Homeಕರ್ನಾಟಕಜನರ ಹಿತದೃಷ್ಟಿಯಿಂದ ಮೇಕೆದಾಟು ಪಾದಯಾತ್ರೆ ತಾತ್ಕಾಲಿಕ ಸ್ಥಗಿತ: ಸಿದ್ದರಾಮಯ್ಯ

ಜನರ ಹಿತದೃಷ್ಟಿಯಿಂದ ಮೇಕೆದಾಟು ಪಾದಯಾತ್ರೆ ತಾತ್ಕಾಲಿಕ ಸ್ಥಗಿತ: ಸಿದ್ದರಾಮಯ್ಯ

- Advertisement -
- Advertisement -

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ “ನಮ್ಮ ನೀರು ನಮ್ಮ ಹಕ್ಕು” ಘೋಷಣೆಯೊಂದಿಗೆ ಪ್ರದೇಶ ಕಾಂಗ್ರೆಸ್‌ ಸಮಿತಿ ನೇತೃತ್ವದಲ್ಲಿ ನಡೆಯುತ್ತಿರುವ ಮೇಕೆದಾಟು ಪಾದಯಾತ್ರೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ರಾಮನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ನಡೆದ ನಾಯಕರ ಸಭೆಯ ಬಳಿಕ ಸುದ್ದಿಗೋಷ್ಟೀಯಲ್ಲಿ ಸಿದ್ದರಾಮಯ್ಯ ಪಕ್ಷದ ನಿರ್ಧಾರ ತಿಳಿಸಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾದ ಬಳಿಕ ರಾಮನಗರದಿಂದಲೇ ಪಾದಯಾತ್ರೆ ಆರಂಭಿಸುವ ಕುರಿತು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ಹೆಚ್ಚಳ, ಹೈಕೋರ್ಟ್ ತರಾಟೆ, ಪೊಲೀಸ್ ಕೇಸ್‌ಗಳು, ಕೆಲವು ಕಾಂಗ್ರೆಸ್ ನಾಯಕರಿಗೆ ಸೋಂಕು ತಗುಲಿದ್ದು, ಸೇರಿದಂತೆ ಪಕ್ಷದ ಮೇಲೆ ಸಾಕಷ್ಟು ಒತ್ತಡ ಹೇರಲಾಗಿತ್ತು. ಈ ಹಿನ್ನೆಲೆಯಲ್ಲಿ ಜನರ ಹಿತದೃಷ್ಟಿಯಿಂದ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕನ್ನಡ ದಿನಪತ್ರಿಕೆಗಳಿಗೆ ‘ಮೇಕೆದಾಟು’ ಜಾಹೀರಾತು ಕೊಟ್ಟವರ್‍ಯಾರು? ಪತ್ರಿಕೆಗಳು ಹೇಳಿದ್ದೇನು?

https://twitter.com/INCKarnataka/status/1481527069607862273

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗಲು ಬಿಜೆಪಿ ಕಾರಣವೇ ಹೊರತು ಕಾಂಗ್ರೆಸ್ ಅಲ್ಲ. ಬಿಜೆಪಿ ನಾಯಕರು ಜಾತ್ರೆ, ಜನಾಶೀರ್ವಾದ ಯಾತ್ರೆ ಎಂದು ಮಾಡಿದ್ದು ಕಾರಣ ಎಂದಿದ್ದಾರೆ.

’ಕೇಸು ಹಾಕುತ್ತಾರೆ. ಇಲ್ಲವೇ ಬಿಜೆಪಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಪಾದಯಾತ್ರೆ ಸ್ಥಗಿತಗೊಳಿಸಿಲ್ಲ. ಜನರ ಅರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದೇವೆ. ಈ ರೋಗ ಉಲ್ಬಣಕ್ಕೆ ಕಾಂಗ್ರೆಸ್ ಕಾರಣ ಎಂದು ಜನರ ಮನಸಲ್ಲಿ ಬರಬಾರದು. ಇನ್ನು ಎರಡು ದಿನದಲ್ಲಿ ಬೆಂಗಳೂರಿಗೆ ಹೋಗಬೇಕಿತ್ತು. ವರದಿಗಳ ಪ್ರಕಾರ ಬೆಂಗಳೂರಿನಲ್ಲಿ ಕೊರೊನಾ ಕೇಸಸ್‌ ಜಾಸ್ತಿ ಇದೆ. ಹೀಗಾಗಿ ಜನರ ಮನಸಿನಲ್ಲಿ ಕಾಂಗ್ರೆಸ್ ಸೋಂಕು ಹೆಚ್ಚಳಕ್ಕೆ ಕಾರಣ ಎಂಬುದು ಬರಬಾರದು ಎಂದು ಪಾದಯಾತ್ರೆ ಸ್ಥಗಿತ ಮಾಡುತ್ತಿದ್ದೆವೆ’ ಎಂದಿದ್ದಾರೆ.

“ಬೆಂಗಳೂರಿನಲ್ಲಿಯೂ ಪಾದಯಾತ್ರೆ ಮಾಡುತ್ತಿದ್ದೇವು. ಇದೇ 19 ರಂದು ಸಮಾವೇಶ ನಡೆಸಲು ನಿರ್ಧರಿಸಿದ್ದೆವು. ಆಗ ಅಲ್ಲಿ ಲಕ್ಷಾಂತರ ಜನ ಸೇರುತ್ತಿದ್ದರು ಹಾಗಾಗಿ ಜನರ ಮನಸ್ಸಿನಲ್ಲಿ ಬೇರೆ ಅಭಿಪ್ರಾಯ ಬರಬಾರದು ಎಂದು, ಎಲ್ಲಾ ಹಿರಿಯ ನಾಯಕರ ಜೊತೆಗೆ ಚರ್ಚಿಸಿ ತಾತ್ಕಾಲಿಕವಾಗಿ ಪಾದಯಾತ್ರೆ ಸ್ಥಗಿತಗೊಳಿಸಿದ್ದೇವೆ” ಎಂದಿದ್ದಾರೆ.

’ಮತ್ತೆ ಮೂರನೇ ಅಲೆ ಕಡಿಮೆ ಆಗಿ, ಕೊರೊನಾ ನಿಯಮಾವಳಿ ಸಡಿಲ ಆದ ಮೇಲೆ ರಾಮನಗರದಿಂದ ಬೆಂಗಳೂರುವರೆಗೆ ಉಳಿದ ಏಳು ದಿನದ ಪಾದಯಾತ್ರೆ ಮುಂದುವರಿಯಲಿದೆ. ಕಾರ್ಯಕರ್ತರು‌ ಉತ್ಸಾಹ ಕಳೆದುಕೊಳ್ಳಬೇಡಿ. ಮತ್ತೆ ಪಾದಯಾತ್ರೆ ಮಾಡುತ್ತೇವೆ. ಆಗಲೂ ಎಂದಿನಂತೆ ನಿಮ್ಮ ಸಹಕಾರ, ಉತ್ಸಾಹ ಬೇಕು” ಎಂದು ಮನವಿ ಮಾಡಿದ್ದಾರೆ.

“ಕಾಂಗ್ರೆಸ್ ಯಾವಾಗಲೂ ಜನಪರವಾದದ್ದು, ಜನರ ಒಳಿತನ್ನು ಬಯಸುವುದು ಕಾಂಗ್ರೆಸ್, ಜನರ ಒಳಿತೇ ಕಾಂಗ್ರೆಸ್‌ನ ಮುಖ್ಯ ಧ್ಯೇಯ ಆ ಕಾರಣಕ್ಕಾಗಿಯೇ ಈ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಹೊಳಿಸಿದ್ದೇವೆ” ಎಂದು ಘೋಷಿಸಿದ್ದಾರೆ.


ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ: ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ತರಾಟೆ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...