Homeಮುಖಪುಟಸಾಹಿತಿಗಳಿಗೆ ಬೆದರಿಕೆ ಪತ್ರ: ಸಾವರ್ಕರ್ ಕುರಿತ ಪುಸ್ತಕ ಓದುತ್ತಿದ್ದ ಆರೋಪಿ

ಸಾಹಿತಿಗಳಿಗೆ ಬೆದರಿಕೆ ಪತ್ರ: ಸಾವರ್ಕರ್ ಕುರಿತ ಪುಸ್ತಕ ಓದುತ್ತಿದ್ದ ಆರೋಪಿ

- Advertisement -
- Advertisement -

61 ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದಿದ್ದಕ್ಕಾಗಿ ಬೆಂಗಳೂರು ಪೊಲೀಸರಿಂದ ಬಂಧಿಸಲ್ಪಟ್ಟಿರುವ ಶಿವಾಜಿ ರಾವ್ ಜಾಧವ್ ವಿಡಿ ಸಾವರ್ಕರ್ ಬಗೆಗಿನ ಪುಸ್ತಕ ಸೇರಿದಂತೆ ಬಲಪಂಥೀಯ ರಾಷ್ಟ್ರೀಯವಾದದ ಬಗ್ಗೆ ಓದುತ್ತಿದ್ದ ಎನ್ನವುದು ತನಿಖೆಯ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ತನಿಖಾಧಿಕಾರಿಗಳು ತಿಳಿಸಿರುವ ಬಗ್ಗೆ ದಿ ನ್ಯೂಸ್‌ ಮಿನಿಟ್‌ ವರದಿ ಮಾಡಿದೆ.

ಸಹಿಷ್ಣ ಹಿಂದೂ ಎಂಬ ಹೆಸರಿನಲ್ಲಿ ಅನಾಮಧೇಯ ಪತ್ರಗಳನ್ನು ಬರೆಯುತ್ತಿದ್ದ ಜಾಧವ್‌ನ ನಿಕಟ ಜಾಲವನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ. ಪೊಲೀಸರು ಆತನ ಸಂಪರ್ಕದಲ್ಲಿದ್ದ ಜನರ ಬಗ್ಗೆ ತನಿಖೆ ಮಾಡುತ್ತಿದ್ದು ತನಿಖೆಯ ವ್ಯಾಪ್ತಿಯನ್ನು ವಿಸ್ತರಿಸಿದ್ದಾರೆ.

ಜಾಧವ್ 8ನೇ ತರಗತಿಗೆ ಶಾಲೆಯನ್ನು ಬಿಟ್ಟಿದ್ದು, ದಾವಣಗೆರೆಯಲ್ಲಿ ಮುದ್ರಣಾಲಯದಲ್ಲಿ ಕೆಲಸ ಮಾಡುತ್ತಿದ್ದ ಮತ್ತು ಮುದ್ರಣಾಲಯದಲ್ಲಿ ಮುದ್ರಿಸಲ್ಪಟ್ಟ ಸಾಹಿತ್ಯವನ್ನು ಓದುವ ಮೂಲಕ ಬಲಪಂಥೀಯ ಸಿದ್ಧಾಂತದಿಂದ ಪ್ರಭಾವಿತನಾಗಿದ್ದ.

ಸೆ.30ರಂದು ಜಾಧವ್‌ನನ್ನು ಬಂಧಿಸಿದ ನಂತರ ಪೊಲೀಸರು ದಾವಣಗೆರೆಯ ಆತನ ನಿವಾಸದಲ್ಲಿ ಶೋಧ ನಡೆಸಿದ್ದು, ಕರಪತ್ರಗಳು ಮತ್ತು ಆತ ಓದುತ್ತಿದ್ದ ಪುಸ್ತಕಗಳನ್ನು ವಶಪಡಿಸಿಕೊಂಡಿದ್ದಾರೆ. ಆತ ಯಾರ ಜೊತೆ ಸಂಪರ್ಕ ಹೊಂದಿದ್ದ? ಏನು ಮಾತನಾಡುತ್ತಿದ್ದ ಬಗ್ಗೆ ಪೊಲೀಸರು ತನಿಖೆ ನಡೆಸಲು ಮೊಬೈಲ್‌ನ್ನು ವಶಪಡಿಸಿಕೊಂಡಿದ್ದರು.

ಈ ವೇಳೆ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ 13ನೇ ಆರೋಪಿಯಾಗಿರುವ ಸುಜಿತ್ ಕುಮಾರ್ ನಡುವೆ ಈತನಿಗೆ ಸಂಪರ್ಕ ಇರುವುದು ಬಯಲಾಗಿದೆ. ಸುಜಿತ್ ಸನಾತನ ಸಂಸ್ಥೆ ಮತ್ತು ಇತರ ಹಿಂದುತ್ವದ ಗುಂಪುಗಳಿಗೆ ಹಿಂದುತ್ವದ ಬಗ್ಗೆ ಒಲವು ಇರುವ ಮತ್ತು ಅಪರಾಧಗಳನ್ನು ಮಾಡುವ ಸಾಮರ್ಥ್ಯವಿರುವ ಯುವಕರನ್ನು ಗುರುತಿಸುತ್ತಿದ್ದ. ಬಳಿಕ  ಅವರನ್ನು ಬ್ರೈನ್‌ ವಾಶ್‌ ಮಾಡಿ ಗ್ಯಾಂಗ್‌ಗೆ ಸೇರಿಸಿಕೊಳ್ಳುತ್ತಿದ್ದ.

ಸುಜಿತ್ ಕುಮಾರ್ ಜಾದವ್‌ಗೆ ಪರಿಚಿತನಾಗಿದ್ದ. ಜಾದವ್‌ನನ್ನು ಸುಜಿತ್‌ ಬೇರೆ ಬೇರೆ ಸಂದರ್ಭಗಳಲ್ಲಿ ಭೇಟಿಯಾಗಿದ್ದ. ಸುಜಿತ್‌ಗೆ ಭೇಟಿಯಾಗುವ ಮುನ್ನ ಜಾದವ್ ಎರಡು ಮೂರು ಬೆದರಿಕೆ ಪತ್ರಗಳನ್ನು ಬರೆದಿದ್ದ. ಆದರೆ ಅದು ಕಠೋರವಾಗಿರಲಿಲ್ಲ. ಆದರೆ ಸುಜಿತ್‌ಗೆ ಭೇಟಿ ಬಳಿಕ ಜಾಧವ್ ಬರೆದ ಪತ್ರಗಳು ಕಠೋರವಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಾಧವ್ ದಾವಣಗೆರೆಯ ತನ್ನ ಮನೆಯ ಸಮೀಪದಲ್ಲಿರುವ ಲೈಬ್ರರಿಯಲ್ಲಿ ಎಲ್ಲಾ ದಿನಪತ್ರಿಕೆಗಳನ್ನು ಓದುತ್ತಿದ್ದ. ನಂತರ ಅವನು ಹಿಂದುತ್ವವನ್ನು ವಿರೋಧಿಸುವ ಬರಹಗಾರರು ಮತ್ತು ಬುದ್ಧಿಜೀವಿಗಳ ಪಟ್ಟಿಯನ್ನು ಮಾಡಿದ್ದ. ಬಳಿಕ ಅವರು ಬರೆದ ಪುಸ್ತಕಗಳನ್ನು ಸಂಗ್ರಹಿಸಿ ಪುಸ್ತಕದಿಂದ ಅವರ ವಿಳಾಸವನ್ನು ಸಂಗ್ರಹಿಸಿದ್ದಾನೆ. ಪತ್ರ ಬರೆದ ಬಳಿಕ ಪತ್ರಿಕೆಯಲ್ಲಿ ವರದಿಯಾಗಿದೆಯಾ ಎಂದು ಕೂಡ ಪರಿಶೀಲಿಸಿ ತನ್ನ ಬೆದರಿಕೆ ಪತ್ರಗಳ ಬಗ್ಗೆ ಬರೆದ ಕಟ್ಟಿಂಗ್‌ಗಳನ್ನು ತೆಗೆದಿಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಜಾಧವ್ ದಾವಣಗೆರೆಯ ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಯಾಗಿದ್ದಾನೆ. ಶಿವಮೊಗ್ಗದಲ್ಲಿ ಹತ್ಯೆಯಾದ ಭಜರಂಗದಳದ ಕಾರ್ಯಕರ್ತ ಹರ್ಷನ ಬಗ್ಗೆ ಹಲವು ಪ್ರತಿಭಟನೆ ಸಭೆ ಆಯೋಜಿಸಿದ್ದ. ಕರ್ನಾಟಕದಲ್ಲಿ ಹಿಜಾಬ್ ಮತ್ತು ಹಲಾಲ್ ವಿವಾದದ ವೇಳೆ ಮಾತನಾಡಿದ್ದ. ಈ ವೇಳೆ ದಾವಣಗೆರೆ ಪೊಲೀಸರು ಜಾಧವ್ ವಿರುದ್ಧ ಐಪಿಸಿ ಸೆಕ್ಷನ್ 107ರ ಅಡಿಯಲ್ಲಿ ಶಾಂತಿ ಭಂಗ ಅಥವಾ ಸಾರ್ವಜನಿಕ ನೆಮ್ಮದಿಗೆ ಭಂಗ ತರುವ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಸಿದ್ದರು.

ಏ.2022ರಿಂದ ಹಿಂದುತ್ವದ ವಿರುದ್ಧ ಮಾತನಾಡಿದ ಸುಮಾರು 6 ಪ್ರಗತಿಪರ ಬರಹಗಾರರು ಮತ್ತು ಚಿಂತಕರಿಗೆ ಜಾಧವ್ ನಿಯಮಿತವಾಗಿ ಪತ್ರವನ್ನು ಬರೆದಿದ್ದಾನೆ. ಖ್ಯಾತ ಸಾಹಿತಿಗಳಾದ ಕೆ ಮರುಳಸಿದ್ದಪ್ಪ, ಲೇಖಕ ಕುಂ ವೀರಭದ್ರಪ್ಪ, ಬಿಎಲ್ ವೇಣು, ಬರಗೂರು ರಾಮಚಂದ್ರಪ್ಪ, ಬಂಜಗೆರೆ ಜಯಪ್ರಕಾಶ, ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಸೇರಿದಂತೆ 61 ಮಂದಿಗೆ ಪತ್ರ ಬರೆದಿದ್ದಾನೆ.

ಪತ್ರದಲ್ಲಿ ಜಾಧವ್, ಸಾಹಿತಿಗಳಿಗೆ ದೇಶದ್ರೋಹಿ, ರಾಷ್ಟ್ರವಿರೋಧಿ ಮತ್ತು ಹಿಂದೂ ವಿರೋಧಿ ಎಂದು ಕರೆದಿದ್ದಾನೆ. ಪತ್ರಗಳು ಸಾಮಾನ್ಯವಾಗಿ ಸಾರ್ವಜನಿಕ ಕ್ಷಮೆಯಾಚನೆಯೊಂದಿಗೆ ಕೊನೆಗೊಳ್ಳುತ್ತವೆ. ಬರಹಗಾರರು ತಮ್ಮ ನಿಲುವನ್ನು ಬದಲಾಯಿಸದಿದ್ದರೆ ಅವರು ಯಾವುದೇ ರೂಪದಲ್ಲಿ ಸಾವಿಗೆ ಸಿದ್ಧರಾಗಬೇಕು, ಅದು ಶೀಘ್ರದಲ್ಲೇ ಬರಲಿದೆ ಎಂದು ಪತ್ರದಲ್ಲಿ ಕೊನೆಗೆ ಉಲ್ಲೇಖಿಸಲಾಗುತ್ತಿತ್ತು.

ಪತ್ರಗಳನ್ನು ಸ್ವೀಕರಿಸಿದವರು ಒಟ್ಟು 7 ದೂರುಗಳನ್ನು ಸಲ್ಲಿಸಿದ್ದರು. ಆದರೆ ಸಿಎಂ ಬೊಮ್ಮಾಯಿ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರವು ಪತ್ರ ಬರೆದವರನ್ನು ಪತ್ತೆ ಹಚ್ಚಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದರು.

ಆ.22, 2023ರಂದು, ಬರಹಗಾರರ ನಿಯೋಗವು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕ್ರಮಕ್ಕೆ ಆಗ್ರಹಿಸಿದೆ. ನಂತರ ಪ್ರಕರಣವನ್ನು ಅಪರಾಧ ವಿಭಾಗಕ್ಕೆ ಹಸ್ತಾಂತರಿಸಲಾಗಿದೆ. ಈ ಬಗ್ಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಪೋಸ್ಟಲ್‌ ಸ್ಟಾಂಪ್‌ನ ಆಧಾರದಲ್ಲಿ ಮತ್ತು ಅಂಚೆ ಕಚೇರಿ ಬಳಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಬಳಿಕ ಜಾದವ್‌ ಬಂಧನ ನಡೆದಿದೆ.

ಇದನ್ನು ಓದಿ: ಕೇರಳ: ಇಡಿಯಿಂದ ಕಾಂಗ್ರೆಸ್‌ ನಾಯಕ ಕೆ.ಕೆ.ಅಬ್ರಹಾಂ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...