Homeಮುಖಪುಟಸಾಹಿತಿಗಳಿಗೆ ಬೆದರಿಕೆ ಪತ್ರ: ಸಾವರ್ಕರ್ ಕುರಿತ ಪುಸ್ತಕ ಓದುತ್ತಿದ್ದ ಆರೋಪಿ

ಸಾಹಿತಿಗಳಿಗೆ ಬೆದರಿಕೆ ಪತ್ರ: ಸಾವರ್ಕರ್ ಕುರಿತ ಪುಸ್ತಕ ಓದುತ್ತಿದ್ದ ಆರೋಪಿ

- Advertisement -
- Advertisement -

61 ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದಿದ್ದಕ್ಕಾಗಿ ಬೆಂಗಳೂರು ಪೊಲೀಸರಿಂದ ಬಂಧಿಸಲ್ಪಟ್ಟಿರುವ ಶಿವಾಜಿ ರಾವ್ ಜಾಧವ್ ವಿಡಿ ಸಾವರ್ಕರ್ ಬಗೆಗಿನ ಪುಸ್ತಕ ಸೇರಿದಂತೆ ಬಲಪಂಥೀಯ ರಾಷ್ಟ್ರೀಯವಾದದ ಬಗ್ಗೆ ಓದುತ್ತಿದ್ದ ಎನ್ನವುದು ತನಿಖೆಯ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ತನಿಖಾಧಿಕಾರಿಗಳು ತಿಳಿಸಿರುವ ಬಗ್ಗೆ ದಿ ನ್ಯೂಸ್‌ ಮಿನಿಟ್‌ ವರದಿ ಮಾಡಿದೆ.

ಸಹಿಷ್ಣ ಹಿಂದೂ ಎಂಬ ಹೆಸರಿನಲ್ಲಿ ಅನಾಮಧೇಯ ಪತ್ರಗಳನ್ನು ಬರೆಯುತ್ತಿದ್ದ ಜಾಧವ್‌ನ ನಿಕಟ ಜಾಲವನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ. ಪೊಲೀಸರು ಆತನ ಸಂಪರ್ಕದಲ್ಲಿದ್ದ ಜನರ ಬಗ್ಗೆ ತನಿಖೆ ಮಾಡುತ್ತಿದ್ದು ತನಿಖೆಯ ವ್ಯಾಪ್ತಿಯನ್ನು ವಿಸ್ತರಿಸಿದ್ದಾರೆ.

ಜಾಧವ್ 8ನೇ ತರಗತಿಗೆ ಶಾಲೆಯನ್ನು ಬಿಟ್ಟಿದ್ದು, ದಾವಣಗೆರೆಯಲ್ಲಿ ಮುದ್ರಣಾಲಯದಲ್ಲಿ ಕೆಲಸ ಮಾಡುತ್ತಿದ್ದ ಮತ್ತು ಮುದ್ರಣಾಲಯದಲ್ಲಿ ಮುದ್ರಿಸಲ್ಪಟ್ಟ ಸಾಹಿತ್ಯವನ್ನು ಓದುವ ಮೂಲಕ ಬಲಪಂಥೀಯ ಸಿದ್ಧಾಂತದಿಂದ ಪ್ರಭಾವಿತನಾಗಿದ್ದ.

ಸೆ.30ರಂದು ಜಾಧವ್‌ನನ್ನು ಬಂಧಿಸಿದ ನಂತರ ಪೊಲೀಸರು ದಾವಣಗೆರೆಯ ಆತನ ನಿವಾಸದಲ್ಲಿ ಶೋಧ ನಡೆಸಿದ್ದು, ಕರಪತ್ರಗಳು ಮತ್ತು ಆತ ಓದುತ್ತಿದ್ದ ಪುಸ್ತಕಗಳನ್ನು ವಶಪಡಿಸಿಕೊಂಡಿದ್ದಾರೆ. ಆತ ಯಾರ ಜೊತೆ ಸಂಪರ್ಕ ಹೊಂದಿದ್ದ? ಏನು ಮಾತನಾಡುತ್ತಿದ್ದ ಬಗ್ಗೆ ಪೊಲೀಸರು ತನಿಖೆ ನಡೆಸಲು ಮೊಬೈಲ್‌ನ್ನು ವಶಪಡಿಸಿಕೊಂಡಿದ್ದರು.

ಈ ವೇಳೆ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ 13ನೇ ಆರೋಪಿಯಾಗಿರುವ ಸುಜಿತ್ ಕುಮಾರ್ ನಡುವೆ ಈತನಿಗೆ ಸಂಪರ್ಕ ಇರುವುದು ಬಯಲಾಗಿದೆ. ಸುಜಿತ್ ಸನಾತನ ಸಂಸ್ಥೆ ಮತ್ತು ಇತರ ಹಿಂದುತ್ವದ ಗುಂಪುಗಳಿಗೆ ಹಿಂದುತ್ವದ ಬಗ್ಗೆ ಒಲವು ಇರುವ ಮತ್ತು ಅಪರಾಧಗಳನ್ನು ಮಾಡುವ ಸಾಮರ್ಥ್ಯವಿರುವ ಯುವಕರನ್ನು ಗುರುತಿಸುತ್ತಿದ್ದ. ಬಳಿಕ  ಅವರನ್ನು ಬ್ರೈನ್‌ ವಾಶ್‌ ಮಾಡಿ ಗ್ಯಾಂಗ್‌ಗೆ ಸೇರಿಸಿಕೊಳ್ಳುತ್ತಿದ್ದ.

ಸುಜಿತ್ ಕುಮಾರ್ ಜಾದವ್‌ಗೆ ಪರಿಚಿತನಾಗಿದ್ದ. ಜಾದವ್‌ನನ್ನು ಸುಜಿತ್‌ ಬೇರೆ ಬೇರೆ ಸಂದರ್ಭಗಳಲ್ಲಿ ಭೇಟಿಯಾಗಿದ್ದ. ಸುಜಿತ್‌ಗೆ ಭೇಟಿಯಾಗುವ ಮುನ್ನ ಜಾದವ್ ಎರಡು ಮೂರು ಬೆದರಿಕೆ ಪತ್ರಗಳನ್ನು ಬರೆದಿದ್ದ. ಆದರೆ ಅದು ಕಠೋರವಾಗಿರಲಿಲ್ಲ. ಆದರೆ ಸುಜಿತ್‌ಗೆ ಭೇಟಿ ಬಳಿಕ ಜಾಧವ್ ಬರೆದ ಪತ್ರಗಳು ಕಠೋರವಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಾಧವ್ ದಾವಣಗೆರೆಯ ತನ್ನ ಮನೆಯ ಸಮೀಪದಲ್ಲಿರುವ ಲೈಬ್ರರಿಯಲ್ಲಿ ಎಲ್ಲಾ ದಿನಪತ್ರಿಕೆಗಳನ್ನು ಓದುತ್ತಿದ್ದ. ನಂತರ ಅವನು ಹಿಂದುತ್ವವನ್ನು ವಿರೋಧಿಸುವ ಬರಹಗಾರರು ಮತ್ತು ಬುದ್ಧಿಜೀವಿಗಳ ಪಟ್ಟಿಯನ್ನು ಮಾಡಿದ್ದ. ಬಳಿಕ ಅವರು ಬರೆದ ಪುಸ್ತಕಗಳನ್ನು ಸಂಗ್ರಹಿಸಿ ಪುಸ್ತಕದಿಂದ ಅವರ ವಿಳಾಸವನ್ನು ಸಂಗ್ರಹಿಸಿದ್ದಾನೆ. ಪತ್ರ ಬರೆದ ಬಳಿಕ ಪತ್ರಿಕೆಯಲ್ಲಿ ವರದಿಯಾಗಿದೆಯಾ ಎಂದು ಕೂಡ ಪರಿಶೀಲಿಸಿ ತನ್ನ ಬೆದರಿಕೆ ಪತ್ರಗಳ ಬಗ್ಗೆ ಬರೆದ ಕಟ್ಟಿಂಗ್‌ಗಳನ್ನು ತೆಗೆದಿಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಜಾಧವ್ ದಾವಣಗೆರೆಯ ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಯಾಗಿದ್ದಾನೆ. ಶಿವಮೊಗ್ಗದಲ್ಲಿ ಹತ್ಯೆಯಾದ ಭಜರಂಗದಳದ ಕಾರ್ಯಕರ್ತ ಹರ್ಷನ ಬಗ್ಗೆ ಹಲವು ಪ್ರತಿಭಟನೆ ಸಭೆ ಆಯೋಜಿಸಿದ್ದ. ಕರ್ನಾಟಕದಲ್ಲಿ ಹಿಜಾಬ್ ಮತ್ತು ಹಲಾಲ್ ವಿವಾದದ ವೇಳೆ ಮಾತನಾಡಿದ್ದ. ಈ ವೇಳೆ ದಾವಣಗೆರೆ ಪೊಲೀಸರು ಜಾಧವ್ ವಿರುದ್ಧ ಐಪಿಸಿ ಸೆಕ್ಷನ್ 107ರ ಅಡಿಯಲ್ಲಿ ಶಾಂತಿ ಭಂಗ ಅಥವಾ ಸಾರ್ವಜನಿಕ ನೆಮ್ಮದಿಗೆ ಭಂಗ ತರುವ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಸಿದ್ದರು.

ಏ.2022ರಿಂದ ಹಿಂದುತ್ವದ ವಿರುದ್ಧ ಮಾತನಾಡಿದ ಸುಮಾರು 6 ಪ್ರಗತಿಪರ ಬರಹಗಾರರು ಮತ್ತು ಚಿಂತಕರಿಗೆ ಜಾಧವ್ ನಿಯಮಿತವಾಗಿ ಪತ್ರವನ್ನು ಬರೆದಿದ್ದಾನೆ. ಖ್ಯಾತ ಸಾಹಿತಿಗಳಾದ ಕೆ ಮರುಳಸಿದ್ದಪ್ಪ, ಲೇಖಕ ಕುಂ ವೀರಭದ್ರಪ್ಪ, ಬಿಎಲ್ ವೇಣು, ಬರಗೂರು ರಾಮಚಂದ್ರಪ್ಪ, ಬಂಜಗೆರೆ ಜಯಪ್ರಕಾಶ, ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಸೇರಿದಂತೆ 61 ಮಂದಿಗೆ ಪತ್ರ ಬರೆದಿದ್ದಾನೆ.

ಪತ್ರದಲ್ಲಿ ಜಾಧವ್, ಸಾಹಿತಿಗಳಿಗೆ ದೇಶದ್ರೋಹಿ, ರಾಷ್ಟ್ರವಿರೋಧಿ ಮತ್ತು ಹಿಂದೂ ವಿರೋಧಿ ಎಂದು ಕರೆದಿದ್ದಾನೆ. ಪತ್ರಗಳು ಸಾಮಾನ್ಯವಾಗಿ ಸಾರ್ವಜನಿಕ ಕ್ಷಮೆಯಾಚನೆಯೊಂದಿಗೆ ಕೊನೆಗೊಳ್ಳುತ್ತವೆ. ಬರಹಗಾರರು ತಮ್ಮ ನಿಲುವನ್ನು ಬದಲಾಯಿಸದಿದ್ದರೆ ಅವರು ಯಾವುದೇ ರೂಪದಲ್ಲಿ ಸಾವಿಗೆ ಸಿದ್ಧರಾಗಬೇಕು, ಅದು ಶೀಘ್ರದಲ್ಲೇ ಬರಲಿದೆ ಎಂದು ಪತ್ರದಲ್ಲಿ ಕೊನೆಗೆ ಉಲ್ಲೇಖಿಸಲಾಗುತ್ತಿತ್ತು.

ಪತ್ರಗಳನ್ನು ಸ್ವೀಕರಿಸಿದವರು ಒಟ್ಟು 7 ದೂರುಗಳನ್ನು ಸಲ್ಲಿಸಿದ್ದರು. ಆದರೆ ಸಿಎಂ ಬೊಮ್ಮಾಯಿ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರವು ಪತ್ರ ಬರೆದವರನ್ನು ಪತ್ತೆ ಹಚ್ಚಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದರು.

ಆ.22, 2023ರಂದು, ಬರಹಗಾರರ ನಿಯೋಗವು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕ್ರಮಕ್ಕೆ ಆಗ್ರಹಿಸಿದೆ. ನಂತರ ಪ್ರಕರಣವನ್ನು ಅಪರಾಧ ವಿಭಾಗಕ್ಕೆ ಹಸ್ತಾಂತರಿಸಲಾಗಿದೆ. ಈ ಬಗ್ಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಪೋಸ್ಟಲ್‌ ಸ್ಟಾಂಪ್‌ನ ಆಧಾರದಲ್ಲಿ ಮತ್ತು ಅಂಚೆ ಕಚೇರಿ ಬಳಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಬಳಿಕ ಜಾದವ್‌ ಬಂಧನ ನಡೆದಿದೆ.

ಇದನ್ನು ಓದಿ: ಕೇರಳ: ಇಡಿಯಿಂದ ಕಾಂಗ್ರೆಸ್‌ ನಾಯಕ ಕೆ.ಕೆ.ಅಬ್ರಹಾಂ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...