆಸರಿನ ಮಾಲೀಕತ್ವವನ್ನು ಪಡೆದುಕೊಂಡಿದೆ.

ಇದನ್ನೂ ಓದಿ: ರಾಜ್ಯದ ಪ್ರತಿ ಹಳ್ಳಿ, ವಾರ್ಡ್‌ಗಳಿಗೂ ಕೆಸಿವಿಟಿ ಕೊರೊನಾ ವಾಲಂಟಿಯರ್‌ ತಂಡ, ನೀವು ಕೈಜೋಡಿಸಬಹುದು

ಆನ್‌ಲೈನ್‌ ಹುಡುಕಾಟದ ಸಮಯದಲ್ಲಿ ‘ಕೆಎಸ್‌ಆರ್‌ಟಿಸಿ’ ಎಂಬ ಸಂಕಿಪ್ತ ಪದವನ್ನು ಬಳಸಿ ಹುಡುಕಿದಾಗ ಕರ್ನಾಟಕ ಮತ್ತು ಕೇರಳ ಬಸ್‌ನ ವಿವರಗಳು ಕಾಣುತ್ತಿದ್ದರಿಂದ ಪ್ರಯಾಣಿಕರು ಗೊಂದಕ್ಕೆ ಒಳಗಾಗುತ್ತಿದ್ದರು. ಆದರೆ ಸಾವಿರಾರು ಜನರ ದೈನಂದಿನ ಪ್ರಯಾಣಕ್ಕಾಗಿ ಅವಲಂಬಿಸಿದ್ದ ಈ ಹೆಸರು ಅದಾಗಲೆ ಎರಡು ರಾಜ್ಯಗಳಲ್ಲೂ ಬ್ರಾಂಡ್‌ ಆಗಿ ವಿಕಸನಗೊಂಡಿದ್ದವು.

2014 ರಲ್ಲಿ ಕರ್ನಾಟಕವು ‘ಕೆಎಸ್‌ಆರ್‌ಟಿಸಿ’ ಬಳಕೆ ಮಾಡದಂತೆ ಕೇರಳಕ್ಕೆ ನೋಟಿಸ್ ನೀಡಿ, ಈ ಹೆಸರಿನ ಮೇಲೆ ತಾನು ಟ್ರೇಡ್‌ಮಾರ್ಕ್ ಪಡೆದುಕೊಂಡಿದ್ದೇನೆ ಎಂದು ಕರ್ನಾಟಕವು ಕಾನೂನು ಸಮರ ಸಾರಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಕೇರಳವು ತಾನು ಬಸ್‌ಗಳಲ್ಲಿ ‘ಕೆಎಸ್‌ಆರ್‌ಟಿಸಿ’ ಬ್ರಾಂಡ್‌ ಮೊದಲು ಬಳಸಿದ್ದು ಎಂದು ಟ್ರೇಡ್ ಮಾರ್ಕ್ಸ್ ರಿಜಿಸ್ಟ್ರಿಯನ್ನು ಸಂಪರ್ಕಿಸಿತ್ತು. ಏಳು ವರ್ಷಗಳ ಕಾನೂನು ಸಮರದ ನಂತರ ಅಂತಿಮವಾಗಿ ಇದೀಗ ‘ಕೆಎಸ್‌ಆರ್‌ಟಿಸಿ’ ಪದವು ಕೇರಳ ರಾಜ್ಯ ಸಾರಿಗೆಗೆ ಸೇರಿದೆ.

ಇದನ್ನೂ ಓದಿ: ಬಿಹಾರದಲ್ಲಿ ಭಾರಿ ಮಳೆಯ ಹೊಡೆತಕ್ಕೆ ಇಬ್ಬಾಗವಾದ ಸೇತುವೆ

ಈ ಬಗ್ಗೆ ಪ್ರತಿಕ್ರಿಯೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ ಕಳಸದ್ ಅವರನ್ನು ನಾನುಗೌರಿ.ಕಾಂ ಸಂಪರ್ಕಿಸಿತ್ತು. ಆದರೆ ಅವರು ಕರೆಯನ್ನು ಸ್ವೀಕರಿಸಲಿಲ್ಲ.

ಕೆಎಸ್‌ಆರ್‌ಟಿಸಿ ಬ್ರಾಂಡ್‌ ನೇಮ್‌ ಕೇರಳಕ್ಕೆ ಸೇರಿದುದರ ಬಗ್ಗೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, “ಕೇರಳವು ಕೆಎಸ್ಆರ್ಟಿಸಿ ಎಂಬ ಶಬ್ದವನ್ನು ತಾವೇ ಮೊದಲು ಬಳಸಿದ್ದರಿಂದ ಕರ್ನಾಟಕವು ಈ ಶಬ್ದವನ್ನು ಬಳಸಬಾರದು ಎಂದು ತಕರಾರು ತೆಗೆದ ಬಗ್ಗೆ ಈಗ ಟ್ರೇಡ್ಮಾರ್ಕ್ ರಜಿಸ್ಟ್ರಿಯು ತೀರ್ಪು ನೀಡಿದೆ ಎಂದು ಮಾಹಿತಿ ಬಂದಿದೆ. ಆದರೆ ಈ ತೀರ್ಪಿನಲ್ಲಿ ಏನಿದೆ ಎಂಬ ಅಂಶವು ನಮಗೆ ಅಧಿಕೃತವಾಗಿ ಇನ್ನೂ ಬಂದಿಲ್ಲ, ಅದು ಲಭ್ಯವಾದ ನಂತರ ಕರ್ನಾಟಕ ರಾಜ್ಯದ ಮುಂದಿನ ನಿಲುವು ಮತ್ತು ಕಾನೂನು ಹೋರಾಟ ಏನು ಎಂಬುದರ ಬಗ್ಗೆ ತೀರ್ಮಾನಿಸಲಾಗುವುದು” ಎಂದು ಹೇಳಿದ್ದಾರೆ.

“ನಮ್ಮದು ಒಕ್ಕೂಟ ವ್ಯವಸ್ಥೆ ಎಂದರೆ ಫೆಡರಲ್ ಸಿಸ್ಟಮ್. ಒಂದು ರಾಜ್ಯವು ಮತ್ತೊಂದು ರಾಜ್ಯದ ಜೊತೆಗೆ ಯಾವುದೇ ಸಂಘರ್ಷವಿಲ್ಲದೆ ಸೌಹಾರ್ದಯುತವಾಗಿ ಸಂಬಂಧವನ್ನು ಇಟ್ಟುಕೊಂಡು ಹೋಗಬೇಕೆಂದು ಈ ಫೆಡರಲ್ ಸಿಸ್ಟಮ್ ಹೇಳುತ್ತದೆ. ಆದರೆ ದುರದೃಷ್ಟವಶಾತ್ ಈ ವಿವಾದ ಅನಗತ್ಯವಾಗಿ ಎದ್ದಿದ್ದು, ಖಾಸಗಿ ಸಂಸ್ಥೆಗಳಲ್ಲಾದರೆ ಈ ರೀತಿಯ ಹೆಸರು ಅಥವಾ ಟ್ರೇಡ್ಮಾರ್ಕ್‌ಗಳಿಂದ ಅವರ ವ್ಯವಹಾರ ಮತ್ತು ಲಾಭಗಳ ಮೇಲೆ ಪ್ರಭಾವ ಬೀಳುತ್ತದೆ. ಆದರೆ ಸರ್ಕಾರಿ ಸಂಸ್ಥೆಗಳು ಹಾಗಲ್ಲ. ಇಲ್ಲಿ ಜನರ ಸೇವೆಯ ಮುಖ್ಯ. ಕರ್ನಾಟಕವಾಗಲಿ ಕೇರಳವಾಗಲಿ ಪರಸ್ಪರ ಸಾರಿಗೆ ಕ್ಷೇತ್ರದಲ್ಲಿ ಲಾಭಗಳಿಸುವ ಮೇಲಾಟಕ್ಕೆ ಅಥವಾ ಸ್ಪರ್ಧೆಗೆ ಮುಂದಾಗದೆ ಸಾರ್ವಜನಿಕರ ಹಿತಾಸಕ್ತಿ ಮತ್ತು ಸೇವೆಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿವೆ. ಹೀಗಾಗಿ ಈ ವಿಷಯವನ್ನು ಯಾವುದೇ ರಾಜ್ಯಗಳು ಪ್ರತಿಷ್ಠೆಯ ವಿಷಯವನ್ನಾಗಿ ಮಾಡಿಕೊಳ್ಳಬಾರದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮ್ಯಾಗಿ ಸೇರಿದಂತೆ ನೆಸ್ಲೆಯ 60% ಉತ್ಪನ್ನಗಳು ಆರೋಗ್ಯಕರವಲ್ಲ: ಸಂಸ್ಥೆಯ ಆಂತರಿಕ ವರದಿ

ಕೇರಳದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ತಿರುವಾಂಕೂರು ರಾಜ ಕುಟುಂಬವು 1937 ರ ಬ್ರಿಟಿಷರ ಕಾಲದಲ್ಲೇ ಪ್ರಾರಂಭಿಸಿತು. ಮೊದಲಿಗೆ ತಿರುವಾಂಕೂರು ರಾಜ್ಯ ಸಾರಿಗೆ ಇಲಾಖೆ (ಟಿಎಸ್‌ಟಿಡಿ) ಎಂದು ಇದ್ದ ಹೆಸರು ನಂತರ 1965 ರಲ್ಲಿ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ ಎಂದು ಮರುನಾಮಕರಣ ಮಾಡಲಾಯಯಿತು. ಆದರೆ ಕರ್ನಾಟಕವು ಕೆಎಸ್‌ಆರ್‌ಟಿಸಿಯ ಸಂಕ್ಷಿಪ್ತ ಹೆಸರನ್ನು 1973 ಬಳಸಲಾರಂಭಿಸಿತ್ತು.

ಕೇರಳ ಸಾರಿಗೆ ಕಾರ್ಯದರ್ಶಿ ಬಿಜು ಪ್ರಭಾಕರ್ ಅವರು ತಮ್ಮ ಬಸ್‌ಗಳಲ್ಲಿ ಬ್ರಾಂಡ್ ಹೆಸರನ್ನು ಬಳಸುವುದನ್ನು ನಿಲ್ಲಿಸುವಂತೆ ಕೋರಿ ಕರ್ನಾಟಕ ಸಾರಿಗೆ ನಿಗಮಕ್ಕೆ ನೋಟಿಸ್ ಕಳುಹಿಸಲಾಗುವುದು ಎಂದು ಹೇಳಿದ್ದಾರೆ ಎಂದು ಆನ್‌ಮನೋರಮ ವರದಿ ಮಾಡಿದೆ.

ಇದನ್ನೂ ಓದಿ: ಮ್ಯಾಗಿ ಸೇರಿದಂತೆ ನೆಸ್ಲೆಯ 60% ಉತ್ಪನ್ನಗಳು ಆರೋಗ್ಯಕರವಲ್ಲ: ಸಂಸ್ಥೆಯ ಆಂತರಿಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...