Homeಕರ್ನಾಟಕಮೂರು ತಾಸುಗಳ ರಾಜೀನಾಮೆ ರಾಜಕಾರಣ: ಪಿಚ್ಚರ್‍ಗೆ ಕಾದವರಿಗೆ ಸಿಕ್ಕಿದ್ದು ಟ್ರೈಲರ್ ಮಾತ್ರ

ಮೂರು ತಾಸುಗಳ ರಾಜೀನಾಮೆ ರಾಜಕಾರಣ: ಪಿಚ್ಚರ್‍ಗೆ ಕಾದವರಿಗೆ ಸಿಕ್ಕಿದ್ದು ಟ್ರೈಲರ್ ಮಾತ್ರ

- Advertisement -
- Advertisement -

ನಾಲ್ಕೈದು ತಾಸುಗಳ ಪೊಲಿಟಿಕಲ್ ಹೈಡ್ರಾಮಾ ನಡೆದಷ್ಟೇ ವೇಗವಾಗಿ ತಾತ್ಕಾಲಿಕವಾಗಿ ತಣ್ಣಗಾಗಿದೆ. ಒಂತರಾ ರಾಜ್ಯದ ಬಹುಭಾಗಗಳಲ್ಲಿ ರಪ್ ರಪ್ ಅಂತ ಹೊಡೆಯಲು ಶುರು ಮಾಡಿ, ಹತ್ತೇ ನಿಮಿಷದಲ್ಲಿ ಪಟ್ ಅಂತ ನಿಂತು ಹೋಗುತ್ತಿರುವ ಮಳೆಯಂತೆ…

ಈ ಐದಾರು ತಾಸುಗಳಲ್ಲಿ ಮೂರು ತಾಸಂತೂ ತಿರುವು ನೀಡುವಂತಹ ಪಿಚ್ಚರ್‍ನಂತೆ ಭಾಸವಾಗಿತು. ಸಿನಿಮಾದ ಪಾತ್ರಧಾರಿಗಳೆಲ್ಲ ಮೂಕನಾಯಕರು. ಅವರು ಸ್ಪೀಕರ್ ಕೊಠಡಿಯಲ್ಲಿ ಹೋಗಿ ಕೂತರು. ಕೆಲವರು (ಅಧಿಕೃತವಾಗಿ 11) ಸ್ಪೀಕರ್ ಕಾರ್ಯದರ್ಶಿಗೆ ರಾಜಿನಾಮೆ ನೀಡಿ ಸ್ವೀಕೃತಿ ಪಡೆದರು. ಅಲ್ಲಿ ಟ್ರಬಲ್‍ಶೂಟರ್ ಖ್ಯಾತಿಯ ಡಿ.ಕೆ ಶಿವಕುಮಾರ್ ಎಂಟ್ರಿ ಕೊಟ್ಟರು. ರಾಜಿನಾಮೆ ಕೊಡಲು ಬಂದಿದ್ದ ಶಾಸಕರ ಪೈಕಿ ಒಂದು ದೊಡ್ದ ಗುಂಪು ರಾಜ್ಯಪಾಲರ ಭವನ ತಲುಪಿತು. ನಾಲ್ವರು ಶಾಸಕರು ಡಿ.ಕೆ ಶಿವಕುಮಾರ್ ಜೊತೆ ಹೋದರು….

‘ಹೊಸ ಸರ್ಕಾರ’ ಎಂಬ ಪಿಚ್ಚರ್ ಹೀಗೆ ಟ್ರೈಲರ್‍ನಲ್ಲಿ ಸದ್ಯಕ್ಕೆ ಸ್ಟಾಪ್ ಆಗಿದೆ. ಇದರ ನಿರ್ದೇಶಕ ಯಾರು, ನಿರ್ಮಾಪಕ ಯಾರು ಎಂಬುದೇ ಇನ್ನೂ ಅಸ್ಪಷ್ಟವಾಗಿದೆ.

ಮಧ್ಯಾಹ್ನ 2.30ರ ಸುಮಾರಿಗೆ ಸ್ಪೀಕರ್ ರಮೇಶಕುಮಾರ್ ಕಾಣಿಸಿಕೊಂಡ ಮೇಲಷ್ಟೇ ಒಂದು ಸ್ಪಷ್ಟ ಚಿತ್ರಣ ಸಿಕ್ಕಿದೆ. ಅವರು ಹೇಳಿದ ಪ್ರಕಾರ, 11 ಶಾಸಕರು ಅವರ ಕಾರ್ಯದರ್ಶಿಗೆ ರಾಜಿನಾಮೆ ಸಲ್ಲಿಸಿದ್ದಾರೆ. ತಮಗೆ ಯಾವುದೇ ಮಾಹಿತಿ ನೀಡದೇ ಶಾಸಕರು ರಾಜಿನಾಮೆ ನೀಡಲು ಬಂದಿದ್ದಾರೆ, ಮೊದಲೆ ಗೊತ್ತಿದ್ದರೆ ನಾನು ನನ್ನ ವೈಯಕ್ತಿಕ ಕೆಲಸ ಬಿಟ್ಟು ಕಚೇರಿಗೆ ಬರುತ್ತಿದ್ದೆ. ನಾಳೆ ರವಿವಾರ ರಜೆ, ಸೋಮವಾರ ನನಗೆ ಪೂರ್ವನಿಗದಿತ ಕಾರ್ಯಕ್ರಮವಿದೆ. ಹೀಗಾಗಿ ನಾನು ಮಂಗಳವಾರ ಕಚೇರಿಗೆ ಬಂದು ಎಲ್ಲವನ್ನೂ ಪರಿಶೀಲಿಸುವೆ ಎನ್ನುವ ಮೂಲಕ ಶನಿವಾರದ ಈ ಹಗಲು ಹೈಡ್ರಾಮಾಕ್ಕೆ ತಕ್ಷಣದ ಬ್ರೇಕ್ ಹಾಕಿದ್ದಾರೆ. ಗಂಟಲು ಒಣಗಿಸಿಕೊಂಡ ಆ್ಯಂಕರ್‍ಗಳು ನೀರು ಕುಡಿದು ವಿಶ್ಲೇಷಣೆಗೆ ಇಳಿದಿದ್ದಾರೆ.

ಇದನ್ನೂ ಓದಿ: ಆಪರೇಷನ್ ಕಮಲ: ಮಸ್ಕಿ ಶಾಸಕನ ಆಪರೇಷನ್ ಕಂಡಿಶನ್ ಕೇಳಿದರ ನೀವು ನಗುತ್ತೀರಿ..

ಹೈಡ್ರಾಮಾದ ಪಾತ್ರಧಾರಿಗಳು
ಇವತ್ತು ದಿಢೀರ್ ಎನಿಸುವಂತೆ ನಡೆದ ಈ ರಾಜಿನಾಮೆ ಪ್ರಸಂಗ ಪೂರ್ವ ನಿಯೋಜಿತವಾಗಿತ್ತು, ಪಕ್ಕಾ ವ್ಯವಸ್ಥಿತವಾಗಿತ್ತು. ಇಲ್ಲೆಲ್ಲೂ ಬಿಜೆಪಿ ಸೀನ್‍ನಲ್ಲಿ ಕಾಣಿಸಿಕೊಳ್ಳಲೇ ಇಲ್ಲ. ಈ ಸಾರಿ ಆಶ್ಚರ್ಯವೆಂದರೆ ಈ ಗುಂಪಿನಲ್ಲಿ ಜೆಡಿಎಸ್‍ನ ಮೂವರು ಶಾಸಕರು, ಸಿದ್ರಾಮಯ್ಯನವರ ಬೆಂಬಲಿಗರಾದ ಮೂವರು ಬೆಂಗಳೂರು ಶಾಸಕರು, ಇತ್ತೀಚೆಗೆ ಮುನಿಸಿಕೊಂಡಿರುವ ರಾಮಲಿಂಗಾರೆಡ್ಡಿ, ಅವರ ಪುತ್ರಿ ಸೌಮ್ಯರೆಡ್ಡಿ, ಅಂಜಲಿ ನಿಂಬಾಳ್ಕರ್ ಕೂಡ ಇದ್ದರು.

ವಿಧಾನಸೌಧದದ ಕಾರಿಡಾರಿನಲ್ಲಿ ಗುಂಪಾಗಿ ಹೋದ 12-14 ಜನರ ಶಾಸಕರ ತಂಡ ರಾಜಿನಾಮೆ ನೀಡಿಯೇ ಸಿದ್ದ ಎಂಬ ಧಾವಂತದಲ್ಲಿ ಸ್ಪೀಕರ್ ಕಚೇರಿ ತಲುಪಿ ಅಲ್ಲಿ ಆಸೀನರಾದರು. ಅಲ್ಲಿ ಕಾಣಿಸಿಕೊಂಡವರು ಮತ್ತು ಕೇಳಲ್ಪಟ್ಟ ಹೆಸರುಗಳು:
ಕಾಂಗ್ರೆಸ್: ರಾಮಲಿಂಗಾರೆಡ್ಡಿ, ಎಸ್. ಟಿ. ಸೋಮಶೇಖರ್, ಬೈರತಿ ಬಸವರಾಜು, ಮುನಿರತ್ನಂ, ಸೌಮ್ಯರೆಡ್ಡಿ, ರೋಶನ್ ಬೇಗ್, ರಮೇಶ ಜಾರಕಿಹೊಳಿ, ಶ್ರೀಮಂತ ಪಾಟೀಲ, ಪ್ರತಾಪಗೌಡ ಪಾಟೀಲ, ಬಿ.ಸಿ ಪಾಟೀಲ, ನಾಗೇಂದ್ರ, ಸುಧಾಕರರೆಡ್ಡಿ, ಸುಬ್ಬಾರೆಡ್ಡಿ, ಬಸನಗೌಡ ದದ್ದಲ್, ಮಹೇಶ ಕುಮಟಳ್ಳಿ, ಆನೇಕಲ್ ಶಿವಣ್ಣ, ಆನಂದ್‍ಸಿಂಗ್, ಶಿವರಾಮ್ ಹೆಬ್ಬಾರ್…

ಜೆಡಿಎಸ್: ಎಚ್ ವಿಶ್ವನಾಥ್, ಕೆ. ಗೋಪಾಲಯ್ಯ, ಕೆ.ಆರ್ ಪೇಟೆಯ ನಾರಾಯಣಗೌಡ..

ಇಷ್ಟರಲ್ಲಿ ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದವರು

ರಾಮಲಿಂಗಾರೆಡ್ಡಿ, ಎಚ್ ವಿಶ್ವನಾಥ್, ಪ್ರತಾಪಗೌಡ ಪಾಟೀಲ, ಬಿ.ಸಿ ಪಾಟೀಲ್, ಬೈರತಿ ಬಸವರಾಜ, ನಾರಾಯಂಗೌಡ, ಶಿವರಾಮ್ ಹೆಬ್ಬಾರ್, ಮಹೇಶ ಕುಮಟಳ್ಳಿ, ಕೆ. ಗೋಪಾಲಯ್ಯ, ಜಾರಕಿಹೊಳಿ, ಆನಂದಸಿಂಗ್ ( ಕೊನೆಯ ಇಬ್ಬರು ಮೊನ್ನೆಯೇ ಸಲ್ಲಿಸಿದ್ದರು)..

ಈಗ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸಭೆ ನಡೆಯುತ್ತಿದೆ. ಇನ್ನೊಂದು ಕಡೆ ಡಿ.ಕೆ. ಶಿವಕುಮಾರ್ ರಾಮಲಿಂಗಾರೆಡ್ಡಿಯವರನ್ನು ಕರೆದುಕೊಂಡು ಹೋಗಿ ಮಾತುಕತೆ ನಡೆಸುತ್ತಿದ್ದಾರೆ. ಇದಿಷ್ಟು ಹೊರನೋಟಕ್ಕೆ ಕಾಣುತ್ತಿರುವ ಬೆಳವಣಿಗೆ. ರಾಜಿನಾಮೆ ನೀಡಿದವರು ಮುಂಬೈ ಅಥವಾ ಇನ್ನಾವುದೋ ರೆಸಾರ್ಟಿಗೆ ಹೋಗುವ ಸಾಧ್ಯತೆಗಳಿವೆ.

ಸರ್ಕಾರ ಆತಂಕದಲ್ಲಿರುವುದೂ ಗೊತ್ತಿದ್ದೂ ಸಿಎಂ ಕುಮಾರಸ್ವಾಮಿ ವಿದೇಶದಲ್ಲಿರುವುದು, ದಿನೇಶ ಗುಂಡುರಾವ್ ಕೂಡ ವಿದೇಶದಲ್ಲಿರುವುದು ವಿಚಿತ್ರವಾಗಿದೆ. ಮಂಗಳವಾರದವರೆಗೂ ಟೈಮ್ ಸಿಕ್ಕಿರುವುದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್‍ಗೆ ಶಾಸಕರನ್ನು ಉಳಿಸಿಕೊಳ್ಳಲು ಅವಕಾಶ ಸಿಕ್ಕಿದೆ. ರಾಮಲಿಂಗಾರೆಡ್ಡಿಯ ನಿರ್ಧಾರ ಈಗ ಮುಖ್ಯವಾಗಿದೆ. ಈಗಿರುವ ಕಾಂಗ್ರೆಸ್ ಸಚಿವರಿಂದ ಸಚಿವ ಸ್ಥಾನ ಹಿಂಪಡೆದು, ಅತೃಪ್ತರಿಗೆ ಸಚಿವ ಪಟ್ಟು ನೀಡಬಹುದು.

ಆದರೆ, ಇವತ್ತಿನ ಒಟ್ಟು ಬೆಳವಣಿಗೆಗಳು ಮಾತ್ರ ಅಸಹ್ಯಕರವೇ ಆಗಿದ್ದವು. ಸ್ಪೀಕರ್‍ಗೆ ಸಂದೇಶ ಕೊಡದೇ, ಮಾಧ್ಯಮದವರನ್ನು ಕರೆದುಕೊಂಡು ಹೋಗಿ ಸ್ಪೀಕರ್ ಕಚೇರಿಯಲ್ಲಿ ಟೆಂಟು ಹಾಕಿದ್ದು, ಅಲ್ಲಿಗೆ ಡಿಕೆ ಶಿವಕುಮಾರ್ ನುಗ್ಗಿದ್ದು, ಚಾನೆಲ್‍ಗಳು ಬಿದ್ದೇ ಹೋಯ್ತು ಎಂದು ಅರಚಿ ಸುಸ್ತಾಗಿದ್ದು… ಇಲ್ಲಿ ಯಾರಿಗೂ ತಾಳ್ಮೆಯಿಲ್ಲ. ಯಾವ ನಿಯಮ ಪಾಲನೆಯೂ ಬೇಕಾಗಿಲ್ಲ. ಒಟ್ಟಿನಲ್ಲಿ ಒಂದು ಟ್ರೈಲರ್ ಅನ್ನು ರಾಜ್ಯದ ಜನತೆ ವೀಕ್ಷಿಸಿ ಮನರಂಜನೆ ಪಡೆದಿದ್ದಾರೆ.

ಹೊಸ ಸರ್ಕಾರ ಬರುತ್ತೋ, ರಾಷ್ಟ್ರಪತಿ ಆಡಳಿತವೋ, ಮೈತ್ರಿ ಸರ್ಕಾರಕ್ಕೆ ಹೊಸ ಮುಖ್ಯಮಂತ್ರಿಯೋ? ಎಲ್ಲ ಸಾಧ್ಯತೆಗಳೂ ಇವೆ. ರೆಸಾರ್ಟ್ ರಾಜಕಾರಣ ಮತ್ತೆ ಗರಿಗೆದರುತ್ತಿದೆ ಎಂಬುದಂತೂ ಸ್ಪಷ್ಟ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...