Homeಮುಖಪುಟಕರ್ನಾಟಕ, ಮಧ್ಯಪ್ರದೇಶದಲ್ಲಿ ವಿವಾಹಕ್ಕಾಗಿ ಮತಾಂತರ ನಿಷೇಧ ಕಾನೂನು!

ಕರ್ನಾಟಕ, ಮಧ್ಯಪ್ರದೇಶದಲ್ಲಿ ವಿವಾಹಕ್ಕಾಗಿ ಮತಾಂತರ ನಿಷೇಧ ಕಾನೂನು!

 ನನ್ನ ಸರ್ಕಾರ ಮತಾಂಧತೆಯನ್ನು ಅನುಮತಿಸುವುದಿಲ್ಲ. ಯಾರೇ ಹಾಗೆ ಮಾಡಿದರೂ ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ

- Advertisement -
- Advertisement -

ಕೇವಲ ಮದುವೆ ಆಗುವ ಉದ್ದೇಶದಿಂದಲೇ ಆಗುವ ಧಾರ್ಮಿಕ ಮತಾಂತರ ನಿಷೇಧಿಸುವ ಕಾನೂನು ಶೀಘ್ರವೇ ರಾಜ್ಯದಲ್ಲಿ ಜಾರಿಗೆ ಬರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಇತ್ತ ‘ಲವ್ ಜಿಹಾದ್’ ತಡೆಯುವ ಕಾನೂನು ಜಾರಿಗೆ ತರಲು ತಮ್ಮ ಸರ್ಕಾರ ಚಿಂತಿಸುತ್ತಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕೂಡ ತಿಳಿಸಿದ್ದಾರೆ.

ಇತ್ತಿಚೆಗೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕರ್ನಾಟಕ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, “ಅಲಹಾಬಾದ್ ಹೈಕೋರ್ಟ್ ಆದೇಶದ ಪ್ರಕಾರ, ಕರ್ನಾಟಕವು ವಿವಾಹದ ಸಲುವಾಗಿ ಧಾರ್ಮಿಕ ಮತಾಂತರ ನಿಷೇಧಿಸುವ ಕಾನೂನನ್ನು ಜಾರಿಗೆ ತರುತ್ತದೆ” ಎಂದಿದ್ದಾರೆ.

“ಜಿಹಾದಿಗಳು ನಮ್ಮ ಸಹೋದರಿಯರ ಘನತೆಯನ್ನು ಕಿತ್ತು ಹಾಕುತ್ತಿರುವಾಗ ನಾವು ಮೌನವಾಗಿರುವುದಿಲ್ಲ. ಯಾರೇ ಇರಲಿ ಇಂತಹ ಕೃತ್ಯದಲ್ಲಿ ಭಾಗಿಯಾದರೆ ಕಠಿಣ ಶಿಕ್ಷೆಗೆ ಗುರಿಯಗಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿ ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

ಇನ್ನು ಮಧ್ಯಪ್ರದೇಶದ ಮುಖ್ಯಮಂತ್ರಿ ಅಂತರ್​ಧರ್ಮೀಯ ವಿವಾಹಗಳನ್ನು ತಡೆಯಲು ಸೂಕ್ತ ಕಾನೂನನ್ನು ಜಾರಿಗೆ ತರಲು ಮುಂದಾಗಿದ್ದಾರೆ. ಪ್ರೀತಿಯ ಹೆಸರಲ್ಲಿ ಯಾರೂ ಜಿಹಾದ್​ ಮಾಡುವಂತಿಲ್ಲ. ಯಾರಾದರೂ ಇಂತಹ ಕೆಲಸ ಮಾಡುತ್ತಿದ್ದರೆ, ಯಾರಾದರೂ ಧೈರ್ಯ ಮಾಡಿದರೆ ಅಂತವರಿಗೆ ತಕ್ಕ ಪಾಠ ಕಲಿಸಲಾಗುತ್ತದೆ. ಈ ದೃಷ್ಟಿಯಿಂದ ಕಾನೂನು ಜಾರಿಗೆ ತರಲಿದ್ದೇವೆ ಎಂದು ಹೇಳಿದ್ದಾರೆ.

“ನನ್ನ ಸರ್ಕಾರ ಮತಾಂಧತೆಯನ್ನು ಅನುಮತಿಸುವುದಿಲ್ಲ. ಯಾರೇ ಹಾಗೆ ಮಾಡಿದರೂ ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ”ಎಂದು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಎಚ್ಚರಿಸಿದ್ದಾರೆ.

MP CM Shivraj Singh Chouhan Tests Positive For Covid-19
PC: Otv

ಕಳೆದ ಮೂರು ದಿನಗಳ ಹಿಂದೆ, ಬಿಜೆಪಿಯ ಭೋಪಾಲ್ ಸಂಸದೆ ಪ್ರಜ್ಞಾ ಠಾಕೂರ್ ಅವರು “ಹಿಂದೂ ಹುಡುಗಿಯರನ್ನು ಲವ್ ಜಿಹಾದ್ ನಿಂದ ರಕ್ಷಿಸಲು” ಕಾನೂನು ಬೇಕು ಎಂದು ಕೋರಿದ್ದರು. ಇದಕ್ಕಾಗಿ ಫರಿದಾಬಾದ್‌ನಲ್ಲಿ ಇತ್ತೀಚೆಗೆ ನಡೆದ  21 ವರ್ಷದ ಕಾಲೇಜು ಯುವತಿಯ ಹತ್ಯೆಯನ್ನು ಉಲ್ಲೇಖಿಸಿದ್ದರು.

ಹರಿಯಾಣ ಮತ್ತು ಉತ್ತರ ಪ್ರದೇಶ ಕೂಡ ಲವ್ ಜಿಹಾದ್ ವಿರುದ್ಧದ ಕಾನೂನನ್ನು ಪರಿಗಣಿಸುತ್ತಿವೆ. ನಾವು ಅದಕ್ಕೆ ಕಾನೂನು ರೂಪವನ್ನೂ ನೀಡುತ್ತೇವೆ ಎಂದು ಅವರು ಹೇಳಿದ್ದಾರೆ.

ಒಂದು ಮತಾಂತರವು ಧರ್ಮದ ಭಾವನೆಯಿಂದ ಪ್ರೇರಿತವಾಗದಿದ್ದರೆ ಮತ್ತು ತನ್ನದೇ ಆದ ಉದ್ದೇಶಕ್ಕೆ ಒಳಗಾಗಿದ್ದರೆ ಅದು ಮತಾಂತರವಲ್ಲ. ಕೇವಲ ವಿವಾಹದ ಉದ್ದೇಶದಿಂದ ಆದ ಮತಾಂತರ ಮಾನ್ಯವಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ನವೆಂಬರ್‌ 1 ರಂದು ತೀರ್ಪು ನೀಡಿತ್ತು. ಧಾರ್ಮಿಕ ಮತಾಂತರ ಆಗುವ ಸಂದರ್ಭದಲ್ಲಿ ಮೂಲ ಧರ್ಮದ ಸಿದ್ಧಾಂತಗಳ ಬದಲಾಗಿ ಹೊಸ ಧರ್ಮದ ಸಿದ್ಧಾಂತಗಳಲ್ಲಿ ಪ್ರಾಮಾಣಿಕ ನಂಬಿಕೆ ಇರಬೇಕು” ಎಂದು ನ್ಯಾಯಾಲಯ ಹೇಳಿತ್ತು.


ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...