Homeಕರ್ನಾಟಕಜನರ ಹಿತದೃಷ್ಟಿಯಿಂದ ಮೇಕೆದಾಟು ಪಾದಯಾತ್ರೆ ತಾತ್ಕಾಲಿಕ ಸ್ಥಗಿತ: ಸಿದ್ದರಾಮಯ್ಯ

ಜನರ ಹಿತದೃಷ್ಟಿಯಿಂದ ಮೇಕೆದಾಟು ಪಾದಯಾತ್ರೆ ತಾತ್ಕಾಲಿಕ ಸ್ಥಗಿತ: ಸಿದ್ದರಾಮಯ್ಯ

- Advertisement -
- Advertisement -

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ “ನಮ್ಮ ನೀರು ನಮ್ಮ ಹಕ್ಕು” ಘೋಷಣೆಯೊಂದಿಗೆ ಪ್ರದೇಶ ಕಾಂಗ್ರೆಸ್‌ ಸಮಿತಿ ನೇತೃತ್ವದಲ್ಲಿ ನಡೆಯುತ್ತಿರುವ ಮೇಕೆದಾಟು ಪಾದಯಾತ್ರೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ರಾಮನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ನಡೆದ ನಾಯಕರ ಸಭೆಯ ಬಳಿಕ ಸುದ್ದಿಗೋಷ್ಟೀಯಲ್ಲಿ ಸಿದ್ದರಾಮಯ್ಯ ಪಕ್ಷದ ನಿರ್ಧಾರ ತಿಳಿಸಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾದ ಬಳಿಕ ರಾಮನಗರದಿಂದಲೇ ಪಾದಯಾತ್ರೆ ಆರಂಭಿಸುವ ಕುರಿತು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ಹೆಚ್ಚಳ, ಹೈಕೋರ್ಟ್ ತರಾಟೆ, ಪೊಲೀಸ್ ಕೇಸ್‌ಗಳು, ಕೆಲವು ಕಾಂಗ್ರೆಸ್ ನಾಯಕರಿಗೆ ಸೋಂಕು ತಗುಲಿದ್ದು, ಸೇರಿದಂತೆ ಪಕ್ಷದ ಮೇಲೆ ಸಾಕಷ್ಟು ಒತ್ತಡ ಹೇರಲಾಗಿತ್ತು. ಈ ಹಿನ್ನೆಲೆಯಲ್ಲಿ ಜನರ ಹಿತದೃಷ್ಟಿಯಿಂದ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕನ್ನಡ ದಿನಪತ್ರಿಕೆಗಳಿಗೆ ‘ಮೇಕೆದಾಟು’ ಜಾಹೀರಾತು ಕೊಟ್ಟವರ್‍ಯಾರು? ಪತ್ರಿಕೆಗಳು ಹೇಳಿದ್ದೇನು?

https://twitter.com/INCKarnataka/status/1481527069607862273

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗಲು ಬಿಜೆಪಿ ಕಾರಣವೇ ಹೊರತು ಕಾಂಗ್ರೆಸ್ ಅಲ್ಲ. ಬಿಜೆಪಿ ನಾಯಕರು ಜಾತ್ರೆ, ಜನಾಶೀರ್ವಾದ ಯಾತ್ರೆ ಎಂದು ಮಾಡಿದ್ದು ಕಾರಣ ಎಂದಿದ್ದಾರೆ.

’ಕೇಸು ಹಾಕುತ್ತಾರೆ. ಇಲ್ಲವೇ ಬಿಜೆಪಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಪಾದಯಾತ್ರೆ ಸ್ಥಗಿತಗೊಳಿಸಿಲ್ಲ. ಜನರ ಅರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದೇವೆ. ಈ ರೋಗ ಉಲ್ಬಣಕ್ಕೆ ಕಾಂಗ್ರೆಸ್ ಕಾರಣ ಎಂದು ಜನರ ಮನಸಲ್ಲಿ ಬರಬಾರದು. ಇನ್ನು ಎರಡು ದಿನದಲ್ಲಿ ಬೆಂಗಳೂರಿಗೆ ಹೋಗಬೇಕಿತ್ತು. ವರದಿಗಳ ಪ್ರಕಾರ ಬೆಂಗಳೂರಿನಲ್ಲಿ ಕೊರೊನಾ ಕೇಸಸ್‌ ಜಾಸ್ತಿ ಇದೆ. ಹೀಗಾಗಿ ಜನರ ಮನಸಿನಲ್ಲಿ ಕಾಂಗ್ರೆಸ್ ಸೋಂಕು ಹೆಚ್ಚಳಕ್ಕೆ ಕಾರಣ ಎಂಬುದು ಬರಬಾರದು ಎಂದು ಪಾದಯಾತ್ರೆ ಸ್ಥಗಿತ ಮಾಡುತ್ತಿದ್ದೆವೆ’ ಎಂದಿದ್ದಾರೆ.

“ಬೆಂಗಳೂರಿನಲ್ಲಿಯೂ ಪಾದಯಾತ್ರೆ ಮಾಡುತ್ತಿದ್ದೇವು. ಇದೇ 19 ರಂದು ಸಮಾವೇಶ ನಡೆಸಲು ನಿರ್ಧರಿಸಿದ್ದೆವು. ಆಗ ಅಲ್ಲಿ ಲಕ್ಷಾಂತರ ಜನ ಸೇರುತ್ತಿದ್ದರು ಹಾಗಾಗಿ ಜನರ ಮನಸ್ಸಿನಲ್ಲಿ ಬೇರೆ ಅಭಿಪ್ರಾಯ ಬರಬಾರದು ಎಂದು, ಎಲ್ಲಾ ಹಿರಿಯ ನಾಯಕರ ಜೊತೆಗೆ ಚರ್ಚಿಸಿ ತಾತ್ಕಾಲಿಕವಾಗಿ ಪಾದಯಾತ್ರೆ ಸ್ಥಗಿತಗೊಳಿಸಿದ್ದೇವೆ” ಎಂದಿದ್ದಾರೆ.

’ಮತ್ತೆ ಮೂರನೇ ಅಲೆ ಕಡಿಮೆ ಆಗಿ, ಕೊರೊನಾ ನಿಯಮಾವಳಿ ಸಡಿಲ ಆದ ಮೇಲೆ ರಾಮನಗರದಿಂದ ಬೆಂಗಳೂರುವರೆಗೆ ಉಳಿದ ಏಳು ದಿನದ ಪಾದಯಾತ್ರೆ ಮುಂದುವರಿಯಲಿದೆ. ಕಾರ್ಯಕರ್ತರು‌ ಉತ್ಸಾಹ ಕಳೆದುಕೊಳ್ಳಬೇಡಿ. ಮತ್ತೆ ಪಾದಯಾತ್ರೆ ಮಾಡುತ್ತೇವೆ. ಆಗಲೂ ಎಂದಿನಂತೆ ನಿಮ್ಮ ಸಹಕಾರ, ಉತ್ಸಾಹ ಬೇಕು” ಎಂದು ಮನವಿ ಮಾಡಿದ್ದಾರೆ.

“ಕಾಂಗ್ರೆಸ್ ಯಾವಾಗಲೂ ಜನಪರವಾದದ್ದು, ಜನರ ಒಳಿತನ್ನು ಬಯಸುವುದು ಕಾಂಗ್ರೆಸ್, ಜನರ ಒಳಿತೇ ಕಾಂಗ್ರೆಸ್‌ನ ಮುಖ್ಯ ಧ್ಯೇಯ ಆ ಕಾರಣಕ್ಕಾಗಿಯೇ ಈ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಹೊಳಿಸಿದ್ದೇವೆ” ಎಂದು ಘೋಷಿಸಿದ್ದಾರೆ.


ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ: ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ತರಾಟೆ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...