Homeಕರ್ನಾಟಕಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 9 ರಿಂದ 10 ದಿನ ಕಾಂಗ್ರೆಸ್‌ನಿಂದ ಪಾದಯಾತ್ರೆ

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 9 ರಿಂದ 10 ದಿನ ಕಾಂಗ್ರೆಸ್‌ನಿಂದ ಪಾದಯಾತ್ರೆ

- Advertisement -
- Advertisement -

ರಾಜ್ಯದಲ್ಲಿ ಮೇಕೆದಾಟು ಯೋಜನೆ ವಿಳಂಬವಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 9 ರಿಂದ 19 ರ ವರೆಗೆ 10 ದಿನಗಳ ನೀರಿಗಾಗಿ ನಡಿಗೆ ಅಭಿಯಾನದ ಪಾದಯಾತ್ರೆ ಹಮ್ಮಿಕೊಂಡಿದೆ.

“ಈ ಪಾದಯಾತ್ರೆ ನಮ್ಮ ಪಕ್ಷದ ಕಾರ್ಯಕ್ರಮವಲ್ಲ. ರಾಜ್ಯದ ಜನರ ಹಿತದೃಷ್ಟಿಯಿಂದ ಆಯೋಜಿಸಿರುವ ಹೋರಾಟ. ಎಲ್ಲಾ ಸಂಘ ಸಂಸ್ಥೆಗಳು ಇದರಲ್ಲಿ ಭಾಗವಹಿಸಬೇಕು. ಕಾನೂನಾತ್ಮಕ ಅಡೆತಡೆಗಳಿಲ್ಲದಿದ್ದರೂ ರಾಜ್ಯ ಸರ್ಕಾರದ ವಿಳಂಬ ಧೋರಣೆಯಿಂದಾಗಿ ಮೇಕೆದಾಟು ಯೋಜನೆ ನೆನೆಗುದಿಗೆ ಬಿದ್ದಿದೆ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಜನವರಿ 9 ರಂದು ಪಾದಯಾತ್ರೆ ಆರಂಭವಾಗಲಿದ್ದು, ಐದು ದಿನ ಗ್ರಾಮಾಂತರ ಪ್ರದೇಶ ಹಾಗೂ ಐದು ದಿನ ನಗರದಲ್ಲಿ ಪಾದಯಾತ್ರೆ ಮಾಡಲಾಗುತ್ತದೆ. ಮೇಕೆದಾಟಿನಿಂದ ಕನಕಪುರ, ರಾಮನಗರ, ಕೆಂಗೇರಿ, ನಾಯಂಡಳ್ಳಿ ಮಾರ್ಗವಾಗಿ ಬೆಂಗಳೂರು ನಗರಕ್ಕೆ ಬರಲಿದೆ. ಒಟ್ಟು 160 ಕಿ.ಮೀ ಗೂ ಹೆಚ್ಚು ದೂರ ಪಾದಯಾತ್ರೆ ನಡೆಯಲಿದೆ ಎಂದು ಪಕ್ಷದ ನಾಯಕರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಎಂಇಎಸ್‌ ನಿಷೇಧಿಸಲು ಒತ್ತಾಯ: ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲ


’1968 ರಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗಲೇ ಮೇಕೆದಾಟು ಯೋಜನೆಗೆ ಜಾರಿಗೆ ಚಿಂತನೆ ಮಾಡಿತ್ತು, ಆದರೆ ಜಲ ವ್ಯಾಜ್ಯ ನ್ಯಾಯಾಲಯದಲ್ಲಿ ಇದ್ದುದ್ದರಿಂದ ಯೋಜನೆ ಜಾರಿ ಆಗಿರಲಿಲ್ಲ. 2013 ನಾವು ಅಧಿಕಾರಕ್ಕೆ ಬಂದಮೇಲೆ ಇದರ ಯೋಜನಾ ವರದಿ ಸಿದ್ಧಪಡಿಸಿದ್ದೆವು. ಪ್ರವಾಹ, ಅತಿವೃಷ್ಟಿ ಮುಂತಾದ ಕಾರಣಗಳಿಂದ ಹರಿವು ಹೆಚ್ಚಾದ ಸಂದರ್ಭದಲ್ಲಿ ಸಮುದ್ರದ ಪಾಲಾಗಿ ವ್ಯರ್ಥವಾಗುವ ನೀರನ್ನು ಸಂಗ್ರಹಿಸಿ ಬೇಸಿಗೆ ಸಮಯದಲ್ಲಿ ಕೃಷಿ, ವಿದ್ಯುತ್ ಉತ್ಪಾದನೆ ಮುಂತಾದ ಉದ್ದೇಶಗಳಿಗಾಗಿ ಬಳಕೆ ಮಾಡಿಕೊಳ್ಳುವುದು ಮೇಕೆದಾಟು ಯೋಜನೆಯ ಉದ್ದೇಶ’ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

’ಬೆಂಗಳೂರು ನಗರದ 30% ಜನರಿಗೆ ಕಾವೇರಿ ನೀರಿನ ಪೂರೈಕೆ ಆಗುತ್ತಿಲ್ಲ. ಬೆಂಗಳೂರು ಸೇರಿದಂತೆ ಮೇಕೆದಾಟು ಯೋಜನೆಯಿಂದ ಸುಮಾರು ಹತ್ತು ಜಿಲ್ಲೆಗಳ 2.5 ಕೋಟಿ ಜನರಿಗೆ ಅನುಕೂಲ ಆಗಲಿದೆ. ಹೀಗಾಗಿ ಕೂಡಲೇ ರಾಜ್ಯ ಸರ್ಕಾರ ಯೋಜನೆಯನ್ನು ಕೈಗೆತ್ತಿಕೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

’ಹಸಿರು ನ್ಯಾಯಾಧೀಕರಣ, ಸುಪ್ರೀಂ ಕೋರ್ಟ್‌ಗಳು ಯೋಜನೆ ಜಾರಿಗೆ ಆಕ್ಷೇಪ ಮಾಡುತ್ತಿಲ್ಲ. ಯೋಜನಾ ವರದಿ ಸಿದ್ಧವಾಗಿದೆ, ತಮಿಳುನಾಡಿಗೆ ಕಾನೂನಾತ್ಮಕವಾಗಿ ವಿರೋಧಿಸುವ ಹಕ್ಕು ಇಲ್ಲ, ಇಷ್ಟೆಲ್ಲಾ ಅನುಕೂಲಗಳಿದ್ದಾಗ್ಯೂ ರಾಜ್ಯ ಸರ್ಕಾರದ ಇಚ್ಛಾಶಕ್ತಿಯ ಕೊರತೆಯಿಂದ ಯೋಜನೆಯ ಅನುಷ್ಠಾನ ಆರಂಭವಾಗಿಲ್ಲ. ರಾಜ್ಯದಲ್ಲಿ ಮತ್ತು ಕೇಂದ್ರ ಬಿಜೆಪಿ ಅಧಿಕಾರಕ್ಕೆ ಬರಬೇಕು. ಡಬಲ್ ಇಂಜಿನ್ ಸರ್ಕಾರ ಇದ್ದರೆ ಕೇಂದ್ರದಿಂದ ಹಣದ ಹೊಳೆ ಹರಿಯುತ್ತದೆ ಎಂದಿದ್ದರು, ಈಗ ಹೋಗಿ ಹಣ ತಂದು ಅಭಿವೃದ್ಧಿ ಕೆಲಸ ಮಾಡಲಿ’ ಎಂದು ಟೀಕಿಸಿದ್ದಾರೆ.

ಮೇಕೆದಾಟು ಯೋಜನೆ

ಕರ್ನಾಟಕ ಮತ್ತು ತಮಿಳುನಾಡು ಗಡಿಗೆ ಹೊಂದಿಕೊಂಡಿರುವ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಮೇಕೆದಾಟು ಬಳಿ ಕಾವೇರಿ ನದಿಗೆ ಅಡ್ಡಲಾಗಿ 67 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯದ ಅಣೆಕಟ್ಟು ನಿರ್ಮಿಸುವ ಯೋಜನೆಯನ್ನು ಕರ್ನಾಟಕ ಸರ್ಕಾರ ಘೋಷಿಸಿತ್ತು. ಬೆಂಗಳೂರು ಸೇರಿದಂತೆ ಸುತ್ತಲಿನ ಹಳ್ಳಿ-ನಗರಗಳಿಗೆ ಮುಂದಿನ 100 ವರ್ಷಗಳಿಗೆ ಕುಡಿಯುವ ನೀರು ಪೂರೈಸುವುದು ಮತ್ತು 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವುದು ಈ ಯೋಜನೆಯ ಉದ್ದೇಶ. 5,000 ಎಕರೆ ಪ್ರದೇಶದಲ್ಲಿ ಸುಮಾರು 6,000 ಕೋಟಿ ರೂ ವೆಚ್ಚದಲ್ಲಿ ಈ ಯೋಜನೆ ರೂಪಿಸಲಾಗಿದ್ದು, ಇದರ ಸಮಗ್ರ ಯೋಜನಾ ವರದಿಯನ್ನು ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಲಾಗಿದೆ. ಕೇಂದ್ರ ಪರಿಸರ ಇಲಾಖೆಯ ಅನುಮತಿ ದೊರೆತ ಕೂಡಲೇ ಯೋಜನೆ ಆರಂಭಿಸುವುದಾಗಿ ಕರ್ನಾಟಕ ಸರ್ಕಾರ ಹೇಳಿದೆ.


ಇದನ್ನೂ ಓದಿ: ಮೇಕೆದಾಟು ಅಣೆಕಟ್ಟು ಯೋಜನೆ; ರಾಜ್ಯಗಳ ಮತ್ತು ರಾಜಕೀಯ ಪಕ್ಷಗಳ ಜಿದ್ದಾಜಿದ್ದಿಯ ನಡುವೆ ಪರಿಸರವಾದಿಗಳ ಕಾಳಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...