Homeಕರ್ನಾಟಕಅಲ್ಪಸಂಖ್ಯಾತರಿಗೆ ಬಜೆಟ್‌ನಲ್ಲಿ ನೀಡಿರುವುದು ಶೇ.1ಕ್ಕಿಂತ ಕಡಿಮೆ ಅನುದಾನ: ಸಚಿವ ಝಮೀರ್ ಅಹ್ಮದ್ ಖಾನ್

ಅಲ್ಪಸಂಖ್ಯಾತರಿಗೆ ಬಜೆಟ್‌ನಲ್ಲಿ ನೀಡಿರುವುದು ಶೇ.1ಕ್ಕಿಂತ ಕಡಿಮೆ ಅನುದಾನ: ಸಚಿವ ಝಮೀರ್ ಅಹ್ಮದ್ ಖಾನ್

- Advertisement -
- Advertisement -

2024-25ಕ್ಕೆ ಪ್ರಸ್ತಾಪಿಸಲಾದ ಒಟ್ಟು ಬಜೆಟ್ ಗಾತ್ರದಲ್ಲಿ ಅಲ್ಪಸಂಖ್ಯಾತರಿಗೆ ಶೇಕಡಾ 1ಕ್ಕಿಂತ ಕಡಿಮೆ ಅನುದಾನವನ್ನು ನೀಡಲಾಗಿದೆ ಎಂದು ಸ್ವತಃ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಝಮೀರ್ ಅಹ್ಮದ್ ಖಾನ್ ಅವರು ಸೋಮವಾರ ವಿಧಾನಸಭೆಗೆ ತಿಳಿಸಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿನ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿ ಕುರಿತು ಶಿಕಾರಿಪುರದ ಬಿಜೆಪಿ ಶಾಸಕ ಬಿ ವೈ ವಿಜಯೇಂದ್ರ ಪ್ರಶ್ನೆಯನ್ನು ಕೇಳಿದ್ದು, ಬರಪೀಡಿತ ರೈತರಿಗಿಂತ ಕಾಂಗ್ರೆಸ್ ಸರಕಾರ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡುತ್ತಿದೆ ಎಂದು ಆಪಾದಿಸಿದ್ದರು. ಇದಕ್ಕೆ ಉತ್ತರಿಸಿದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್, 2024-25ರ ಸಾಲಿನ ಬಜೆಟ್‌ನ 3.71 ಲಕ್ಷ ಕೋಟಿ ರೂ. ಅಲ್ಪಸಂಖ್ಯಾತರಿಗೆ 1% ರಷ್ಟು ಕೂಡ ಅನುದಾನದಲ್ಲಿ ಮೀಸಲು ನೀಡಲಾಗಿಲ್ಲ. ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ 1,000 ಕೋಟಿ ರೂ.ಗೆ ಕ್ರಿಯಾ ಯೋಜನೆ ರೂಪಿಸಿದ್ದೇವೆ. ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ 300 ಕೋಟಿ ರೂ.ಗಳಲ್ಲಿ 165 ಕೋಟಿ ಮಾತ್ರ ಬಿಡುಗಡೆ ಮಾಡಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದಕ್ಕೂ ಮೊದಲು ಸದನದಲ್ಲಿ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರನ್ನು ಓಲೈಕೆ ಮಾಡುತ್ತಿದೆ. ಬರ ಪೀಡಿತ ರೈತರಿಗೆ ಸಹಾಯ ಮಾಡದೆ, ಅಲ್ಪಸಂಖ್ಯಾತರಿಗೆ 10,000 ಕೋಟಿ ರೂ.ಗಳನ್ನು ಸಿಎಂ ಘೋಷಿಸಿದ್ದಾರೆ. ಇದಲ್ಲದೆ ಕಾಂಗ್ರೆಸ್ ಸರಕಾರ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡುವಲ್ಲಿ ತಾರತಮ್ಯ ಎಸಗಿದೆ. ಹೆಚ್ಚಿನ ಅನುದಾನ ಕಾಂಗ್ರೆಸ್ ಶಾಸಕರ ಪಾಲಾಗಿದೆ ಎಂದು ಹೇಳಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಜಮೀರ್‌ ಅಹ್ಮದ್‌ ಖಾನ್‌, 1000 ಕೋಟಿ ಮೊತ್ತದ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. ಕ್ರಿಯಾ ಯೋಜನೆಯಡಿ ಹಣವನ್ನು 3 ವರ್ಷಗಳಲ್ಲಿ ಬಿಡುಗಡೆ ಮಾಡಲಾಗುವುದು. ಈಗಾಗಲೇ ಬಿಜೆಪಿ ಶಾಸಕರಿರುವ 29 ವಿಧಾನಸಭಾ ಕ್ಷೇತ್ರಗಳು ಮತ್ತು 8 ಜೆಡಿಎಸ್‌ ಕ್ಷೇತ್ರಗಳಿಗೆ ಹಣ ಬಿಡುಗಡೆ ಮಾಡಲಾಗಿದೆ. ನಾವು ಜನಸಂಖ್ಯೆಯ ಆಧಾರದ ಮೇಲೆ ಅಲ್ಪಸಂಖ್ಯಾತರ ಕಾಲೋನಿಗಳನ್ನು ಎ, ಬಿ ಮತ್ತು ಸಿ ಎಂದು ವರ್ಗೀಕರಿಸಿದ್ದೇವೆ. ಇದರ ಆಧಾರದ ಮೇಲೆ ವಿಧಾನಸಭೆ ಕ್ಷೇತ್ರಗಳಿಗೆ ಹಣವನ್ನು ವಿತರಿಸಲಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ಈ ವೇಳೆ ಮಧ್ಯಪ್ರವೇಶಿಸಿ, ಬಿಜಾಪುರ ನಗರ ಕ್ಷೇತ್ರದಲ್ಲಿ 1.2 ಲಕ್ಷ ಮುಸ್ಲಿಮರಿದ್ದರೂ ಹಣ ಬಂದಿಲ್ಲ ಎಂದು ಹೇಳಿದ್ದಾರೆ. ಈ ವೇಳೆ ಉತ್ತರಿಸಿದ ಜಮೀರ್‌, ನೀವು ಮುಸ್ಲಿಮರಿಗಾಗಿ ಕೆಲಸ ಮಾಡುವುದಿಲ್ಲ ಎಂದು ಹೇಳುತ್ತೀರಿ ಆದ್ದರಿಂದ ನಾವು ನಿಮಗೆ ಹಣವನ್ನು ಯಾಕೆ ನೀಡಬೇಕು ಎಂದು ಪ್ರಶ್ನಿಸಿದ್ದಾರೆ. ಇದು ಸದನದಲ್ಲಿ ಕೆಲ ಕಾಲ ಚರ್ಚೆಗೆ ಕಾರಣವಾಗಿತ್ತು.

ಈ ವೇಳೆ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಯತ್ನಾಳ್ ಅವರ ರಾಜಕೀಯ ಹೇಳಿಕೆಗಳನ್ನು ಅನುದಾನ ಹಂಚಿಕೆಗೆ ಜೋಡಿಸಬಾರದು. ಯತ್ನಾಳ್ ಅವರ ಕಾರಣದಿಂದ ಬಿಜಾಪುರದ 1.2 ಲಕ್ಷ ಮತದಾರರನ್ನು ನಿರ್ಲಕ್ಷಿಸಿದರೆ ನೀವು ಅಲ್ಪಸಂಖ್ಯಾತರ ರಕ್ಷಕರಾಗುವುದು ಹೇಗೆ? ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಪ್ರತಿಕ್ರಿಯಿಸಿದ ಸಚಿವ ಜಮೀರ್‌ ಅಹ್ಮದ್‌ ಖಾನ್‌, ಮುಸ್ಲಿಂ ವಿರೋಧಿ ಹೇಳಿಕೆ ನೀಡದಂತೆ ಬೊಮ್ಮಾಯಿ ಅವರು ಯತ್ನಾಳ್ ಅವರಿಗೆ ಸಲಹೆ ನೀಡಬೇಕಿತ್ತು. ಅದೇನೇ ಇದ್ದರೂ ನಾನು ಬಿಜಾಪುರಕ್ಕೆ 5 ಕೋಟಿ ಅಲ್ಲ, 10 ಕೋಟಿ ಕುಡ ನೀಡಲು ಸಿದ್ಧನಿದ್ದೇನೆ ಎಂದು ಜಮೀರ್‌ ಅಹ್ಮದ್‌ ಖಾನ್‌ ಹೇಳಿದ್ದಾರೆ.

ಇದನ್ನು ಓದಿ: ಗಾಝಾದಲ್ಲಿ ಮಾನವೀಯತೆಯನ್ನು ಸಮಾಧಿ ಮಾಡಿದ ನೆತನ್ಯಾಹು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...