Homeಕರ್ನಾಟಕಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 9 ರಿಂದ 10 ದಿನ ಕಾಂಗ್ರೆಸ್‌ನಿಂದ ಪಾದಯಾತ್ರೆ

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 9 ರಿಂದ 10 ದಿನ ಕಾಂಗ್ರೆಸ್‌ನಿಂದ ಪಾದಯಾತ್ರೆ

- Advertisement -
- Advertisement -

ರಾಜ್ಯದಲ್ಲಿ ಮೇಕೆದಾಟು ಯೋಜನೆ ವಿಳಂಬವಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 9 ರಿಂದ 19 ರ ವರೆಗೆ 10 ದಿನಗಳ ನೀರಿಗಾಗಿ ನಡಿಗೆ ಅಭಿಯಾನದ ಪಾದಯಾತ್ರೆ ಹಮ್ಮಿಕೊಂಡಿದೆ.

“ಈ ಪಾದಯಾತ್ರೆ ನಮ್ಮ ಪಕ್ಷದ ಕಾರ್ಯಕ್ರಮವಲ್ಲ. ರಾಜ್ಯದ ಜನರ ಹಿತದೃಷ್ಟಿಯಿಂದ ಆಯೋಜಿಸಿರುವ ಹೋರಾಟ. ಎಲ್ಲಾ ಸಂಘ ಸಂಸ್ಥೆಗಳು ಇದರಲ್ಲಿ ಭಾಗವಹಿಸಬೇಕು. ಕಾನೂನಾತ್ಮಕ ಅಡೆತಡೆಗಳಿಲ್ಲದಿದ್ದರೂ ರಾಜ್ಯ ಸರ್ಕಾರದ ವಿಳಂಬ ಧೋರಣೆಯಿಂದಾಗಿ ಮೇಕೆದಾಟು ಯೋಜನೆ ನೆನೆಗುದಿಗೆ ಬಿದ್ದಿದೆ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಜನವರಿ 9 ರಂದು ಪಾದಯಾತ್ರೆ ಆರಂಭವಾಗಲಿದ್ದು, ಐದು ದಿನ ಗ್ರಾಮಾಂತರ ಪ್ರದೇಶ ಹಾಗೂ ಐದು ದಿನ ನಗರದಲ್ಲಿ ಪಾದಯಾತ್ರೆ ಮಾಡಲಾಗುತ್ತದೆ. ಮೇಕೆದಾಟಿನಿಂದ ಕನಕಪುರ, ರಾಮನಗರ, ಕೆಂಗೇರಿ, ನಾಯಂಡಳ್ಳಿ ಮಾರ್ಗವಾಗಿ ಬೆಂಗಳೂರು ನಗರಕ್ಕೆ ಬರಲಿದೆ. ಒಟ್ಟು 160 ಕಿ.ಮೀ ಗೂ ಹೆಚ್ಚು ದೂರ ಪಾದಯಾತ್ರೆ ನಡೆಯಲಿದೆ ಎಂದು ಪಕ್ಷದ ನಾಯಕರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಎಂಇಎಸ್‌ ನಿಷೇಧಿಸಲು ಒತ್ತಾಯ: ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲ


’1968 ರಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗಲೇ ಮೇಕೆದಾಟು ಯೋಜನೆಗೆ ಜಾರಿಗೆ ಚಿಂತನೆ ಮಾಡಿತ್ತು, ಆದರೆ ಜಲ ವ್ಯಾಜ್ಯ ನ್ಯಾಯಾಲಯದಲ್ಲಿ ಇದ್ದುದ್ದರಿಂದ ಯೋಜನೆ ಜಾರಿ ಆಗಿರಲಿಲ್ಲ. 2013 ನಾವು ಅಧಿಕಾರಕ್ಕೆ ಬಂದಮೇಲೆ ಇದರ ಯೋಜನಾ ವರದಿ ಸಿದ್ಧಪಡಿಸಿದ್ದೆವು. ಪ್ರವಾಹ, ಅತಿವೃಷ್ಟಿ ಮುಂತಾದ ಕಾರಣಗಳಿಂದ ಹರಿವು ಹೆಚ್ಚಾದ ಸಂದರ್ಭದಲ್ಲಿ ಸಮುದ್ರದ ಪಾಲಾಗಿ ವ್ಯರ್ಥವಾಗುವ ನೀರನ್ನು ಸಂಗ್ರಹಿಸಿ ಬೇಸಿಗೆ ಸಮಯದಲ್ಲಿ ಕೃಷಿ, ವಿದ್ಯುತ್ ಉತ್ಪಾದನೆ ಮುಂತಾದ ಉದ್ದೇಶಗಳಿಗಾಗಿ ಬಳಕೆ ಮಾಡಿಕೊಳ್ಳುವುದು ಮೇಕೆದಾಟು ಯೋಜನೆಯ ಉದ್ದೇಶ’ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

’ಬೆಂಗಳೂರು ನಗರದ 30% ಜನರಿಗೆ ಕಾವೇರಿ ನೀರಿನ ಪೂರೈಕೆ ಆಗುತ್ತಿಲ್ಲ. ಬೆಂಗಳೂರು ಸೇರಿದಂತೆ ಮೇಕೆದಾಟು ಯೋಜನೆಯಿಂದ ಸುಮಾರು ಹತ್ತು ಜಿಲ್ಲೆಗಳ 2.5 ಕೋಟಿ ಜನರಿಗೆ ಅನುಕೂಲ ಆಗಲಿದೆ. ಹೀಗಾಗಿ ಕೂಡಲೇ ರಾಜ್ಯ ಸರ್ಕಾರ ಯೋಜನೆಯನ್ನು ಕೈಗೆತ್ತಿಕೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

’ಹಸಿರು ನ್ಯಾಯಾಧೀಕರಣ, ಸುಪ್ರೀಂ ಕೋರ್ಟ್‌ಗಳು ಯೋಜನೆ ಜಾರಿಗೆ ಆಕ್ಷೇಪ ಮಾಡುತ್ತಿಲ್ಲ. ಯೋಜನಾ ವರದಿ ಸಿದ್ಧವಾಗಿದೆ, ತಮಿಳುನಾಡಿಗೆ ಕಾನೂನಾತ್ಮಕವಾಗಿ ವಿರೋಧಿಸುವ ಹಕ್ಕು ಇಲ್ಲ, ಇಷ್ಟೆಲ್ಲಾ ಅನುಕೂಲಗಳಿದ್ದಾಗ್ಯೂ ರಾಜ್ಯ ಸರ್ಕಾರದ ಇಚ್ಛಾಶಕ್ತಿಯ ಕೊರತೆಯಿಂದ ಯೋಜನೆಯ ಅನುಷ್ಠಾನ ಆರಂಭವಾಗಿಲ್ಲ. ರಾಜ್ಯದಲ್ಲಿ ಮತ್ತು ಕೇಂದ್ರ ಬಿಜೆಪಿ ಅಧಿಕಾರಕ್ಕೆ ಬರಬೇಕು. ಡಬಲ್ ಇಂಜಿನ್ ಸರ್ಕಾರ ಇದ್ದರೆ ಕೇಂದ್ರದಿಂದ ಹಣದ ಹೊಳೆ ಹರಿಯುತ್ತದೆ ಎಂದಿದ್ದರು, ಈಗ ಹೋಗಿ ಹಣ ತಂದು ಅಭಿವೃದ್ಧಿ ಕೆಲಸ ಮಾಡಲಿ’ ಎಂದು ಟೀಕಿಸಿದ್ದಾರೆ.

ಮೇಕೆದಾಟು ಯೋಜನೆ

ಕರ್ನಾಟಕ ಮತ್ತು ತಮಿಳುನಾಡು ಗಡಿಗೆ ಹೊಂದಿಕೊಂಡಿರುವ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಮೇಕೆದಾಟು ಬಳಿ ಕಾವೇರಿ ನದಿಗೆ ಅಡ್ಡಲಾಗಿ 67 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯದ ಅಣೆಕಟ್ಟು ನಿರ್ಮಿಸುವ ಯೋಜನೆಯನ್ನು ಕರ್ನಾಟಕ ಸರ್ಕಾರ ಘೋಷಿಸಿತ್ತು. ಬೆಂಗಳೂರು ಸೇರಿದಂತೆ ಸುತ್ತಲಿನ ಹಳ್ಳಿ-ನಗರಗಳಿಗೆ ಮುಂದಿನ 100 ವರ್ಷಗಳಿಗೆ ಕುಡಿಯುವ ನೀರು ಪೂರೈಸುವುದು ಮತ್ತು 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವುದು ಈ ಯೋಜನೆಯ ಉದ್ದೇಶ. 5,000 ಎಕರೆ ಪ್ರದೇಶದಲ್ಲಿ ಸುಮಾರು 6,000 ಕೋಟಿ ರೂ ವೆಚ್ಚದಲ್ಲಿ ಈ ಯೋಜನೆ ರೂಪಿಸಲಾಗಿದ್ದು, ಇದರ ಸಮಗ್ರ ಯೋಜನಾ ವರದಿಯನ್ನು ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಲಾಗಿದೆ. ಕೇಂದ್ರ ಪರಿಸರ ಇಲಾಖೆಯ ಅನುಮತಿ ದೊರೆತ ಕೂಡಲೇ ಯೋಜನೆ ಆರಂಭಿಸುವುದಾಗಿ ಕರ್ನಾಟಕ ಸರ್ಕಾರ ಹೇಳಿದೆ.


ಇದನ್ನೂ ಓದಿ: ಮೇಕೆದಾಟು ಅಣೆಕಟ್ಟು ಯೋಜನೆ; ರಾಜ್ಯಗಳ ಮತ್ತು ರಾಜಕೀಯ ಪಕ್ಷಗಳ ಜಿದ್ದಾಜಿದ್ದಿಯ ನಡುವೆ ಪರಿಸರವಾದಿಗಳ ಕಾಳಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...