Homeಮುಖಪುಟಸಾಹಿತಿಗಳಿಗೆ ಬೆದರಿಕೆ ಪತ್ರ: ಸಾವರ್ಕರ್ ಕುರಿತ ಪುಸ್ತಕ ಓದುತ್ತಿದ್ದ ಆರೋಪಿ

ಸಾಹಿತಿಗಳಿಗೆ ಬೆದರಿಕೆ ಪತ್ರ: ಸಾವರ್ಕರ್ ಕುರಿತ ಪುಸ್ತಕ ಓದುತ್ತಿದ್ದ ಆರೋಪಿ

- Advertisement -
- Advertisement -

61 ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದಿದ್ದಕ್ಕಾಗಿ ಬೆಂಗಳೂರು ಪೊಲೀಸರಿಂದ ಬಂಧಿಸಲ್ಪಟ್ಟಿರುವ ಶಿವಾಜಿ ರಾವ್ ಜಾಧವ್ ವಿಡಿ ಸಾವರ್ಕರ್ ಬಗೆಗಿನ ಪುಸ್ತಕ ಸೇರಿದಂತೆ ಬಲಪಂಥೀಯ ರಾಷ್ಟ್ರೀಯವಾದದ ಬಗ್ಗೆ ಓದುತ್ತಿದ್ದ ಎನ್ನವುದು ತನಿಖೆಯ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ತನಿಖಾಧಿಕಾರಿಗಳು ತಿಳಿಸಿರುವ ಬಗ್ಗೆ ದಿ ನ್ಯೂಸ್‌ ಮಿನಿಟ್‌ ವರದಿ ಮಾಡಿದೆ.

ಸಹಿಷ್ಣ ಹಿಂದೂ ಎಂಬ ಹೆಸರಿನಲ್ಲಿ ಅನಾಮಧೇಯ ಪತ್ರಗಳನ್ನು ಬರೆಯುತ್ತಿದ್ದ ಜಾಧವ್‌ನ ನಿಕಟ ಜಾಲವನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ. ಪೊಲೀಸರು ಆತನ ಸಂಪರ್ಕದಲ್ಲಿದ್ದ ಜನರ ಬಗ್ಗೆ ತನಿಖೆ ಮಾಡುತ್ತಿದ್ದು ತನಿಖೆಯ ವ್ಯಾಪ್ತಿಯನ್ನು ವಿಸ್ತರಿಸಿದ್ದಾರೆ.

ಜಾಧವ್ 8ನೇ ತರಗತಿಗೆ ಶಾಲೆಯನ್ನು ಬಿಟ್ಟಿದ್ದು, ದಾವಣಗೆರೆಯಲ್ಲಿ ಮುದ್ರಣಾಲಯದಲ್ಲಿ ಕೆಲಸ ಮಾಡುತ್ತಿದ್ದ ಮತ್ತು ಮುದ್ರಣಾಲಯದಲ್ಲಿ ಮುದ್ರಿಸಲ್ಪಟ್ಟ ಸಾಹಿತ್ಯವನ್ನು ಓದುವ ಮೂಲಕ ಬಲಪಂಥೀಯ ಸಿದ್ಧಾಂತದಿಂದ ಪ್ರಭಾವಿತನಾಗಿದ್ದ.

ಸೆ.30ರಂದು ಜಾಧವ್‌ನನ್ನು ಬಂಧಿಸಿದ ನಂತರ ಪೊಲೀಸರು ದಾವಣಗೆರೆಯ ಆತನ ನಿವಾಸದಲ್ಲಿ ಶೋಧ ನಡೆಸಿದ್ದು, ಕರಪತ್ರಗಳು ಮತ್ತು ಆತ ಓದುತ್ತಿದ್ದ ಪುಸ್ತಕಗಳನ್ನು ವಶಪಡಿಸಿಕೊಂಡಿದ್ದಾರೆ. ಆತ ಯಾರ ಜೊತೆ ಸಂಪರ್ಕ ಹೊಂದಿದ್ದ? ಏನು ಮಾತನಾಡುತ್ತಿದ್ದ ಬಗ್ಗೆ ಪೊಲೀಸರು ತನಿಖೆ ನಡೆಸಲು ಮೊಬೈಲ್‌ನ್ನು ವಶಪಡಿಸಿಕೊಂಡಿದ್ದರು.

ಈ ವೇಳೆ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ 13ನೇ ಆರೋಪಿಯಾಗಿರುವ ಸುಜಿತ್ ಕುಮಾರ್ ನಡುವೆ ಈತನಿಗೆ ಸಂಪರ್ಕ ಇರುವುದು ಬಯಲಾಗಿದೆ. ಸುಜಿತ್ ಸನಾತನ ಸಂಸ್ಥೆ ಮತ್ತು ಇತರ ಹಿಂದುತ್ವದ ಗುಂಪುಗಳಿಗೆ ಹಿಂದುತ್ವದ ಬಗ್ಗೆ ಒಲವು ಇರುವ ಮತ್ತು ಅಪರಾಧಗಳನ್ನು ಮಾಡುವ ಸಾಮರ್ಥ್ಯವಿರುವ ಯುವಕರನ್ನು ಗುರುತಿಸುತ್ತಿದ್ದ. ಬಳಿಕ  ಅವರನ್ನು ಬ್ರೈನ್‌ ವಾಶ್‌ ಮಾಡಿ ಗ್ಯಾಂಗ್‌ಗೆ ಸೇರಿಸಿಕೊಳ್ಳುತ್ತಿದ್ದ.

ಸುಜಿತ್ ಕುಮಾರ್ ಜಾದವ್‌ಗೆ ಪರಿಚಿತನಾಗಿದ್ದ. ಜಾದವ್‌ನನ್ನು ಸುಜಿತ್‌ ಬೇರೆ ಬೇರೆ ಸಂದರ್ಭಗಳಲ್ಲಿ ಭೇಟಿಯಾಗಿದ್ದ. ಸುಜಿತ್‌ಗೆ ಭೇಟಿಯಾಗುವ ಮುನ್ನ ಜಾದವ್ ಎರಡು ಮೂರು ಬೆದರಿಕೆ ಪತ್ರಗಳನ್ನು ಬರೆದಿದ್ದ. ಆದರೆ ಅದು ಕಠೋರವಾಗಿರಲಿಲ್ಲ. ಆದರೆ ಸುಜಿತ್‌ಗೆ ಭೇಟಿ ಬಳಿಕ ಜಾಧವ್ ಬರೆದ ಪತ್ರಗಳು ಕಠೋರವಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಾಧವ್ ದಾವಣಗೆರೆಯ ತನ್ನ ಮನೆಯ ಸಮೀಪದಲ್ಲಿರುವ ಲೈಬ್ರರಿಯಲ್ಲಿ ಎಲ್ಲಾ ದಿನಪತ್ರಿಕೆಗಳನ್ನು ಓದುತ್ತಿದ್ದ. ನಂತರ ಅವನು ಹಿಂದುತ್ವವನ್ನು ವಿರೋಧಿಸುವ ಬರಹಗಾರರು ಮತ್ತು ಬುದ್ಧಿಜೀವಿಗಳ ಪಟ್ಟಿಯನ್ನು ಮಾಡಿದ್ದ. ಬಳಿಕ ಅವರು ಬರೆದ ಪುಸ್ತಕಗಳನ್ನು ಸಂಗ್ರಹಿಸಿ ಪುಸ್ತಕದಿಂದ ಅವರ ವಿಳಾಸವನ್ನು ಸಂಗ್ರಹಿಸಿದ್ದಾನೆ. ಪತ್ರ ಬರೆದ ಬಳಿಕ ಪತ್ರಿಕೆಯಲ್ಲಿ ವರದಿಯಾಗಿದೆಯಾ ಎಂದು ಕೂಡ ಪರಿಶೀಲಿಸಿ ತನ್ನ ಬೆದರಿಕೆ ಪತ್ರಗಳ ಬಗ್ಗೆ ಬರೆದ ಕಟ್ಟಿಂಗ್‌ಗಳನ್ನು ತೆಗೆದಿಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಜಾಧವ್ ದಾವಣಗೆರೆಯ ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಯಾಗಿದ್ದಾನೆ. ಶಿವಮೊಗ್ಗದಲ್ಲಿ ಹತ್ಯೆಯಾದ ಭಜರಂಗದಳದ ಕಾರ್ಯಕರ್ತ ಹರ್ಷನ ಬಗ್ಗೆ ಹಲವು ಪ್ರತಿಭಟನೆ ಸಭೆ ಆಯೋಜಿಸಿದ್ದ. ಕರ್ನಾಟಕದಲ್ಲಿ ಹಿಜಾಬ್ ಮತ್ತು ಹಲಾಲ್ ವಿವಾದದ ವೇಳೆ ಮಾತನಾಡಿದ್ದ. ಈ ವೇಳೆ ದಾವಣಗೆರೆ ಪೊಲೀಸರು ಜಾಧವ್ ವಿರುದ್ಧ ಐಪಿಸಿ ಸೆಕ್ಷನ್ 107ರ ಅಡಿಯಲ್ಲಿ ಶಾಂತಿ ಭಂಗ ಅಥವಾ ಸಾರ್ವಜನಿಕ ನೆಮ್ಮದಿಗೆ ಭಂಗ ತರುವ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಸಿದ್ದರು.

ಏ.2022ರಿಂದ ಹಿಂದುತ್ವದ ವಿರುದ್ಧ ಮಾತನಾಡಿದ ಸುಮಾರು 6 ಪ್ರಗತಿಪರ ಬರಹಗಾರರು ಮತ್ತು ಚಿಂತಕರಿಗೆ ಜಾಧವ್ ನಿಯಮಿತವಾಗಿ ಪತ್ರವನ್ನು ಬರೆದಿದ್ದಾನೆ. ಖ್ಯಾತ ಸಾಹಿತಿಗಳಾದ ಕೆ ಮರುಳಸಿದ್ದಪ್ಪ, ಲೇಖಕ ಕುಂ ವೀರಭದ್ರಪ್ಪ, ಬಿಎಲ್ ವೇಣು, ಬರಗೂರು ರಾಮಚಂದ್ರಪ್ಪ, ಬಂಜಗೆರೆ ಜಯಪ್ರಕಾಶ, ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಸೇರಿದಂತೆ 61 ಮಂದಿಗೆ ಪತ್ರ ಬರೆದಿದ್ದಾನೆ.

ಪತ್ರದಲ್ಲಿ ಜಾಧವ್, ಸಾಹಿತಿಗಳಿಗೆ ದೇಶದ್ರೋಹಿ, ರಾಷ್ಟ್ರವಿರೋಧಿ ಮತ್ತು ಹಿಂದೂ ವಿರೋಧಿ ಎಂದು ಕರೆದಿದ್ದಾನೆ. ಪತ್ರಗಳು ಸಾಮಾನ್ಯವಾಗಿ ಸಾರ್ವಜನಿಕ ಕ್ಷಮೆಯಾಚನೆಯೊಂದಿಗೆ ಕೊನೆಗೊಳ್ಳುತ್ತವೆ. ಬರಹಗಾರರು ತಮ್ಮ ನಿಲುವನ್ನು ಬದಲಾಯಿಸದಿದ್ದರೆ ಅವರು ಯಾವುದೇ ರೂಪದಲ್ಲಿ ಸಾವಿಗೆ ಸಿದ್ಧರಾಗಬೇಕು, ಅದು ಶೀಘ್ರದಲ್ಲೇ ಬರಲಿದೆ ಎಂದು ಪತ್ರದಲ್ಲಿ ಕೊನೆಗೆ ಉಲ್ಲೇಖಿಸಲಾಗುತ್ತಿತ್ತು.

ಪತ್ರಗಳನ್ನು ಸ್ವೀಕರಿಸಿದವರು ಒಟ್ಟು 7 ದೂರುಗಳನ್ನು ಸಲ್ಲಿಸಿದ್ದರು. ಆದರೆ ಸಿಎಂ ಬೊಮ್ಮಾಯಿ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರವು ಪತ್ರ ಬರೆದವರನ್ನು ಪತ್ತೆ ಹಚ್ಚಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದರು.

ಆ.22, 2023ರಂದು, ಬರಹಗಾರರ ನಿಯೋಗವು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕ್ರಮಕ್ಕೆ ಆಗ್ರಹಿಸಿದೆ. ನಂತರ ಪ್ರಕರಣವನ್ನು ಅಪರಾಧ ವಿಭಾಗಕ್ಕೆ ಹಸ್ತಾಂತರಿಸಲಾಗಿದೆ. ಈ ಬಗ್ಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಪೋಸ್ಟಲ್‌ ಸ್ಟಾಂಪ್‌ನ ಆಧಾರದಲ್ಲಿ ಮತ್ತು ಅಂಚೆ ಕಚೇರಿ ಬಳಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಬಳಿಕ ಜಾದವ್‌ ಬಂಧನ ನಡೆದಿದೆ.

ಇದನ್ನು ಓದಿ: ಕೇರಳ: ಇಡಿಯಿಂದ ಕಾಂಗ್ರೆಸ್‌ ನಾಯಕ ಕೆ.ಕೆ.ಅಬ್ರಹಾಂ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...