Homeಮುಖಪುಟಅಜಿತ್ ಪವಾರ್‌ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ, ಇದು ಖಂಡನೀಯ- ಸಿಎಂ ಯಡಿಯೂರಪ್ಪ

ಅಜಿತ್ ಪವಾರ್‌ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ, ಇದು ಖಂಡನೀಯ- ಸಿಎಂ ಯಡಿಯೂರಪ್ಪ

ಗಡಿ ವಿಚಾರದಲ್ಲಿ ಮಹಾಜನ್ ವರದಿಯೇ ಅಂತಿಮ ಎಂಬುದು ಜಗತ್ತಿಗೆ ಗೊತ್ತಿದೆ. ಅನಗತ್ಯವಾಗಿ ಉದ್ಧಟತನದ ಹೇಳಿಕೆ ನೀಡಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಕಿಡಿಕಾರಿದ್ದಾರೆ.

- Advertisement -
- Advertisement -

ಶಿವಸೇನೆ ಸಂಸ್ಥಾಪಕ ಬಾಳಾ ಠಾಕ್ರೆ ಅವರ ಪುಣ್ಯಸ್ಮರಣೆ ಅಂಗವಾಗಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮಂಗಳವಾರ ಬೆಳಗಾವಿ ನಮ್ಮದು ಎಂದಿದ್ದ ಹೇಳಿಕೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಖಂಡಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಜಿತ್ ಪವಾರ್‌ ಎರಡು ರಾಜ್ಯಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಇದನ್ನೂ ಖಂಡಿಸುತ್ತೇನೆ. ಗಡಿ ವಿಚಾರದಲ್ಲಿ ಮಹಾಜನ್ ವರದಿಯೇ ಅಂತಿಮ ಎಂಬುದು ಜಗತ್ತಿಗೆ ಗೊತ್ತಿದೆ. ಅನಗತ್ಯವಾಗಿ ಉದ್ಧಟತನದ ಹೇಳಿಕೆ ನೀಡಿದ್ದಾರೆ ಎಂದು ಕಿಡಿಕಾರಿದ್ದಾರೆ.

“ಮರಾಠಿಗರು ಸಹ ನಮ್ಮ ರಾಜ್ಯದ ಕನ್ನಡಿಗರಂತೆಯೇ, ನಾನು ಮರಾಠಗರ ಅಭಿವೃಧಿಗಾಗಿ ಪ್ರಾಧಿಕಾರ ಮಾಡಿದ್ದೇನೆ. ಮರಾಠಿಗರು ಕಟ್ಟಾ ಹಿಂದುತ್ವವಾದಿಗಳು. ಬೆಳಗಾವಿ ವಿಶ್ವ ಕನ್ನಡ ಸಮ್ಮೇಳನದಲ್ಲಿ ಭಾರಿ ಪ್ರಮಾಣದಲ್ಲಿ ಭಾಗವಹಿಸಿ, ಬೆಂಬಲಿಸಿದ್ದಾರೆ. ಇಂತಹ ಸಮಯದಲ್ಲಿ ಅಜಿತ್ ಪವಾರ್ ಬೆಂಕಿಹಚ್ಚುವ ಕೆಲಸ ಮಾಡಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ: 30 ಸಾವಿರ ಮರಾಠ ಮತದಾರರ ಓಲೈಕೆಗೆ ಈ ಅಭಿವೃದ್ಧಿ ನಿಗಮ- ಸಿದ್ದರಾಮಯ್ಯ ಕಿಡಿ

ಮರಾಠಿ ಭಾಷೆ ಮಾತನಾಡುವವರು ಹೆಚ್ಚಿನ ಸಂಖ್ಯೆಯಲ್ಲಿರುವ ಕರ್ನಾಟಕದ ಬೆಳಗಾವಿ, ಕಾರವಾರ ಹಾಗೂ ನಿಪ್ಪಾಣಿ ಸೇರಿದ ಅಖಂಡ ಮಹಾರಾಷ್ಟ್ರದ ಅಭಿವೃದ್ಧಿ ಬಾಳಾ ಠಾಕ್ರೆಯವರ ಕನಸಾಗಿತ್ತು. ಅದನ್ನ ನಾವು ನನಸು ಮಾಡಬೇಕು ಎಂದು ಅಜಿತ್ ಪವಾರ್ ಹೇಳಿದ್ದರು.

ಇದನ್ನೂ ಓದಿ: ಜಾತಿ ದ್ವೇಷ: ದಲಿತ ಕುಟುಂಬವನ್ನು ಕೊಲ್ಲಲು ತಂದೆಯಿಂದಲೇ ಮಗನಿಗೆ ಪ್ರಚೋದನೆ!

ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಕೂಡ “ಬೆಳಗಾವಿ ಕರ್ನಾಟಕದ ಭಾಗವಾಗಿದೆ ಎಂದು ಹೇಳಿರುವ ಮಹಾಜನ್ ವರದಿಯಲ್ಲಿ ನಮಗೆ ನಂಬಿಕೆ ಇದೆ. ಅಜಿತ್ ಪವಾರ್ ಹೇಳುತ್ತಿರುವುದನ್ನು ನಾವು ಖಂಡಿಸುತ್ತೇವೆ. ಈ ಬಗ್ಗೆ ನಾವು ಖಂಡಿತವಾಗಿ ಪತ್ರ ಬರೆಯುತ್ತೇವೆ” ಎಂದಿದ್ದಾರೆ.

ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವಿನ ಗಡಿ ವಿವಾದವನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ಅಕ್ಟೋಬರ್ 25, 1966 ರಲ್ಲಿ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಮೆಹರ್ ಚಂದ್ ಮಹಾಜನ್ ಅವರ ನೇತೃತ್ವದಲ್ಲಿ ಮಹಾಜನ್ ಆಯೋಗವನ್ನು ರಚಿಸಿತ್ತು.

ಈ ಆಯೋಗವು ನವೆಂಬರ್ 15, 1972 ರಲ್ಲಿ ಕೇಂದ್ರ ಗೃಹ ಇಲಾಖೆಗೆ ತನ್ನ ವರದಿ ಸಲ್ಲಿಸಿತ್ತು. ಇದರ  ಶಿಫಾರಸ್ಸಿನಂತೆ ಬೆಳಗಾವಿ ತನಗೆ ಸಿಗುವುದಿಲ್ಲ ಎಂದು ಗೊತ್ತಾದಾಗ ಮಹಾರಾಷ್ಟ್ರ ಮಹಾಜನ ಆಯೋಗದ ವರದಿಯನ್ನು ತಿರಸ್ಕರಿಸಿತು. ಗಡಿ ವಿವಾದವನ್ನು ಆರಂಭಿಸಿತು.

ಇತ್ತ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಿ ಮುಖ್ಯಮಂತ್ರಿ ಯಡಿಯೂರಪ್ಪನವರು ವಿರೋಧ ಪಕ್ಷಗಳು ಸೇರಿದಂತೆ ರಾಜ್ಯದಾದ್ಯಂತ ವ್ಯಾಪಕ ವಿರೋಧ ಎದುರಿಸುತ್ತಿದ್ದಾರೆ.  ರಾಜ್ಯ ಸರ್ಕಾರದ ಈ ಧೋರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸಹ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.

“ಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಸುಮಾರು 30,000 ಮರಾಠ ಸಮುದಾಯದ ಮತದಾರರನ್ನು ಸೆಳೆಯಲು ಈ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ” ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.


ಇದನ್ನೂ ಓದಿ: ‘ಮರಾಠರು ತಲತಲಾಂತರದಿಂದ ಇಲ್ಲಿಯೇ ಇದ್ದಾರೆ’- ಯಡಿಯೂರಪ್ಪ ಹೇಳಿಕೆಗೆ ನೆಟ್ಟಿಗರ ಆಕ್ರೋಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...