Homeಕರ್ನಾಟಕ2ನೇ ದಿನಕ್ಕೆ ಮೇಕೆದಾಟು ಪಾದಯಾತ್ರೆ: ಡಿಕೆಶಿ, ಸಿದ್ದರಾಮಯ್ಯ ಸೇರಿ 30 ನಾಯಕರ ವಿರುದ್ಧ ಎಫ್‌ಐಆರ್‌

2ನೇ ದಿನಕ್ಕೆ ಮೇಕೆದಾಟು ಪಾದಯಾತ್ರೆ: ಡಿಕೆಶಿ, ಸಿದ್ದರಾಮಯ್ಯ ಸೇರಿ 30 ನಾಯಕರ ವಿರುದ್ಧ ಎಫ್‌ಐಆರ್‌

- Advertisement -
- Advertisement -

“ನಮ್ಮ ನೀರು ನಮ್ಮ ಹಕ್ಕು” ಘೋಷಣೆಯೊಂದಿಗೆ ಪ್ರದೇಶ ಕಾಂಗ್ರೆಸ್‌ ಸಮಿತಿ ನೇತೃತ್ವದಲ್ಲಿ ನಡೆಯುತ್ತಿರುವ ಮೇಕೆದಾಟು ಪಾದಯಾತ್ರೆಗೆ ಭಾನುವಾರ ಸಂಗಮದಿಂದ ಚಾಲನೆ ನೀಡಲಾಗಿದ್ದು, ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ.

ಇನ್ನು ಭಾನುವಾರ ನಡೆದ ಪಾದಯಾತ್ರೆ ವೇಳೆ ಕೊರೊನಾ ವೀಕೆಂಡ್ ಕರ್ಫ್ಯೂ ಉಲ್ಲಂಘನೆ ಆರೋಪದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ 30 ಕಾಂಗ್ರೆಸ್ ನಾಯಕರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ವಿಪತ್ತು ನಿರ್ವಹಣಾ ಕಾಯ್ದೆ 2005 ರ ಐಪಿಸಿ ಸೆಕ್ಷನ್ 141, 143, 290, 336 ರ ಅಡಿಯಲ್ಲಿ ರಾಮನಗರ ಜಿಲ್ಲೆಯ ಸಾತನೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊರೊನಾ ಹೆಚ್ಚಳ ಹಿನ್ನೆಲೆ ವೀಕೆಂಡ್ ಕರ್ಫ್ಯೂ ಮಾಡಿರುವುದಾಗಿ ಸರ್ಕಾರ ಹೇಳಿಕೊಂಡಿದ್ದೆ. ಆದರೆ ಕಾಂಗ್ರೆಸ್ ಪಾದಯಾತ್ರೆಗೆ ತಡೆಯೊಡ್ಡಲು ಕರ್ಫ್ಯೂ ವಿಧಿಸಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಇದನ್ನೂ ಓದಿ: ನಮ್ಮ ನೀರು ನಮ್ಮ ಹಕ್ಕು ಘೋಷಣೆಯೊಂದಿಗೆ ಮೇಕೆದಾಟು ಪಾದಯಾತ್ರೆ ಆರಂಭಿಸಿದ ಕಾಂಗ್ರೆಸ್

ಇಂದು ಡಿ.ಕೆ.ಶಿವಕುಮಾರ್‌ ಅವರ ಸ್ವಗ್ರಾಮ ದೊಡ್ಡಾಲಹಳ್ಳಿಯಿಂದ ಎರಡನೇ ದಿನದ ಪಾದಯಾತ್ರೆ ಆರಂಭವಾಗಿದೆ. ಇಂದು ದೊಡ್ಡ ಆಲಹಳ್ಳಿಯಿಂದ ಹೊರಟು, ಮಾದಪ್ಪನ ದೊಡ್ಡಿಯಲ್ಲಿ ಮಧ್ಯಾಹ್ನದ ಹೊತ್ತಿಗೆ ತಲುಪಿ, ರಾತ್ರಿ ಕನಕಪುರದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಜನವರಿ 19 ರ ವರೆಗೆ ಪಾದಯಾತ್ರೆ ನಡೆಯಲಿದೆ.

ಇತ್ತ, “ಕೋವಿಡ್ ನಿಯಮ ಉಲ್ಲಂಘಿಸುವವರು ಯಾರೇ ಆಗಿರಲಿ. ಯಾವುದೇ ಭೇದ ಭಾವವಿಲ್ಲದೆ ಕ್ರಮ ಜರುಗಿಸಲಾಗುವುದು. ಮೇಕೆದಾಟು ಪಾದಯಾತ್ರೆಯ ಸಂಘಟಕರು, ಕಾನೂನು ಉಲ್ಲಂಘನೆ ಮಾಡಿರುವವರ ಮೇಲೆ ಕಾನೂನಿನ ಕ್ರಮ ಜರುಗಿಸಲಾಗುತ್ತಿದೆ ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

“ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸುತ್ತಿರುವವರ ಆರೋಗ್ಯದ ಚಿಂತೆ ಸರ್ಕಾರಕ್ಕಿದೆ. ಸುದೀರ್ಘವಾಗಿ ನಡೆದು ಬಂದವರ ಆರೋಗ್ಯ ತಪಾಸಣೆ , ಆರೋಗ್ಯ ಇಲಾಖೆಯ ಕರ್ತವ್ಯ. ಇದಕ್ಕೆ ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವವರು ಇದಕ್ಕೆ ಸಹಕರಿಸಬೇಕು ಎಂದು ತಿಳಿಸಿದ್ದಾರೆ.

ಇನ್ನು ಆರೋಗ್ಯ ಸಮಸ್ಯೆ ಕಾರಣಕ್ಕೆ ಮೊದಲ ದಿನದ ಪಾದಯಾತ್ರೆಯಿಂದ ಅರ್ಧಕ್ಕೆ ಹಿಂತಿರುಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮೆರವಣಿಗೆಗೆ ಗೈರಾಗಿದ್ದಾರೆ. ವೈದ್ಯರ ಸಲಹೆ ಮೇರೆಗೆ ಇಂದು ವಿಶ್ರಾಂತಿ ಪಡೆಯಲಿದ್ದು, ನಾಳೆ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಹರಿಯೋ ನೀರು, ಉರಿಯೋ ಸೂರ್ಯನ ತಡೆಯಲಾಗಲ್ಲ, ಮೇಕೆದಾಟು ಹೋರಾಟ ನಿಲ್ಲಿಸಲಾಗಲ್ಲ: ಡಿ.ಕೆ.ಶಿವಕುಮಾರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...