Homeಮುಖಪುಟಅಜಿತ್ ಪವಾರ್‌ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ, ಇದು ಖಂಡನೀಯ- ಸಿಎಂ ಯಡಿಯೂರಪ್ಪ

ಅಜಿತ್ ಪವಾರ್‌ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ, ಇದು ಖಂಡನೀಯ- ಸಿಎಂ ಯಡಿಯೂರಪ್ಪ

ಗಡಿ ವಿಚಾರದಲ್ಲಿ ಮಹಾಜನ್ ವರದಿಯೇ ಅಂತಿಮ ಎಂಬುದು ಜಗತ್ತಿಗೆ ಗೊತ್ತಿದೆ. ಅನಗತ್ಯವಾಗಿ ಉದ್ಧಟತನದ ಹೇಳಿಕೆ ನೀಡಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಕಿಡಿಕಾರಿದ್ದಾರೆ.

- Advertisement -
- Advertisement -

ಶಿವಸೇನೆ ಸಂಸ್ಥಾಪಕ ಬಾಳಾ ಠಾಕ್ರೆ ಅವರ ಪುಣ್ಯಸ್ಮರಣೆ ಅಂಗವಾಗಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮಂಗಳವಾರ ಬೆಳಗಾವಿ ನಮ್ಮದು ಎಂದಿದ್ದ ಹೇಳಿಕೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಖಂಡಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಜಿತ್ ಪವಾರ್‌ ಎರಡು ರಾಜ್ಯಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಇದನ್ನೂ ಖಂಡಿಸುತ್ತೇನೆ. ಗಡಿ ವಿಚಾರದಲ್ಲಿ ಮಹಾಜನ್ ವರದಿಯೇ ಅಂತಿಮ ಎಂಬುದು ಜಗತ್ತಿಗೆ ಗೊತ್ತಿದೆ. ಅನಗತ್ಯವಾಗಿ ಉದ್ಧಟತನದ ಹೇಳಿಕೆ ನೀಡಿದ್ದಾರೆ ಎಂದು ಕಿಡಿಕಾರಿದ್ದಾರೆ.

“ಮರಾಠಿಗರು ಸಹ ನಮ್ಮ ರಾಜ್ಯದ ಕನ್ನಡಿಗರಂತೆಯೇ, ನಾನು ಮರಾಠಗರ ಅಭಿವೃಧಿಗಾಗಿ ಪ್ರಾಧಿಕಾರ ಮಾಡಿದ್ದೇನೆ. ಮರಾಠಿಗರು ಕಟ್ಟಾ ಹಿಂದುತ್ವವಾದಿಗಳು. ಬೆಳಗಾವಿ ವಿಶ್ವ ಕನ್ನಡ ಸಮ್ಮೇಳನದಲ್ಲಿ ಭಾರಿ ಪ್ರಮಾಣದಲ್ಲಿ ಭಾಗವಹಿಸಿ, ಬೆಂಬಲಿಸಿದ್ದಾರೆ. ಇಂತಹ ಸಮಯದಲ್ಲಿ ಅಜಿತ್ ಪವಾರ್ ಬೆಂಕಿಹಚ್ಚುವ ಕೆಲಸ ಮಾಡಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ: 30 ಸಾವಿರ ಮರಾಠ ಮತದಾರರ ಓಲೈಕೆಗೆ ಈ ಅಭಿವೃದ್ಧಿ ನಿಗಮ- ಸಿದ್ದರಾಮಯ್ಯ ಕಿಡಿ

ಮರಾಠಿ ಭಾಷೆ ಮಾತನಾಡುವವರು ಹೆಚ್ಚಿನ ಸಂಖ್ಯೆಯಲ್ಲಿರುವ ಕರ್ನಾಟಕದ ಬೆಳಗಾವಿ, ಕಾರವಾರ ಹಾಗೂ ನಿಪ್ಪಾಣಿ ಸೇರಿದ ಅಖಂಡ ಮಹಾರಾಷ್ಟ್ರದ ಅಭಿವೃದ್ಧಿ ಬಾಳಾ ಠಾಕ್ರೆಯವರ ಕನಸಾಗಿತ್ತು. ಅದನ್ನ ನಾವು ನನಸು ಮಾಡಬೇಕು ಎಂದು ಅಜಿತ್ ಪವಾರ್ ಹೇಳಿದ್ದರು.

ಇದನ್ನೂ ಓದಿ: ಜಾತಿ ದ್ವೇಷ: ದಲಿತ ಕುಟುಂಬವನ್ನು ಕೊಲ್ಲಲು ತಂದೆಯಿಂದಲೇ ಮಗನಿಗೆ ಪ್ರಚೋದನೆ!

ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಕೂಡ “ಬೆಳಗಾವಿ ಕರ್ನಾಟಕದ ಭಾಗವಾಗಿದೆ ಎಂದು ಹೇಳಿರುವ ಮಹಾಜನ್ ವರದಿಯಲ್ಲಿ ನಮಗೆ ನಂಬಿಕೆ ಇದೆ. ಅಜಿತ್ ಪವಾರ್ ಹೇಳುತ್ತಿರುವುದನ್ನು ನಾವು ಖಂಡಿಸುತ್ತೇವೆ. ಈ ಬಗ್ಗೆ ನಾವು ಖಂಡಿತವಾಗಿ ಪತ್ರ ಬರೆಯುತ್ತೇವೆ” ಎಂದಿದ್ದಾರೆ.

ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವಿನ ಗಡಿ ವಿವಾದವನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ಅಕ್ಟೋಬರ್ 25, 1966 ರಲ್ಲಿ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಮೆಹರ್ ಚಂದ್ ಮಹಾಜನ್ ಅವರ ನೇತೃತ್ವದಲ್ಲಿ ಮಹಾಜನ್ ಆಯೋಗವನ್ನು ರಚಿಸಿತ್ತು.

ಈ ಆಯೋಗವು ನವೆಂಬರ್ 15, 1972 ರಲ್ಲಿ ಕೇಂದ್ರ ಗೃಹ ಇಲಾಖೆಗೆ ತನ್ನ ವರದಿ ಸಲ್ಲಿಸಿತ್ತು. ಇದರ  ಶಿಫಾರಸ್ಸಿನಂತೆ ಬೆಳಗಾವಿ ತನಗೆ ಸಿಗುವುದಿಲ್ಲ ಎಂದು ಗೊತ್ತಾದಾಗ ಮಹಾರಾಷ್ಟ್ರ ಮಹಾಜನ ಆಯೋಗದ ವರದಿಯನ್ನು ತಿರಸ್ಕರಿಸಿತು. ಗಡಿ ವಿವಾದವನ್ನು ಆರಂಭಿಸಿತು.

ಇತ್ತ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಿ ಮುಖ್ಯಮಂತ್ರಿ ಯಡಿಯೂರಪ್ಪನವರು ವಿರೋಧ ಪಕ್ಷಗಳು ಸೇರಿದಂತೆ ರಾಜ್ಯದಾದ್ಯಂತ ವ್ಯಾಪಕ ವಿರೋಧ ಎದುರಿಸುತ್ತಿದ್ದಾರೆ.  ರಾಜ್ಯ ಸರ್ಕಾರದ ಈ ಧೋರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸಹ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.

“ಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಸುಮಾರು 30,000 ಮರಾಠ ಸಮುದಾಯದ ಮತದಾರರನ್ನು ಸೆಳೆಯಲು ಈ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ” ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.


ಇದನ್ನೂ ಓದಿ: ‘ಮರಾಠರು ತಲತಲಾಂತರದಿಂದ ಇಲ್ಲಿಯೇ ಇದ್ದಾರೆ’- ಯಡಿಯೂರಪ್ಪ ಹೇಳಿಕೆಗೆ ನೆಟ್ಟಿಗರ ಆಕ್ರೋಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...