Homeಕರ್ನಾಟಕಅಶ್ಲೀಲ ಸಿನಿಮಾ ನೋಡಿದ್ರಿ, ಅದನ್ನು ತೋರಿಸಿದ್ದು ತಪ್ಪಾ?: ಬಿಜೆಪಿ ವಿರುದ್ಧ ಗರಂ ಆದ ಮಾಧ್ಯಮಗಳು..

ಅಶ್ಲೀಲ ಸಿನಿಮಾ ನೋಡಿದ್ರಿ, ಅದನ್ನು ತೋರಿಸಿದ್ದು ತಪ್ಪಾ?: ಬಿಜೆಪಿ ವಿರುದ್ಧ ಗರಂ ಆದ ಮಾಧ್ಯಮಗಳು..

ಪ್ರತಿಭಟನೆಯಲ್ಲಿ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಭಾಗವಹಿಸಿ ಬೆಂಬಲ ಸೂಚಿಸಿದ್ದಾರೆ

- Advertisement -
- Advertisement -

ವಿಧಾನಮಂಡಲದಲ್ಲಿ ನಡೆಯುವ ಕಲಾಪಗಳಿಗೆ ಖಾಸಗಿ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವುದನ್ನು ಖಂಡಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಪ್ರೆಸ್‌ಕ್ಲಬ್‌, ಕರ್ನಾಟಕ ಪತ್ರಕರ್ತೆಯರ ಸಂಘ ಒಳಗೊಂಡಂತೆ ವಿವಿಧ ಸಂಘಟನೆಗಳು ನಗರದ ಆನಂದ್‌ರಾವ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ರಾಜ್ಯ ಬಿಜೆಪಿ ಸರ್ಕಾರದ ಈ ನಡೆಯನ್ನು ಪ್ರಶ್ನಿಸಿ, ವಿಧಾನ ಮಂಡಲ ಕಲಾಪವನ್ನೇ ಬಹಿಷ್ಕರಿಸುವುದಾಗಿ ಮಾಧ್ಯಮಗಳು ತಿಳಿಸಿವೆ. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಯಾವುದೇ ಅಭಿಪ್ರಾಯ ಪಡೆಯದೆ ಏಕಾಏಕಿ ನಿರ್ಬಂಧಿಸಿರುವುದು ಸರಿಯಲ್ಲ. ಈ ಬಗ್ಗೆ ಪುನರ್ ಪರಿಶೀಲನೆ ಮಾಡಿ ವಿದ್ಯುನ್ಮಾನ ಮಾಧ್ಯಮಗಳ ನಿರ್ಬಂಧ ಆದೇಶ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ವಿಧಾನ ಸೌಧ ಕಟ್ಟುವಾಗ ಕೆಂಗಲ್ ಹನುಮಂತಯ್ಯ ಯಾವ ಆಶಯ ಇಟ್ಟುಕೊಂಡು ಕಟ್ಟಿದ್ರೋ ಅದನ್ನ ಮರೆಯಬೇಡಿ. ಮಾದ್ಯಮಗಳಿಗೆ ನಿರ್ಬಂಧ ಹೇರಿರುವುದು ಸ್ಪೀಕರ್ ಕಾಗೇರಿ ನಿರ್ಧಾರ ಅಲ್ಲ. ಕಾಗೇರಿಯವರ ನಿರ್ಧಾರದ ಹಿಂದೆ ಬೇರೆ ಶಕ್ತಿ ಇದೆ. ಕಾಗೇರಿಯವರ ಹೆಗಲ ಮೇಲೆ ಬಂದೂಕು ಇಟ್ಟು ಯಡಿಯೂರಪ್ಪಗೆ ಹೊಡೆಯುತ್ತಿದ್ದಾರೆ… ಮಾದ್ಯಮಗಳು ಅದರ ಮೊದಲ ಬಲಿಪಶುಗಳಾಗುತ್ತಿದ್ದಾರೆ ಎಂದು ಪತ್ರಕರ್ತರು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ವಿಧಾನಸಭೆಯ ಕಲಾಪಕ್ಕೆ ಫೋನ್‌, ಟ್ಯಾಬ್‌ ತರುವಂತಿಲ್ಲ ನಿಯಮವನ್ನು ವಿರೋಧಿಸಿದ ಸಿದ್ದರಾಮಯ್ಯ…

ಈ ರಾಜಕಾರಣಿಗಳು ವಿಧಾನ ಸಭೆಯಲ್ಲಿ ಏನು ಮಾಡಿದ್ರು ಜನತೆಗೆ ಗೊತ್ತಿದೆ, ನೀವೇನು ಐತಿಹಾಸಿಕ ಸಿನಿಮಾ ನೋಡಿಲ್ಲ. ಅಶ್ಲೀಲ ಸಿನಿಮಾ ನೋಡಿದ್ರಿ, ಅದನ್ನು ತೋರಿಸಿದ್ದು ತಪ್ಪಾ? ಎಂದು ಹಿರಿಯ ಪತ್ರಕರ್ತ ಆರ್.‌ಟಿ. ವಿಠಲ್‌ಮೂರ್ತಿ ಪ್ರತಿಭಟನೆಯಲ್ಲಿ ಪ್ರಶ್ನಿಸಿದ್ದಾರೆ.

ಇನ್ನು ಪ್ರತಿಭಟನೆಯಲ್ಲಿ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಭಾಗವಹಿಸಿ ಬೆಂಬಲ ಸೂಚಿಸಿದ್ದಾರೆ. ವಿಧಾನಸಭಾ ಅಧಿವೇಶನಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರುವ ಪ್ರಜಾಪ್ರಭುತ್ವ ವಿರೋಧಿಯಾದ ವಿಧಾನಸಭಾಧ್ಯಕ್ಷರ ಕ್ರಮವನ್ನು ಖಂಡಿಸಿ‌ ಖಾಸಗಿ ಸುದ್ದಿವಾಹಿನಿಗಳ ಮುಖ್ಯಸ್ಥರು ಹಾಗೂ ಹಿರಿಯ ಪತ್ರಕರ್ತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಿ ನನ್ನ ಬೆಂಬಲ ಸೂಚಿಸಿದೆ ಎಂದು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...

ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ,...

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...