Homeಮುಖಪುಟಸಾಹಿತಿಗಳಿಗೆ ಬೆದರಿಕೆ ಪತ್ರ: ಸಾವರ್ಕರ್ ಕುರಿತ ಪುಸ್ತಕ ಓದುತ್ತಿದ್ದ ಆರೋಪಿ

ಸಾಹಿತಿಗಳಿಗೆ ಬೆದರಿಕೆ ಪತ್ರ: ಸಾವರ್ಕರ್ ಕುರಿತ ಪುಸ್ತಕ ಓದುತ್ತಿದ್ದ ಆರೋಪಿ

- Advertisement -
- Advertisement -

61 ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದಿದ್ದಕ್ಕಾಗಿ ಬೆಂಗಳೂರು ಪೊಲೀಸರಿಂದ ಬಂಧಿಸಲ್ಪಟ್ಟಿರುವ ಶಿವಾಜಿ ರಾವ್ ಜಾಧವ್ ವಿಡಿ ಸಾವರ್ಕರ್ ಬಗೆಗಿನ ಪುಸ್ತಕ ಸೇರಿದಂತೆ ಬಲಪಂಥೀಯ ರಾಷ್ಟ್ರೀಯವಾದದ ಬಗ್ಗೆ ಓದುತ್ತಿದ್ದ ಎನ್ನವುದು ತನಿಖೆಯ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ತನಿಖಾಧಿಕಾರಿಗಳು ತಿಳಿಸಿರುವ ಬಗ್ಗೆ ದಿ ನ್ಯೂಸ್‌ ಮಿನಿಟ್‌ ವರದಿ ಮಾಡಿದೆ.

ಸಹಿಷ್ಣ ಹಿಂದೂ ಎಂಬ ಹೆಸರಿನಲ್ಲಿ ಅನಾಮಧೇಯ ಪತ್ರಗಳನ್ನು ಬರೆಯುತ್ತಿದ್ದ ಜಾಧವ್‌ನ ನಿಕಟ ಜಾಲವನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ. ಪೊಲೀಸರು ಆತನ ಸಂಪರ್ಕದಲ್ಲಿದ್ದ ಜನರ ಬಗ್ಗೆ ತನಿಖೆ ಮಾಡುತ್ತಿದ್ದು ತನಿಖೆಯ ವ್ಯಾಪ್ತಿಯನ್ನು ವಿಸ್ತರಿಸಿದ್ದಾರೆ.

ಜಾಧವ್ 8ನೇ ತರಗತಿಗೆ ಶಾಲೆಯನ್ನು ಬಿಟ್ಟಿದ್ದು, ದಾವಣಗೆರೆಯಲ್ಲಿ ಮುದ್ರಣಾಲಯದಲ್ಲಿ ಕೆಲಸ ಮಾಡುತ್ತಿದ್ದ ಮತ್ತು ಮುದ್ರಣಾಲಯದಲ್ಲಿ ಮುದ್ರಿಸಲ್ಪಟ್ಟ ಸಾಹಿತ್ಯವನ್ನು ಓದುವ ಮೂಲಕ ಬಲಪಂಥೀಯ ಸಿದ್ಧಾಂತದಿಂದ ಪ್ರಭಾವಿತನಾಗಿದ್ದ.

ಸೆ.30ರಂದು ಜಾಧವ್‌ನನ್ನು ಬಂಧಿಸಿದ ನಂತರ ಪೊಲೀಸರು ದಾವಣಗೆರೆಯ ಆತನ ನಿವಾಸದಲ್ಲಿ ಶೋಧ ನಡೆಸಿದ್ದು, ಕರಪತ್ರಗಳು ಮತ್ತು ಆತ ಓದುತ್ತಿದ್ದ ಪುಸ್ತಕಗಳನ್ನು ವಶಪಡಿಸಿಕೊಂಡಿದ್ದಾರೆ. ಆತ ಯಾರ ಜೊತೆ ಸಂಪರ್ಕ ಹೊಂದಿದ್ದ? ಏನು ಮಾತನಾಡುತ್ತಿದ್ದ ಬಗ್ಗೆ ಪೊಲೀಸರು ತನಿಖೆ ನಡೆಸಲು ಮೊಬೈಲ್‌ನ್ನು ವಶಪಡಿಸಿಕೊಂಡಿದ್ದರು.

ಈ ವೇಳೆ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ 13ನೇ ಆರೋಪಿಯಾಗಿರುವ ಸುಜಿತ್ ಕುಮಾರ್ ನಡುವೆ ಈತನಿಗೆ ಸಂಪರ್ಕ ಇರುವುದು ಬಯಲಾಗಿದೆ. ಸುಜಿತ್ ಸನಾತನ ಸಂಸ್ಥೆ ಮತ್ತು ಇತರ ಹಿಂದುತ್ವದ ಗುಂಪುಗಳಿಗೆ ಹಿಂದುತ್ವದ ಬಗ್ಗೆ ಒಲವು ಇರುವ ಮತ್ತು ಅಪರಾಧಗಳನ್ನು ಮಾಡುವ ಸಾಮರ್ಥ್ಯವಿರುವ ಯುವಕರನ್ನು ಗುರುತಿಸುತ್ತಿದ್ದ. ಬಳಿಕ  ಅವರನ್ನು ಬ್ರೈನ್‌ ವಾಶ್‌ ಮಾಡಿ ಗ್ಯಾಂಗ್‌ಗೆ ಸೇರಿಸಿಕೊಳ್ಳುತ್ತಿದ್ದ.

ಸುಜಿತ್ ಕುಮಾರ್ ಜಾದವ್‌ಗೆ ಪರಿಚಿತನಾಗಿದ್ದ. ಜಾದವ್‌ನನ್ನು ಸುಜಿತ್‌ ಬೇರೆ ಬೇರೆ ಸಂದರ್ಭಗಳಲ್ಲಿ ಭೇಟಿಯಾಗಿದ್ದ. ಸುಜಿತ್‌ಗೆ ಭೇಟಿಯಾಗುವ ಮುನ್ನ ಜಾದವ್ ಎರಡು ಮೂರು ಬೆದರಿಕೆ ಪತ್ರಗಳನ್ನು ಬರೆದಿದ್ದ. ಆದರೆ ಅದು ಕಠೋರವಾಗಿರಲಿಲ್ಲ. ಆದರೆ ಸುಜಿತ್‌ಗೆ ಭೇಟಿ ಬಳಿಕ ಜಾಧವ್ ಬರೆದ ಪತ್ರಗಳು ಕಠೋರವಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಾಧವ್ ದಾವಣಗೆರೆಯ ತನ್ನ ಮನೆಯ ಸಮೀಪದಲ್ಲಿರುವ ಲೈಬ್ರರಿಯಲ್ಲಿ ಎಲ್ಲಾ ದಿನಪತ್ರಿಕೆಗಳನ್ನು ಓದುತ್ತಿದ್ದ. ನಂತರ ಅವನು ಹಿಂದುತ್ವವನ್ನು ವಿರೋಧಿಸುವ ಬರಹಗಾರರು ಮತ್ತು ಬುದ್ಧಿಜೀವಿಗಳ ಪಟ್ಟಿಯನ್ನು ಮಾಡಿದ್ದ. ಬಳಿಕ ಅವರು ಬರೆದ ಪುಸ್ತಕಗಳನ್ನು ಸಂಗ್ರಹಿಸಿ ಪುಸ್ತಕದಿಂದ ಅವರ ವಿಳಾಸವನ್ನು ಸಂಗ್ರಹಿಸಿದ್ದಾನೆ. ಪತ್ರ ಬರೆದ ಬಳಿಕ ಪತ್ರಿಕೆಯಲ್ಲಿ ವರದಿಯಾಗಿದೆಯಾ ಎಂದು ಕೂಡ ಪರಿಶೀಲಿಸಿ ತನ್ನ ಬೆದರಿಕೆ ಪತ್ರಗಳ ಬಗ್ಗೆ ಬರೆದ ಕಟ್ಟಿಂಗ್‌ಗಳನ್ನು ತೆಗೆದಿಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಜಾಧವ್ ದಾವಣಗೆರೆಯ ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಯಾಗಿದ್ದಾನೆ. ಶಿವಮೊಗ್ಗದಲ್ಲಿ ಹತ್ಯೆಯಾದ ಭಜರಂಗದಳದ ಕಾರ್ಯಕರ್ತ ಹರ್ಷನ ಬಗ್ಗೆ ಹಲವು ಪ್ರತಿಭಟನೆ ಸಭೆ ಆಯೋಜಿಸಿದ್ದ. ಕರ್ನಾಟಕದಲ್ಲಿ ಹಿಜಾಬ್ ಮತ್ತು ಹಲಾಲ್ ವಿವಾದದ ವೇಳೆ ಮಾತನಾಡಿದ್ದ. ಈ ವೇಳೆ ದಾವಣಗೆರೆ ಪೊಲೀಸರು ಜಾಧವ್ ವಿರುದ್ಧ ಐಪಿಸಿ ಸೆಕ್ಷನ್ 107ರ ಅಡಿಯಲ್ಲಿ ಶಾಂತಿ ಭಂಗ ಅಥವಾ ಸಾರ್ವಜನಿಕ ನೆಮ್ಮದಿಗೆ ಭಂಗ ತರುವ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಸಿದ್ದರು.

ಏ.2022ರಿಂದ ಹಿಂದುತ್ವದ ವಿರುದ್ಧ ಮಾತನಾಡಿದ ಸುಮಾರು 6 ಪ್ರಗತಿಪರ ಬರಹಗಾರರು ಮತ್ತು ಚಿಂತಕರಿಗೆ ಜಾಧವ್ ನಿಯಮಿತವಾಗಿ ಪತ್ರವನ್ನು ಬರೆದಿದ್ದಾನೆ. ಖ್ಯಾತ ಸಾಹಿತಿಗಳಾದ ಕೆ ಮರುಳಸಿದ್ದಪ್ಪ, ಲೇಖಕ ಕುಂ ವೀರಭದ್ರಪ್ಪ, ಬಿಎಲ್ ವೇಣು, ಬರಗೂರು ರಾಮಚಂದ್ರಪ್ಪ, ಬಂಜಗೆರೆ ಜಯಪ್ರಕಾಶ, ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಸೇರಿದಂತೆ 61 ಮಂದಿಗೆ ಪತ್ರ ಬರೆದಿದ್ದಾನೆ.

ಪತ್ರದಲ್ಲಿ ಜಾಧವ್, ಸಾಹಿತಿಗಳಿಗೆ ದೇಶದ್ರೋಹಿ, ರಾಷ್ಟ್ರವಿರೋಧಿ ಮತ್ತು ಹಿಂದೂ ವಿರೋಧಿ ಎಂದು ಕರೆದಿದ್ದಾನೆ. ಪತ್ರಗಳು ಸಾಮಾನ್ಯವಾಗಿ ಸಾರ್ವಜನಿಕ ಕ್ಷಮೆಯಾಚನೆಯೊಂದಿಗೆ ಕೊನೆಗೊಳ್ಳುತ್ತವೆ. ಬರಹಗಾರರು ತಮ್ಮ ನಿಲುವನ್ನು ಬದಲಾಯಿಸದಿದ್ದರೆ ಅವರು ಯಾವುದೇ ರೂಪದಲ್ಲಿ ಸಾವಿಗೆ ಸಿದ್ಧರಾಗಬೇಕು, ಅದು ಶೀಘ್ರದಲ್ಲೇ ಬರಲಿದೆ ಎಂದು ಪತ್ರದಲ್ಲಿ ಕೊನೆಗೆ ಉಲ್ಲೇಖಿಸಲಾಗುತ್ತಿತ್ತು.

ಪತ್ರಗಳನ್ನು ಸ್ವೀಕರಿಸಿದವರು ಒಟ್ಟು 7 ದೂರುಗಳನ್ನು ಸಲ್ಲಿಸಿದ್ದರು. ಆದರೆ ಸಿಎಂ ಬೊಮ್ಮಾಯಿ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರವು ಪತ್ರ ಬರೆದವರನ್ನು ಪತ್ತೆ ಹಚ್ಚಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದರು.

ಆ.22, 2023ರಂದು, ಬರಹಗಾರರ ನಿಯೋಗವು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕ್ರಮಕ್ಕೆ ಆಗ್ರಹಿಸಿದೆ. ನಂತರ ಪ್ರಕರಣವನ್ನು ಅಪರಾಧ ವಿಭಾಗಕ್ಕೆ ಹಸ್ತಾಂತರಿಸಲಾಗಿದೆ. ಈ ಬಗ್ಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಪೋಸ್ಟಲ್‌ ಸ್ಟಾಂಪ್‌ನ ಆಧಾರದಲ್ಲಿ ಮತ್ತು ಅಂಚೆ ಕಚೇರಿ ಬಳಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಬಳಿಕ ಜಾದವ್‌ ಬಂಧನ ನಡೆದಿದೆ.

ಇದನ್ನು ಓದಿ: ಕೇರಳ: ಇಡಿಯಿಂದ ಕಾಂಗ್ರೆಸ್‌ ನಾಯಕ ಕೆ.ಕೆ.ಅಬ್ರಹಾಂ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...