Homeಮುಖಪುಟಕರ್ನಾಟಕ, ಮಧ್ಯಪ್ರದೇಶದಲ್ಲಿ ವಿವಾಹಕ್ಕಾಗಿ ಮತಾಂತರ ನಿಷೇಧ ಕಾನೂನು!

ಕರ್ನಾಟಕ, ಮಧ್ಯಪ್ರದೇಶದಲ್ಲಿ ವಿವಾಹಕ್ಕಾಗಿ ಮತಾಂತರ ನಿಷೇಧ ಕಾನೂನು!

 ನನ್ನ ಸರ್ಕಾರ ಮತಾಂಧತೆಯನ್ನು ಅನುಮತಿಸುವುದಿಲ್ಲ. ಯಾರೇ ಹಾಗೆ ಮಾಡಿದರೂ ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ

- Advertisement -
- Advertisement -

ಕೇವಲ ಮದುವೆ ಆಗುವ ಉದ್ದೇಶದಿಂದಲೇ ಆಗುವ ಧಾರ್ಮಿಕ ಮತಾಂತರ ನಿಷೇಧಿಸುವ ಕಾನೂನು ಶೀಘ್ರವೇ ರಾಜ್ಯದಲ್ಲಿ ಜಾರಿಗೆ ಬರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಇತ್ತ ‘ಲವ್ ಜಿಹಾದ್’ ತಡೆಯುವ ಕಾನೂನು ಜಾರಿಗೆ ತರಲು ತಮ್ಮ ಸರ್ಕಾರ ಚಿಂತಿಸುತ್ತಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕೂಡ ತಿಳಿಸಿದ್ದಾರೆ.

ಇತ್ತಿಚೆಗೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕರ್ನಾಟಕ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, “ಅಲಹಾಬಾದ್ ಹೈಕೋರ್ಟ್ ಆದೇಶದ ಪ್ರಕಾರ, ಕರ್ನಾಟಕವು ವಿವಾಹದ ಸಲುವಾಗಿ ಧಾರ್ಮಿಕ ಮತಾಂತರ ನಿಷೇಧಿಸುವ ಕಾನೂನನ್ನು ಜಾರಿಗೆ ತರುತ್ತದೆ” ಎಂದಿದ್ದಾರೆ.

“ಜಿಹಾದಿಗಳು ನಮ್ಮ ಸಹೋದರಿಯರ ಘನತೆಯನ್ನು ಕಿತ್ತು ಹಾಕುತ್ತಿರುವಾಗ ನಾವು ಮೌನವಾಗಿರುವುದಿಲ್ಲ. ಯಾರೇ ಇರಲಿ ಇಂತಹ ಕೃತ್ಯದಲ್ಲಿ ಭಾಗಿಯಾದರೆ ಕಠಿಣ ಶಿಕ್ಷೆಗೆ ಗುರಿಯಗಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿ ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

ಇನ್ನು ಮಧ್ಯಪ್ರದೇಶದ ಮುಖ್ಯಮಂತ್ರಿ ಅಂತರ್​ಧರ್ಮೀಯ ವಿವಾಹಗಳನ್ನು ತಡೆಯಲು ಸೂಕ್ತ ಕಾನೂನನ್ನು ಜಾರಿಗೆ ತರಲು ಮುಂದಾಗಿದ್ದಾರೆ. ಪ್ರೀತಿಯ ಹೆಸರಲ್ಲಿ ಯಾರೂ ಜಿಹಾದ್​ ಮಾಡುವಂತಿಲ್ಲ. ಯಾರಾದರೂ ಇಂತಹ ಕೆಲಸ ಮಾಡುತ್ತಿದ್ದರೆ, ಯಾರಾದರೂ ಧೈರ್ಯ ಮಾಡಿದರೆ ಅಂತವರಿಗೆ ತಕ್ಕ ಪಾಠ ಕಲಿಸಲಾಗುತ್ತದೆ. ಈ ದೃಷ್ಟಿಯಿಂದ ಕಾನೂನು ಜಾರಿಗೆ ತರಲಿದ್ದೇವೆ ಎಂದು ಹೇಳಿದ್ದಾರೆ.

“ನನ್ನ ಸರ್ಕಾರ ಮತಾಂಧತೆಯನ್ನು ಅನುಮತಿಸುವುದಿಲ್ಲ. ಯಾರೇ ಹಾಗೆ ಮಾಡಿದರೂ ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ”ಎಂದು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಎಚ್ಚರಿಸಿದ್ದಾರೆ.

MP CM Shivraj Singh Chouhan Tests Positive For Covid-19
PC: Otv

ಕಳೆದ ಮೂರು ದಿನಗಳ ಹಿಂದೆ, ಬಿಜೆಪಿಯ ಭೋಪಾಲ್ ಸಂಸದೆ ಪ್ರಜ್ಞಾ ಠಾಕೂರ್ ಅವರು “ಹಿಂದೂ ಹುಡುಗಿಯರನ್ನು ಲವ್ ಜಿಹಾದ್ ನಿಂದ ರಕ್ಷಿಸಲು” ಕಾನೂನು ಬೇಕು ಎಂದು ಕೋರಿದ್ದರು. ಇದಕ್ಕಾಗಿ ಫರಿದಾಬಾದ್‌ನಲ್ಲಿ ಇತ್ತೀಚೆಗೆ ನಡೆದ  21 ವರ್ಷದ ಕಾಲೇಜು ಯುವತಿಯ ಹತ್ಯೆಯನ್ನು ಉಲ್ಲೇಖಿಸಿದ್ದರು.

ಹರಿಯಾಣ ಮತ್ತು ಉತ್ತರ ಪ್ರದೇಶ ಕೂಡ ಲವ್ ಜಿಹಾದ್ ವಿರುದ್ಧದ ಕಾನೂನನ್ನು ಪರಿಗಣಿಸುತ್ತಿವೆ. ನಾವು ಅದಕ್ಕೆ ಕಾನೂನು ರೂಪವನ್ನೂ ನೀಡುತ್ತೇವೆ ಎಂದು ಅವರು ಹೇಳಿದ್ದಾರೆ.

ಒಂದು ಮತಾಂತರವು ಧರ್ಮದ ಭಾವನೆಯಿಂದ ಪ್ರೇರಿತವಾಗದಿದ್ದರೆ ಮತ್ತು ತನ್ನದೇ ಆದ ಉದ್ದೇಶಕ್ಕೆ ಒಳಗಾಗಿದ್ದರೆ ಅದು ಮತಾಂತರವಲ್ಲ. ಕೇವಲ ವಿವಾಹದ ಉದ್ದೇಶದಿಂದ ಆದ ಮತಾಂತರ ಮಾನ್ಯವಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ನವೆಂಬರ್‌ 1 ರಂದು ತೀರ್ಪು ನೀಡಿತ್ತು. ಧಾರ್ಮಿಕ ಮತಾಂತರ ಆಗುವ ಸಂದರ್ಭದಲ್ಲಿ ಮೂಲ ಧರ್ಮದ ಸಿದ್ಧಾಂತಗಳ ಬದಲಾಗಿ ಹೊಸ ಧರ್ಮದ ಸಿದ್ಧಾಂತಗಳಲ್ಲಿ ಪ್ರಾಮಾಣಿಕ ನಂಬಿಕೆ ಇರಬೇಕು” ಎಂದು ನ್ಯಾಯಾಲಯ ಹೇಳಿತ್ತು.


ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....