Homeಕರ್ನಾಟಕಜನರ ಹಿತದೃಷ್ಟಿಯಿಂದ ಮೇಕೆದಾಟು ಪಾದಯಾತ್ರೆ ತಾತ್ಕಾಲಿಕ ಸ್ಥಗಿತ: ಸಿದ್ದರಾಮಯ್ಯ

ಜನರ ಹಿತದೃಷ್ಟಿಯಿಂದ ಮೇಕೆದಾಟು ಪಾದಯಾತ್ರೆ ತಾತ್ಕಾಲಿಕ ಸ್ಥಗಿತ: ಸಿದ್ದರಾಮಯ್ಯ

- Advertisement -
- Advertisement -

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ “ನಮ್ಮ ನೀರು ನಮ್ಮ ಹಕ್ಕು” ಘೋಷಣೆಯೊಂದಿಗೆ ಪ್ರದೇಶ ಕಾಂಗ್ರೆಸ್‌ ಸಮಿತಿ ನೇತೃತ್ವದಲ್ಲಿ ನಡೆಯುತ್ತಿರುವ ಮೇಕೆದಾಟು ಪಾದಯಾತ್ರೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ರಾಮನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ನಡೆದ ನಾಯಕರ ಸಭೆಯ ಬಳಿಕ ಸುದ್ದಿಗೋಷ್ಟೀಯಲ್ಲಿ ಸಿದ್ದರಾಮಯ್ಯ ಪಕ್ಷದ ನಿರ್ಧಾರ ತಿಳಿಸಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾದ ಬಳಿಕ ರಾಮನಗರದಿಂದಲೇ ಪಾದಯಾತ್ರೆ ಆರಂಭಿಸುವ ಕುರಿತು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ಹೆಚ್ಚಳ, ಹೈಕೋರ್ಟ್ ತರಾಟೆ, ಪೊಲೀಸ್ ಕೇಸ್‌ಗಳು, ಕೆಲವು ಕಾಂಗ್ರೆಸ್ ನಾಯಕರಿಗೆ ಸೋಂಕು ತಗುಲಿದ್ದು, ಸೇರಿದಂತೆ ಪಕ್ಷದ ಮೇಲೆ ಸಾಕಷ್ಟು ಒತ್ತಡ ಹೇರಲಾಗಿತ್ತು. ಈ ಹಿನ್ನೆಲೆಯಲ್ಲಿ ಜನರ ಹಿತದೃಷ್ಟಿಯಿಂದ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕನ್ನಡ ದಿನಪತ್ರಿಕೆಗಳಿಗೆ ‘ಮೇಕೆದಾಟು’ ಜಾಹೀರಾತು ಕೊಟ್ಟವರ್‍ಯಾರು? ಪತ್ರಿಕೆಗಳು ಹೇಳಿದ್ದೇನು?

https://twitter.com/INCKarnataka/status/1481527069607862273

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗಲು ಬಿಜೆಪಿ ಕಾರಣವೇ ಹೊರತು ಕಾಂಗ್ರೆಸ್ ಅಲ್ಲ. ಬಿಜೆಪಿ ನಾಯಕರು ಜಾತ್ರೆ, ಜನಾಶೀರ್ವಾದ ಯಾತ್ರೆ ಎಂದು ಮಾಡಿದ್ದು ಕಾರಣ ಎಂದಿದ್ದಾರೆ.

’ಕೇಸು ಹಾಕುತ್ತಾರೆ. ಇಲ್ಲವೇ ಬಿಜೆಪಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಪಾದಯಾತ್ರೆ ಸ್ಥಗಿತಗೊಳಿಸಿಲ್ಲ. ಜನರ ಅರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದೇವೆ. ಈ ರೋಗ ಉಲ್ಬಣಕ್ಕೆ ಕಾಂಗ್ರೆಸ್ ಕಾರಣ ಎಂದು ಜನರ ಮನಸಲ್ಲಿ ಬರಬಾರದು. ಇನ್ನು ಎರಡು ದಿನದಲ್ಲಿ ಬೆಂಗಳೂರಿಗೆ ಹೋಗಬೇಕಿತ್ತು. ವರದಿಗಳ ಪ್ರಕಾರ ಬೆಂಗಳೂರಿನಲ್ಲಿ ಕೊರೊನಾ ಕೇಸಸ್‌ ಜಾಸ್ತಿ ಇದೆ. ಹೀಗಾಗಿ ಜನರ ಮನಸಿನಲ್ಲಿ ಕಾಂಗ್ರೆಸ್ ಸೋಂಕು ಹೆಚ್ಚಳಕ್ಕೆ ಕಾರಣ ಎಂಬುದು ಬರಬಾರದು ಎಂದು ಪಾದಯಾತ್ರೆ ಸ್ಥಗಿತ ಮಾಡುತ್ತಿದ್ದೆವೆ’ ಎಂದಿದ್ದಾರೆ.

“ಬೆಂಗಳೂರಿನಲ್ಲಿಯೂ ಪಾದಯಾತ್ರೆ ಮಾಡುತ್ತಿದ್ದೇವು. ಇದೇ 19 ರಂದು ಸಮಾವೇಶ ನಡೆಸಲು ನಿರ್ಧರಿಸಿದ್ದೆವು. ಆಗ ಅಲ್ಲಿ ಲಕ್ಷಾಂತರ ಜನ ಸೇರುತ್ತಿದ್ದರು ಹಾಗಾಗಿ ಜನರ ಮನಸ್ಸಿನಲ್ಲಿ ಬೇರೆ ಅಭಿಪ್ರಾಯ ಬರಬಾರದು ಎಂದು, ಎಲ್ಲಾ ಹಿರಿಯ ನಾಯಕರ ಜೊತೆಗೆ ಚರ್ಚಿಸಿ ತಾತ್ಕಾಲಿಕವಾಗಿ ಪಾದಯಾತ್ರೆ ಸ್ಥಗಿತಗೊಳಿಸಿದ್ದೇವೆ” ಎಂದಿದ್ದಾರೆ.

’ಮತ್ತೆ ಮೂರನೇ ಅಲೆ ಕಡಿಮೆ ಆಗಿ, ಕೊರೊನಾ ನಿಯಮಾವಳಿ ಸಡಿಲ ಆದ ಮೇಲೆ ರಾಮನಗರದಿಂದ ಬೆಂಗಳೂರುವರೆಗೆ ಉಳಿದ ಏಳು ದಿನದ ಪಾದಯಾತ್ರೆ ಮುಂದುವರಿಯಲಿದೆ. ಕಾರ್ಯಕರ್ತರು‌ ಉತ್ಸಾಹ ಕಳೆದುಕೊಳ್ಳಬೇಡಿ. ಮತ್ತೆ ಪಾದಯಾತ್ರೆ ಮಾಡುತ್ತೇವೆ. ಆಗಲೂ ಎಂದಿನಂತೆ ನಿಮ್ಮ ಸಹಕಾರ, ಉತ್ಸಾಹ ಬೇಕು” ಎಂದು ಮನವಿ ಮಾಡಿದ್ದಾರೆ.

“ಕಾಂಗ್ರೆಸ್ ಯಾವಾಗಲೂ ಜನಪರವಾದದ್ದು, ಜನರ ಒಳಿತನ್ನು ಬಯಸುವುದು ಕಾಂಗ್ರೆಸ್, ಜನರ ಒಳಿತೇ ಕಾಂಗ್ರೆಸ್‌ನ ಮುಖ್ಯ ಧ್ಯೇಯ ಆ ಕಾರಣಕ್ಕಾಗಿಯೇ ಈ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಹೊಳಿಸಿದ್ದೇವೆ” ಎಂದು ಘೋಷಿಸಿದ್ದಾರೆ.


ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ: ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ತರಾಟೆ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....